Homeಮುಖಪುಟ18 ಪಕ್ಷಾಂತರಿಗಳಿಗೆ ಟಿಕೆಟ್, ತಮಿಳುನಾಡು BJP ಪರಿಸ್ಥಿತಿ ಇಲ್ಲಿಗೆ ಬಂತು: ಸುಬ್ರಮಣಿಯನ್ ಸ್ವಾಮಿ ವ್ಯಂಗ್ಯ

18 ಪಕ್ಷಾಂತರಿಗಳಿಗೆ ಟಿಕೆಟ್, ತಮಿಳುನಾಡು BJP ಪರಿಸ್ಥಿತಿ ಇಲ್ಲಿಗೆ ಬಂತು: ಸುಬ್ರಮಣಿಯನ್ ಸ್ವಾಮಿ ವ್ಯಂಗ್ಯ

- Advertisement -
- Advertisement -

ಸದಾ ವಿವಾದಾತ್ಮಕ ಹೇಳಿಕೆ ನೀಡುತ್ತಾ ಮತ್ತು ಬಿಜೆಪಿ ವಿರುದ್ಧ ಟೀಕೆ ಮಾಡುತ್ತ ಸುದ್ದಿಯಲ್ಲಿರುವ ಅದೇ ಪಕ್ಷದ ಸಂಸದ ಸುಬ್ರಮಣಿಯನ್ ಸ್ವಾಮಿ ತಮಿಳುನಾಡು ಬಿಜೆಪಿ ಪರಿಸ್ಥಿತಿ ಕುರಿತು ಇಂದು ವ್ಯಂಗ್ಯವಾಡಿದ್ದಾರೆ. ಬಿಜೆಪಿ-ಎಐಎಡಿಎಂಕೆ ಜೊತೆಗಿನ ಮೈತ್ರಿಯಲ್ಲಿ ಬಿಜೆಪಿಗೆ 20 ಸ್ಥಾನಗಳು ದೊರೆತಿದ್ದು ಅದರಲ್ಲಿ 18 ಸ್ಥಾನಗಳನ್ನು ಬೇರೆ ಪಕ್ಷದಿಂದ ಬಿಜೆಗೆ ಪಕ್ಷಾಂತರಗೊಂಡವರಿಗೆ ಟಿಕೆಟ್ ನೀಡಲಾಗಿದೆ. ಇದು ಬಿಜೆಪಿ ತಲುಪಿರುವ ಪರಿಸ್ಥಿತಿ ಎಂದು ಸುಬ್ರಮಣಿಯನ್ ಸ್ವಾಮಿ ಗೇಲಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಬಿಜೆಪಿಯ ಪರಿಸ್ಥಿತಿ ಇಲ್ಲಿದೆ ಬಂದಿದೆ: ತಮಿಳುನಾಡು ಚುನಾವಣೆಯಲ್ಲಿ ಬಿಜೆಪಿಯ 20 ಅಭ್ಯರ್ಥಿಗಳಲ್ಲಿ 18 ಜನರು ಇತರೆ ಪಕ್ಷಗಳಿಂದ ಬಂದವರು ಮತ್ತು ಆರ್‌ಎಸ್‌ಎಸ್‌ ಅಥವಾ ಜನಸಂಘದೊಂದಿಗೆ ಯಾವುದೇ ಸಂಪರ್ಕ ಇಲ್ಲದವರು. ಎಐಎಡಿಎಂಕೆಯು ಸಿಎಎ ಅನ್ನು ರದ್ದುಗೊಳಿಸುವುದಾಗಿ ತನ್ನ ಪ್ರಣಾಳಿಕೆಯಲ್ಲಿ ಸೇರಿಸಿದೆ” ಎಂದು ಟೀಕಿಸಿದ್ದಾರೆ.

ಈ ಟ್ವೀಟ್‌ಗೆ ಸಾಕಷ್ಟು ಜನರು ಪ್ರತಿಕ್ರಿಯಿಸಿದ್ದಾರೆ. ಅರುಣ್ ಕೊಂಡಪಲ್ಲೆ ಎಂಬುವವರು “ಪಕ್ಷದಲ್ಲಿ ನೀವಿರಬೇಕಾದರೆ ಬಿಜೆಪಿಗೆ ವಿರೋಧ ಪಕ್ಷದ ಅಗತ್ಯವೇ ಇಲ್ಲ” ಎಂದು ವ್ಯಂಗ್ಯವಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಸುಬ್ರಮಣಿಯನ್ ಸ್ವಾಮಿ “ಇಂದು ದೇಶದಲ್ಲಿ ಬೇರೆ ಆರೋಗ್ಯಕರ ವಿರೋಧ ಪಕ್ಷಗಳಿಲ್ಲ. ನಾನು ಹಿಂದುತ್ವವನ್ನು ಆಧರಿಸಿದ ಬಿಜೆಪಿಯ ನವೋದಯಕ್ಕಾಗಿ ಕೆಲಸ ಮಾಡುತ್ತೇನೆ. ಇದು ಜನಸಂಘ ಪರಂಪರೆಗೆ ಸೇರಿದೆ ಮತ್ತು ಮೂರ್ತಿ ಪೂಜೆಗೆ ಅಲ್ಲ” ಎಂದಿದ್ದಾರೆ.

ಇನ್ನು ನಿನ್ನೆ ಬಿಜೆಪಿ ಮೈತ್ರಿ ಪಕ್ಷ ಎಐಎಡಿಎಂಕೆಯು ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ, “ನಾವು ಶ್ರೀಲಂಕಾದ ತಮಿಳು ನಿರಾಶ್ರಿತರಿಗೆ ಉಭಯ ಪೌರತ್ವ ಮತ್ತು ವಸತಿ ಪರವಾನಗಿಗಾಗಿ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇವೆ. ಸಿಎಎಯನ್ನು ಹಿಂಪಡೆದುಕೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸುತ್ತೇವೆ” ಎಂದು ಘೋಷಿಸಲಾಗಿದೆ.

ತಮಿಳುನಾಡು ಚುನಾವಣೆಯು ಏಪ್ರಿಲ್ 06 ರಂದು ನಡೆಯಲಿದ್ದು, ಮೇ 02 ರಂದು ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿ: ತಮಿಳುನಾಡು: ಪ್ರಣಾಳಿಕೆಯಲ್ಲಿ ಸಿಎಎ ವಿರೋಧಿಸಿದ BJP ಮಿತ್ರಪಕ್ಷ AIADMK!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...