Homeಮುಖಪುಟಇಂದಿರಾ ಗಾಂಧಿ ಕಾಂಗ್ರೆಸ್ ಚಿಹ್ನೆ ಕಳೆದುಕೊಂಡಿದ್ದನ್ನು ಠಾಕ್ರೆಗೆ ನೆನಪಿಸಿದ ಶರದ್ ಪವಾರ್

ಇಂದಿರಾ ಗಾಂಧಿ ಕಾಂಗ್ರೆಸ್ ಚಿಹ್ನೆ ಕಳೆದುಕೊಂಡಿದ್ದನ್ನು ಠಾಕ್ರೆಗೆ ನೆನಪಿಸಿದ ಶರದ್ ಪವಾರ್

- Advertisement -
- Advertisement -

ಚುನಾವಣಾ ಆಯೋಗವು ಉದ್ಧವ್ ಠಾಕ್ರೆ ಬಣಕ್ಕೆ “ಬಿಲ್ಲು ಮತ್ತು ಬಾಣ”ದ ಚಿಹ್ನೆಯನ್ನು ನೀಡಿಲ್ಲ ಹಾಗಾಗಿ ಅವರು ಹೊಸ ಚಿಹ್ನೆಯನ್ನು ತೆಗೆದುಕೊಳ್ಳಬೇಕಾಗಿದೆ. ಈ ಬಗ್ಗೆ ಮಹಾ ವಿಕಾಸ್ ಅಘಾಡಿ (ಎಂವಿಎ) ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಸಂಸ್ಥಾಪಕ, ಶರದ್ ಪವಾರ್ ಅವರು, ತಮ್ಮ ಮಿತ್ರ ಉದ್ಧವ್ ಠಾಕ್ರೆ ಅವರಿಗೆ ಸಲಹೆ ನೀಡಿದ್ದು, ”ಇದರಿಂದ ಯಾವುದೇ ದೊಡ್ಡ ಪರಿಣಾಮ ಬೀರುವುದಿಲ್ಲ. ಹೊಸ ಚಿಹ್ನೆಯನ್ನು ತೆಗೆದುಕೊಳ್ಳಿ” ಎಂದು ಸೂಚಿಸಿದ್ದಾರೆ.

”ಇದು ಚುನಾವಣಾ ಆಯೋಗದ ನಿರ್ಧಾರವಾಗಿರುವುದರಿಂದ ಒಮ್ಮೆ ನಿರ್ಧಾರ ನೀಡಿದ ನಂತರ ಚರ್ಚೆ ನಡೆಸುವಂತಿಲ್ಲ. ಅವರ ನಿರ್ಧಾರವನ್ನು ಓಪ್ಪಿಕೊಳ್ಳಿ, ಮುಂದೆ ಹೊಸ ಚಿಹ್ನೆಯನ್ನು ಜನರು ಸ್ವೀಕರಿಸುತ್ತಾರೆ. ಹಳೆಯ ಚಿಹ್ನೆಯನ್ನು ಕಳೆದುಕೊಂಡಿರುವುದರಿಂದ ಯಾವುದೇ ದೊಡ್ಡ ಪರಿಣಾಮ ಬೀರುವುದಿಲ್ಲ ಏಕೆಂದರೆ ಜನರು ಹೊಸ ಚಿಹ್ನೆಯನ್ನು ಸ್ವೀಕರಿಸುತ್ತಾರೆ. ಇದು ಮುಂದಿನ 15-30 ದಿನಗಳವರೆಗೆ ಚರ್ಚೆಯಲ್ಲಿ ಉಳಿಯುತ್ತದೆ, ಅಷ್ಟೆ” ಎಂದು ಪವಾರ್ ಹೇಳಿದ್ದಾರೆ.

ಭಾರತದ ಚುನಾವಣಾ ಆಯೋಗವು (ಇಸಿಐ) ಪಕ್ಷದ ಹೆಸರು “ಶಿವಸೇನಾ” ಮತ್ತು ಪಕ್ಷದ ಚಿಹ್ನೆ “ಬಿಲ್ಲು ಮತ್ತು ಬಾಣ” ಅನ್ನು ಏಕನಾಥ್ ಶಿಂಧೆ ಬಣಕ್ಕೆ ನೀಡಲಾಗುವುದು ಎಂದು ಆದೇಶಿಸಿದ ನಂತರ ಶರದ್ ಪವಾರ್ ಅವರು ತಮ್ಮ ಮಿತ್ರ ಉದ್ಧವ್ ಠಾಕ್ರೆ ಅವರಿಗೆ ಈ ರೀತಿಯ ಮಾತುಗಳನ್ನು ಹೇಳಿದ್ದಾರೆ.

ಇದನ್ನೂ ಓದಿ: ಏಕನಾಥ್ ಶಿಂಧೆ ಬಣವೇ ನಿಜವಾದ ಶಿವಸೇನೆ: ಚುನಾವಣಾ ಆಯೋಗ ಆದೇಶ

ಈ ಹಿಂದೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ಕಾಂಗ್ರೆಸ್‌ನ ಚಿಹ್ನೆಯನ್ನು ಕಳೆದುಕೊಂಡಿದ್ದನ್ನು ನೆನಪಿಸಿಕೊಂಡ ಪವಾರ್, ”ಜನರು ಕಾಂಗ್ರೆಸ್‌ನ ಹೊಸ ಚಿಹ್ನೆಯನ್ನು ಸ್ವೀಕರಿಸಿದ ರೀತಿಯಲ್ಲೇ ಉದ್ಧವ್ ಠಾಕ್ರೆ ಬಣದ ಹೊಸ ಚಿಹ್ನೆಯನ್ನು ಸ್ವೀಕರಿಸುತ್ತಾರೆ” ಎಂದು ಭರವಸೆಯ ಮಾತುಗಳನ್ನಾಡಿದ್ದಾರೆ.

”ಇಂದಿರಾ ಗಾಂಧಿ ಕೂಡ ಈ ಪರಿಸ್ಥಿತಿಯನ್ನು ಎದುರಿಸಿದ್ದರು ಎನ್ನುವುದು ನನಗೆ ನೆನಪಿದೆ. ಕಾಂಗ್ರೆಸ್‌ನಲ್ಲಿ ‘ಒಂದು ನೊಗವಿರುವ ಎರಡು ಎತ್ತುಗಳ’ ಚಿಹ್ನೆ ಇತ್ತು. ನಂತರ ಅದನ್ನು ಕಳೆದುಕೊಂಡು ‘ಕೈ’ಯನ್ನು ಹೊಸ ಚಿಹ್ನೆಯಾಗಿ ಅಳವಡಿಸಿಕೊಂಡರು. ಜನರು ಅದನ್ನು ಒಪ್ಪಿಕೊಂಡರು. ಅದೇ ರೀತಿ ಜನರು ಉದ್ಧವ್ ಠಾಕ್ರೆ ಬಣದ ಹೊಸ ಚಿಹ್ನೆಯನ್ನು ಸ್ವೀಕರಿಸುತ್ತಾರೆ” ಎಂದು ಪವಾರ್ ಹೇಳಿದರು.

ಭಾರತದ ಚುನಾವಣಾ ಆಯೋಗ ಶುಕ್ರವಾರ ನೀಡಿರುವ ಈ ಆದೇಶದಿಂದ ಶಿವಸೇನೆಯ ಉದ್ಧವ್ ಠಾಕ್ರೆ ಬಣಕ್ಕೆ ಭಾರಿ ಹಿನ್ನಡೆಯಾಗಿದೆ. ಪಕ್ಷದ ಹೆಸರು “ಶಿವಸೇನಾ” ಮತ್ತು “ಬಿಲ್ಲು ಮತ್ತು ಬಾಣ” ಚಿಹ್ನೆಯನ್ನು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಬಣಕ್ಕೆ ನೀಡಿದೆ.

ಈ ಆದೇಶವನ್ನು ಶಿಂಧೆ ಬಣ ಸ್ವಾಗತಿಸಿದರೆ, ಉದ್ಧವ್ ಠಾಕ್ರೆ ಬಣವು ಚುನಾವಣಾ ಆಯೋಗದ ನಿರ್ಧಾರವನ್ನು ”ಪ್ರಜಾಪ್ರಭುತ್ವದ ಕೊಲೆ” ಎಂದು ಬಣ್ಣಿಸಿದೆ. ಈ ಬಗ್ಗೆ ತಾವು ಸುಪ್ರೀಂ ಕೋರ್ಟ್‌ಗೆ ಹೋಗುವುದಾಗಿ ಹೇಳಿದೆ. ”ಭಾರತದ ಚುನಾವಣಾ ಆಯೋಗವು ಬಿಜೆಪಿಯ ಏಜೆಂಟ್ ಆಗಿ ಕೆಲಸ ಮಾಡುತ್ತಿದೆ” ಎಂದು ಉದ್ಧವ್ ಠಾಕ್ರೆ ಬಣವು ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...