Homeಮುಖಪುಟಎನ್‌ಸಿಪಿ ಶಾಸಕರಿಗೆ ವಿಪ್ ಜಾರಿ ಮಾಡಿದ ಶರದ್ ಪವಾರ್

ಎನ್‌ಸಿಪಿ ಶಾಸಕರಿಗೆ ವಿಪ್ ಜಾರಿ ಮಾಡಿದ ಶರದ್ ಪವಾರ್

- Advertisement -
- Advertisement -

ರಾಷ್ಟ್ರೀಯವಾದಿ ಕಾಂಗ್ರೆಸ್‌ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್‌ ಪವಾರ್‌ ನೇತೃತ್ವದ ಬಣವು ಮುಂಬೈನಲ್ಲಿ ಬುಧವಾರ ನಡೆಯಲಿರುವ ಪ್ರಮುಖ ಸಭೆಗೆ ಹಾಜರಾಗುವಂತೆ ಪಕ್ಷದ ಎಲ್ಲ ಶಾಸಕರಿಗೆ ವಿಪ್‌ ಜಾರಿ ಮಾಡಿದೆ.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಪ್ರತಿಸ್ಪರ್ಧಿ ಗುಂಪು ಇಂದೇ ಪಕ್ಷದ ಶಾಸಕರ ಪ್ರತ್ಯೇಕ ಸಭೆಯನ್ನು ಕರೆದಿದೆ.

ಅಜಿತ್ ಪವಾರ್ ಬಣವು ಬಾಂದ್ರಾದಲ್ಲಿ ಬೆಳಿಗ್ಗೆ 11 ಗಂಟೆಗೆ ಮತ್ತು ಶರದ್‌ ಪವಾರ್‌ ನೇತೃತ್ವದ ಬಣವು ಮಧ್ಯಾಹ್ನ 1 ಗಂಟೆಗೆ ವೈ.ಬಿ.ಚವಾಣ್ ಸಭಾಂಗಣದಲ್ಲಿ ಸಭೆ ಕರೆದಿದೆ.

ಶರದ್‌ ಪವಾರ್‌ ನೇತೃತ್ವದ ಎನ್‌ಸಿಪಿಯ ಮುಖ್ಯ ಸಚೇತಕ ಜಿತೇಂದ್ರ ಅನ್ಸಾದ್ ಅವರು ಶಾಸಕರು ಕಡ್ಡಾಯವಾಗಿ ಸಭೆಯಲ್ಲಿ ಭಾಗಿಯಾಗುವಂತೆ ವಿಪ್ ಜಾರಿ ಮಾಡಿದ್ದಾರೆ.

ಎನ್‌ಸಿಪಿಯ ಉಭಯ ಬಣಗಳಿಂದ ಪ್ರತ್ಯೇಕ ಸಭೆಗೆ ವೇದಿಕೆ ಸಜ್ಜಾಗಿರುವಂತೆಯೇ ಪಕ್ಷದ ಮೇಲೆ ಹಕ್ಕು ಸ್ಥಾಪಿಸುವ ಕಸರತ್ತು ಎರಡೂ ಬಣಗಳಲ್ಲಿ ತೀವ್ರಗೊಂಡಿದೆ.

ಅಜಿತ್ ಪವಾರ್ ಅವರು ಶಿವಸೇನೆ-ಬಿಜೆಪಿ ಸರ್ಕಾರಕ್ಕೆ ಇತರ ಎಂಟು ಶಾಸಕರೊಂದಿಗೆ ಭಾನುವಾರ ಸೇರ್ಪಡೆಯಾದ ನಂತರ ಶರದ್ ಪವಾರ್ ಅವರು ಅವ್ಹಾದ್ ಅವರನ್ನು ಮುಖ್ಯ ಸಚೇತಕರಾಗಿ ನೇಮಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಎಎಪಿಯನ್ನು ಹತ್ತಿಕ್ಕಲು ಬಿಜೆಪಿ ಆಪರೇಷನ್ ಜಾದು ಆರಂಭಿಸಿದೆ..’; ಅರವಿಂದ್ ಕೇಜ್ರಿವಾಲ್

0
"ಪ್ರಧಾನಿ ನರೇಂದ್ರ ಮೋದಿ ಅವರು ಯಾರನ್ನಾದರೂ ಜೈಲಿಗೆ ಕಳುಹಿಸಬಹುದು" ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆಮ್ ಆದ್ಮಿ ಪಕ್ಷದ (ಎಎಪಿ) ಹಿರಿಯ ನಾಯಕರೊಂದಿಗೆ ಇಂದು ಬಿಜೆಪಿ ಕೇಂದ್ರ ಕಚೇರಿಗೆ ಯೋಜಿತ...