Homeಮುಖಪುಟಉಪಚುನಾವಣೆ: NDAಗೆ ಮೊದಲ ಆಘಾತಕೊಟ್ಟ ಪ್ರತಿಪಕ್ಷಗಳ INDIA ಮೈತ್ರಿಕೂಟ

ಉಪಚುನಾವಣೆ: NDAಗೆ ಮೊದಲ ಆಘಾತಕೊಟ್ಟ ಪ್ರತಿಪಕ್ಷಗಳ INDIA ಮೈತ್ರಿಕೂಟ

- Advertisement -
- Advertisement -

INDIA ಒಕ್ಕೂಟ ಸ್ಥಾಪನೆ ಬಳಿಕ ಆರು ರಾಜ್ಯಗಳ 7 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ವಿರೋಧ ಪಕ್ಷದ ಒಕ್ಕೂಟ  INDIA 4 ಸ್ಥಾನಗಳನ್ನು ಗೆದ್ದುಕೊಂಡಿದೆ ಮತ್ತು NDA ಒಕ್ಕೂಟ 3 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ. ಇದು ವಿಪಕ್ಷಗಳ ಒಕ್ಕೂಟ ರಚನೆಯಾದ ಬಳಿಕ ಎನ್‌ಡಿಎ ಒಕ್ಕೂಟಕ್ಕೆ ಸಿಕ್ಕ ಮೊದಲ ಆಘಾತವಾಗಿದೆ.

ಬಿಜೆಪಿ ಮೂರು ಉಪಚುನಾವಣೆಗಳಲ್ಲಿ ಗೆದ್ದರೆ ಅವುಗಳಲ್ಲಿ ಎರಡು ಅದರ ಹಾಲಿ ಸ್ಥಾನಗಳಾಗಿದ್ದವು.  INDIA ಒಕ್ಕೂಟ ಮಿತ್ರಪಕ್ಷಗಳು ನಾಲ್ಕನ್ನು ಗೆದ್ದುಕೊಂಡಿದೆ. ಅದರಲ್ಲೂ ಉತ್ತರ ಪ್ರದೇಶದ ನಿರ್ಣಾಯಕ ಸ್ಥಾನವನ್ನು INDIA ಒಕ್ಕೂಟ ತಮ್ಮದಾಗಿಸಿಕೊಂಡಿದೆ.

ಜಾರ್ಖಂಡ್‌ನ ಡುಮ್ರಿ ಮತ್ತು ಉತ್ತರ ಪ್ರದೇಶದ ಘೋಸಿಯಲ್ಲಿ ಗೆಲುವು INDIA ಒಕ್ಕೂಟದ ಮೊದಲ ಯಶಸ್ವಿ ಎಂದು ಬಣ್ಣಿಸಲಾಗಿದೆ.

ಇಂಡಿಯಾ ಮೈತ್ರಿಕೂಟದ ಕಾಂಗ್ರೆಸ್ ಪಕ್ಷ ಕೇರಳದಲ್ಲಿ ಜಯ ಸಾಧಿಸಿದೆ. ದಿವಂಗತ ಮುಖ್ಯಮಂತ್ರಿ ಒಮನ್ ಚಾಂಡಿಯವರ ಪುತ್ರ ತಮ್ಮ ತಂದೆಯ ಭದ್ರಕೋಟೆಯನ್ನು ಉಳಿಸಿಕೊಂಡಿದ್ದಾರೆ.

ದೇಶದಲ್ಲಿ ಭಾರೀ ಕುತೂಹಲ ಮೂಡಿಸಿದ ಘೋಸಿ ಕ್ಷೇತ್ರದಲ್ಲಿ ಬಿಜೆಪಿ ಸೋಲು ಅನುಭವಿಸಿದೆ.  ಈ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದ ದಾರಾ ಸಿಂಗ್ ಚೌಹಾಣ್ ಉಪಚುನಾವಣೆಗೆ ಸ್ಪರ್ಧಿಸಿದ್ದರು. ಯೋಗಿ ಆದಿತ್ಯನಾಥ್ ಸಂಪುಟದ ಹಲವು ಸಚಿವರು ಕ್ಷೇತ್ರದಲ್ಲಿ ಮೊಕ್ಕಾಂ ಹೂಡಿ ಪ್ರಚಾರ, ತಂತ್ರ ನಡೆಸಿದ್ದಾರೆ. ಅದ್ಯಾವುದೂ ಫಲಿಸಿಲ್ಲ. ಈ ಕ್ಷೇತ್ರದಲ್ಲಿ ಬಿಜೆಪಿಯ ದಾರಾ ಸಿಂಗ್ ಚೌಹಾಣ್ ವಿರುದ್ಧ ಸಮಾಜವಾದಿ ಪಕ್ಷದ ಸುಧಾಕರ್ ಸಿಂಗ್ 42,759 ಮತಗಳ ಭಾರಿ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ.

INDIA ಒಕ್ಕೂಟದ ಭಾಗವಾದ  SP ಕೇವಲ ಘೋಸಿಯನ್ನು ಗೆಲ್ಲಲಿಲ್ಲ, ಅದು 2022ರಿಂದ ತನ್ನ ಮತಗಳ ಪಾಲನ್ನು ಬೃಹತ್ ಪ್ರಮಾಣದಲ್ಲಿ ಹೆಚ್ಚಿಸಿದೆ. 42% ದಿಂದ  58%ಕ್ಕೆ ಮತಗಳನ್ನು ಹೆಚ್ಚಿಸಿಕೊಂಡಿದೆ.

ಜಾರ್ಖಂಡ್‌ನ ದುಮ್ರಿ ಕ್ಷೇತ್ರದಲ್ಲಿ ಇಂಡಿಯಾ ಬೆಂಬಲಿತ ಜೆಎಂಎಂನ ಅಭ್ಯರ್ಥಿ ಬೇಬಿ ದೇವಿ ಅವರು ಎನ್‌ಡಿಎ ಬೆಂಬಲಿತ ಎಜೆಎಸ್‌ಯು ಅಭ್ಯರ್ಥಿ ಯಶೋದಾ ದೇವಿ ವಿರುದ್ಧ 17,000ಕ್ಕೂ ಹೆಚ್ಚು ಮತಗಳ ಅಂತರದ ಗೆಲುವು ಪಡೆದುಕೊಂಡಿದ್ದಾರೆ.

ಪಶ್ಚಿಮ ಬಂಗಾಳದ ಧೂಪಗುರಿ ಕ್ಷೇತ್ರದಲ್ಲಿ ಟಿಎಂಸಿ ಅಭ್ಯರ್ಥಿ ನಿರ್ಮಲ್ ಚಂದ್ರ ರಾಯ್‌ 4,313 ಮತಗಳಿಂದ ಬಿಜೆಪಿ ಅಭ್ಯರ್ಥಿ ತಾಪಸಿ ರಾಯ್‌ ವಿರುದ್ಧ ಗೆಲುವು ಸಾಧಿಸಿದ್ದಾರೆ.

ಉತ್ತರಾಖಂಡದ ಬಾಗೇಶ್ವರದಲ್ಲಿ ಬಿಜೆಪಿ ಅಭ್ಯರ್ಥಿ ಪಾರ್ವತಿ ದಾಸ್‌,  ಕಾಂಗ್ರೆಸ್‌ ಅಭ್ಯರ್ಥಿ ಬಸಂತ ಕುಮಾರ್‌ ವಿರುದ್ಧ ಅಲ್ಪ(2400) ಮತಗಳಿಂದ ಗೆಲುವು ಪಡೆದುಕೊಂಡಿದ್ದಾರೆ. ತ್ರಿಪುರಾದಲ್ಲಿ ಆಡಳಿತಾರೂಢ ಬಿಜೆಪಿ ಬಕ್ಸ್ ನಗರ ಕ್ಷೇತ್ರವನ್ನು ಸಿಪಿಎಂನಿಂದ ಕಸಿದುಕೊಂಡಿದ್ದರೆ. ಧನಪುರ ಕೇತ್ರವನ್ನು ಉಳಿಸಿಕೊಂಡಿದೆ.

ಉಪಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸೆಪ್ಟೆಂಬರ್ 5 ರಂದು ನಡೆದ ಏಳು ಉಪಚುನಾವಣೆಗಳಲ್ಲಿ ನಾಲ್ಕರಲ್ಲಿ ಬಿಜೆಪಿ ಸೋತಿದೆ. ಇದು ಇಂಡಿಯಾ ಮೈತ್ರಿಗೆ ಸಿಕ್ಕ ದೊಡ್ಡ ಗೆಲುವು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಬಿಜೆಪಿಗೆ ಪರ್ಯಾಯವಾಗಿ ಜನರು ಇಂಡಿಯಾ ಮೈತ್ರಿಕೂಟವನ್ನು ಒಪ್ಪಿಕೊಂಡಿದ್ದಾರೆ ಎಂಬುದು ಉಪಚುನಾವಣೆಯಲ್ಲಿ ಪ್ರತಿಪಕ್ಷ ಮೈತ್ರಿಕೂಟ ಇಂಡಿಯಾದ ಅಭ್ಯರ್ಥಿಗಳ ಗೆಲುವು ಸಾಬೀತುಪಡಿಸುತ್ತದೆ ಎಂದು ಕಾಂಗ್ರೆಸ್ ಹೇಳಿದೆ.

ಇದನ್ನು ಓದಿ: ಐಐಟಿ ಜಾತಿ ತಾರತಮ್ಯ ಸರ್ವೆ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ವಾಪಾಸ್ಸು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಮಾನನಷ್ಟ ಮೊಕದ್ದಮೆ ಪ್ರಕರಣ: ಯೂಟ್ಯೂಬ್‌ನಿಂದ ರಾಹುಲ್ ಗಾಂಧಿ ಭಾಷಣ ಪ್ರದರ್ಶನದ ಮನವಿ ತಿರಸ್ಕರಿಸಿದ ಪುಣೆ ನ್ಯಾಯಾಲಯ

ಲಂಡನ್‌ನಲ್ಲಿ ನಡೆದ ಭಾಷಣದಲ್ಲಿ ಬಲಪಂಥೀಯ ನಾಯಕ ವಿನಾಯಕ ಸಾವರ್ಕರ್ ಅವರನ್ನು ಮಾನನಷ್ಟ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆಯ ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ, ಯೂಟ್ಯೂಬ್...

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...