Homeಕರ್ನಾಟಕ‘ಭಕ್ತಿಪಂಥ’ ಪಾಠದಲ್ಲಿ ಶರೀಫ, ಕನಕ-ಪುರಂದರದಾಸರ ವ್ಯಕ್ತಿ ಚಿತ್ರಣ ತೆರವು

‘ಭಕ್ತಿಪಂಥ’ ಪಾಠದಲ್ಲಿ ಶರೀಫ, ಕನಕ-ಪುರಂದರದಾಸರ ವ್ಯಕ್ತಿ ಚಿತ್ರಣ ತೆರವು

- Advertisement -
- Advertisement -

ಕನ್ನಡ ನೆಲದಲ್ಲಿ ನಡೆದ ಭಕ್ತಿ ಪಂಥ ಚಳವಳಿಯಲ್ಲಿ ದಾಸವರೇಣ್ಯರ ಕೊಡುಗೆಯನ್ನೂ ಯಾರೂ ಅಲ್ಲಗಳೆಯಲಾರರು. ಆದರೆ ಚಕ್ರತೀರ್ಥ ಪುಸ್ತಕ ಪರಿಶೀಲನಾ ಸಮಿತಿಯು 9ನೇ ತರಗತಿ ಸಮಾಜ ವಿಜ್ಞಾನ ಭಾಗ-2ರಲ್ಲಿ ನೀಡಿರುವ ‘ಭಕ್ತಪಂಥ’ ಪಾಠದಲ್ಲಿ ದಾಸವರೇಣ್ಯರ ವ್ಯಕ್ತಿಚಿತ್ರಣವನ್ನು ಕಿತ್ತು ಬಿಸಾಡಿದೆ.

ಬರಗೂರು ರಾಮಚಂದ್ರಪ್ಪನವರ ಸರ್ವಾಧ್ಯಕ್ಷತೆಯಲ್ಲಿ ರಚಿತವಾದ ಪಠ್ಯಪುಸ್ತಕದಲ್ಲಿ ಕನಕದಾಸರು, ಪುರಂದರದಾಸರು ಹಾಗೂ ಶಿಶುನಾಳ ಷರೀಫರ ವ್ಯಕ್ತಿಚಿತ್ರಣವನ್ನು ಪರಿಚಯಿಸಲಾಗಿತ್ತು. ಸಮಾಜದ ಮೇಲೆ ಅವರು ಬೀರಿದ ಪ್ರಭಾವವನ್ನು ತಿಳಿಸಲಾಗಿತ್ತು. ಆದರೆ ಈ ವಿವರಗಳನ್ನು ತೆರವು ಮಾಡಿರುವ ಚಕ್ರತೀರ್ಥ ಸಮಿತಿಯು, ಕರ್ನಾಟಕದಲ್ಲಿ ಭಕ್ತಿಪಂಥ ಚಳಿವಳಿಕಾರರ ಇತಿಹಾಸವನ್ನು ಎರಡು ವಾಕ್ಯಗಳಿಗೆ ಸೀಮಿತ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಾಠದಲ್ಲಿ ಆರಂಭದಲ್ಲಿ- ‘ಈ ಅಧ್ಯಾಯದಲ್ಲಿ ಕೆಳಗಿನ ಅಂಶಗಳನ್ನು ತಿಳಿಯುತ್ತೇವೆ’ ಎಂದು ಪ್ರಸ್ತಾಪಿಸುತ್ತಾ “ರಮಾನಂದ, ಚೈತನ್ಯ, ಗುರುನಾನಕ್‌ರ ಬಗ್ಗೆ, ಕರ್ನಾಟಕದಲ್ಲಿ ಭಕ್ತಿ ಪಂಥ, ಭಕ್ತಿ ಪಂಥದ ಪರಿಣಾಮಗಳು, ಭಕ್ತಿಪಂಥದ ಪ್ರಮುಖ ಅಂಶಗಳು” ಈ ವಿಚಾರಗಳನ್ನು ತಿಳಿಯುತ್ತೇವೆ ಎಂದು ಸೂಚಿಸಲಾಗಿದೆ. ಆದರೆ ಬರಗೂರರ ಸಮಿತಿ ರೂಪಿಸದ ಪಠ್ಯದಲ್ಲಿಯೇ ಈ ಅಂಶಗಳನ್ನು ನಮೂದಿಸಲಾಗಿತ್ತು. ಅವುಗಳನ್ನು ಯಥಾವತ್ತು ಉಳಿಸಿಕೊಂಡಿರುವ ಚಕ್ರತೀರ್ಥ ಸಮಿತಿ, ಕರ್ನಾಟಕದ ಭಕ್ತಿಪಂಥ ಚಳವಳಿಯ ಬಗ್ಗೆ ವಿವರಣೆಯನ್ನೇ ನೀಡಿಲ್ಲ! ‘ಸೂಫಿಸಂ’ ಬಗ್ಗೆ ಒಂದು ಪ್ಯಾರಾ ಪಾಠವಿದ್ದರೂ ಅದು ಕರ್ನಾಟಕ್ಕಷ್ಟೇ ಸೀಮಿತವಾಗಿ ನಿಲ್ಲುವುದಿಲ್ಲ.

ಅಸ್ಸಾಮಿನ ಭಕ್ತಿಪಂಥ ಚಳವಳಿಕಾರರಾದ ಶಂಕರದೇವ ಹಾಗೂ ಮಾಧವದೇವ ಅವರ ಕುರಿತು ಹೊಸದಾಗಿ ಸೇರಿಸಲಾಗಿದೆ. ದಾಸವರೇಣ್ಯರ ವಿವರ ಕೈಬಿಡಲಾಗಿದೆ. ಅಲ್ಲದೆ ಗುರುನಾನಕರ್‌ರ ಪಾಠದಲ್ಲೂ ಕತ್ತರಿ ಪ್ರಯೋಗ ನಡೆದಿದೆ.

ಅಸ್ಸಾಮಿನ ಭಕ್ತಿಪಂಥ ಚಳವಳಿಕಾರರಾದ ಶಂಕರದೇವ ಹಾಗೂ ಮಾಧವದೇವ ಅವರ ಕುರಿತು ರೋಹಿತ್ ಚಕ್ರತೀರ್ಥ ಸಮಿತಿ ಹೊಸದಾಗಿ ಸೇರಿಸಿದೆ.

ಇದನ್ನೂ ಓದಿರಿ: ಚಕ್ರತೀರ್ಥ ಸಮಿತಿಯ ಅಧ್ವಾನಗಳು: ಅಕ್ಷರದವ್ವನಿಗೆ ‘ಅವಳು’, ‘ಇವಳು’ ಪದಬಳಕೆ

ಮೀರಾಬಾಯಿಯವರ ಕುರಿತು ಇರುವ ಭಾಗದಲ್ಲಿಯೇ ಕರ್ನಾಟಕದಲ್ಲಿ ಭಕ್ತಿಪಂಥ ಚಳವಳಿ ಬೀರಿದ ಪ್ರಭಾವದ ಕುರಿತು ಎರಡು ವಾಕ್ಯಗಳನ್ನು ತುರುಕಲಾಗಿದೆ. “ಪುರಂದರದಾಸರು ಮತ್ತು ಕನಕದಾಸರು ಕರ್ನಾಟಕದ ಭಕ್ತಿ ಚಳವಳಿಯ ಪ್ರಮುಖರಾಗಿದ್ದರು. ಪುರಂದರದಾಸರು ‘ಕೀರ್ತನೆ’ಗಳನ್ನು ರಚಿಸಿದರೆ, ಕನಕದಾಸರು, ‘ಮೋಹನ ತರಂಗಿಣಿ’ ಎಂಬ ಕಾವ್ಯವನ್ನು ಮತ್ತು ಕೀರ್ತನೆಗಳನ್ನು ಕನ್ನಡದಲ್ಲಿ ರಚನೆ ಮಾಡಿದರು”- ಇದಿಷ್ಟೇ ಮಾಹಿತಿ!

ಶಿಶುನಾಳ ಶರೀಫರು, ಕನಕ ಹಾಗೂ ಪುರಂದರದಾಸರ ವ್ಯಕ್ತಿ ಚಿತ್ರಣವನ್ನು ಬರಗೂರು ನೇತೃತ್ವದ ಸಮಿತಿ ನೀಡಿತ್ತು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಕ್ರತೀರ್ತನ ಗ್ಯಾಂಗು ಮಾಡಿರುವ ಪರಿಷ್ಕರಣೆಯನ್ನು ಸಂಪೂರ್ಣವಾಗಿ ತಿರಸ್ಕರಿಸಬೇಕು.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...