Homeಮುಖಪುಟಆರೋಪಿ ಲೊಕೇಶನ್‌ ಪಿನ್ ಹಂಚಿಕೊಳ್ಳಬೇಕೆಂಬ ಜಾಮೀನು ಷರತ್ತು ಗೌಪ್ಯತೆ ಹಕ್ಕಿಗೆ ಧಕ್ಕೆ ತರುತ್ತದೆ: ಸುಪ್ರೀಂ ಕೋರ್ಟ್

ಆರೋಪಿ ಲೊಕೇಶನ್‌ ಪಿನ್ ಹಂಚಿಕೊಳ್ಳಬೇಕೆಂಬ ಜಾಮೀನು ಷರತ್ತು ಗೌಪ್ಯತೆ ಹಕ್ಕಿಗೆ ಧಕ್ಕೆ ತರುತ್ತದೆ: ಸುಪ್ರೀಂ ಕೋರ್ಟ್

- Advertisement -
- Advertisement -

ಆರೋಪಿ ಗೂಗಲ್ ಲೊಕೇಷನ್‌ ಪಿನ್ ಹಂಚಿಕೊಳ್ಳಬೇಕೆಂಬ ಜಾಮೀನು ಷರತ್ತು ಸಂವಿಧಾನದ 21ನೇ ವಿಧಿಯಡಿ ಒದಗಿಸಲಾದ ಗೌಪ್ಯತೆಯ ಹಕ್ಕಿಗೆ ಧಕ್ಕೆ ತರುತ್ತದೆ ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಮೌಖಿಕವಾಗಿ  ಹೇಳಿದೆ.

ಗೂಗಲ್ ಲೊಕೇಷನ್‌ ಪಿನ್ ಹಂಚಿಕೊಳ್ಳಲು ಈ ಹಿಂದೆ ಎರಡು ಬಾರಿ ಸುಪ್ರೀಂ ಕೋರ್ಟ್ ನಿರ್ದೇಶಿಸಿದ್ದನ್ನು ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠ ಒಪ್ಪಿಕೊಂಡಿತಾದರೂ, ಅದು ಜಾಮೀನು ಷರತ್ತಾಗಿರಲು ಸಾಧ್ಯವಿಲ್ಲ ಎಂದಿದೆ.

ಗೂಗಲ್‌ ಮ್ಯಾಪ್‌ ಅಪ್ಲಿಕೇಷನ್‌ನಲ್ಲಿರುವ ಲೊಕೇಷನ್‌ ಪಿನ್ ಹಂಚಿಕೊಂಡರೆ ಮಾತ್ರ ಜಾಮೀನು ನೀಡುವುದಾಗಿ ದೆಹಲಿ ಹೈಕೋರ್ಟ್ ವಿಧಿಸಿರುವ ಷರತ್ತು ಖಾಸಗಿತನದ ಹಕ್ಕನ್ನು ಉಲ್ಲಂಘಿಸುತ್ತದೆಯೇ ಎಂಬುದನ್ನು ಪರಿಶೀಲಿಸುವುದಕ್ಕಾಗಿ, ತನ್ನ ಲೊಕೇಷನ್‌ ಪಿನ್ ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬುವುದನ್ನು ವಿವರಿಸುವಂತೆ ಸುಪ್ರೀಂ ಕೋರ್ಟ್ ಗೂಗಲ್ ಇಂಡಿಯಾಕ್ಕೆ ಈ ಹಿಂದೆ ನಿರ್ದೇಶನ ನೀಡಿತ್ತು.

ಪ್ರಕರಣದಲ್ಲಿ ಗೂಗಲ್ ಇಂಡಿಯಾವನ್ನು ಪಕ್ಷಕಾರನನ್ನಾಗಿ ಸೇರಿಸಿಕೊಳ್ಳುತ್ತಿಲ್ಲ ಬದಲಿಗೆ ಲೊಕೇಶನ್ ಪಿನ್‌ ಕಾರ್ಯನಿರ್ವಹಣೆಯ ಬಗ್ಗೆ ಕಂಪನಿಯಿಂದ ಮಾಹಿತಿಯನ್ನಷ್ಟೇ ಕೋರಲಾಗುತ್ತಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತ್ತು.

ನಿನ್ನೆ (ಏ.29) ಗೂಗಲ್ ವಿವರಣೆ ಆಲಿಸಿದ ನ್ಯಾಯಾಲಯ, ಜಾಮೀನು ಷರತ್ತಿನಂತೆ ಗೂಗಲ್ ಲೊಕೇಶನ್ ಪಿನ್ ಹಂಚಿಕೊಳ್ಳುವ ಕುರಿತ ಆದೇಶ ಕಾಯ್ದಿರಿಸಿದೆ. ಉಳಿದ ವಿಷಯಗಳಿಗೆ ಸಂಬಂಧಿಸಿದಂತೆ ಜುಲೈ 26 ರಂದು ವಿಚಾರಣೆಗೆ ಪಟ್ಟಿ ಮಾಡಿದೆ.

ಡ್ರಗ್ಸ್ ಪ್ರಕರಣದಲ್ಲಿ ಆರೋಪಿಯಾಗಿದ್ದ ನೈಜೀರಿಯಾ ಪ್ರಜೆ ಫ್ರಾಂಕ್ ವಿಟಾಸ್‌ ಮತ್ತು ಸಹ ಆರೋಪಿಗೆ ಮಧ್ಯಂತರ ಜಾಮೀನು ನೀಡುವಾಗ ದೆಹಲಿ ಹೈಕೋರ್ಟ್ ವಿಧಿಸಿದ್ದ ಕೆಲವು ಷರತ್ತುಗಳಲ್ಲಿ ತಾನಿರುವ ಸ್ಥಳದ ಮಾಹಿತಿಯನ್ನು (ಗೂಗಲ್‌ ಲೊಕೇಷನ್‌ ಪಿನ್) ಅಧಿಕಾರಿಗಳೊಂದಿಗೆ ಹಂಚಿಕೊಳ್ಳಬೇಕೆಂಬುದೂ ಸೇರಿತ್ತು. ಇದನ್ನು ಫ್ರಾಂಕ್ ವಿಟಾಸ್ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ವಾದ ಆಲಿಸಿದ ಸುಪ್ರೀಂ ಕೋರ್ಟ್‌ ಇಂತಹ ಕಠಿಣ ಜಾಮೀನು ಷರತ್ತು ವಿಧಿಸುವ ಬಗ್ಗೆ ಅಸಮ್ಮತಿ ವ್ಯಕ್ತಪಡಿಸಿದೆ.

ಇಂತಹದ್ದೇ ಮತ್ತೊಂದು ಪ್ರಕರಣದಲ್ಲಿ, ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ಗೂಗಲ್ ಲೊಕೇಶನ್ ಪಿನ್‌ಗಳನ್ನು ಹಂಚಿಕೊಳ್ಳುವ ಮೂಲಕ ತನ್ನ ಸ್ಥಳದ ವಿವರಗಳನ್ನು ನಿರಂತರವಾಗಿ ಪೊಲೀಸರಿಗೆ ಕಳುಹಿಸಬೇಕು ಎಂಬ ಜಾಮೀನು ಷರತ್ತಿಗೆ ನ್ಯಾಯಮೂರ್ತಿ ಓಕಾ ನೇತೃತ್ವದ ಮತ್ತೊಂದು ಪೀಠ ಕಳೆದ ವರ್ಷದ ಜುಲೈನಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಇದು ಕಣ್ಗಾವಲಿಗೆ ಸಮನಾಗಬಹುದು ಎಂದು ನ್ಯಾಯಪೀಠ ಮೌಖಿಕವಾಗಿ ಟೀಕಿಸಿತ್ತು.

ಮಾಹಿತಿ ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ಚರ್ಚ್‌ಗಳಲ್ಲಿ ‘ದಿ ಕೇರಳ ಸ್ಟೋರಿ’ ಪ್ರದರ್ಶನ: ಕೋಮು ಅಜೆಂಡಾ ಬಗ್ಗೆ ಎಚ್ಚರಿಸಿದ ತಲಶ್ಶೇರಿ ಬಿಷಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...