Homeಮುಖಪುಟಅಜಿತ್ ಪವಾರ್ ಬಣವೇ ನಿಜವಾದ ಎನ್‌ಸಿಪಿ ಎಂದ ಚು.ಆಯೋಗ: ಶರದ್ ಪವಾರ್ ಪಕ್ಷಕ್ಕೆ ಹೊಸ ಹೆಸರು

ಅಜಿತ್ ಪವಾರ್ ಬಣವೇ ನಿಜವಾದ ಎನ್‌ಸಿಪಿ ಎಂದ ಚು.ಆಯೋಗ: ಶರದ್ ಪವಾರ್ ಪಕ್ಷಕ್ಕೆ ಹೊಸ ಹೆಸರು

- Advertisement -
- Advertisement -

ದೇಶದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾದ ಶರದ್‌ ಪವಾರ್ ನೇತೃತ್ವದ ಎನ್‌ಸಿಪಿ ಪಕ್ಷಕ್ಕೆ ಚುನಾವಣಾ ಆಯೋಗ ಹೊಸ ಹೆಸರು ನೀಡಿದೆ.

ಶರದ್‌ ಪವಾರ್ ನೇತೃತ್ವದ ಪಕ್ಷದ ಹೆಸರು ಈ ಹಿಂದೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಎಂದು ಇತ್ತು. ಅದು ಈಗ ಅಜಿತ್ ಪವಾರ್ ಬಣದ ಪಾಲಾಗಿದೆ. ಹಾಗಾಗಿ ಶರದ್ ಪವಾರ್ ಬಣಕ್ಕೆ ‘ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ ಶರದ್ಚಂದ್ರ ಪವಾರ್’ (ಎನ್‌ಸಿಪಿ-ಎಸ್‌ಪಿ) ಎಂದು ಚುನಾವಣಾ ಆಯೋಗ ಹೊಸ ಹೆಸರು ಕೊಟ್ಟಿದೆ.

ವರದಿಗಳ ಪ್ರಕಾರ, ಚುನಾವಣಾ ಆಯೋಗ ಶರದ್ ಪವಾರ್ ಬಣಕ್ಕೆ ಹೊಸ ಹೆಸರು ನೀಡಿದೆ. ಆದರೆ, ಪಕ್ಷದ ಚಿಹ್ನೆಯ ಕುರಿತು ಇನ್ನೂ ಮಾಹಿತಿ ದೊರೆತಿಲ್ಲ. ಎನ್‌ಸಿಪಿ ಪಕ್ಷದ ಚಿಹ್ನೆಯಾಗಿದ್ದ ‘ಗಡಿಯಾರ’ ಅಜಿತ್ ಪವಾರ್ ಬಣದ ಪಾಲಾಗಿದೆ.

ಶರದ್ ಪವಾರ್ ಅವರು 1999ರಲ್ಲಿ ಎನ್‌ಸಿಪಿ ಪಕ್ಷವನ್ನು ಸ್ಥಾಪಿಸಿದ್ದರು. ನಿನ್ನೆ(ಫೆ.6, 2024) ಅವರು ತಮ್ಮ ಪಕ್ಷದ ಮೇಲಿನ ನಿಯಂತ್ರಣ ಕಳೆದುಕೊಂಡಿದ್ದಾರೆ. ಎನ್‌ಸಿಪಿ ಪಕ್ಷವನ್ನು ವಿಭಜಿಸಿದ ಬಂಡಾಯದ ನೇತೃತ್ವ ವಹಿಸಿದ್ದ ಶರದ್ ಪವಾರ್ ಅವರ ಸೋದರಳಿಯ ಅಜಿತ್ ಪವಾರ್ ನೇತೃತ್ವದ ಬಣವು ‘ನಿಜವಾದ’ ಎನ್‌ಸಿಪಿ ಎಂದು ಚುನಾವಣಾ ಆಯೋಗ ತಿಳಿಸಿದೆ.

ದೇಶದ ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಒಂದಾಗಿದ್ದ ಎನ್‌ಸಿಪಿ ಅದರ ನಾಯಕ ಅಜಿತ್ ಪವಾರ್ ಮತ್ತು ಕೆಲ ಶಾಸಕರ ಬಂಡಾಯದಿಂದ ಈಗ ಎರಡು ವಿಭಾಗವಾಗಿದೆ. ಮೂಲ ಎನ್‌ಸಿಪಿ ಬಂಡಾಯ ನಾಯಕ ಅಜಿತ್ ಪವಾರ್ ಬಣದ ಪಾಲಾಗಿದೆ.

ಜುಲೈ 2023ರಲ್ಲಿ ಎನ್‌ಸಿಪಿ ನಾಯಕರಾಗಿದ್ದ ಅಜಿತ್ ಪವಾರ್ ಮತ್ತು ಕೆಲ ಶಾಸಕರು ಪಕ್ಷದ ಉನ್ನತ ನಾಯಕ ಶರದ್ ಪವಾರ್ ವಿರುದ್ದ ಬಂಡೆದ್ದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂದೆ ಬಣಕ್ಕೆ ಬೆಂಬಲ ಸೂಚಿಸಿದ್ದರು. ಈ ಮೂಲಕ ಅವರಿಗೆ ಶಿಂದೆ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಹುದ್ದೆ ಮತ್ತು ಕೆಲ ಶಾಸಕರಿಗೆ ಸಚಿವ ಸ್ಥಾನ ದೊರೆತಿತ್ತು.

ಶಿವಸೇನೆಯಲ್ಲೂ ಎರಡು ವಿಭಾಗ :

ಮಹಾರಾಷ್ಟ್ರದ ಹಿಂದುತ್ವ ನಾಯಕ ಬಾಳಠಾಕ್ರೆ ಕಟ್ಟಿ ಬೆಳೆಸಿದ ದೇಶದ ಮತ್ತೊಂದು ಪ್ರಮುಖ ಪಕ್ಷ ಶಿವಸೇನೆ ಕೂಡ ಈಗ ಎರಡು ವಿಭಾಗಗಳಾಗಿವೆ. ಶಿವಸೇನೆ, ಕಾಂಗ್ರೆಸ್‌ ಮತ್ತು ಎನ್‌ಸಿಪಿ ಮೈತ್ರಿಕೂಟದ ‘ಮಹಾ ಅಘಾಡಿ’ ಸರ್ಕಾರದ ವಿರುದ್ದ ಬಂಡಾಯವೆದ್ದ ಮಹಾರಾಷ್ಟ್ರದ ಈಗಿನ ಸಿಎಂ ಏಕನಾಥ್ ಶಿಂದೆ ಮತ್ತು ಕೆಲ ಶಾಸಕರು ಬಿಜೆಪಿ ಜೊತೆಗೂಡಿ ಸರ್ಕಾರ ರಚಿಸಿದ್ದರು.

ಆ ಬಳಿಕ ಶಿವಸೇನೆ ಪಕ್ಷದ ನಾಯಕತ್ವಕ್ಕಾಗಿ ಸಿಎಂ ಶಿಂದೆ ಮತ್ತು ಮಾಜಿ ಸಿಎಂ ಉದ್ದವ್ ಠಾಕ್ರೆ ನಡುವೆ ನಡೆದ ಕಾನೂನು ಸಮರದಲ್ಲಿ ಶಿಂದೆ ಬಣಕ್ಕೆ ಜಯವಾಗಿತ್ತು. ಶಿಂದೆ ಬಣವೇ ನಿಜವಾದ ಶಿವಸೇನೆ ಎಂದು ಚುನಾವಣಾ ಆಯೋಗ ಹೇಳಿತ್ತು. ಹಾಗಾಗಿ, ಉದ್ದವ್ ಠಾಕ್ರೆ ಬಣದ ಪಕ್ಷದ ಹೆಸರು ಶಿವಸೇನೆ ಉದ್ದವ್ ಬಾಳಠಾಕ್ರೆ (ಶಿವಸೇನೆ-ಯುಬಿಟಿ) ಎಂದು ಬದಲಾಗಿದೆ.

ಎರಡು ಭಾಗಗಳಾಗಿರುವ ಶಿವಸೇನೆ ಮತ್ತು ಎನ್‌ಸಿಪಿ ಪಕ್ಷಗಳು ಎರಡೂ ಕೂಡ ಮಹಾರಾಷ್ಟ್ರದ್ದೇ ಎಂಬುವುದು ಇಲ್ಲಿ ಗಮನಾರ್ಹ ಸಂಗತಿ. ಈ ಮೂಲಕ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌, ಬಿಜೆಪಿ, ಶಿವಸೇನೆ, ಶಿವಸೇನೆ-ಯುಬಿಟಿ, ಎನ್‌ಸಿಪಿ, ಎನ್‌ಸಿಪಿ-ಎಸ್‌ಪಿ ಪ್ರಮುಖ ರಾಜಕೀಯ ಪಕ್ಷಗಳಾಗಿ ಹೊರ ಹೊಮ್ಮಿದೆ.

ಇದನ್ನೂ ಓದಿ : ಕೇಂದ್ರದ ವಿರುದ್ಧ ಕೇರಳ ಸರ್ಕಾರದಿಂದ ನಾಳೆ ದೆಹಲಿಯಲ್ಲಿ ಪ್ರತಿಭಟನೆ: ತಮಿಳುನಾಡಿನಿಂದ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...