Homeಮುಖಪುಟಇಂದಿರಾ ಗಾಂಧಿ ಕಾಂಗ್ರೆಸ್ ಚಿಹ್ನೆ ಕಳೆದುಕೊಂಡಿದ್ದನ್ನು ಠಾಕ್ರೆಗೆ ನೆನಪಿಸಿದ ಶರದ್ ಪವಾರ್

ಇಂದಿರಾ ಗಾಂಧಿ ಕಾಂಗ್ರೆಸ್ ಚಿಹ್ನೆ ಕಳೆದುಕೊಂಡಿದ್ದನ್ನು ಠಾಕ್ರೆಗೆ ನೆನಪಿಸಿದ ಶರದ್ ಪವಾರ್

- Advertisement -
- Advertisement -

ಚುನಾವಣಾ ಆಯೋಗವು ಉದ್ಧವ್ ಠಾಕ್ರೆ ಬಣಕ್ಕೆ “ಬಿಲ್ಲು ಮತ್ತು ಬಾಣ”ದ ಚಿಹ್ನೆಯನ್ನು ನೀಡಿಲ್ಲ ಹಾಗಾಗಿ ಅವರು ಹೊಸ ಚಿಹ್ನೆಯನ್ನು ತೆಗೆದುಕೊಳ್ಳಬೇಕಾಗಿದೆ. ಈ ಬಗ್ಗೆ ಮಹಾ ವಿಕಾಸ್ ಅಘಾಡಿ (ಎಂವಿಎ) ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಸಂಸ್ಥಾಪಕ, ಶರದ್ ಪವಾರ್ ಅವರು, ತಮ್ಮ ಮಿತ್ರ ಉದ್ಧವ್ ಠಾಕ್ರೆ ಅವರಿಗೆ ಸಲಹೆ ನೀಡಿದ್ದು, ”ಇದರಿಂದ ಯಾವುದೇ ದೊಡ್ಡ ಪರಿಣಾಮ ಬೀರುವುದಿಲ್ಲ. ಹೊಸ ಚಿಹ್ನೆಯನ್ನು ತೆಗೆದುಕೊಳ್ಳಿ” ಎಂದು ಸೂಚಿಸಿದ್ದಾರೆ.

”ಇದು ಚುನಾವಣಾ ಆಯೋಗದ ನಿರ್ಧಾರವಾಗಿರುವುದರಿಂದ ಒಮ್ಮೆ ನಿರ್ಧಾರ ನೀಡಿದ ನಂತರ ಚರ್ಚೆ ನಡೆಸುವಂತಿಲ್ಲ. ಅವರ ನಿರ್ಧಾರವನ್ನು ಓಪ್ಪಿಕೊಳ್ಳಿ, ಮುಂದೆ ಹೊಸ ಚಿಹ್ನೆಯನ್ನು ಜನರು ಸ್ವೀಕರಿಸುತ್ತಾರೆ. ಹಳೆಯ ಚಿಹ್ನೆಯನ್ನು ಕಳೆದುಕೊಂಡಿರುವುದರಿಂದ ಯಾವುದೇ ದೊಡ್ಡ ಪರಿಣಾಮ ಬೀರುವುದಿಲ್ಲ ಏಕೆಂದರೆ ಜನರು ಹೊಸ ಚಿಹ್ನೆಯನ್ನು ಸ್ವೀಕರಿಸುತ್ತಾರೆ. ಇದು ಮುಂದಿನ 15-30 ದಿನಗಳವರೆಗೆ ಚರ್ಚೆಯಲ್ಲಿ ಉಳಿಯುತ್ತದೆ, ಅಷ್ಟೆ” ಎಂದು ಪವಾರ್ ಹೇಳಿದ್ದಾರೆ.

ಭಾರತದ ಚುನಾವಣಾ ಆಯೋಗವು (ಇಸಿಐ) ಪಕ್ಷದ ಹೆಸರು “ಶಿವಸೇನಾ” ಮತ್ತು ಪಕ್ಷದ ಚಿಹ್ನೆ “ಬಿಲ್ಲು ಮತ್ತು ಬಾಣ” ಅನ್ನು ಏಕನಾಥ್ ಶಿಂಧೆ ಬಣಕ್ಕೆ ನೀಡಲಾಗುವುದು ಎಂದು ಆದೇಶಿಸಿದ ನಂತರ ಶರದ್ ಪವಾರ್ ಅವರು ತಮ್ಮ ಮಿತ್ರ ಉದ್ಧವ್ ಠಾಕ್ರೆ ಅವರಿಗೆ ಈ ರೀತಿಯ ಮಾತುಗಳನ್ನು ಹೇಳಿದ್ದಾರೆ.

ಇದನ್ನೂ ಓದಿ: ಏಕನಾಥ್ ಶಿಂಧೆ ಬಣವೇ ನಿಜವಾದ ಶಿವಸೇನೆ: ಚುನಾವಣಾ ಆಯೋಗ ಆದೇಶ

ಈ ಹಿಂದೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ಕಾಂಗ್ರೆಸ್‌ನ ಚಿಹ್ನೆಯನ್ನು ಕಳೆದುಕೊಂಡಿದ್ದನ್ನು ನೆನಪಿಸಿಕೊಂಡ ಪವಾರ್, ”ಜನರು ಕಾಂಗ್ರೆಸ್‌ನ ಹೊಸ ಚಿಹ್ನೆಯನ್ನು ಸ್ವೀಕರಿಸಿದ ರೀತಿಯಲ್ಲೇ ಉದ್ಧವ್ ಠಾಕ್ರೆ ಬಣದ ಹೊಸ ಚಿಹ್ನೆಯನ್ನು ಸ್ವೀಕರಿಸುತ್ತಾರೆ” ಎಂದು ಭರವಸೆಯ ಮಾತುಗಳನ್ನಾಡಿದ್ದಾರೆ.

”ಇಂದಿರಾ ಗಾಂಧಿ ಕೂಡ ಈ ಪರಿಸ್ಥಿತಿಯನ್ನು ಎದುರಿಸಿದ್ದರು ಎನ್ನುವುದು ನನಗೆ ನೆನಪಿದೆ. ಕಾಂಗ್ರೆಸ್‌ನಲ್ಲಿ ‘ಒಂದು ನೊಗವಿರುವ ಎರಡು ಎತ್ತುಗಳ’ ಚಿಹ್ನೆ ಇತ್ತು. ನಂತರ ಅದನ್ನು ಕಳೆದುಕೊಂಡು ‘ಕೈ’ಯನ್ನು ಹೊಸ ಚಿಹ್ನೆಯಾಗಿ ಅಳವಡಿಸಿಕೊಂಡರು. ಜನರು ಅದನ್ನು ಒಪ್ಪಿಕೊಂಡರು. ಅದೇ ರೀತಿ ಜನರು ಉದ್ಧವ್ ಠಾಕ್ರೆ ಬಣದ ಹೊಸ ಚಿಹ್ನೆಯನ್ನು ಸ್ವೀಕರಿಸುತ್ತಾರೆ” ಎಂದು ಪವಾರ್ ಹೇಳಿದರು.

ಭಾರತದ ಚುನಾವಣಾ ಆಯೋಗ ಶುಕ್ರವಾರ ನೀಡಿರುವ ಈ ಆದೇಶದಿಂದ ಶಿವಸೇನೆಯ ಉದ್ಧವ್ ಠಾಕ್ರೆ ಬಣಕ್ಕೆ ಭಾರಿ ಹಿನ್ನಡೆಯಾಗಿದೆ. ಪಕ್ಷದ ಹೆಸರು “ಶಿವಸೇನಾ” ಮತ್ತು “ಬಿಲ್ಲು ಮತ್ತು ಬಾಣ” ಚಿಹ್ನೆಯನ್ನು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಬಣಕ್ಕೆ ನೀಡಿದೆ.

ಈ ಆದೇಶವನ್ನು ಶಿಂಧೆ ಬಣ ಸ್ವಾಗತಿಸಿದರೆ, ಉದ್ಧವ್ ಠಾಕ್ರೆ ಬಣವು ಚುನಾವಣಾ ಆಯೋಗದ ನಿರ್ಧಾರವನ್ನು ”ಪ್ರಜಾಪ್ರಭುತ್ವದ ಕೊಲೆ” ಎಂದು ಬಣ್ಣಿಸಿದೆ. ಈ ಬಗ್ಗೆ ತಾವು ಸುಪ್ರೀಂ ಕೋರ್ಟ್‌ಗೆ ಹೋಗುವುದಾಗಿ ಹೇಳಿದೆ. ”ಭಾರತದ ಚುನಾವಣಾ ಆಯೋಗವು ಬಿಜೆಪಿಯ ಏಜೆಂಟ್ ಆಗಿ ಕೆಲಸ ಮಾಡುತ್ತಿದೆ” ಎಂದು ಉದ್ಧವ್ ಠಾಕ್ರೆ ಬಣವು ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...