Homeಮುಖಪುಟನಾಳೆಯಿಂದ ಸಂಸ ಬಯಲು ರಂಗಮಂದಿರದಲ್ಲಿ ಶಂಕರ್‌ ನಾಗ್ ನಾಟಕೋತ್ಸವ!

ನಾಳೆಯಿಂದ ಸಂಸ ಬಯಲು ರಂಗಮಂದಿರದಲ್ಲಿ ಶಂಕರ್‌ ನಾಗ್ ನಾಟಕೋತ್ಸವ!

ನಾಟಕೋತ್ಸವದ ವಿಶೇಷ ಎಂದರೆ "ನಾಗರಕಟ್ಟೆ". ಈ ಕಾರ್ಯಕ್ರಮದಲ್ಲಿ ಶಂಕರ್‌ನಾಗ್‌ ಜತೆ ಕೆಲಸ ಮಾಡಿದವರು, ಸ್ನೇಹಿತರು ಶಂಕರ್‌ನಾಗ್‌ರ ಒಡನಾಟವನ್ನು ಜ್ಞಾಪಿಸಿಕೊಳ್ಳಲಿದ್ದಾರೆ.

- Advertisement -
- Advertisement -

2018ರಿಂದ ಖ್ಯಾತನಟ, ನಿರ್ದೇಶಕ ಶಂಕರ್‌ ನಾಗ್ ನೆನಪಲ್ಲಿ ಪ್ರತಿವರ್ಷದ ಪರಮ ಗುರಿ ಎಂದು ಶಂಕರ್‌ ನಾಗ್ ನಾಟಕೋತ್ಸವ ನಡೆಸುತ್ತಿರುವ ಸಾತ್ವಿಕ ಮತ್ತು ರಂಗಪಯಣ ತಂಡ ಮತ್ತೊಂದು ನಾಟಕೋತ್ಸವಕ್ಕೆ ಸಜ್ಜಾಗಿ, ಕಲಾ ಪ್ರೇಮಿಗಳನ್ನು ಸ್ವಾಗತಿಸುತ್ತಿದೆ.

ರಂಗಕರ್ಮಿಗಳಾದ ರಾಜ್‌ಗುರು ಮತ್ತು ನಯನ ಸೂಡ ಅವರ ಈ ತಂಡಗಳು 2018ರಿಂದ ವಿಶಿಷ್ಟವಾಗಿ ಶಂಕರ್‌ ನಾಗ್ ಅವರ ನೆನಪನ್ನು ಮತ್ತಷ್ಟು ಹಚ್ಚಹಸಿರುಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ನವೆಂಬರ್‌ 23 ರಿಂದ 26 ರವರೆಗೆ ನಾಲ್ಕು ದಿನಗಳು ರವೀಂದ್ರ ಕಲಾಕ್ಷೇತ್ರದ ಸಂಸ ಬಯಲು ರಂಗಮಂದಿರದಲ್ಲಿ ನಾಟಕೋತ್ಸವ ನಡೆಯಲಿದೆ.

ಪ್ರತಿ ವರ್ಷದ ಏಪ್ರಿಲ್, ಮೇ ತಿಂಗಳಲ್ಲಿ ನಡೆಯುತ್ತಿದ್ದ ಕಾರ್ಯಕ್ರಮ ಈ ಬಾರಿ ಕೊರೊನಾ ಕಾರಣದಿಂದ ನವೆಂಬರ್‌ನಲ್ಲಿ ನಡೆಯುತ್ತಿದೆ.

ರಂಗಕರ್ಮಿಗಳಾದ ರಾಜ್‌ಗುರು ಮತ್ತು ನಯನ ಸೂಡ

ಈ ನಾಟಕೋತ್ಸವದಲ್ಲಿ ಬರೀ ನಾಟಕಗಳಷ್ಟೇ ಅಲ್ಲದೆ, ಸಾಹಿತ್ಯ, ಸಂಗೀತ, ಮಹಿಳೆ ಮತ್ತು ರಂಗಭೂಮಿ, ವಿಚಾರ ಸಂಕೀರ್ಣ, ನಿರ್ದೇಶಕರೊಂದಿಗೆ ಸಂವಾದಗಳು ಸೇರಿದಂತೆ ಹತ್ತಾರ ವಿಭಿನ್ನ ಕಾರ್ಯಕ್ರಮಗಳು ನಡೆಯಲಿವೆ.

ಇದನ್ನೂ ಓದಿ: ’ಆಟೋರಾಜ’ನ ನೆನಪಲ್ಲಿ… ಶಂಕರ್ ‌ನಾಗ್‌ ನಮ್ಮನ್ನಗಲಿ ಇಂದಿಗೆ 30 ವರ್ಷ!

ಹೆಚ್ಚು ಪ್ರಯೋಗಾತ್ಮಕ ಮತ್ತು ಮಹಿಳಾ ಪ್ರಧಾನ ನಾಟಕಗಳನ್ನು ಈ ತಂಡಗಳು ಪ್ರಸ್ತುತ ಪಡಿಸಿವೆ. ಈ ಬಾರಿಯ ಶಂಕರ್ ನಾಗ್ ನಾಟಕೋತ್ಸವದ ಉದ್ಘಾಟನೆಯನ್ನು ಮಹಿಳಾ ನಿರ್ದೇಶಕಿಯರು ಮಾಡಲಿದ್ದಾರೆ. ಪ್ರತಿ ದಿನ ಸಂಜೆ 5.30 ರಿಂದ ಕಾರ್ಯಕ್ರಮಗಳು ಆರಂಭವಾಗಲಿವೆ.

ನವೆಂಬರ್ 23 ರಂದು ಸಂಜೆ ಜಾನ್ ದೇವರಾಜು ಅವರಿಂದ ’ಬ್ಲ್ಯಾಕ್ &ವೈಟ್’, ಬಾಲು ಜಂಬೆ ತಂಡದಿಂದ ’ರಿದಂ’ ಸಾತ್ವಿಕ ರಂಗತಂಡದಿಂದ ’ಸೂಫಿ ನಡಿಗೆ ತತ್ವಪದದೆಡೆಗೆ’ ಎಂಬ ಕಾರ್ಯಕ್ರಮಗಳು ನಡೆಯಲಿವೆ.

ನವೆಂಬರ್‌ 24 ರಂದು ಸಂಜೆ 5.30ಕ್ಕೆ ಲಂಕೇಶ್ ಅವರ ವಿಚಾರಗಳು ಮತ್ತು ನಾವು ಎಂಬ ವಿಚಾರಗೋಷ್ಠಿ ನಡೆಯಲಿದೆ. ನಾಗರಕಟ್ಟೆ ಮತ್ತು ಸಂಜೆ 7.45ಕ್ಕೆ ಶ್ರದ್ಧಾ ನಾಟಕ ಆರಂಭವಾಗಲಿದೆ.

ನಾಳೆಯಿಂದ ಸಂಸ ಬಯಲು ರಂಗಮಂದಿರದಲ್ಲಿ ಶಂಕರ್‌ ನಾಗ್ ನಾಟಕೋತ್ಸವ!
PC:Nayana sooda

ನವೆಂಬರ್‌ 25 ರಂದು ’ಬದುಕು ಕಲಿಸಿದ ಬೇಂದ್ರೆ’ ವಿಚಾರಗೋಷ್ಠಿ, ನಾಗರಕಟ್ಟೆ ಮತ್ತು ’ಸೋಮಾಲಿಯಾ ಕಡಲ್ಗಳ್ಳರು’ ಎಂಬ ನಾಟಕ ನಡೆಯಲಿದೆ.

ನವೆಂಬರ್‌ 26 ರಂದು ಶಂಕರ್‌ ನಾಗ್ ಅಭಿನಯಿಸಿದ್ದ ನಾಟಕಗಳ ರಂಗಗೀತೆಗಳನ್ನು ಪ್ರಸ್ತುತಪಡಿಸಲಾಗುತ್ತದೆ. ಜೊತೆಗೆ ಶಂಕರ್‌ ನಾಗ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಇವುಗಳ ನಂತರ 8 ಗಂಟೆಗೆ ಬಿದ್ದರೂರಿನ ಬಿಗ್‌ಬೆನ್ ನಾಟಕ ಪ್ರದರ್ಶನ ನಡೆಯಲಿದೆ.

ಇದನ್ನೂ ಓದಿ: ಕರ್ನಾಟಕದ ಕಾರ್ಮಿಕರು ಮತ್ತು ಜಪಾನಿ ಆಡಳಿತದ ನಡುವಿನ ತಿಕ್ಕಾಟ: ಟೊಯೋಟಾದಲ್ಲಿ ನಡೆಯುತ್ತಿರುವುದೇನು?

ನಾಟಕೋತ್ಸವದ ವಿಶೇಷ ಎಂದರೆ “ನಾಗರಕಟ್ಟೆ”. ಈ ಕಾರ್ಯಕ್ರಮದಲ್ಲಿ ಶಂಕರ್‌ ನಾಗ್ ಅವರ ನೆನಪುಗಳು ನಿಮ್ಮನ್ನು ಕಾಡುತ್ತವೆ. ಕಾರ್ಯಕ್ರದಲ್ಲಿ ಶಂಕರ್‌ನಾಗ್‌ ಜತೆ ಕೆಲಸ ಮಾಡಿದವರು, ಸ್ನೇಹಿತರು, ಒಡನಾಡಿಗಳು, ಅವರ ಪರಿಚಿತರು ಶಂಕರ್‌ನಾಗ್‌ರ ಒಡನಾಟವನ್ನು ಜ್ಞಾಪಿಸಿಕೊಳ್ಳಲಿದ್ದಾರೆ.

“ಕಾಲೇಜಿನ ದಿನಗಳಲ್ಲಿ ರಂಗಶಂಕರದ ವೇದಿಕೆಯಲ್ಲಿ ನಾನು ಅಭಿನಯಿಸುವಾಗ ಮುಂದಿನ ಸಾಲಿನಲ್ಲಿ ಕೂತಿದ್ದ ಅರುಂಧತಿ ಅಮ್ಮ “ನೀನು ಶಂಕ್ರನ ಥರಾ ಬಿಹೇವ್ ಮಾಡ್ತಿಯಾ ಕಣೋ” ಅಂದಿದ್ರು, ಈಗದು ಅವರಿಗೆ ನೆನಪಿನಲ್ಲಿರುತ್ತದೊ ಇಲ್ಲವೋ ಗೊತ್ತಿಲ್ಲಾ. ಆದರೆ, ಸತತ 15 ವರ್ಷಗಳಿಂದ ಶಂಕ್ರಣ್ಣ ನನ್ನ ಸಾತ್ವಿಕ ಮತ್ತು ರಂಗಪಯಣ ತಂಡಗಳನ್ನು ಹೇಗೆ ಆವರಿಸಿದ್ದಾರೆ ಎಂದರೆ… ಸಾತ್ವಿಕದಲ್ಲಿ “S” ಮೊದಲಕ್ಷರ, ರಂಗಪಯಣದಲ್ಲಿ “NA” ಕೊನೆ ಅಕ್ಷರ ಎರಡು ತಂಡದ ಪ್ರಾರಂಭದಿಂದ ಅಂತ್ಯದವರೆಗೂ ಅವರಿದ್ದಾರೆ” –  ರಾಜ್‌ಗುರು, ರಂಗಕರ್ಮಿ

ನಾಟಕೋತ್ಸವದ ಸಿದ್ಧತೆಯಲ್ಲಿ ರಂಗತಂಡದ ಸದಸ್ಯರು

“ನಾಟಕೋತ್ಸವದಲ್ಲಿ ಕೊರೊನಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡು ಕಾರ್ಯಕ್ರಮ ನಡೆಸಲಾಗುತ್ತಿದೆ. ಈಗಾಗಲೇ ನಾಟಕೋತ್ಸವಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಟಕೋತ್ಸವಕ್ಕೆ ಪ್ರವೇಶ ಉಚಿತವಾಗಿದ್ದು, ಮೊದಲು ಬಂದವರಿಗೆ ಆದ್ಯತೆ, ಹಾಗಾಗಿಯೇ ಪಾಸ್‌ಗಳನ್ನು ವಿತರಿಸಲಾಗಿದೆ. ಮಾಸ್ಕ್, ದೈಹಿಕ ಅಂತರ ಕಡ್ಡಾಯ” ಎಂದು ನಾಟಕೋತ್ಸವದ ನಿರ್ವಹಣೆ ನೋಡಿಕೊಳ್ಳುತ್ತಿರುವ ರಂಗಕರ್ಮಿ ನಯನ ಸೂಡ ತಿಳಿಸಿದ್ದಾರೆ.


ಇದನ್ನೂ ಓದಿ: ಪುಸ್ತಕ ವಿಮರ್ಶೆ: ಜಾತಿ ಬಂತು ಹೇಗೆ? ಕರ್ನಾಟಕದಲ್ಲಿ ಜಾತಿ ವ್ಯವಸ್ಥೆ ಮತ್ತು ಅಸ್ಪೃಶ್ಯತೆಯ ಉಗಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...