Homeಕರ್ನಾಟಕನ. 20ರಿಂದ 'ಶಂಕರ್‌ನಾಗ್ ನಾಟಕೋತ್ಸವ' ಆರಂಭ

ನ. 20ರಿಂದ ‘ಶಂಕರ್‌ನಾಗ್ ನಾಟಕೋತ್ಸವ’ ಆರಂಭ

- Advertisement -
- Advertisement -

ಸಾಮಾಜಿಕ ವಿಚಾರಗಳನ್ನು ಇಟ್ಟುಕೊಂಡು ಹೊಸಹೊಸ ಪ್ರಯೋಗಗಳನ್ನು ನಡೆಸುವ ರಂಗಪಯಣ ತಂಡವು ಪ್ರತಿ ವರ್ಷದಂತೆ ಈ ವರ್ಷವೂ ‘ಶಂಕರ್‌ನಾಗ್ ನಾಟಕೋತ್ಸವ’ ಕಾರ್ಯಕ್ರಮ ನಡೆಸುತ್ತಿದೆ. ಈ ಉತ್ಸವವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುತ್ತಿದ್ದು, ಕಲಾಪ್ರೇಮಿಗಳು ಭಾಗಿಯಾಗಿ ರಂಗಭೂಮಿಗೆ ಜೀವ ತು೦ಬಬೇಕು ಎಂದು ರಂಗಪಯಣ ತಂಡ ಮನವಿ ಮಾಡಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ರಂಗಪಯಣ ತಂಡ, ”ಕನ್ನಡ ರಂಗಭೂಮಿಯಲ್ಲಿ ಇಲ್ಲಿನ ತನಕ ಸತತ 14 ವರ್ಷಗಳಿಂದ ನಡೆದಾಡುವ ರಂಗಭೂಮಿಯಾಗಿ ಸದಾ ಚಾಲ್ತಿಯಲ್ಲಿದೆ. ಸದಾ ಹೊಸ ಹೊಸ ಪಯೋಗಗಳ ಮೂಲಕ ಇಲ್ಲಿಯ ತನಕ 15 ನಾಟಕಗಳನ್ನು ಕಟ್ಟಿದ್ದು, 1500ಕ್ಕೂ ಹೆಚ್ಚು ಪುಯೋಗಗಳನ್ನು ಕಂಡಿದೆ” ಎಂದು ತಿಳಿಸಿದ್ದಾರೆ.

”ನಮ್ಮ ಮಧ್ಯೆ ನಡೆಯುವ ಮತ್ತು ನಡೆಯುತ್ತಿರುವ ಹಲವು ಘಟನೆಗಳ ವಿಚಾರಗಳನ್ನು ಹುಡುಕಿ ತೆಗೆದು ಸಾಮಾಜಿಕ ವಿಚಾರಗಳನ್ನೇ ನಾಟಕವನ್ನಾಗಿ “ರಂಗಪಯಣ” ಕಟ್ಟಿದ್ದು, ಈ ತಂಡದ ಯಶಸ್ವಿ ಉತ್ಸವ ಎಂದರೆ ಅದು ಶಂಕರ್‌ನಾಗ್ ನಾಟಕೋತ್ಸವ” ಎಂದು ಹೇಳಿದ್ದಾರೆ.

”ಶಂಕರ್‌ನಾಗ್ ಎಂಬ ಚೇತನ ಉತ್ಸಾಹದ ಚಿಲುಮೆ ರಂಗಭೂಮಿ ಮತ್ತು ಚಿತ್ರರಂಗದಲ್ಲಿ ಹಲವಾರು ಕನಸುಗಳನ್ನು ಕಂಡ ಶಕ್ತಿ ಅಂತಹ ಎಷ್ಟೋ ಕನಸುಗಳು ಇಂದಿನ ಯುವಕ ಮಿತ್ರರಿಗೆ ತಲುಪಲಿ ರಂಗಭೂಮಿ ಜೀವಂತಿಕೆಯ ನೆಲದ ಕಡೆ ಆಕರ್ಷಿತರಾಗಲಿ ಎಂಬ ಉದ್ದೇಶದಿಂದ ಈ ಶಂಕರ್‌ನಾಗ್ ರಂಗೋತ್ಸವ ಕಾರ್ಯಕ್ರಮ ಆರಂಭಿಸಲಾಯಿತು. ಸತತ 5 ವರ್ಷ ಯಶಸ್ವಿಯಾಗಿ ಈ ಉತ್ಸವ ನಡೆಸಿಕೊಂಡು ಬಂದಿದ್ದು, ಆರನೇ ವರ್ಷಕ್ಕೆ ಕಾಲಿಟ್ಟಿದೆ” ಎಂದು ಹೇಳಿದ್ದಾರೆ.

”ತಂಡದ ನಾಯಕಿಯಾದ ನಯನಸೂಡರ ನಿರ್ದೇಶನದಲ್ಲಿ ಪ್ರತಿವರ್ಷ ಈ ಉತ್ಸವ ನಡೆಯುತ್ತದೆ. ಸರ್ಕಾರದಿಂದ ಯಾವುದೇ ಸಹಾಯ ಪಡೆಯದೆ ನಡೆಯುವ ಈ ಉತ್ಸವ ಜನರ, ರಂಗಹಿರಿಯರ, ರಂಗತಂಡಗಳ ಕಲಾಭಿಮಾನಿಗಳ ಸಹಕಾರದಿಂದ ನಡೆಯುತ್ತಾ ಬಂದಿದ್ದು, ಈಗ ಆರನೇ ವರ್ಷಕ್ಕೆ ಕಾಲಿಡುತ್ತಿದೆ. ಇದೇ ನವೆಂಬರ್ 20ರಂದು  ನಾಟಕೋತ್ಸವ ಆರಂಭವಾಗಿ 24ಕ್ಕೆ ಮುಕ್ತಾಯಗೊಳ್ಳಲಿದೆ. ಈ ಉತ್ಸವದಲ್ಲಿ ತಾವು ಸಾಕ್ಷಿಯಾಗಬೇಕು” ಎಂದು ರಂಗಪಯಣ ತಂಡ ಮನವಿ ಮಾಡಿದೆ.

ನಾಟಕಗಳ ವಿವರ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...