Homeಕರ್ನಾಟಕನ. 20ರಿಂದ 'ಶಂಕರ್‌ನಾಗ್ ನಾಟಕೋತ್ಸವ' ಆರಂಭ

ನ. 20ರಿಂದ ‘ಶಂಕರ್‌ನಾಗ್ ನಾಟಕೋತ್ಸವ’ ಆರಂಭ

- Advertisement -
- Advertisement -

ಸಾಮಾಜಿಕ ವಿಚಾರಗಳನ್ನು ಇಟ್ಟುಕೊಂಡು ಹೊಸಹೊಸ ಪ್ರಯೋಗಗಳನ್ನು ನಡೆಸುವ ರಂಗಪಯಣ ತಂಡವು ಪ್ರತಿ ವರ್ಷದಂತೆ ಈ ವರ್ಷವೂ ‘ಶಂಕರ್‌ನಾಗ್ ನಾಟಕೋತ್ಸವ’ ಕಾರ್ಯಕ್ರಮ ನಡೆಸುತ್ತಿದೆ. ಈ ಉತ್ಸವವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುತ್ತಿದ್ದು, ಕಲಾಪ್ರೇಮಿಗಳು ಭಾಗಿಯಾಗಿ ರಂಗಭೂಮಿಗೆ ಜೀವ ತು೦ಬಬೇಕು ಎಂದು ರಂಗಪಯಣ ತಂಡ ಮನವಿ ಮಾಡಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ರಂಗಪಯಣ ತಂಡ, ”ಕನ್ನಡ ರಂಗಭೂಮಿಯಲ್ಲಿ ಇಲ್ಲಿನ ತನಕ ಸತತ 14 ವರ್ಷಗಳಿಂದ ನಡೆದಾಡುವ ರಂಗಭೂಮಿಯಾಗಿ ಸದಾ ಚಾಲ್ತಿಯಲ್ಲಿದೆ. ಸದಾ ಹೊಸ ಹೊಸ ಪಯೋಗಗಳ ಮೂಲಕ ಇಲ್ಲಿಯ ತನಕ 15 ನಾಟಕಗಳನ್ನು ಕಟ್ಟಿದ್ದು, 1500ಕ್ಕೂ ಹೆಚ್ಚು ಪುಯೋಗಗಳನ್ನು ಕಂಡಿದೆ” ಎಂದು ತಿಳಿಸಿದ್ದಾರೆ.

”ನಮ್ಮ ಮಧ್ಯೆ ನಡೆಯುವ ಮತ್ತು ನಡೆಯುತ್ತಿರುವ ಹಲವು ಘಟನೆಗಳ ವಿಚಾರಗಳನ್ನು ಹುಡುಕಿ ತೆಗೆದು ಸಾಮಾಜಿಕ ವಿಚಾರಗಳನ್ನೇ ನಾಟಕವನ್ನಾಗಿ “ರಂಗಪಯಣ” ಕಟ್ಟಿದ್ದು, ಈ ತಂಡದ ಯಶಸ್ವಿ ಉತ್ಸವ ಎಂದರೆ ಅದು ಶಂಕರ್‌ನಾಗ್ ನಾಟಕೋತ್ಸವ” ಎಂದು ಹೇಳಿದ್ದಾರೆ.

”ಶಂಕರ್‌ನಾಗ್ ಎಂಬ ಚೇತನ ಉತ್ಸಾಹದ ಚಿಲುಮೆ ರಂಗಭೂಮಿ ಮತ್ತು ಚಿತ್ರರಂಗದಲ್ಲಿ ಹಲವಾರು ಕನಸುಗಳನ್ನು ಕಂಡ ಶಕ್ತಿ ಅಂತಹ ಎಷ್ಟೋ ಕನಸುಗಳು ಇಂದಿನ ಯುವಕ ಮಿತ್ರರಿಗೆ ತಲುಪಲಿ ರಂಗಭೂಮಿ ಜೀವಂತಿಕೆಯ ನೆಲದ ಕಡೆ ಆಕರ್ಷಿತರಾಗಲಿ ಎಂಬ ಉದ್ದೇಶದಿಂದ ಈ ಶಂಕರ್‌ನಾಗ್ ರಂಗೋತ್ಸವ ಕಾರ್ಯಕ್ರಮ ಆರಂಭಿಸಲಾಯಿತು. ಸತತ 5 ವರ್ಷ ಯಶಸ್ವಿಯಾಗಿ ಈ ಉತ್ಸವ ನಡೆಸಿಕೊಂಡು ಬಂದಿದ್ದು, ಆರನೇ ವರ್ಷಕ್ಕೆ ಕಾಲಿಟ್ಟಿದೆ” ಎಂದು ಹೇಳಿದ್ದಾರೆ.

”ತಂಡದ ನಾಯಕಿಯಾದ ನಯನಸೂಡರ ನಿರ್ದೇಶನದಲ್ಲಿ ಪ್ರತಿವರ್ಷ ಈ ಉತ್ಸವ ನಡೆಯುತ್ತದೆ. ಸರ್ಕಾರದಿಂದ ಯಾವುದೇ ಸಹಾಯ ಪಡೆಯದೆ ನಡೆಯುವ ಈ ಉತ್ಸವ ಜನರ, ರಂಗಹಿರಿಯರ, ರಂಗತಂಡಗಳ ಕಲಾಭಿಮಾನಿಗಳ ಸಹಕಾರದಿಂದ ನಡೆಯುತ್ತಾ ಬಂದಿದ್ದು, ಈಗ ಆರನೇ ವರ್ಷಕ್ಕೆ ಕಾಲಿಡುತ್ತಿದೆ. ಇದೇ ನವೆಂಬರ್ 20ರಂದು  ನಾಟಕೋತ್ಸವ ಆರಂಭವಾಗಿ 24ಕ್ಕೆ ಮುಕ್ತಾಯಗೊಳ್ಳಲಿದೆ. ಈ ಉತ್ಸವದಲ್ಲಿ ತಾವು ಸಾಕ್ಷಿಯಾಗಬೇಕು” ಎಂದು ರಂಗಪಯಣ ತಂಡ ಮನವಿ ಮಾಡಿದೆ.

ನಾಟಕಗಳ ವಿವರ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...