Homeಮುಖಪುಟಇಂದಿರಾ ಗಾಂಧಿ ಕಾಂಗ್ರೆಸ್ ಚಿಹ್ನೆ ಕಳೆದುಕೊಂಡಿದ್ದನ್ನು ಠಾಕ್ರೆಗೆ ನೆನಪಿಸಿದ ಶರದ್ ಪವಾರ್

ಇಂದಿರಾ ಗಾಂಧಿ ಕಾಂಗ್ರೆಸ್ ಚಿಹ್ನೆ ಕಳೆದುಕೊಂಡಿದ್ದನ್ನು ಠಾಕ್ರೆಗೆ ನೆನಪಿಸಿದ ಶರದ್ ಪವಾರ್

- Advertisement -
- Advertisement -

ಚುನಾವಣಾ ಆಯೋಗವು ಉದ್ಧವ್ ಠಾಕ್ರೆ ಬಣಕ್ಕೆ “ಬಿಲ್ಲು ಮತ್ತು ಬಾಣ”ದ ಚಿಹ್ನೆಯನ್ನು ನೀಡಿಲ್ಲ ಹಾಗಾಗಿ ಅವರು ಹೊಸ ಚಿಹ್ನೆಯನ್ನು ತೆಗೆದುಕೊಳ್ಳಬೇಕಾಗಿದೆ. ಈ ಬಗ್ಗೆ ಮಹಾ ವಿಕಾಸ್ ಅಘಾಡಿ (ಎಂವಿಎ) ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಸಂಸ್ಥಾಪಕ, ಶರದ್ ಪವಾರ್ ಅವರು, ತಮ್ಮ ಮಿತ್ರ ಉದ್ಧವ್ ಠಾಕ್ರೆ ಅವರಿಗೆ ಸಲಹೆ ನೀಡಿದ್ದು, ”ಇದರಿಂದ ಯಾವುದೇ ದೊಡ್ಡ ಪರಿಣಾಮ ಬೀರುವುದಿಲ್ಲ. ಹೊಸ ಚಿಹ್ನೆಯನ್ನು ತೆಗೆದುಕೊಳ್ಳಿ” ಎಂದು ಸೂಚಿಸಿದ್ದಾರೆ.

”ಇದು ಚುನಾವಣಾ ಆಯೋಗದ ನಿರ್ಧಾರವಾಗಿರುವುದರಿಂದ ಒಮ್ಮೆ ನಿರ್ಧಾರ ನೀಡಿದ ನಂತರ ಚರ್ಚೆ ನಡೆಸುವಂತಿಲ್ಲ. ಅವರ ನಿರ್ಧಾರವನ್ನು ಓಪ್ಪಿಕೊಳ್ಳಿ, ಮುಂದೆ ಹೊಸ ಚಿಹ್ನೆಯನ್ನು ಜನರು ಸ್ವೀಕರಿಸುತ್ತಾರೆ. ಹಳೆಯ ಚಿಹ್ನೆಯನ್ನು ಕಳೆದುಕೊಂಡಿರುವುದರಿಂದ ಯಾವುದೇ ದೊಡ್ಡ ಪರಿಣಾಮ ಬೀರುವುದಿಲ್ಲ ಏಕೆಂದರೆ ಜನರು ಹೊಸ ಚಿಹ್ನೆಯನ್ನು ಸ್ವೀಕರಿಸುತ್ತಾರೆ. ಇದು ಮುಂದಿನ 15-30 ದಿನಗಳವರೆಗೆ ಚರ್ಚೆಯಲ್ಲಿ ಉಳಿಯುತ್ತದೆ, ಅಷ್ಟೆ” ಎಂದು ಪವಾರ್ ಹೇಳಿದ್ದಾರೆ.

ಭಾರತದ ಚುನಾವಣಾ ಆಯೋಗವು (ಇಸಿಐ) ಪಕ್ಷದ ಹೆಸರು “ಶಿವಸೇನಾ” ಮತ್ತು ಪಕ್ಷದ ಚಿಹ್ನೆ “ಬಿಲ್ಲು ಮತ್ತು ಬಾಣ” ಅನ್ನು ಏಕನಾಥ್ ಶಿಂಧೆ ಬಣಕ್ಕೆ ನೀಡಲಾಗುವುದು ಎಂದು ಆದೇಶಿಸಿದ ನಂತರ ಶರದ್ ಪವಾರ್ ಅವರು ತಮ್ಮ ಮಿತ್ರ ಉದ್ಧವ್ ಠಾಕ್ರೆ ಅವರಿಗೆ ಈ ರೀತಿಯ ಮಾತುಗಳನ್ನು ಹೇಳಿದ್ದಾರೆ.

ಇದನ್ನೂ ಓದಿ: ಏಕನಾಥ್ ಶಿಂಧೆ ಬಣವೇ ನಿಜವಾದ ಶಿವಸೇನೆ: ಚುನಾವಣಾ ಆಯೋಗ ಆದೇಶ

ಈ ಹಿಂದೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ಕಾಂಗ್ರೆಸ್‌ನ ಚಿಹ್ನೆಯನ್ನು ಕಳೆದುಕೊಂಡಿದ್ದನ್ನು ನೆನಪಿಸಿಕೊಂಡ ಪವಾರ್, ”ಜನರು ಕಾಂಗ್ರೆಸ್‌ನ ಹೊಸ ಚಿಹ್ನೆಯನ್ನು ಸ್ವೀಕರಿಸಿದ ರೀತಿಯಲ್ಲೇ ಉದ್ಧವ್ ಠಾಕ್ರೆ ಬಣದ ಹೊಸ ಚಿಹ್ನೆಯನ್ನು ಸ್ವೀಕರಿಸುತ್ತಾರೆ” ಎಂದು ಭರವಸೆಯ ಮಾತುಗಳನ್ನಾಡಿದ್ದಾರೆ.

”ಇಂದಿರಾ ಗಾಂಧಿ ಕೂಡ ಈ ಪರಿಸ್ಥಿತಿಯನ್ನು ಎದುರಿಸಿದ್ದರು ಎನ್ನುವುದು ನನಗೆ ನೆನಪಿದೆ. ಕಾಂಗ್ರೆಸ್‌ನಲ್ಲಿ ‘ಒಂದು ನೊಗವಿರುವ ಎರಡು ಎತ್ತುಗಳ’ ಚಿಹ್ನೆ ಇತ್ತು. ನಂತರ ಅದನ್ನು ಕಳೆದುಕೊಂಡು ‘ಕೈ’ಯನ್ನು ಹೊಸ ಚಿಹ್ನೆಯಾಗಿ ಅಳವಡಿಸಿಕೊಂಡರು. ಜನರು ಅದನ್ನು ಒಪ್ಪಿಕೊಂಡರು. ಅದೇ ರೀತಿ ಜನರು ಉದ್ಧವ್ ಠಾಕ್ರೆ ಬಣದ ಹೊಸ ಚಿಹ್ನೆಯನ್ನು ಸ್ವೀಕರಿಸುತ್ತಾರೆ” ಎಂದು ಪವಾರ್ ಹೇಳಿದರು.

ಭಾರತದ ಚುನಾವಣಾ ಆಯೋಗ ಶುಕ್ರವಾರ ನೀಡಿರುವ ಈ ಆದೇಶದಿಂದ ಶಿವಸೇನೆಯ ಉದ್ಧವ್ ಠಾಕ್ರೆ ಬಣಕ್ಕೆ ಭಾರಿ ಹಿನ್ನಡೆಯಾಗಿದೆ. ಪಕ್ಷದ ಹೆಸರು “ಶಿವಸೇನಾ” ಮತ್ತು “ಬಿಲ್ಲು ಮತ್ತು ಬಾಣ” ಚಿಹ್ನೆಯನ್ನು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಬಣಕ್ಕೆ ನೀಡಿದೆ.

ಈ ಆದೇಶವನ್ನು ಶಿಂಧೆ ಬಣ ಸ್ವಾಗತಿಸಿದರೆ, ಉದ್ಧವ್ ಠಾಕ್ರೆ ಬಣವು ಚುನಾವಣಾ ಆಯೋಗದ ನಿರ್ಧಾರವನ್ನು ”ಪ್ರಜಾಪ್ರಭುತ್ವದ ಕೊಲೆ” ಎಂದು ಬಣ್ಣಿಸಿದೆ. ಈ ಬಗ್ಗೆ ತಾವು ಸುಪ್ರೀಂ ಕೋರ್ಟ್‌ಗೆ ಹೋಗುವುದಾಗಿ ಹೇಳಿದೆ. ”ಭಾರತದ ಚುನಾವಣಾ ಆಯೋಗವು ಬಿಜೆಪಿಯ ಏಜೆಂಟ್ ಆಗಿ ಕೆಲಸ ಮಾಡುತ್ತಿದೆ” ಎಂದು ಉದ್ಧವ್ ಠಾಕ್ರೆ ಬಣವು ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...