Homeಮುಖಪುಟಉಪಚುನಾವಣೆ: NDAಗೆ ಮೊದಲ ಆಘಾತಕೊಟ್ಟ ಪ್ರತಿಪಕ್ಷಗಳ INDIA ಮೈತ್ರಿಕೂಟ

ಉಪಚುನಾವಣೆ: NDAಗೆ ಮೊದಲ ಆಘಾತಕೊಟ್ಟ ಪ್ರತಿಪಕ್ಷಗಳ INDIA ಮೈತ್ರಿಕೂಟ

- Advertisement -
- Advertisement -

INDIA ಒಕ್ಕೂಟ ಸ್ಥಾಪನೆ ಬಳಿಕ ಆರು ರಾಜ್ಯಗಳ 7 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ವಿರೋಧ ಪಕ್ಷದ ಒಕ್ಕೂಟ  INDIA 4 ಸ್ಥಾನಗಳನ್ನು ಗೆದ್ದುಕೊಂಡಿದೆ ಮತ್ತು NDA ಒಕ್ಕೂಟ 3 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ. ಇದು ವಿಪಕ್ಷಗಳ ಒಕ್ಕೂಟ ರಚನೆಯಾದ ಬಳಿಕ ಎನ್‌ಡಿಎ ಒಕ್ಕೂಟಕ್ಕೆ ಸಿಕ್ಕ ಮೊದಲ ಆಘಾತವಾಗಿದೆ.

ಬಿಜೆಪಿ ಮೂರು ಉಪಚುನಾವಣೆಗಳಲ್ಲಿ ಗೆದ್ದರೆ ಅವುಗಳಲ್ಲಿ ಎರಡು ಅದರ ಹಾಲಿ ಸ್ಥಾನಗಳಾಗಿದ್ದವು.  INDIA ಒಕ್ಕೂಟ ಮಿತ್ರಪಕ್ಷಗಳು ನಾಲ್ಕನ್ನು ಗೆದ್ದುಕೊಂಡಿದೆ. ಅದರಲ್ಲೂ ಉತ್ತರ ಪ್ರದೇಶದ ನಿರ್ಣಾಯಕ ಸ್ಥಾನವನ್ನು INDIA ಒಕ್ಕೂಟ ತಮ್ಮದಾಗಿಸಿಕೊಂಡಿದೆ.

ಜಾರ್ಖಂಡ್‌ನ ಡುಮ್ರಿ ಮತ್ತು ಉತ್ತರ ಪ್ರದೇಶದ ಘೋಸಿಯಲ್ಲಿ ಗೆಲುವು INDIA ಒಕ್ಕೂಟದ ಮೊದಲ ಯಶಸ್ವಿ ಎಂದು ಬಣ್ಣಿಸಲಾಗಿದೆ.

ಇಂಡಿಯಾ ಮೈತ್ರಿಕೂಟದ ಕಾಂಗ್ರೆಸ್ ಪಕ್ಷ ಕೇರಳದಲ್ಲಿ ಜಯ ಸಾಧಿಸಿದೆ. ದಿವಂಗತ ಮುಖ್ಯಮಂತ್ರಿ ಒಮನ್ ಚಾಂಡಿಯವರ ಪುತ್ರ ತಮ್ಮ ತಂದೆಯ ಭದ್ರಕೋಟೆಯನ್ನು ಉಳಿಸಿಕೊಂಡಿದ್ದಾರೆ.

ದೇಶದಲ್ಲಿ ಭಾರೀ ಕುತೂಹಲ ಮೂಡಿಸಿದ ಘೋಸಿ ಕ್ಷೇತ್ರದಲ್ಲಿ ಬಿಜೆಪಿ ಸೋಲು ಅನುಭವಿಸಿದೆ.  ಈ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದ ದಾರಾ ಸಿಂಗ್ ಚೌಹಾಣ್ ಉಪಚುನಾವಣೆಗೆ ಸ್ಪರ್ಧಿಸಿದ್ದರು. ಯೋಗಿ ಆದಿತ್ಯನಾಥ್ ಸಂಪುಟದ ಹಲವು ಸಚಿವರು ಕ್ಷೇತ್ರದಲ್ಲಿ ಮೊಕ್ಕಾಂ ಹೂಡಿ ಪ್ರಚಾರ, ತಂತ್ರ ನಡೆಸಿದ್ದಾರೆ. ಅದ್ಯಾವುದೂ ಫಲಿಸಿಲ್ಲ. ಈ ಕ್ಷೇತ್ರದಲ್ಲಿ ಬಿಜೆಪಿಯ ದಾರಾ ಸಿಂಗ್ ಚೌಹಾಣ್ ವಿರುದ್ಧ ಸಮಾಜವಾದಿ ಪಕ್ಷದ ಸುಧಾಕರ್ ಸಿಂಗ್ 42,759 ಮತಗಳ ಭಾರಿ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ.

INDIA ಒಕ್ಕೂಟದ ಭಾಗವಾದ  SP ಕೇವಲ ಘೋಸಿಯನ್ನು ಗೆಲ್ಲಲಿಲ್ಲ, ಅದು 2022ರಿಂದ ತನ್ನ ಮತಗಳ ಪಾಲನ್ನು ಬೃಹತ್ ಪ್ರಮಾಣದಲ್ಲಿ ಹೆಚ್ಚಿಸಿದೆ. 42% ದಿಂದ  58%ಕ್ಕೆ ಮತಗಳನ್ನು ಹೆಚ್ಚಿಸಿಕೊಂಡಿದೆ.

ಜಾರ್ಖಂಡ್‌ನ ದುಮ್ರಿ ಕ್ಷೇತ್ರದಲ್ಲಿ ಇಂಡಿಯಾ ಬೆಂಬಲಿತ ಜೆಎಂಎಂನ ಅಭ್ಯರ್ಥಿ ಬೇಬಿ ದೇವಿ ಅವರು ಎನ್‌ಡಿಎ ಬೆಂಬಲಿತ ಎಜೆಎಸ್‌ಯು ಅಭ್ಯರ್ಥಿ ಯಶೋದಾ ದೇವಿ ವಿರುದ್ಧ 17,000ಕ್ಕೂ ಹೆಚ್ಚು ಮತಗಳ ಅಂತರದ ಗೆಲುವು ಪಡೆದುಕೊಂಡಿದ್ದಾರೆ.

ಪಶ್ಚಿಮ ಬಂಗಾಳದ ಧೂಪಗುರಿ ಕ್ಷೇತ್ರದಲ್ಲಿ ಟಿಎಂಸಿ ಅಭ್ಯರ್ಥಿ ನಿರ್ಮಲ್ ಚಂದ್ರ ರಾಯ್‌ 4,313 ಮತಗಳಿಂದ ಬಿಜೆಪಿ ಅಭ್ಯರ್ಥಿ ತಾಪಸಿ ರಾಯ್‌ ವಿರುದ್ಧ ಗೆಲುವು ಸಾಧಿಸಿದ್ದಾರೆ.

ಉತ್ತರಾಖಂಡದ ಬಾಗೇಶ್ವರದಲ್ಲಿ ಬಿಜೆಪಿ ಅಭ್ಯರ್ಥಿ ಪಾರ್ವತಿ ದಾಸ್‌,  ಕಾಂಗ್ರೆಸ್‌ ಅಭ್ಯರ್ಥಿ ಬಸಂತ ಕುಮಾರ್‌ ವಿರುದ್ಧ ಅಲ್ಪ(2400) ಮತಗಳಿಂದ ಗೆಲುವು ಪಡೆದುಕೊಂಡಿದ್ದಾರೆ. ತ್ರಿಪುರಾದಲ್ಲಿ ಆಡಳಿತಾರೂಢ ಬಿಜೆಪಿ ಬಕ್ಸ್ ನಗರ ಕ್ಷೇತ್ರವನ್ನು ಸಿಪಿಎಂನಿಂದ ಕಸಿದುಕೊಂಡಿದ್ದರೆ. ಧನಪುರ ಕೇತ್ರವನ್ನು ಉಳಿಸಿಕೊಂಡಿದೆ.

ಉಪಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸೆಪ್ಟೆಂಬರ್ 5 ರಂದು ನಡೆದ ಏಳು ಉಪಚುನಾವಣೆಗಳಲ್ಲಿ ನಾಲ್ಕರಲ್ಲಿ ಬಿಜೆಪಿ ಸೋತಿದೆ. ಇದು ಇಂಡಿಯಾ ಮೈತ್ರಿಗೆ ಸಿಕ್ಕ ದೊಡ್ಡ ಗೆಲುವು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಬಿಜೆಪಿಗೆ ಪರ್ಯಾಯವಾಗಿ ಜನರು ಇಂಡಿಯಾ ಮೈತ್ರಿಕೂಟವನ್ನು ಒಪ್ಪಿಕೊಂಡಿದ್ದಾರೆ ಎಂಬುದು ಉಪಚುನಾವಣೆಯಲ್ಲಿ ಪ್ರತಿಪಕ್ಷ ಮೈತ್ರಿಕೂಟ ಇಂಡಿಯಾದ ಅಭ್ಯರ್ಥಿಗಳ ಗೆಲುವು ಸಾಬೀತುಪಡಿಸುತ್ತದೆ ಎಂದು ಕಾಂಗ್ರೆಸ್ ಹೇಳಿದೆ.

ಇದನ್ನು ಓದಿ: ಐಐಟಿ ಜಾತಿ ತಾರತಮ್ಯ ಸರ್ವೆ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ವಾಪಾಸ್ಸು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...