Homeಕರ್ನಾಟಕ‘ಭಕ್ತಿಪಂಥ’ ಪಾಠದಲ್ಲಿ ಶರೀಫ, ಕನಕ-ಪುರಂದರದಾಸರ ವ್ಯಕ್ತಿ ಚಿತ್ರಣ ತೆರವು

‘ಭಕ್ತಿಪಂಥ’ ಪಾಠದಲ್ಲಿ ಶರೀಫ, ಕನಕ-ಪುರಂದರದಾಸರ ವ್ಯಕ್ತಿ ಚಿತ್ರಣ ತೆರವು

- Advertisement -
- Advertisement -

ಕನ್ನಡ ನೆಲದಲ್ಲಿ ನಡೆದ ಭಕ್ತಿ ಪಂಥ ಚಳವಳಿಯಲ್ಲಿ ದಾಸವರೇಣ್ಯರ ಕೊಡುಗೆಯನ್ನೂ ಯಾರೂ ಅಲ್ಲಗಳೆಯಲಾರರು. ಆದರೆ ಚಕ್ರತೀರ್ಥ ಪುಸ್ತಕ ಪರಿಶೀಲನಾ ಸಮಿತಿಯು 9ನೇ ತರಗತಿ ಸಮಾಜ ವಿಜ್ಞಾನ ಭಾಗ-2ರಲ್ಲಿ ನೀಡಿರುವ ‘ಭಕ್ತಪಂಥ’ ಪಾಠದಲ್ಲಿ ದಾಸವರೇಣ್ಯರ ವ್ಯಕ್ತಿಚಿತ್ರಣವನ್ನು ಕಿತ್ತು ಬಿಸಾಡಿದೆ.

ಬರಗೂರು ರಾಮಚಂದ್ರಪ್ಪನವರ ಸರ್ವಾಧ್ಯಕ್ಷತೆಯಲ್ಲಿ ರಚಿತವಾದ ಪಠ್ಯಪುಸ್ತಕದಲ್ಲಿ ಕನಕದಾಸರು, ಪುರಂದರದಾಸರು ಹಾಗೂ ಶಿಶುನಾಳ ಷರೀಫರ ವ್ಯಕ್ತಿಚಿತ್ರಣವನ್ನು ಪರಿಚಯಿಸಲಾಗಿತ್ತು. ಸಮಾಜದ ಮೇಲೆ ಅವರು ಬೀರಿದ ಪ್ರಭಾವವನ್ನು ತಿಳಿಸಲಾಗಿತ್ತು. ಆದರೆ ಈ ವಿವರಗಳನ್ನು ತೆರವು ಮಾಡಿರುವ ಚಕ್ರತೀರ್ಥ ಸಮಿತಿಯು, ಕರ್ನಾಟಕದಲ್ಲಿ ಭಕ್ತಿಪಂಥ ಚಳಿವಳಿಕಾರರ ಇತಿಹಾಸವನ್ನು ಎರಡು ವಾಕ್ಯಗಳಿಗೆ ಸೀಮಿತ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಾಠದಲ್ಲಿ ಆರಂಭದಲ್ಲಿ- ‘ಈ ಅಧ್ಯಾಯದಲ್ಲಿ ಕೆಳಗಿನ ಅಂಶಗಳನ್ನು ತಿಳಿಯುತ್ತೇವೆ’ ಎಂದು ಪ್ರಸ್ತಾಪಿಸುತ್ತಾ “ರಮಾನಂದ, ಚೈತನ್ಯ, ಗುರುನಾನಕ್‌ರ ಬಗ್ಗೆ, ಕರ್ನಾಟಕದಲ್ಲಿ ಭಕ್ತಿ ಪಂಥ, ಭಕ್ತಿ ಪಂಥದ ಪರಿಣಾಮಗಳು, ಭಕ್ತಿಪಂಥದ ಪ್ರಮುಖ ಅಂಶಗಳು” ಈ ವಿಚಾರಗಳನ್ನು ತಿಳಿಯುತ್ತೇವೆ ಎಂದು ಸೂಚಿಸಲಾಗಿದೆ. ಆದರೆ ಬರಗೂರರ ಸಮಿತಿ ರೂಪಿಸದ ಪಠ್ಯದಲ್ಲಿಯೇ ಈ ಅಂಶಗಳನ್ನು ನಮೂದಿಸಲಾಗಿತ್ತು. ಅವುಗಳನ್ನು ಯಥಾವತ್ತು ಉಳಿಸಿಕೊಂಡಿರುವ ಚಕ್ರತೀರ್ಥ ಸಮಿತಿ, ಕರ್ನಾಟಕದ ಭಕ್ತಿಪಂಥ ಚಳವಳಿಯ ಬಗ್ಗೆ ವಿವರಣೆಯನ್ನೇ ನೀಡಿಲ್ಲ! ‘ಸೂಫಿಸಂ’ ಬಗ್ಗೆ ಒಂದು ಪ್ಯಾರಾ ಪಾಠವಿದ್ದರೂ ಅದು ಕರ್ನಾಟಕ್ಕಷ್ಟೇ ಸೀಮಿತವಾಗಿ ನಿಲ್ಲುವುದಿಲ್ಲ.

ಅಸ್ಸಾಮಿನ ಭಕ್ತಿಪಂಥ ಚಳವಳಿಕಾರರಾದ ಶಂಕರದೇವ ಹಾಗೂ ಮಾಧವದೇವ ಅವರ ಕುರಿತು ಹೊಸದಾಗಿ ಸೇರಿಸಲಾಗಿದೆ. ದಾಸವರೇಣ್ಯರ ವಿವರ ಕೈಬಿಡಲಾಗಿದೆ. ಅಲ್ಲದೆ ಗುರುನಾನಕರ್‌ರ ಪಾಠದಲ್ಲೂ ಕತ್ತರಿ ಪ್ರಯೋಗ ನಡೆದಿದೆ.

ಅಸ್ಸಾಮಿನ ಭಕ್ತಿಪಂಥ ಚಳವಳಿಕಾರರಾದ ಶಂಕರದೇವ ಹಾಗೂ ಮಾಧವದೇವ ಅವರ ಕುರಿತು ರೋಹಿತ್ ಚಕ್ರತೀರ್ಥ ಸಮಿತಿ ಹೊಸದಾಗಿ ಸೇರಿಸಿದೆ.

ಇದನ್ನೂ ಓದಿರಿ: ಚಕ್ರತೀರ್ಥ ಸಮಿತಿಯ ಅಧ್ವಾನಗಳು: ಅಕ್ಷರದವ್ವನಿಗೆ ‘ಅವಳು’, ‘ಇವಳು’ ಪದಬಳಕೆ

ಮೀರಾಬಾಯಿಯವರ ಕುರಿತು ಇರುವ ಭಾಗದಲ್ಲಿಯೇ ಕರ್ನಾಟಕದಲ್ಲಿ ಭಕ್ತಿಪಂಥ ಚಳವಳಿ ಬೀರಿದ ಪ್ರಭಾವದ ಕುರಿತು ಎರಡು ವಾಕ್ಯಗಳನ್ನು ತುರುಕಲಾಗಿದೆ. “ಪುರಂದರದಾಸರು ಮತ್ತು ಕನಕದಾಸರು ಕರ್ನಾಟಕದ ಭಕ್ತಿ ಚಳವಳಿಯ ಪ್ರಮುಖರಾಗಿದ್ದರು. ಪುರಂದರದಾಸರು ‘ಕೀರ್ತನೆ’ಗಳನ್ನು ರಚಿಸಿದರೆ, ಕನಕದಾಸರು, ‘ಮೋಹನ ತರಂಗಿಣಿ’ ಎಂಬ ಕಾವ್ಯವನ್ನು ಮತ್ತು ಕೀರ್ತನೆಗಳನ್ನು ಕನ್ನಡದಲ್ಲಿ ರಚನೆ ಮಾಡಿದರು”- ಇದಿಷ್ಟೇ ಮಾಹಿತಿ!

ಶಿಶುನಾಳ ಶರೀಫರು, ಕನಕ ಹಾಗೂ ಪುರಂದರದಾಸರ ವ್ಯಕ್ತಿ ಚಿತ್ರಣವನ್ನು ಬರಗೂರು ನೇತೃತ್ವದ ಸಮಿತಿ ನೀಡಿತ್ತು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಕ್ರತೀರ್ತನ ಗ್ಯಾಂಗು ಮಾಡಿರುವ ಪರಿಷ್ಕರಣೆಯನ್ನು ಸಂಪೂರ್ಣವಾಗಿ ತಿರಸ್ಕರಿಸಬೇಕು.

LEAVE A REPLY

Please enter your comment!
Please enter your name here

- Advertisment -

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...