Homeಮುಖಪುಟಅಜಿತ್ ಪವಾರ್ ಬಣವೇ ನಿಜವಾದ ಎನ್‌ಸಿಪಿ ಎಂದ ಚು.ಆಯೋಗ: ಶರದ್ ಪವಾರ್ ಪಕ್ಷಕ್ಕೆ ಹೊಸ ಹೆಸರು

ಅಜಿತ್ ಪವಾರ್ ಬಣವೇ ನಿಜವಾದ ಎನ್‌ಸಿಪಿ ಎಂದ ಚು.ಆಯೋಗ: ಶರದ್ ಪವಾರ್ ಪಕ್ಷಕ್ಕೆ ಹೊಸ ಹೆಸರು

- Advertisement -
- Advertisement -

ದೇಶದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾದ ಶರದ್‌ ಪವಾರ್ ನೇತೃತ್ವದ ಎನ್‌ಸಿಪಿ ಪಕ್ಷಕ್ಕೆ ಚುನಾವಣಾ ಆಯೋಗ ಹೊಸ ಹೆಸರು ನೀಡಿದೆ.

ಶರದ್‌ ಪವಾರ್ ನೇತೃತ್ವದ ಪಕ್ಷದ ಹೆಸರು ಈ ಹಿಂದೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಎಂದು ಇತ್ತು. ಅದು ಈಗ ಅಜಿತ್ ಪವಾರ್ ಬಣದ ಪಾಲಾಗಿದೆ. ಹಾಗಾಗಿ ಶರದ್ ಪವಾರ್ ಬಣಕ್ಕೆ ‘ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ ಶರದ್ಚಂದ್ರ ಪವಾರ್’ (ಎನ್‌ಸಿಪಿ-ಎಸ್‌ಪಿ) ಎಂದು ಚುನಾವಣಾ ಆಯೋಗ ಹೊಸ ಹೆಸರು ಕೊಟ್ಟಿದೆ.

ವರದಿಗಳ ಪ್ರಕಾರ, ಚುನಾವಣಾ ಆಯೋಗ ಶರದ್ ಪವಾರ್ ಬಣಕ್ಕೆ ಹೊಸ ಹೆಸರು ನೀಡಿದೆ. ಆದರೆ, ಪಕ್ಷದ ಚಿಹ್ನೆಯ ಕುರಿತು ಇನ್ನೂ ಮಾಹಿತಿ ದೊರೆತಿಲ್ಲ. ಎನ್‌ಸಿಪಿ ಪಕ್ಷದ ಚಿಹ್ನೆಯಾಗಿದ್ದ ‘ಗಡಿಯಾರ’ ಅಜಿತ್ ಪವಾರ್ ಬಣದ ಪಾಲಾಗಿದೆ.

ಶರದ್ ಪವಾರ್ ಅವರು 1999ರಲ್ಲಿ ಎನ್‌ಸಿಪಿ ಪಕ್ಷವನ್ನು ಸ್ಥಾಪಿಸಿದ್ದರು. ನಿನ್ನೆ(ಫೆ.6, 2024) ಅವರು ತಮ್ಮ ಪಕ್ಷದ ಮೇಲಿನ ನಿಯಂತ್ರಣ ಕಳೆದುಕೊಂಡಿದ್ದಾರೆ. ಎನ್‌ಸಿಪಿ ಪಕ್ಷವನ್ನು ವಿಭಜಿಸಿದ ಬಂಡಾಯದ ನೇತೃತ್ವ ವಹಿಸಿದ್ದ ಶರದ್ ಪವಾರ್ ಅವರ ಸೋದರಳಿಯ ಅಜಿತ್ ಪವಾರ್ ನೇತೃತ್ವದ ಬಣವು ‘ನಿಜವಾದ’ ಎನ್‌ಸಿಪಿ ಎಂದು ಚುನಾವಣಾ ಆಯೋಗ ತಿಳಿಸಿದೆ.

ದೇಶದ ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಒಂದಾಗಿದ್ದ ಎನ್‌ಸಿಪಿ ಅದರ ನಾಯಕ ಅಜಿತ್ ಪವಾರ್ ಮತ್ತು ಕೆಲ ಶಾಸಕರ ಬಂಡಾಯದಿಂದ ಈಗ ಎರಡು ವಿಭಾಗವಾಗಿದೆ. ಮೂಲ ಎನ್‌ಸಿಪಿ ಬಂಡಾಯ ನಾಯಕ ಅಜಿತ್ ಪವಾರ್ ಬಣದ ಪಾಲಾಗಿದೆ.

ಜುಲೈ 2023ರಲ್ಲಿ ಎನ್‌ಸಿಪಿ ನಾಯಕರಾಗಿದ್ದ ಅಜಿತ್ ಪವಾರ್ ಮತ್ತು ಕೆಲ ಶಾಸಕರು ಪಕ್ಷದ ಉನ್ನತ ನಾಯಕ ಶರದ್ ಪವಾರ್ ವಿರುದ್ದ ಬಂಡೆದ್ದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂದೆ ಬಣಕ್ಕೆ ಬೆಂಬಲ ಸೂಚಿಸಿದ್ದರು. ಈ ಮೂಲಕ ಅವರಿಗೆ ಶಿಂದೆ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಹುದ್ದೆ ಮತ್ತು ಕೆಲ ಶಾಸಕರಿಗೆ ಸಚಿವ ಸ್ಥಾನ ದೊರೆತಿತ್ತು.

ಶಿವಸೇನೆಯಲ್ಲೂ ಎರಡು ವಿಭಾಗ :

ಮಹಾರಾಷ್ಟ್ರದ ಹಿಂದುತ್ವ ನಾಯಕ ಬಾಳಠಾಕ್ರೆ ಕಟ್ಟಿ ಬೆಳೆಸಿದ ದೇಶದ ಮತ್ತೊಂದು ಪ್ರಮುಖ ಪಕ್ಷ ಶಿವಸೇನೆ ಕೂಡ ಈಗ ಎರಡು ವಿಭಾಗಗಳಾಗಿವೆ. ಶಿವಸೇನೆ, ಕಾಂಗ್ರೆಸ್‌ ಮತ್ತು ಎನ್‌ಸಿಪಿ ಮೈತ್ರಿಕೂಟದ ‘ಮಹಾ ಅಘಾಡಿ’ ಸರ್ಕಾರದ ವಿರುದ್ದ ಬಂಡಾಯವೆದ್ದ ಮಹಾರಾಷ್ಟ್ರದ ಈಗಿನ ಸಿಎಂ ಏಕನಾಥ್ ಶಿಂದೆ ಮತ್ತು ಕೆಲ ಶಾಸಕರು ಬಿಜೆಪಿ ಜೊತೆಗೂಡಿ ಸರ್ಕಾರ ರಚಿಸಿದ್ದರು.

ಆ ಬಳಿಕ ಶಿವಸೇನೆ ಪಕ್ಷದ ನಾಯಕತ್ವಕ್ಕಾಗಿ ಸಿಎಂ ಶಿಂದೆ ಮತ್ತು ಮಾಜಿ ಸಿಎಂ ಉದ್ದವ್ ಠಾಕ್ರೆ ನಡುವೆ ನಡೆದ ಕಾನೂನು ಸಮರದಲ್ಲಿ ಶಿಂದೆ ಬಣಕ್ಕೆ ಜಯವಾಗಿತ್ತು. ಶಿಂದೆ ಬಣವೇ ನಿಜವಾದ ಶಿವಸೇನೆ ಎಂದು ಚುನಾವಣಾ ಆಯೋಗ ಹೇಳಿತ್ತು. ಹಾಗಾಗಿ, ಉದ್ದವ್ ಠಾಕ್ರೆ ಬಣದ ಪಕ್ಷದ ಹೆಸರು ಶಿವಸೇನೆ ಉದ್ದವ್ ಬಾಳಠಾಕ್ರೆ (ಶಿವಸೇನೆ-ಯುಬಿಟಿ) ಎಂದು ಬದಲಾಗಿದೆ.

ಎರಡು ಭಾಗಗಳಾಗಿರುವ ಶಿವಸೇನೆ ಮತ್ತು ಎನ್‌ಸಿಪಿ ಪಕ್ಷಗಳು ಎರಡೂ ಕೂಡ ಮಹಾರಾಷ್ಟ್ರದ್ದೇ ಎಂಬುವುದು ಇಲ್ಲಿ ಗಮನಾರ್ಹ ಸಂಗತಿ. ಈ ಮೂಲಕ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌, ಬಿಜೆಪಿ, ಶಿವಸೇನೆ, ಶಿವಸೇನೆ-ಯುಬಿಟಿ, ಎನ್‌ಸಿಪಿ, ಎನ್‌ಸಿಪಿ-ಎಸ್‌ಪಿ ಪ್ರಮುಖ ರಾಜಕೀಯ ಪಕ್ಷಗಳಾಗಿ ಹೊರ ಹೊಮ್ಮಿದೆ.

ಇದನ್ನೂ ಓದಿ : ಕೇಂದ್ರದ ವಿರುದ್ಧ ಕೇರಳ ಸರ್ಕಾರದಿಂದ ನಾಳೆ ದೆಹಲಿಯಲ್ಲಿ ಪ್ರತಿಭಟನೆ: ತಮಿಳುನಾಡಿನಿಂದ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....