Homeಕರ್ನಾಟಕ‘ಭಕ್ತಿಪಂಥ’ ಪಾಠದಲ್ಲಿ ಶರೀಫ, ಕನಕ-ಪುರಂದರದಾಸರ ವ್ಯಕ್ತಿ ಚಿತ್ರಣ ತೆರವು

‘ಭಕ್ತಿಪಂಥ’ ಪಾಠದಲ್ಲಿ ಶರೀಫ, ಕನಕ-ಪುರಂದರದಾಸರ ವ್ಯಕ್ತಿ ಚಿತ್ರಣ ತೆರವು

- Advertisement -
- Advertisement -

ಕನ್ನಡ ನೆಲದಲ್ಲಿ ನಡೆದ ಭಕ್ತಿ ಪಂಥ ಚಳವಳಿಯಲ್ಲಿ ದಾಸವರೇಣ್ಯರ ಕೊಡುಗೆಯನ್ನೂ ಯಾರೂ ಅಲ್ಲಗಳೆಯಲಾರರು. ಆದರೆ ಚಕ್ರತೀರ್ಥ ಪುಸ್ತಕ ಪರಿಶೀಲನಾ ಸಮಿತಿಯು 9ನೇ ತರಗತಿ ಸಮಾಜ ವಿಜ್ಞಾನ ಭಾಗ-2ರಲ್ಲಿ ನೀಡಿರುವ ‘ಭಕ್ತಪಂಥ’ ಪಾಠದಲ್ಲಿ ದಾಸವರೇಣ್ಯರ ವ್ಯಕ್ತಿಚಿತ್ರಣವನ್ನು ಕಿತ್ತು ಬಿಸಾಡಿದೆ.

ಬರಗೂರು ರಾಮಚಂದ್ರಪ್ಪನವರ ಸರ್ವಾಧ್ಯಕ್ಷತೆಯಲ್ಲಿ ರಚಿತವಾದ ಪಠ್ಯಪುಸ್ತಕದಲ್ಲಿ ಕನಕದಾಸರು, ಪುರಂದರದಾಸರು ಹಾಗೂ ಶಿಶುನಾಳ ಷರೀಫರ ವ್ಯಕ್ತಿಚಿತ್ರಣವನ್ನು ಪರಿಚಯಿಸಲಾಗಿತ್ತು. ಸಮಾಜದ ಮೇಲೆ ಅವರು ಬೀರಿದ ಪ್ರಭಾವವನ್ನು ತಿಳಿಸಲಾಗಿತ್ತು. ಆದರೆ ಈ ವಿವರಗಳನ್ನು ತೆರವು ಮಾಡಿರುವ ಚಕ್ರತೀರ್ಥ ಸಮಿತಿಯು, ಕರ್ನಾಟಕದಲ್ಲಿ ಭಕ್ತಿಪಂಥ ಚಳಿವಳಿಕಾರರ ಇತಿಹಾಸವನ್ನು ಎರಡು ವಾಕ್ಯಗಳಿಗೆ ಸೀಮಿತ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಾಠದಲ್ಲಿ ಆರಂಭದಲ್ಲಿ- ‘ಈ ಅಧ್ಯಾಯದಲ್ಲಿ ಕೆಳಗಿನ ಅಂಶಗಳನ್ನು ತಿಳಿಯುತ್ತೇವೆ’ ಎಂದು ಪ್ರಸ್ತಾಪಿಸುತ್ತಾ “ರಮಾನಂದ, ಚೈತನ್ಯ, ಗುರುನಾನಕ್‌ರ ಬಗ್ಗೆ, ಕರ್ನಾಟಕದಲ್ಲಿ ಭಕ್ತಿ ಪಂಥ, ಭಕ್ತಿ ಪಂಥದ ಪರಿಣಾಮಗಳು, ಭಕ್ತಿಪಂಥದ ಪ್ರಮುಖ ಅಂಶಗಳು” ಈ ವಿಚಾರಗಳನ್ನು ತಿಳಿಯುತ್ತೇವೆ ಎಂದು ಸೂಚಿಸಲಾಗಿದೆ. ಆದರೆ ಬರಗೂರರ ಸಮಿತಿ ರೂಪಿಸದ ಪಠ್ಯದಲ್ಲಿಯೇ ಈ ಅಂಶಗಳನ್ನು ನಮೂದಿಸಲಾಗಿತ್ತು. ಅವುಗಳನ್ನು ಯಥಾವತ್ತು ಉಳಿಸಿಕೊಂಡಿರುವ ಚಕ್ರತೀರ್ಥ ಸಮಿತಿ, ಕರ್ನಾಟಕದ ಭಕ್ತಿಪಂಥ ಚಳವಳಿಯ ಬಗ್ಗೆ ವಿವರಣೆಯನ್ನೇ ನೀಡಿಲ್ಲ! ‘ಸೂಫಿಸಂ’ ಬಗ್ಗೆ ಒಂದು ಪ್ಯಾರಾ ಪಾಠವಿದ್ದರೂ ಅದು ಕರ್ನಾಟಕ್ಕಷ್ಟೇ ಸೀಮಿತವಾಗಿ ನಿಲ್ಲುವುದಿಲ್ಲ.

ಅಸ್ಸಾಮಿನ ಭಕ್ತಿಪಂಥ ಚಳವಳಿಕಾರರಾದ ಶಂಕರದೇವ ಹಾಗೂ ಮಾಧವದೇವ ಅವರ ಕುರಿತು ಹೊಸದಾಗಿ ಸೇರಿಸಲಾಗಿದೆ. ದಾಸವರೇಣ್ಯರ ವಿವರ ಕೈಬಿಡಲಾಗಿದೆ. ಅಲ್ಲದೆ ಗುರುನಾನಕರ್‌ರ ಪಾಠದಲ್ಲೂ ಕತ್ತರಿ ಪ್ರಯೋಗ ನಡೆದಿದೆ.

ಅಸ್ಸಾಮಿನ ಭಕ್ತಿಪಂಥ ಚಳವಳಿಕಾರರಾದ ಶಂಕರದೇವ ಹಾಗೂ ಮಾಧವದೇವ ಅವರ ಕುರಿತು ರೋಹಿತ್ ಚಕ್ರತೀರ್ಥ ಸಮಿತಿ ಹೊಸದಾಗಿ ಸೇರಿಸಿದೆ.

ಇದನ್ನೂ ಓದಿರಿ: ಚಕ್ರತೀರ್ಥ ಸಮಿತಿಯ ಅಧ್ವಾನಗಳು: ಅಕ್ಷರದವ್ವನಿಗೆ ‘ಅವಳು’, ‘ಇವಳು’ ಪದಬಳಕೆ

ಮೀರಾಬಾಯಿಯವರ ಕುರಿತು ಇರುವ ಭಾಗದಲ್ಲಿಯೇ ಕರ್ನಾಟಕದಲ್ಲಿ ಭಕ್ತಿಪಂಥ ಚಳವಳಿ ಬೀರಿದ ಪ್ರಭಾವದ ಕುರಿತು ಎರಡು ವಾಕ್ಯಗಳನ್ನು ತುರುಕಲಾಗಿದೆ. “ಪುರಂದರದಾಸರು ಮತ್ತು ಕನಕದಾಸರು ಕರ್ನಾಟಕದ ಭಕ್ತಿ ಚಳವಳಿಯ ಪ್ರಮುಖರಾಗಿದ್ದರು. ಪುರಂದರದಾಸರು ‘ಕೀರ್ತನೆ’ಗಳನ್ನು ರಚಿಸಿದರೆ, ಕನಕದಾಸರು, ‘ಮೋಹನ ತರಂಗಿಣಿ’ ಎಂಬ ಕಾವ್ಯವನ್ನು ಮತ್ತು ಕೀರ್ತನೆಗಳನ್ನು ಕನ್ನಡದಲ್ಲಿ ರಚನೆ ಮಾಡಿದರು”- ಇದಿಷ್ಟೇ ಮಾಹಿತಿ!

ಶಿಶುನಾಳ ಶರೀಫರು, ಕನಕ ಹಾಗೂ ಪುರಂದರದಾಸರ ವ್ಯಕ್ತಿ ಚಿತ್ರಣವನ್ನು ಬರಗೂರು ನೇತೃತ್ವದ ಸಮಿತಿ ನೀಡಿತ್ತು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಕ್ರತೀರ್ತನ ಗ್ಯಾಂಗು ಮಾಡಿರುವ ಪರಿಷ್ಕರಣೆಯನ್ನು ಸಂಪೂರ್ಣವಾಗಿ ತಿರಸ್ಕರಿಸಬೇಕು.

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...