Homeಮುಖಪುಟಆರೋಪಿ ಲೊಕೇಶನ್‌ ಪಿನ್ ಹಂಚಿಕೊಳ್ಳಬೇಕೆಂಬ ಜಾಮೀನು ಷರತ್ತು ಗೌಪ್ಯತೆ ಹಕ್ಕಿಗೆ ಧಕ್ಕೆ ತರುತ್ತದೆ: ಸುಪ್ರೀಂ ಕೋರ್ಟ್

ಆರೋಪಿ ಲೊಕೇಶನ್‌ ಪಿನ್ ಹಂಚಿಕೊಳ್ಳಬೇಕೆಂಬ ಜಾಮೀನು ಷರತ್ತು ಗೌಪ್ಯತೆ ಹಕ್ಕಿಗೆ ಧಕ್ಕೆ ತರುತ್ತದೆ: ಸುಪ್ರೀಂ ಕೋರ್ಟ್

- Advertisement -
- Advertisement -

ಆರೋಪಿ ಗೂಗಲ್ ಲೊಕೇಷನ್‌ ಪಿನ್ ಹಂಚಿಕೊಳ್ಳಬೇಕೆಂಬ ಜಾಮೀನು ಷರತ್ತು ಸಂವಿಧಾನದ 21ನೇ ವಿಧಿಯಡಿ ಒದಗಿಸಲಾದ ಗೌಪ್ಯತೆಯ ಹಕ್ಕಿಗೆ ಧಕ್ಕೆ ತರುತ್ತದೆ ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಮೌಖಿಕವಾಗಿ  ಹೇಳಿದೆ.

ಗೂಗಲ್ ಲೊಕೇಷನ್‌ ಪಿನ್ ಹಂಚಿಕೊಳ್ಳಲು ಈ ಹಿಂದೆ ಎರಡು ಬಾರಿ ಸುಪ್ರೀಂ ಕೋರ್ಟ್ ನಿರ್ದೇಶಿಸಿದ್ದನ್ನು ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠ ಒಪ್ಪಿಕೊಂಡಿತಾದರೂ, ಅದು ಜಾಮೀನು ಷರತ್ತಾಗಿರಲು ಸಾಧ್ಯವಿಲ್ಲ ಎಂದಿದೆ.

ಗೂಗಲ್‌ ಮ್ಯಾಪ್‌ ಅಪ್ಲಿಕೇಷನ್‌ನಲ್ಲಿರುವ ಲೊಕೇಷನ್‌ ಪಿನ್ ಹಂಚಿಕೊಂಡರೆ ಮಾತ್ರ ಜಾಮೀನು ನೀಡುವುದಾಗಿ ದೆಹಲಿ ಹೈಕೋರ್ಟ್ ವಿಧಿಸಿರುವ ಷರತ್ತು ಖಾಸಗಿತನದ ಹಕ್ಕನ್ನು ಉಲ್ಲಂಘಿಸುತ್ತದೆಯೇ ಎಂಬುದನ್ನು ಪರಿಶೀಲಿಸುವುದಕ್ಕಾಗಿ, ತನ್ನ ಲೊಕೇಷನ್‌ ಪಿನ್ ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬುವುದನ್ನು ವಿವರಿಸುವಂತೆ ಸುಪ್ರೀಂ ಕೋರ್ಟ್ ಗೂಗಲ್ ಇಂಡಿಯಾಕ್ಕೆ ಈ ಹಿಂದೆ ನಿರ್ದೇಶನ ನೀಡಿತ್ತು.

ಪ್ರಕರಣದಲ್ಲಿ ಗೂಗಲ್ ಇಂಡಿಯಾವನ್ನು ಪಕ್ಷಕಾರನನ್ನಾಗಿ ಸೇರಿಸಿಕೊಳ್ಳುತ್ತಿಲ್ಲ ಬದಲಿಗೆ ಲೊಕೇಶನ್ ಪಿನ್‌ ಕಾರ್ಯನಿರ್ವಹಣೆಯ ಬಗ್ಗೆ ಕಂಪನಿಯಿಂದ ಮಾಹಿತಿಯನ್ನಷ್ಟೇ ಕೋರಲಾಗುತ್ತಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತ್ತು.

ನಿನ್ನೆ (ಏ.29) ಗೂಗಲ್ ವಿವರಣೆ ಆಲಿಸಿದ ನ್ಯಾಯಾಲಯ, ಜಾಮೀನು ಷರತ್ತಿನಂತೆ ಗೂಗಲ್ ಲೊಕೇಶನ್ ಪಿನ್ ಹಂಚಿಕೊಳ್ಳುವ ಕುರಿತ ಆದೇಶ ಕಾಯ್ದಿರಿಸಿದೆ. ಉಳಿದ ವಿಷಯಗಳಿಗೆ ಸಂಬಂಧಿಸಿದಂತೆ ಜುಲೈ 26 ರಂದು ವಿಚಾರಣೆಗೆ ಪಟ್ಟಿ ಮಾಡಿದೆ.

ಡ್ರಗ್ಸ್ ಪ್ರಕರಣದಲ್ಲಿ ಆರೋಪಿಯಾಗಿದ್ದ ನೈಜೀರಿಯಾ ಪ್ರಜೆ ಫ್ರಾಂಕ್ ವಿಟಾಸ್‌ ಮತ್ತು ಸಹ ಆರೋಪಿಗೆ ಮಧ್ಯಂತರ ಜಾಮೀನು ನೀಡುವಾಗ ದೆಹಲಿ ಹೈಕೋರ್ಟ್ ವಿಧಿಸಿದ್ದ ಕೆಲವು ಷರತ್ತುಗಳಲ್ಲಿ ತಾನಿರುವ ಸ್ಥಳದ ಮಾಹಿತಿಯನ್ನು (ಗೂಗಲ್‌ ಲೊಕೇಷನ್‌ ಪಿನ್) ಅಧಿಕಾರಿಗಳೊಂದಿಗೆ ಹಂಚಿಕೊಳ್ಳಬೇಕೆಂಬುದೂ ಸೇರಿತ್ತು. ಇದನ್ನು ಫ್ರಾಂಕ್ ವಿಟಾಸ್ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ವಾದ ಆಲಿಸಿದ ಸುಪ್ರೀಂ ಕೋರ್ಟ್‌ ಇಂತಹ ಕಠಿಣ ಜಾಮೀನು ಷರತ್ತು ವಿಧಿಸುವ ಬಗ್ಗೆ ಅಸಮ್ಮತಿ ವ್ಯಕ್ತಪಡಿಸಿದೆ.

ಇಂತಹದ್ದೇ ಮತ್ತೊಂದು ಪ್ರಕರಣದಲ್ಲಿ, ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ಗೂಗಲ್ ಲೊಕೇಶನ್ ಪಿನ್‌ಗಳನ್ನು ಹಂಚಿಕೊಳ್ಳುವ ಮೂಲಕ ತನ್ನ ಸ್ಥಳದ ವಿವರಗಳನ್ನು ನಿರಂತರವಾಗಿ ಪೊಲೀಸರಿಗೆ ಕಳುಹಿಸಬೇಕು ಎಂಬ ಜಾಮೀನು ಷರತ್ತಿಗೆ ನ್ಯಾಯಮೂರ್ತಿ ಓಕಾ ನೇತೃತ್ವದ ಮತ್ತೊಂದು ಪೀಠ ಕಳೆದ ವರ್ಷದ ಜುಲೈನಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಇದು ಕಣ್ಗಾವಲಿಗೆ ಸಮನಾಗಬಹುದು ಎಂದು ನ್ಯಾಯಪೀಠ ಮೌಖಿಕವಾಗಿ ಟೀಕಿಸಿತ್ತು.

ಮಾಹಿತಿ ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ಚರ್ಚ್‌ಗಳಲ್ಲಿ ‘ದಿ ಕೇರಳ ಸ್ಟೋರಿ’ ಪ್ರದರ್ಶನ: ಕೋಮು ಅಜೆಂಡಾ ಬಗ್ಗೆ ಎಚ್ಚರಿಸಿದ ತಲಶ್ಶೇರಿ ಬಿಷಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...