Homeಮುಖಪುಟಆರೋಪಿ ಲೊಕೇಶನ್‌ ಪಿನ್ ಹಂಚಿಕೊಳ್ಳಬೇಕೆಂಬ ಜಾಮೀನು ಷರತ್ತು ಗೌಪ್ಯತೆ ಹಕ್ಕಿಗೆ ಧಕ್ಕೆ ತರುತ್ತದೆ: ಸುಪ್ರೀಂ ಕೋರ್ಟ್

ಆರೋಪಿ ಲೊಕೇಶನ್‌ ಪಿನ್ ಹಂಚಿಕೊಳ್ಳಬೇಕೆಂಬ ಜಾಮೀನು ಷರತ್ತು ಗೌಪ್ಯತೆ ಹಕ್ಕಿಗೆ ಧಕ್ಕೆ ತರುತ್ತದೆ: ಸುಪ್ರೀಂ ಕೋರ್ಟ್

- Advertisement -
- Advertisement -

ಆರೋಪಿ ಗೂಗಲ್ ಲೊಕೇಷನ್‌ ಪಿನ್ ಹಂಚಿಕೊಳ್ಳಬೇಕೆಂಬ ಜಾಮೀನು ಷರತ್ತು ಸಂವಿಧಾನದ 21ನೇ ವಿಧಿಯಡಿ ಒದಗಿಸಲಾದ ಗೌಪ್ಯತೆಯ ಹಕ್ಕಿಗೆ ಧಕ್ಕೆ ತರುತ್ತದೆ ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಮೌಖಿಕವಾಗಿ  ಹೇಳಿದೆ.

ಗೂಗಲ್ ಲೊಕೇಷನ್‌ ಪಿನ್ ಹಂಚಿಕೊಳ್ಳಲು ಈ ಹಿಂದೆ ಎರಡು ಬಾರಿ ಸುಪ್ರೀಂ ಕೋರ್ಟ್ ನಿರ್ದೇಶಿಸಿದ್ದನ್ನು ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠ ಒಪ್ಪಿಕೊಂಡಿತಾದರೂ, ಅದು ಜಾಮೀನು ಷರತ್ತಾಗಿರಲು ಸಾಧ್ಯವಿಲ್ಲ ಎಂದಿದೆ.

ಗೂಗಲ್‌ ಮ್ಯಾಪ್‌ ಅಪ್ಲಿಕೇಷನ್‌ನಲ್ಲಿರುವ ಲೊಕೇಷನ್‌ ಪಿನ್ ಹಂಚಿಕೊಂಡರೆ ಮಾತ್ರ ಜಾಮೀನು ನೀಡುವುದಾಗಿ ದೆಹಲಿ ಹೈಕೋರ್ಟ್ ವಿಧಿಸಿರುವ ಷರತ್ತು ಖಾಸಗಿತನದ ಹಕ್ಕನ್ನು ಉಲ್ಲಂಘಿಸುತ್ತದೆಯೇ ಎಂಬುದನ್ನು ಪರಿಶೀಲಿಸುವುದಕ್ಕಾಗಿ, ತನ್ನ ಲೊಕೇಷನ್‌ ಪಿನ್ ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬುವುದನ್ನು ವಿವರಿಸುವಂತೆ ಸುಪ್ರೀಂ ಕೋರ್ಟ್ ಗೂಗಲ್ ಇಂಡಿಯಾಕ್ಕೆ ಈ ಹಿಂದೆ ನಿರ್ದೇಶನ ನೀಡಿತ್ತು.

ಪ್ರಕರಣದಲ್ಲಿ ಗೂಗಲ್ ಇಂಡಿಯಾವನ್ನು ಪಕ್ಷಕಾರನನ್ನಾಗಿ ಸೇರಿಸಿಕೊಳ್ಳುತ್ತಿಲ್ಲ ಬದಲಿಗೆ ಲೊಕೇಶನ್ ಪಿನ್‌ ಕಾರ್ಯನಿರ್ವಹಣೆಯ ಬಗ್ಗೆ ಕಂಪನಿಯಿಂದ ಮಾಹಿತಿಯನ್ನಷ್ಟೇ ಕೋರಲಾಗುತ್ತಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತ್ತು.

ನಿನ್ನೆ (ಏ.29) ಗೂಗಲ್ ವಿವರಣೆ ಆಲಿಸಿದ ನ್ಯಾಯಾಲಯ, ಜಾಮೀನು ಷರತ್ತಿನಂತೆ ಗೂಗಲ್ ಲೊಕೇಶನ್ ಪಿನ್ ಹಂಚಿಕೊಳ್ಳುವ ಕುರಿತ ಆದೇಶ ಕಾಯ್ದಿರಿಸಿದೆ. ಉಳಿದ ವಿಷಯಗಳಿಗೆ ಸಂಬಂಧಿಸಿದಂತೆ ಜುಲೈ 26 ರಂದು ವಿಚಾರಣೆಗೆ ಪಟ್ಟಿ ಮಾಡಿದೆ.

ಡ್ರಗ್ಸ್ ಪ್ರಕರಣದಲ್ಲಿ ಆರೋಪಿಯಾಗಿದ್ದ ನೈಜೀರಿಯಾ ಪ್ರಜೆ ಫ್ರಾಂಕ್ ವಿಟಾಸ್‌ ಮತ್ತು ಸಹ ಆರೋಪಿಗೆ ಮಧ್ಯಂತರ ಜಾಮೀನು ನೀಡುವಾಗ ದೆಹಲಿ ಹೈಕೋರ್ಟ್ ವಿಧಿಸಿದ್ದ ಕೆಲವು ಷರತ್ತುಗಳಲ್ಲಿ ತಾನಿರುವ ಸ್ಥಳದ ಮಾಹಿತಿಯನ್ನು (ಗೂಗಲ್‌ ಲೊಕೇಷನ್‌ ಪಿನ್) ಅಧಿಕಾರಿಗಳೊಂದಿಗೆ ಹಂಚಿಕೊಳ್ಳಬೇಕೆಂಬುದೂ ಸೇರಿತ್ತು. ಇದನ್ನು ಫ್ರಾಂಕ್ ವಿಟಾಸ್ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ವಾದ ಆಲಿಸಿದ ಸುಪ್ರೀಂ ಕೋರ್ಟ್‌ ಇಂತಹ ಕಠಿಣ ಜಾಮೀನು ಷರತ್ತು ವಿಧಿಸುವ ಬಗ್ಗೆ ಅಸಮ್ಮತಿ ವ್ಯಕ್ತಪಡಿಸಿದೆ.

ಇಂತಹದ್ದೇ ಮತ್ತೊಂದು ಪ್ರಕರಣದಲ್ಲಿ, ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ಗೂಗಲ್ ಲೊಕೇಶನ್ ಪಿನ್‌ಗಳನ್ನು ಹಂಚಿಕೊಳ್ಳುವ ಮೂಲಕ ತನ್ನ ಸ್ಥಳದ ವಿವರಗಳನ್ನು ನಿರಂತರವಾಗಿ ಪೊಲೀಸರಿಗೆ ಕಳುಹಿಸಬೇಕು ಎಂಬ ಜಾಮೀನು ಷರತ್ತಿಗೆ ನ್ಯಾಯಮೂರ್ತಿ ಓಕಾ ನೇತೃತ್ವದ ಮತ್ತೊಂದು ಪೀಠ ಕಳೆದ ವರ್ಷದ ಜುಲೈನಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಇದು ಕಣ್ಗಾವಲಿಗೆ ಸಮನಾಗಬಹುದು ಎಂದು ನ್ಯಾಯಪೀಠ ಮೌಖಿಕವಾಗಿ ಟೀಕಿಸಿತ್ತು.

ಮಾಹಿತಿ ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ಚರ್ಚ್‌ಗಳಲ್ಲಿ ‘ದಿ ಕೇರಳ ಸ್ಟೋರಿ’ ಪ್ರದರ್ಶನ: ಕೋಮು ಅಜೆಂಡಾ ಬಗ್ಗೆ ಎಚ್ಚರಿಸಿದ ತಲಶ್ಶೇರಿ ಬಿಷಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...