Homeಮುಖಪುಟಉಪಚುನಾವಣೆ: NDAಗೆ ಮೊದಲ ಆಘಾತಕೊಟ್ಟ ಪ್ರತಿಪಕ್ಷಗಳ INDIA ಮೈತ್ರಿಕೂಟ

ಉಪಚುನಾವಣೆ: NDAಗೆ ಮೊದಲ ಆಘಾತಕೊಟ್ಟ ಪ್ರತಿಪಕ್ಷಗಳ INDIA ಮೈತ್ರಿಕೂಟ

- Advertisement -
- Advertisement -

INDIA ಒಕ್ಕೂಟ ಸ್ಥಾಪನೆ ಬಳಿಕ ಆರು ರಾಜ್ಯಗಳ 7 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ವಿರೋಧ ಪಕ್ಷದ ಒಕ್ಕೂಟ  INDIA 4 ಸ್ಥಾನಗಳನ್ನು ಗೆದ್ದುಕೊಂಡಿದೆ ಮತ್ತು NDA ಒಕ್ಕೂಟ 3 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ. ಇದು ವಿಪಕ್ಷಗಳ ಒಕ್ಕೂಟ ರಚನೆಯಾದ ಬಳಿಕ ಎನ್‌ಡಿಎ ಒಕ್ಕೂಟಕ್ಕೆ ಸಿಕ್ಕ ಮೊದಲ ಆಘಾತವಾಗಿದೆ.

ಬಿಜೆಪಿ ಮೂರು ಉಪಚುನಾವಣೆಗಳಲ್ಲಿ ಗೆದ್ದರೆ ಅವುಗಳಲ್ಲಿ ಎರಡು ಅದರ ಹಾಲಿ ಸ್ಥಾನಗಳಾಗಿದ್ದವು.  INDIA ಒಕ್ಕೂಟ ಮಿತ್ರಪಕ್ಷಗಳು ನಾಲ್ಕನ್ನು ಗೆದ್ದುಕೊಂಡಿದೆ. ಅದರಲ್ಲೂ ಉತ್ತರ ಪ್ರದೇಶದ ನಿರ್ಣಾಯಕ ಸ್ಥಾನವನ್ನು INDIA ಒಕ್ಕೂಟ ತಮ್ಮದಾಗಿಸಿಕೊಂಡಿದೆ.

ಜಾರ್ಖಂಡ್‌ನ ಡುಮ್ರಿ ಮತ್ತು ಉತ್ತರ ಪ್ರದೇಶದ ಘೋಸಿಯಲ್ಲಿ ಗೆಲುವು INDIA ಒಕ್ಕೂಟದ ಮೊದಲ ಯಶಸ್ವಿ ಎಂದು ಬಣ್ಣಿಸಲಾಗಿದೆ.

ಇಂಡಿಯಾ ಮೈತ್ರಿಕೂಟದ ಕಾಂಗ್ರೆಸ್ ಪಕ್ಷ ಕೇರಳದಲ್ಲಿ ಜಯ ಸಾಧಿಸಿದೆ. ದಿವಂಗತ ಮುಖ್ಯಮಂತ್ರಿ ಒಮನ್ ಚಾಂಡಿಯವರ ಪುತ್ರ ತಮ್ಮ ತಂದೆಯ ಭದ್ರಕೋಟೆಯನ್ನು ಉಳಿಸಿಕೊಂಡಿದ್ದಾರೆ.

ದೇಶದಲ್ಲಿ ಭಾರೀ ಕುತೂಹಲ ಮೂಡಿಸಿದ ಘೋಸಿ ಕ್ಷೇತ್ರದಲ್ಲಿ ಬಿಜೆಪಿ ಸೋಲು ಅನುಭವಿಸಿದೆ.  ಈ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದ ದಾರಾ ಸಿಂಗ್ ಚೌಹಾಣ್ ಉಪಚುನಾವಣೆಗೆ ಸ್ಪರ್ಧಿಸಿದ್ದರು. ಯೋಗಿ ಆದಿತ್ಯನಾಥ್ ಸಂಪುಟದ ಹಲವು ಸಚಿವರು ಕ್ಷೇತ್ರದಲ್ಲಿ ಮೊಕ್ಕಾಂ ಹೂಡಿ ಪ್ರಚಾರ, ತಂತ್ರ ನಡೆಸಿದ್ದಾರೆ. ಅದ್ಯಾವುದೂ ಫಲಿಸಿಲ್ಲ. ಈ ಕ್ಷೇತ್ರದಲ್ಲಿ ಬಿಜೆಪಿಯ ದಾರಾ ಸಿಂಗ್ ಚೌಹಾಣ್ ವಿರುದ್ಧ ಸಮಾಜವಾದಿ ಪಕ್ಷದ ಸುಧಾಕರ್ ಸಿಂಗ್ 42,759 ಮತಗಳ ಭಾರಿ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ.

INDIA ಒಕ್ಕೂಟದ ಭಾಗವಾದ  SP ಕೇವಲ ಘೋಸಿಯನ್ನು ಗೆಲ್ಲಲಿಲ್ಲ, ಅದು 2022ರಿಂದ ತನ್ನ ಮತಗಳ ಪಾಲನ್ನು ಬೃಹತ್ ಪ್ರಮಾಣದಲ್ಲಿ ಹೆಚ್ಚಿಸಿದೆ. 42% ದಿಂದ  58%ಕ್ಕೆ ಮತಗಳನ್ನು ಹೆಚ್ಚಿಸಿಕೊಂಡಿದೆ.

ಜಾರ್ಖಂಡ್‌ನ ದುಮ್ರಿ ಕ್ಷೇತ್ರದಲ್ಲಿ ಇಂಡಿಯಾ ಬೆಂಬಲಿತ ಜೆಎಂಎಂನ ಅಭ್ಯರ್ಥಿ ಬೇಬಿ ದೇವಿ ಅವರು ಎನ್‌ಡಿಎ ಬೆಂಬಲಿತ ಎಜೆಎಸ್‌ಯು ಅಭ್ಯರ್ಥಿ ಯಶೋದಾ ದೇವಿ ವಿರುದ್ಧ 17,000ಕ್ಕೂ ಹೆಚ್ಚು ಮತಗಳ ಅಂತರದ ಗೆಲುವು ಪಡೆದುಕೊಂಡಿದ್ದಾರೆ.

ಪಶ್ಚಿಮ ಬಂಗಾಳದ ಧೂಪಗುರಿ ಕ್ಷೇತ್ರದಲ್ಲಿ ಟಿಎಂಸಿ ಅಭ್ಯರ್ಥಿ ನಿರ್ಮಲ್ ಚಂದ್ರ ರಾಯ್‌ 4,313 ಮತಗಳಿಂದ ಬಿಜೆಪಿ ಅಭ್ಯರ್ಥಿ ತಾಪಸಿ ರಾಯ್‌ ವಿರುದ್ಧ ಗೆಲುವು ಸಾಧಿಸಿದ್ದಾರೆ.

ಉತ್ತರಾಖಂಡದ ಬಾಗೇಶ್ವರದಲ್ಲಿ ಬಿಜೆಪಿ ಅಭ್ಯರ್ಥಿ ಪಾರ್ವತಿ ದಾಸ್‌,  ಕಾಂಗ್ರೆಸ್‌ ಅಭ್ಯರ್ಥಿ ಬಸಂತ ಕುಮಾರ್‌ ವಿರುದ್ಧ ಅಲ್ಪ(2400) ಮತಗಳಿಂದ ಗೆಲುವು ಪಡೆದುಕೊಂಡಿದ್ದಾರೆ. ತ್ರಿಪುರಾದಲ್ಲಿ ಆಡಳಿತಾರೂಢ ಬಿಜೆಪಿ ಬಕ್ಸ್ ನಗರ ಕ್ಷೇತ್ರವನ್ನು ಸಿಪಿಎಂನಿಂದ ಕಸಿದುಕೊಂಡಿದ್ದರೆ. ಧನಪುರ ಕೇತ್ರವನ್ನು ಉಳಿಸಿಕೊಂಡಿದೆ.

ಉಪಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸೆಪ್ಟೆಂಬರ್ 5 ರಂದು ನಡೆದ ಏಳು ಉಪಚುನಾವಣೆಗಳಲ್ಲಿ ನಾಲ್ಕರಲ್ಲಿ ಬಿಜೆಪಿ ಸೋತಿದೆ. ಇದು ಇಂಡಿಯಾ ಮೈತ್ರಿಗೆ ಸಿಕ್ಕ ದೊಡ್ಡ ಗೆಲುವು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಬಿಜೆಪಿಗೆ ಪರ್ಯಾಯವಾಗಿ ಜನರು ಇಂಡಿಯಾ ಮೈತ್ರಿಕೂಟವನ್ನು ಒಪ್ಪಿಕೊಂಡಿದ್ದಾರೆ ಎಂಬುದು ಉಪಚುನಾವಣೆಯಲ್ಲಿ ಪ್ರತಿಪಕ್ಷ ಮೈತ್ರಿಕೂಟ ಇಂಡಿಯಾದ ಅಭ್ಯರ್ಥಿಗಳ ಗೆಲುವು ಸಾಬೀತುಪಡಿಸುತ್ತದೆ ಎಂದು ಕಾಂಗ್ರೆಸ್ ಹೇಳಿದೆ.

ಇದನ್ನು ಓದಿ: ಐಐಟಿ ಜಾತಿ ತಾರತಮ್ಯ ಸರ್ವೆ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ವಾಪಾಸ್ಸು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...