Homeಮುಖಪುಟರಾಹುಲ್ ಗಾಂಧಿಯನ್ನು ಹಿಂದೂ ಧರ್ಮದಿಂದ ಬಹಿಷ್ಕರಿಸಿದ ಶಂಕರಾಚಾರ್ಯರು

ರಾಹುಲ್ ಗಾಂಧಿಯನ್ನು ಹಿಂದೂ ಧರ್ಮದಿಂದ ಬಹಿಷ್ಕರಿಸಿದ ಶಂಕರಾಚಾರ್ಯರು

- Advertisement -
- Advertisement -

ಮನುಸ್ಮೃತಿಯನ್ನು ಅವಮಾನಿಸಿದ್ದಾರೆ ಎಂಬ ಆರೋಪದಲ್ಲಿ ಹಿಂದೂ ಧರ್ಮದಿಂದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ಬಹಿಷ್ಕರಿಸಲಾಗಿದೆ ಎಂದು ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮಂಗಳವಾರ ಘೋಷಿಸಿದ್ದಾರೆ ಎಂದು ರಾಷ್ಟ್ರೋಯ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂಓದಿ:  ಬಿಜೆಪಿ ಯೂಟರ್ನ್‌ | ಮಾವೋವಾದಿ ಚಿಂತನೆಗೆ ಮನಸೋತು ನಗರ ನಕ್ಸಲ್ ಆದರೆ ಪ್ರಧಾನಿ ಮೋದಿ?

ಮನುಸ್ಮೃತಿ ಸನಾತನ ಧರ್ಮದ ಅಡಿಪಾಯ; ರಾಹುಲ್ ಗಾಂಧಿಯವರು ಲೋಕಸಭಾ ಕಲಾಪಗಳಲ್ಲಿ ಅದರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಧಾರ್ಮಿಕ ಮುಖಂಡರು ಹೇಳಿದ್ದಾರೆ. ಕ್ಷಮೆಯಾಚಿಸುವಂತೆ ಕಾಂಗ್ರೆಸ್ ನಾಯಕರಿಗೆ ನೋಟಿಸ್ ನೀಡಲಾಗಿದೆ. ಆದರೆ, ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಶಂಕರಾಚಾರ್ಯರು ಹೇಳಿದ್ದಾರೆ.

“ಶಂಕರಾಚಾರ್ಯ ಮಠವು ರಾಹುಲ್ ಗಾಂಧಿಯನ್ನು ಹಿಂದೂ ಧರ್ಮದಿಂದ ಅಧಿಕೃತವಾಗಿ ಬಹಿಷ್ಕರಿಸಿದೆ” ಎಂದು ಜ್ಯೋತಿರ್ಪೀಠ ಬದರಿನಾಥ ಧಾಮದ ಶಂಕರಾಚಾರ್ಯರು ಕಂಖಾಲ್‌ನಲ್ಲಿರುವ ತಮ್ಮ ಮಠದಲ್ಲಿ ಘೋಷಿಸಿದರು.

ಇದನ್ನೂಓದಿ:  ಮಂಗಳೂರು | ಹತ್ಯೆಗೀಡಾದ ರೌಡಿಗೆ ಬಿಜೆಪಿಯಿಂದ ₹25 ಲಕ್ಷ ಘೋಷಣೆ

“ಶಂಕರಾಚಾರ್ಯ ಮಠವು ಈ ಸಂಬಂಧ ಅವರಿಗೆ ನೋಟಿಸ್ ನೀಡಿದೆ. ಆದರೆ, ಅವರು ಅದಕ್ಕೆ ಕ್ಷಮೆಯಾಚಿಸಲಿಲ್ಲ ಅಥವಾ ನೋಟಿಸ್‌ಗೆ ಯಾವುದೇ ಉತ್ತರವನ್ನು ನೀಡಿಲ್ಲ. ಅದಕ್ಕಾಗಿಯೇ ಅವರನ್ನು ಹಿಂದೂ ಧರ್ಮದಿಂದ ಅಧಿಕೃತವಾಗಿ ಬಹಿಷ್ಕರಿಸಲಾಗಿದೆ” ಎಂದು ಶಂಕರಾಚಾರ್ಯರು ಹೇಳಿದರು.

ಈ ವರ್ಷದ ಆರಂಭದಲ್ಲಿ ನಡೆದ ಸಂಸತ್ತಿನ ಅಧಿವೇಶನದಲ್ಲಿ, ರಾಹುಲ್ ಗಾಂಧಿ ಭಾರತೀಯ ಜನತಾ ಪಕ್ಷವನ್ನು ಟೀಕಿಸಿ. ಅವರು ಭಾರತದ ಸಂವಿಧಾನವನ್ನು ಅನುಸರಿಸುತ್ತಿಲ್ಲ, ಮನುಸ್ಮೃತಿಯನ್ನು ಅನುಸರಿಸುತ್ತಿದ್ದಾರೆ ಎಂದು ಹೇಳಿಕೊಂಡಿದ್ದರು.

ಸರ್ಕಾರದ ಮೇಲೆ ತೀವ್ರ ದಾಳಿ ನಡೆಸಿದ ಅವರು, ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದವರ ಕುಟುಂಬವನ್ನು ಭೇಟಿಯಾದ ಹತ್ರಾಸ್‌ಗೆ ಭೇಟಿ ನೀಡಿದ್ದನ್ನು ಉಲ್ಲೇಖಿಸಿದರು.

ಇದನ್ನೂಓದಿ:  ಬಿಜೆಪಿ ಟ್ರೋಲ್‌ ಪಡೆಯ ದಾಳಿಗೆ ತುತ್ತಾದ ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ಸೈನಿಕನ ಪತ್ನಿ; ಸೌಹಾರ್ದತೆಗೆ ಕರೆ ಕೊಟ್ಟಿದ್ದೇ ಅಪರಾಧ!

“ಅಪರಾಧಿಗಳು ಸುತ್ತಾಡುತ್ತಿದ್ದಾರೆ, ಹುಡುಗಿಯ ಕುಟುಂಬವನ್ನು ಮನೆಯಲ್ಲಿಯೇ ಬಂಧಿಸಲಾಗಿದೆ. ಅಪರಾಧಿ ಸ್ವತಂತ್ರವಾಗಿ ತಿರುಗಾಡುತ್ತಾನೆ ಎಂದು ಸಂವಿಧಾನದಲ್ಲಿ ಎಲ್ಲಿ ಬರೆಯಲಾಗಿದೆ? ಇದನ್ನು ನಿಮ್ಮ ಪುಸ್ತಕ ಮನುಸ್ಮೃತಿಯಲ್ಲಿ ಬರೆಯಲಾಗಿದೆ” ಎಂದು ಗಾಂಧಿ ಪ್ರಶ್ನಿಸಿದ್ದರು.

ಹಿಂದುತ್ವ ನಾಯಕ ವಿ.ಡಿ. ಸಾವರ್ಕರ್ ಅವರ ಸಿದ್ಧಾಂತವನ್ನು ಬಿಜೆಪಿ ಅನುಸರಿಸುತ್ತಿದೆ ಎಂದು ಅವರು ಆರೋಪಿಸಿದರು. ಅದು ಸಂವಿಧಾನದಲ್ಲಿ ಪ್ರತಿಪಾದಿಸಲಾದ ತತ್ವಗಳಿಗೆ ವಿರುದ್ಧವಾಗಿದೆ ಎಂದು ಅವರು ಹೇಳಿಕೊಂಡರು.

“ಇಂದು ಭಾರತದಲ್ಲಿ ಯುದ್ಧ ನಡೆಯುತ್ತಿದೆ. ಈ ಕಡೆ, ನಮಗೆ ಸಂವಿಧಾನದ ಕಲ್ಪನೆಯ ಪ್ರತಿಪಾದಕರಿದ್ದಾರೆ. ಪ್ರತಿಯೊಂದು ರಾಜ್ಯದಿಂದ ನಮಗೆ ಒಬ್ಬರು ಇದ್ದಾರೆ. ತಮಿಳುನಾಡಿನಿಂದ ನಮಗೆ ಪೆರಿಯಾರ್ ಇದ್ದಾರೆ, ಮಹಾರಾಷ್ಟ್ರದಿಂದ ನಮಗೆ ಜ್ಯೋತಿಬಾ ಫುಲೆ ಇದ್ದಾರೆ, ಗುಜರಾತ್‌ನಿಂದ ನಮಗೆ ಗಾಂಧಿ ಇದ್ದಾರೆ” ಎಂದು ಅವರು ಹೇಳಿದರು.

ಮಾಲೆಗಾಂವ್: 55 ಬಡ ಮುಸ್ಲಿಂ ಗುಡಿಸಲುಗಳ ನೆಲಸಮಗೊಳಿಸಿ ಬೀದಿಪಾಲು ಮಾಡಿದ ಪುರಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...