Homeಮುಖಪುಟಅಜಿತ್ ಪವಾರ್ ಬಣವೇ ನಿಜವಾದ ಎನ್‌ಸಿಪಿ ಎಂದ ಚು.ಆಯೋಗ: ಶರದ್ ಪವಾರ್ ಪಕ್ಷಕ್ಕೆ ಹೊಸ ಹೆಸರು

ಅಜಿತ್ ಪವಾರ್ ಬಣವೇ ನಿಜವಾದ ಎನ್‌ಸಿಪಿ ಎಂದ ಚು.ಆಯೋಗ: ಶರದ್ ಪವಾರ್ ಪಕ್ಷಕ್ಕೆ ಹೊಸ ಹೆಸರು

- Advertisement -
- Advertisement -

ದೇಶದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾದ ಶರದ್‌ ಪವಾರ್ ನೇತೃತ್ವದ ಎನ್‌ಸಿಪಿ ಪಕ್ಷಕ್ಕೆ ಚುನಾವಣಾ ಆಯೋಗ ಹೊಸ ಹೆಸರು ನೀಡಿದೆ.

ಶರದ್‌ ಪವಾರ್ ನೇತೃತ್ವದ ಪಕ್ಷದ ಹೆಸರು ಈ ಹಿಂದೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಎಂದು ಇತ್ತು. ಅದು ಈಗ ಅಜಿತ್ ಪವಾರ್ ಬಣದ ಪಾಲಾಗಿದೆ. ಹಾಗಾಗಿ ಶರದ್ ಪವಾರ್ ಬಣಕ್ಕೆ ‘ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ ಶರದ್ಚಂದ್ರ ಪವಾರ್’ (ಎನ್‌ಸಿಪಿ-ಎಸ್‌ಪಿ) ಎಂದು ಚುನಾವಣಾ ಆಯೋಗ ಹೊಸ ಹೆಸರು ಕೊಟ್ಟಿದೆ.

ವರದಿಗಳ ಪ್ರಕಾರ, ಚುನಾವಣಾ ಆಯೋಗ ಶರದ್ ಪವಾರ್ ಬಣಕ್ಕೆ ಹೊಸ ಹೆಸರು ನೀಡಿದೆ. ಆದರೆ, ಪಕ್ಷದ ಚಿಹ್ನೆಯ ಕುರಿತು ಇನ್ನೂ ಮಾಹಿತಿ ದೊರೆತಿಲ್ಲ. ಎನ್‌ಸಿಪಿ ಪಕ್ಷದ ಚಿಹ್ನೆಯಾಗಿದ್ದ ‘ಗಡಿಯಾರ’ ಅಜಿತ್ ಪವಾರ್ ಬಣದ ಪಾಲಾಗಿದೆ.

ಶರದ್ ಪವಾರ್ ಅವರು 1999ರಲ್ಲಿ ಎನ್‌ಸಿಪಿ ಪಕ್ಷವನ್ನು ಸ್ಥಾಪಿಸಿದ್ದರು. ನಿನ್ನೆ(ಫೆ.6, 2024) ಅವರು ತಮ್ಮ ಪಕ್ಷದ ಮೇಲಿನ ನಿಯಂತ್ರಣ ಕಳೆದುಕೊಂಡಿದ್ದಾರೆ. ಎನ್‌ಸಿಪಿ ಪಕ್ಷವನ್ನು ವಿಭಜಿಸಿದ ಬಂಡಾಯದ ನೇತೃತ್ವ ವಹಿಸಿದ್ದ ಶರದ್ ಪವಾರ್ ಅವರ ಸೋದರಳಿಯ ಅಜಿತ್ ಪವಾರ್ ನೇತೃತ್ವದ ಬಣವು ‘ನಿಜವಾದ’ ಎನ್‌ಸಿಪಿ ಎಂದು ಚುನಾವಣಾ ಆಯೋಗ ತಿಳಿಸಿದೆ.

ದೇಶದ ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಒಂದಾಗಿದ್ದ ಎನ್‌ಸಿಪಿ ಅದರ ನಾಯಕ ಅಜಿತ್ ಪವಾರ್ ಮತ್ತು ಕೆಲ ಶಾಸಕರ ಬಂಡಾಯದಿಂದ ಈಗ ಎರಡು ವಿಭಾಗವಾಗಿದೆ. ಮೂಲ ಎನ್‌ಸಿಪಿ ಬಂಡಾಯ ನಾಯಕ ಅಜಿತ್ ಪವಾರ್ ಬಣದ ಪಾಲಾಗಿದೆ.

ಜುಲೈ 2023ರಲ್ಲಿ ಎನ್‌ಸಿಪಿ ನಾಯಕರಾಗಿದ್ದ ಅಜಿತ್ ಪವಾರ್ ಮತ್ತು ಕೆಲ ಶಾಸಕರು ಪಕ್ಷದ ಉನ್ನತ ನಾಯಕ ಶರದ್ ಪವಾರ್ ವಿರುದ್ದ ಬಂಡೆದ್ದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂದೆ ಬಣಕ್ಕೆ ಬೆಂಬಲ ಸೂಚಿಸಿದ್ದರು. ಈ ಮೂಲಕ ಅವರಿಗೆ ಶಿಂದೆ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಹುದ್ದೆ ಮತ್ತು ಕೆಲ ಶಾಸಕರಿಗೆ ಸಚಿವ ಸ್ಥಾನ ದೊರೆತಿತ್ತು.

ಶಿವಸೇನೆಯಲ್ಲೂ ಎರಡು ವಿಭಾಗ :

ಮಹಾರಾಷ್ಟ್ರದ ಹಿಂದುತ್ವ ನಾಯಕ ಬಾಳಠಾಕ್ರೆ ಕಟ್ಟಿ ಬೆಳೆಸಿದ ದೇಶದ ಮತ್ತೊಂದು ಪ್ರಮುಖ ಪಕ್ಷ ಶಿವಸೇನೆ ಕೂಡ ಈಗ ಎರಡು ವಿಭಾಗಗಳಾಗಿವೆ. ಶಿವಸೇನೆ, ಕಾಂಗ್ರೆಸ್‌ ಮತ್ತು ಎನ್‌ಸಿಪಿ ಮೈತ್ರಿಕೂಟದ ‘ಮಹಾ ಅಘಾಡಿ’ ಸರ್ಕಾರದ ವಿರುದ್ದ ಬಂಡಾಯವೆದ್ದ ಮಹಾರಾಷ್ಟ್ರದ ಈಗಿನ ಸಿಎಂ ಏಕನಾಥ್ ಶಿಂದೆ ಮತ್ತು ಕೆಲ ಶಾಸಕರು ಬಿಜೆಪಿ ಜೊತೆಗೂಡಿ ಸರ್ಕಾರ ರಚಿಸಿದ್ದರು.

ಆ ಬಳಿಕ ಶಿವಸೇನೆ ಪಕ್ಷದ ನಾಯಕತ್ವಕ್ಕಾಗಿ ಸಿಎಂ ಶಿಂದೆ ಮತ್ತು ಮಾಜಿ ಸಿಎಂ ಉದ್ದವ್ ಠಾಕ್ರೆ ನಡುವೆ ನಡೆದ ಕಾನೂನು ಸಮರದಲ್ಲಿ ಶಿಂದೆ ಬಣಕ್ಕೆ ಜಯವಾಗಿತ್ತು. ಶಿಂದೆ ಬಣವೇ ನಿಜವಾದ ಶಿವಸೇನೆ ಎಂದು ಚುನಾವಣಾ ಆಯೋಗ ಹೇಳಿತ್ತು. ಹಾಗಾಗಿ, ಉದ್ದವ್ ಠಾಕ್ರೆ ಬಣದ ಪಕ್ಷದ ಹೆಸರು ಶಿವಸೇನೆ ಉದ್ದವ್ ಬಾಳಠಾಕ್ರೆ (ಶಿವಸೇನೆ-ಯುಬಿಟಿ) ಎಂದು ಬದಲಾಗಿದೆ.

ಎರಡು ಭಾಗಗಳಾಗಿರುವ ಶಿವಸೇನೆ ಮತ್ತು ಎನ್‌ಸಿಪಿ ಪಕ್ಷಗಳು ಎರಡೂ ಕೂಡ ಮಹಾರಾಷ್ಟ್ರದ್ದೇ ಎಂಬುವುದು ಇಲ್ಲಿ ಗಮನಾರ್ಹ ಸಂಗತಿ. ಈ ಮೂಲಕ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌, ಬಿಜೆಪಿ, ಶಿವಸೇನೆ, ಶಿವಸೇನೆ-ಯುಬಿಟಿ, ಎನ್‌ಸಿಪಿ, ಎನ್‌ಸಿಪಿ-ಎಸ್‌ಪಿ ಪ್ರಮುಖ ರಾಜಕೀಯ ಪಕ್ಷಗಳಾಗಿ ಹೊರ ಹೊಮ್ಮಿದೆ.

ಇದನ್ನೂ ಓದಿ : ಕೇಂದ್ರದ ವಿರುದ್ಧ ಕೇರಳ ಸರ್ಕಾರದಿಂದ ನಾಳೆ ದೆಹಲಿಯಲ್ಲಿ ಪ್ರತಿಭಟನೆ: ತಮಿಳುನಾಡಿನಿಂದ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...