Homeಮುಖಪುಟರಾಹುಲ್ ಗಾಂಧಿಯನ್ನು ಹಿಂದೂ ಧರ್ಮದಿಂದ ಬಹಿಷ್ಕರಿಸಿದ ಶಂಕರಾಚಾರ್ಯರು

ರಾಹುಲ್ ಗಾಂಧಿಯನ್ನು ಹಿಂದೂ ಧರ್ಮದಿಂದ ಬಹಿಷ್ಕರಿಸಿದ ಶಂಕರಾಚಾರ್ಯರು

- Advertisement -
- Advertisement -

ಮನುಸ್ಮೃತಿಯನ್ನು ಅವಮಾನಿಸಿದ್ದಾರೆ ಎಂಬ ಆರೋಪದಲ್ಲಿ ಹಿಂದೂ ಧರ್ಮದಿಂದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ಬಹಿಷ್ಕರಿಸಲಾಗಿದೆ ಎಂದು ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮಂಗಳವಾರ ಘೋಷಿಸಿದ್ದಾರೆ ಎಂದು ರಾಷ್ಟ್ರೋಯ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂಓದಿ:  ಬಿಜೆಪಿ ಯೂಟರ್ನ್‌ | ಮಾವೋವಾದಿ ಚಿಂತನೆಗೆ ಮನಸೋತು ನಗರ ನಕ್ಸಲ್ ಆದರೆ ಪ್ರಧಾನಿ ಮೋದಿ?

ಮನುಸ್ಮೃತಿ ಸನಾತನ ಧರ್ಮದ ಅಡಿಪಾಯ; ರಾಹುಲ್ ಗಾಂಧಿಯವರು ಲೋಕಸಭಾ ಕಲಾಪಗಳಲ್ಲಿ ಅದರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಧಾರ್ಮಿಕ ಮುಖಂಡರು ಹೇಳಿದ್ದಾರೆ. ಕ್ಷಮೆಯಾಚಿಸುವಂತೆ ಕಾಂಗ್ರೆಸ್ ನಾಯಕರಿಗೆ ನೋಟಿಸ್ ನೀಡಲಾಗಿದೆ. ಆದರೆ, ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಶಂಕರಾಚಾರ್ಯರು ಹೇಳಿದ್ದಾರೆ.

“ಶಂಕರಾಚಾರ್ಯ ಮಠವು ರಾಹುಲ್ ಗಾಂಧಿಯನ್ನು ಹಿಂದೂ ಧರ್ಮದಿಂದ ಅಧಿಕೃತವಾಗಿ ಬಹಿಷ್ಕರಿಸಿದೆ” ಎಂದು ಜ್ಯೋತಿರ್ಪೀಠ ಬದರಿನಾಥ ಧಾಮದ ಶಂಕರಾಚಾರ್ಯರು ಕಂಖಾಲ್‌ನಲ್ಲಿರುವ ತಮ್ಮ ಮಠದಲ್ಲಿ ಘೋಷಿಸಿದರು.

ಇದನ್ನೂಓದಿ:  ಮಂಗಳೂರು | ಹತ್ಯೆಗೀಡಾದ ರೌಡಿಗೆ ಬಿಜೆಪಿಯಿಂದ ₹25 ಲಕ್ಷ ಘೋಷಣೆ

“ಶಂಕರಾಚಾರ್ಯ ಮಠವು ಈ ಸಂಬಂಧ ಅವರಿಗೆ ನೋಟಿಸ್ ನೀಡಿದೆ. ಆದರೆ, ಅವರು ಅದಕ್ಕೆ ಕ್ಷಮೆಯಾಚಿಸಲಿಲ್ಲ ಅಥವಾ ನೋಟಿಸ್‌ಗೆ ಯಾವುದೇ ಉತ್ತರವನ್ನು ನೀಡಿಲ್ಲ. ಅದಕ್ಕಾಗಿಯೇ ಅವರನ್ನು ಹಿಂದೂ ಧರ್ಮದಿಂದ ಅಧಿಕೃತವಾಗಿ ಬಹಿಷ್ಕರಿಸಲಾಗಿದೆ” ಎಂದು ಶಂಕರಾಚಾರ್ಯರು ಹೇಳಿದರು.

ಈ ವರ್ಷದ ಆರಂಭದಲ್ಲಿ ನಡೆದ ಸಂಸತ್ತಿನ ಅಧಿವೇಶನದಲ್ಲಿ, ರಾಹುಲ್ ಗಾಂಧಿ ಭಾರತೀಯ ಜನತಾ ಪಕ್ಷವನ್ನು ಟೀಕಿಸಿ. ಅವರು ಭಾರತದ ಸಂವಿಧಾನವನ್ನು ಅನುಸರಿಸುತ್ತಿಲ್ಲ, ಮನುಸ್ಮೃತಿಯನ್ನು ಅನುಸರಿಸುತ್ತಿದ್ದಾರೆ ಎಂದು ಹೇಳಿಕೊಂಡಿದ್ದರು.

ಸರ್ಕಾರದ ಮೇಲೆ ತೀವ್ರ ದಾಳಿ ನಡೆಸಿದ ಅವರು, ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದವರ ಕುಟುಂಬವನ್ನು ಭೇಟಿಯಾದ ಹತ್ರಾಸ್‌ಗೆ ಭೇಟಿ ನೀಡಿದ್ದನ್ನು ಉಲ್ಲೇಖಿಸಿದರು.

ಇದನ್ನೂಓದಿ:  ಬಿಜೆಪಿ ಟ್ರೋಲ್‌ ಪಡೆಯ ದಾಳಿಗೆ ತುತ್ತಾದ ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ಸೈನಿಕನ ಪತ್ನಿ; ಸೌಹಾರ್ದತೆಗೆ ಕರೆ ಕೊಟ್ಟಿದ್ದೇ ಅಪರಾಧ!

“ಅಪರಾಧಿಗಳು ಸುತ್ತಾಡುತ್ತಿದ್ದಾರೆ, ಹುಡುಗಿಯ ಕುಟುಂಬವನ್ನು ಮನೆಯಲ್ಲಿಯೇ ಬಂಧಿಸಲಾಗಿದೆ. ಅಪರಾಧಿ ಸ್ವತಂತ್ರವಾಗಿ ತಿರುಗಾಡುತ್ತಾನೆ ಎಂದು ಸಂವಿಧಾನದಲ್ಲಿ ಎಲ್ಲಿ ಬರೆಯಲಾಗಿದೆ? ಇದನ್ನು ನಿಮ್ಮ ಪುಸ್ತಕ ಮನುಸ್ಮೃತಿಯಲ್ಲಿ ಬರೆಯಲಾಗಿದೆ” ಎಂದು ಗಾಂಧಿ ಪ್ರಶ್ನಿಸಿದ್ದರು.

ಹಿಂದುತ್ವ ನಾಯಕ ವಿ.ಡಿ. ಸಾವರ್ಕರ್ ಅವರ ಸಿದ್ಧಾಂತವನ್ನು ಬಿಜೆಪಿ ಅನುಸರಿಸುತ್ತಿದೆ ಎಂದು ಅವರು ಆರೋಪಿಸಿದರು. ಅದು ಸಂವಿಧಾನದಲ್ಲಿ ಪ್ರತಿಪಾದಿಸಲಾದ ತತ್ವಗಳಿಗೆ ವಿರುದ್ಧವಾಗಿದೆ ಎಂದು ಅವರು ಹೇಳಿಕೊಂಡರು.

“ಇಂದು ಭಾರತದಲ್ಲಿ ಯುದ್ಧ ನಡೆಯುತ್ತಿದೆ. ಈ ಕಡೆ, ನಮಗೆ ಸಂವಿಧಾನದ ಕಲ್ಪನೆಯ ಪ್ರತಿಪಾದಕರಿದ್ದಾರೆ. ಪ್ರತಿಯೊಂದು ರಾಜ್ಯದಿಂದ ನಮಗೆ ಒಬ್ಬರು ಇದ್ದಾರೆ. ತಮಿಳುನಾಡಿನಿಂದ ನಮಗೆ ಪೆರಿಯಾರ್ ಇದ್ದಾರೆ, ಮಹಾರಾಷ್ಟ್ರದಿಂದ ನಮಗೆ ಜ್ಯೋತಿಬಾ ಫುಲೆ ಇದ್ದಾರೆ, ಗುಜರಾತ್‌ನಿಂದ ನಮಗೆ ಗಾಂಧಿ ಇದ್ದಾರೆ” ಎಂದು ಅವರು ಹೇಳಿದರು.

ಮಾಲೆಗಾಂವ್: 55 ಬಡ ಮುಸ್ಲಿಂ ಗುಡಿಸಲುಗಳ ನೆಲಸಮಗೊಳಿಸಿ ಬೀದಿಪಾಲು ಮಾಡಿದ ಪುರಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...