Homeಮುಖಪುಟಅಜಿತ್ ಪವಾರ್ ಬಣವೇ ನಿಜವಾದ ಎನ್‌ಸಿಪಿ ಎಂದ ಚು.ಆಯೋಗ: ಶರದ್ ಪವಾರ್ ಪಕ್ಷಕ್ಕೆ ಹೊಸ ಹೆಸರು

ಅಜಿತ್ ಪವಾರ್ ಬಣವೇ ನಿಜವಾದ ಎನ್‌ಸಿಪಿ ಎಂದ ಚು.ಆಯೋಗ: ಶರದ್ ಪವಾರ್ ಪಕ್ಷಕ್ಕೆ ಹೊಸ ಹೆಸರು

- Advertisement -
- Advertisement -

ದೇಶದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾದ ಶರದ್‌ ಪವಾರ್ ನೇತೃತ್ವದ ಎನ್‌ಸಿಪಿ ಪಕ್ಷಕ್ಕೆ ಚುನಾವಣಾ ಆಯೋಗ ಹೊಸ ಹೆಸರು ನೀಡಿದೆ.

ಶರದ್‌ ಪವಾರ್ ನೇತೃತ್ವದ ಪಕ್ಷದ ಹೆಸರು ಈ ಹಿಂದೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಎಂದು ಇತ್ತು. ಅದು ಈಗ ಅಜಿತ್ ಪವಾರ್ ಬಣದ ಪಾಲಾಗಿದೆ. ಹಾಗಾಗಿ ಶರದ್ ಪವಾರ್ ಬಣಕ್ಕೆ ‘ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ ಶರದ್ಚಂದ್ರ ಪವಾರ್’ (ಎನ್‌ಸಿಪಿ-ಎಸ್‌ಪಿ) ಎಂದು ಚುನಾವಣಾ ಆಯೋಗ ಹೊಸ ಹೆಸರು ಕೊಟ್ಟಿದೆ.

ವರದಿಗಳ ಪ್ರಕಾರ, ಚುನಾವಣಾ ಆಯೋಗ ಶರದ್ ಪವಾರ್ ಬಣಕ್ಕೆ ಹೊಸ ಹೆಸರು ನೀಡಿದೆ. ಆದರೆ, ಪಕ್ಷದ ಚಿಹ್ನೆಯ ಕುರಿತು ಇನ್ನೂ ಮಾಹಿತಿ ದೊರೆತಿಲ್ಲ. ಎನ್‌ಸಿಪಿ ಪಕ್ಷದ ಚಿಹ್ನೆಯಾಗಿದ್ದ ‘ಗಡಿಯಾರ’ ಅಜಿತ್ ಪವಾರ್ ಬಣದ ಪಾಲಾಗಿದೆ.

ಶರದ್ ಪವಾರ್ ಅವರು 1999ರಲ್ಲಿ ಎನ್‌ಸಿಪಿ ಪಕ್ಷವನ್ನು ಸ್ಥಾಪಿಸಿದ್ದರು. ನಿನ್ನೆ(ಫೆ.6, 2024) ಅವರು ತಮ್ಮ ಪಕ್ಷದ ಮೇಲಿನ ನಿಯಂತ್ರಣ ಕಳೆದುಕೊಂಡಿದ್ದಾರೆ. ಎನ್‌ಸಿಪಿ ಪಕ್ಷವನ್ನು ವಿಭಜಿಸಿದ ಬಂಡಾಯದ ನೇತೃತ್ವ ವಹಿಸಿದ್ದ ಶರದ್ ಪವಾರ್ ಅವರ ಸೋದರಳಿಯ ಅಜಿತ್ ಪವಾರ್ ನೇತೃತ್ವದ ಬಣವು ‘ನಿಜವಾದ’ ಎನ್‌ಸಿಪಿ ಎಂದು ಚುನಾವಣಾ ಆಯೋಗ ತಿಳಿಸಿದೆ.

ದೇಶದ ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಒಂದಾಗಿದ್ದ ಎನ್‌ಸಿಪಿ ಅದರ ನಾಯಕ ಅಜಿತ್ ಪವಾರ್ ಮತ್ತು ಕೆಲ ಶಾಸಕರ ಬಂಡಾಯದಿಂದ ಈಗ ಎರಡು ವಿಭಾಗವಾಗಿದೆ. ಮೂಲ ಎನ್‌ಸಿಪಿ ಬಂಡಾಯ ನಾಯಕ ಅಜಿತ್ ಪವಾರ್ ಬಣದ ಪಾಲಾಗಿದೆ.

ಜುಲೈ 2023ರಲ್ಲಿ ಎನ್‌ಸಿಪಿ ನಾಯಕರಾಗಿದ್ದ ಅಜಿತ್ ಪವಾರ್ ಮತ್ತು ಕೆಲ ಶಾಸಕರು ಪಕ್ಷದ ಉನ್ನತ ನಾಯಕ ಶರದ್ ಪವಾರ್ ವಿರುದ್ದ ಬಂಡೆದ್ದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂದೆ ಬಣಕ್ಕೆ ಬೆಂಬಲ ಸೂಚಿಸಿದ್ದರು. ಈ ಮೂಲಕ ಅವರಿಗೆ ಶಿಂದೆ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಹುದ್ದೆ ಮತ್ತು ಕೆಲ ಶಾಸಕರಿಗೆ ಸಚಿವ ಸ್ಥಾನ ದೊರೆತಿತ್ತು.

ಶಿವಸೇನೆಯಲ್ಲೂ ಎರಡು ವಿಭಾಗ :

ಮಹಾರಾಷ್ಟ್ರದ ಹಿಂದುತ್ವ ನಾಯಕ ಬಾಳಠಾಕ್ರೆ ಕಟ್ಟಿ ಬೆಳೆಸಿದ ದೇಶದ ಮತ್ತೊಂದು ಪ್ರಮುಖ ಪಕ್ಷ ಶಿವಸೇನೆ ಕೂಡ ಈಗ ಎರಡು ವಿಭಾಗಗಳಾಗಿವೆ. ಶಿವಸೇನೆ, ಕಾಂಗ್ರೆಸ್‌ ಮತ್ತು ಎನ್‌ಸಿಪಿ ಮೈತ್ರಿಕೂಟದ ‘ಮಹಾ ಅಘಾಡಿ’ ಸರ್ಕಾರದ ವಿರುದ್ದ ಬಂಡಾಯವೆದ್ದ ಮಹಾರಾಷ್ಟ್ರದ ಈಗಿನ ಸಿಎಂ ಏಕನಾಥ್ ಶಿಂದೆ ಮತ್ತು ಕೆಲ ಶಾಸಕರು ಬಿಜೆಪಿ ಜೊತೆಗೂಡಿ ಸರ್ಕಾರ ರಚಿಸಿದ್ದರು.

ಆ ಬಳಿಕ ಶಿವಸೇನೆ ಪಕ್ಷದ ನಾಯಕತ್ವಕ್ಕಾಗಿ ಸಿಎಂ ಶಿಂದೆ ಮತ್ತು ಮಾಜಿ ಸಿಎಂ ಉದ್ದವ್ ಠಾಕ್ರೆ ನಡುವೆ ನಡೆದ ಕಾನೂನು ಸಮರದಲ್ಲಿ ಶಿಂದೆ ಬಣಕ್ಕೆ ಜಯವಾಗಿತ್ತು. ಶಿಂದೆ ಬಣವೇ ನಿಜವಾದ ಶಿವಸೇನೆ ಎಂದು ಚುನಾವಣಾ ಆಯೋಗ ಹೇಳಿತ್ತು. ಹಾಗಾಗಿ, ಉದ್ದವ್ ಠಾಕ್ರೆ ಬಣದ ಪಕ್ಷದ ಹೆಸರು ಶಿವಸೇನೆ ಉದ್ದವ್ ಬಾಳಠಾಕ್ರೆ (ಶಿವಸೇನೆ-ಯುಬಿಟಿ) ಎಂದು ಬದಲಾಗಿದೆ.

ಎರಡು ಭಾಗಗಳಾಗಿರುವ ಶಿವಸೇನೆ ಮತ್ತು ಎನ್‌ಸಿಪಿ ಪಕ್ಷಗಳು ಎರಡೂ ಕೂಡ ಮಹಾರಾಷ್ಟ್ರದ್ದೇ ಎಂಬುವುದು ಇಲ್ಲಿ ಗಮನಾರ್ಹ ಸಂಗತಿ. ಈ ಮೂಲಕ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌, ಬಿಜೆಪಿ, ಶಿವಸೇನೆ, ಶಿವಸೇನೆ-ಯುಬಿಟಿ, ಎನ್‌ಸಿಪಿ, ಎನ್‌ಸಿಪಿ-ಎಸ್‌ಪಿ ಪ್ರಮುಖ ರಾಜಕೀಯ ಪಕ್ಷಗಳಾಗಿ ಹೊರ ಹೊಮ್ಮಿದೆ.

ಇದನ್ನೂ ಓದಿ : ಕೇಂದ್ರದ ವಿರುದ್ಧ ಕೇರಳ ಸರ್ಕಾರದಿಂದ ನಾಳೆ ದೆಹಲಿಯಲ್ಲಿ ಪ್ರತಿಭಟನೆ: ತಮಿಳುನಾಡಿನಿಂದ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...