Homeಮುಖಪುಟ18 ಪಕ್ಷಾಂತರಿಗಳಿಗೆ ಟಿಕೆಟ್, ತಮಿಳುನಾಡು BJP ಪರಿಸ್ಥಿತಿ ಇಲ್ಲಿಗೆ ಬಂತು: ಸುಬ್ರಮಣಿಯನ್ ಸ್ವಾಮಿ ವ್ಯಂಗ್ಯ

18 ಪಕ್ಷಾಂತರಿಗಳಿಗೆ ಟಿಕೆಟ್, ತಮಿಳುನಾಡು BJP ಪರಿಸ್ಥಿತಿ ಇಲ್ಲಿಗೆ ಬಂತು: ಸುಬ್ರಮಣಿಯನ್ ಸ್ವಾಮಿ ವ್ಯಂಗ್ಯ

- Advertisement -
- Advertisement -

ಸದಾ ವಿವಾದಾತ್ಮಕ ಹೇಳಿಕೆ ನೀಡುತ್ತಾ ಮತ್ತು ಬಿಜೆಪಿ ವಿರುದ್ಧ ಟೀಕೆ ಮಾಡುತ್ತ ಸುದ್ದಿಯಲ್ಲಿರುವ ಅದೇ ಪಕ್ಷದ ಸಂಸದ ಸುಬ್ರಮಣಿಯನ್ ಸ್ವಾಮಿ ತಮಿಳುನಾಡು ಬಿಜೆಪಿ ಪರಿಸ್ಥಿತಿ ಕುರಿತು ಇಂದು ವ್ಯಂಗ್ಯವಾಡಿದ್ದಾರೆ. ಬಿಜೆಪಿ-ಎಐಎಡಿಎಂಕೆ ಜೊತೆಗಿನ ಮೈತ್ರಿಯಲ್ಲಿ ಬಿಜೆಪಿಗೆ 20 ಸ್ಥಾನಗಳು ದೊರೆತಿದ್ದು ಅದರಲ್ಲಿ 18 ಸ್ಥಾನಗಳನ್ನು ಬೇರೆ ಪಕ್ಷದಿಂದ ಬಿಜೆಗೆ ಪಕ್ಷಾಂತರಗೊಂಡವರಿಗೆ ಟಿಕೆಟ್ ನೀಡಲಾಗಿದೆ. ಇದು ಬಿಜೆಪಿ ತಲುಪಿರುವ ಪರಿಸ್ಥಿತಿ ಎಂದು ಸುಬ್ರಮಣಿಯನ್ ಸ್ವಾಮಿ ಗೇಲಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಬಿಜೆಪಿಯ ಪರಿಸ್ಥಿತಿ ಇಲ್ಲಿದೆ ಬಂದಿದೆ: ತಮಿಳುನಾಡು ಚುನಾವಣೆಯಲ್ಲಿ ಬಿಜೆಪಿಯ 20 ಅಭ್ಯರ್ಥಿಗಳಲ್ಲಿ 18 ಜನರು ಇತರೆ ಪಕ್ಷಗಳಿಂದ ಬಂದವರು ಮತ್ತು ಆರ್‌ಎಸ್‌ಎಸ್‌ ಅಥವಾ ಜನಸಂಘದೊಂದಿಗೆ ಯಾವುದೇ ಸಂಪರ್ಕ ಇಲ್ಲದವರು. ಎಐಎಡಿಎಂಕೆಯು ಸಿಎಎ ಅನ್ನು ರದ್ದುಗೊಳಿಸುವುದಾಗಿ ತನ್ನ ಪ್ರಣಾಳಿಕೆಯಲ್ಲಿ ಸೇರಿಸಿದೆ” ಎಂದು ಟೀಕಿಸಿದ್ದಾರೆ.

ಈ ಟ್ವೀಟ್‌ಗೆ ಸಾಕಷ್ಟು ಜನರು ಪ್ರತಿಕ್ರಿಯಿಸಿದ್ದಾರೆ. ಅರುಣ್ ಕೊಂಡಪಲ್ಲೆ ಎಂಬುವವರು “ಪಕ್ಷದಲ್ಲಿ ನೀವಿರಬೇಕಾದರೆ ಬಿಜೆಪಿಗೆ ವಿರೋಧ ಪಕ್ಷದ ಅಗತ್ಯವೇ ಇಲ್ಲ” ಎಂದು ವ್ಯಂಗ್ಯವಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಸುಬ್ರಮಣಿಯನ್ ಸ್ವಾಮಿ “ಇಂದು ದೇಶದಲ್ಲಿ ಬೇರೆ ಆರೋಗ್ಯಕರ ವಿರೋಧ ಪಕ್ಷಗಳಿಲ್ಲ. ನಾನು ಹಿಂದುತ್ವವನ್ನು ಆಧರಿಸಿದ ಬಿಜೆಪಿಯ ನವೋದಯಕ್ಕಾಗಿ ಕೆಲಸ ಮಾಡುತ್ತೇನೆ. ಇದು ಜನಸಂಘ ಪರಂಪರೆಗೆ ಸೇರಿದೆ ಮತ್ತು ಮೂರ್ತಿ ಪೂಜೆಗೆ ಅಲ್ಲ” ಎಂದಿದ್ದಾರೆ.

ಇನ್ನು ನಿನ್ನೆ ಬಿಜೆಪಿ ಮೈತ್ರಿ ಪಕ್ಷ ಎಐಎಡಿಎಂಕೆಯು ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ, “ನಾವು ಶ್ರೀಲಂಕಾದ ತಮಿಳು ನಿರಾಶ್ರಿತರಿಗೆ ಉಭಯ ಪೌರತ್ವ ಮತ್ತು ವಸತಿ ಪರವಾನಗಿಗಾಗಿ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇವೆ. ಸಿಎಎಯನ್ನು ಹಿಂಪಡೆದುಕೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸುತ್ತೇವೆ” ಎಂದು ಘೋಷಿಸಲಾಗಿದೆ.

ತಮಿಳುನಾಡು ಚುನಾವಣೆಯು ಏಪ್ರಿಲ್ 06 ರಂದು ನಡೆಯಲಿದ್ದು, ಮೇ 02 ರಂದು ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿ: ತಮಿಳುನಾಡು: ಪ್ರಣಾಳಿಕೆಯಲ್ಲಿ ಸಿಎಎ ವಿರೋಧಿಸಿದ BJP ಮಿತ್ರಪಕ್ಷ AIADMK!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...