Homeಮುಖಪುಟ'ದ್ವೇಷಪೂರಿತ' ವೀಡಿಯೋ ಹಂಚಿಕೆ: 9 ಜನರ ಮೇಲೆ ಕೇಸ್ ದಾಖಲಿಸಿದ ಜಮ್ಮು-ಕಾಶ್ಮೀರ ಪೊಲೀಸ್!

‘ದ್ವೇಷಪೂರಿತ’ ವೀಡಿಯೋ ಹಂಚಿಕೆ: 9 ಜನರ ಮೇಲೆ ಕೇಸ್ ದಾಖಲಿಸಿದ ಜಮ್ಮು-ಕಾಶ್ಮೀರ ಪೊಲೀಸ್!

- Advertisement -
- Advertisement -

ಕಾಶ್ಮೀರ ಕಣಿವೆಯ ಗಂದರ್ಬಾಲ್, ಬುದ್ಗಾಮ್, ಬಾರಾಮುಲ್ಲಾ ಮತ್ತು ಅನಂತ್‌ನಾಗ್ ಜಿಲ್ಲೆಗಳಲ್ಲಿ ಸಾಮಾಜಿಕ ಮಾಧ್ಯಮಗಳ ಮೂಲಕ ದ್ವೇಷ ಹರಡುವ ವೀಡಿಯೊಗಳನ್ನು ಹಂಚಿಕೊಂಡಿದ್ದಕ್ಕಾಗಿ ಒಂಬತ್ತು ಜನರ ವಿರುದ್ಧ ದಾಖಲಿಸಿದ ಜಮ್ಮು-ಕಾಶ್ಮೀರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವದಂತಿಗಳನ್ನು ಹರಡಲು ಸಾಮಾಜಿಕ ಮಾಧ್ಯಮ ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ಬುದ್ಗಾಮ್‌ನಲ್ಲಿ ಇಬ್ಬರ ವಿರುದ್ಧ, ಅನಂತನಾಗ್‌ನಲ್ಲಿ ಮೂವರ ವಿರುದ್ಧ ಜಾಲತಾಣದಗಳಲ್ಲಿ ಪ್ರಚೋದನೆ-ವದಂತಿ ಹಬ್ಬಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ದ್ವೇಷಪೂರಿತ ವೀಡಿಯೊಗಳನ್ನು ಅಪ್ಲೋಡ್ ಮಾಡಿದ್ದಕ್ಕಾಗಿ ಬಾರಾಮುಲ್ಲಾದಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಈ ವಿಡಿಯೋದಲ್ಲಿ ಪ್ರಚೋದನಕಾರಿ ಮತ್ತು ದೇಶದ್ರೋಹದ ಹೇಳಿಕೆಗಳಿವೆ. ಜೊತೆಗೆ, ಗಂದರ್ಬಾಲ್‌ನಲ್ಲಿ ದ್ವೇಷಪೂರಿತ ವಿಷಯವನ್ನು ಅಪ್ಲೋಡ್ ಮತ್ತು ಹಂಚಿಕೊಂಡಿದ್ದಕ್ಕಾಗಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ,
ದ್ವೇಷಪೂರಿತ ಮತ್ತು ದೇಶದ್ರೋಹದ ಹೇಳಿಕೆಗಳನ್ನು ನೀಡಿದ ದ್ವೇಷಪೂರಿತ ವೀಡಿಯೋಗಳನ್ನು ಅಪ್ಲೋಡ್ ಮಾಡಿದ್ದಕ್ಕಾಗಿ ಸಲ್ಮಾನ್ ಮುಷ್ತಾಕ್ ಕುಟ್ಟೇ, ರಮೀಜ್ ಅಶ್ರಫ್ ಹಾದಿ ಮತ್ತು ಉಮರ್ ಫಾರೂಕ್ ಗನಿ ಎಂಬ ಮೂವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಅನಂತನಾಗ್ ಪೊಲೀಸರು ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನಕಾರಿ ವಿಷಯವನ್ನು ಅಪ್ಲೋಡ್ ಮಾಡಿದ್ದಕ್ಕಾಗಿ ಅವಂತಿಪೋರಾದಲ್ಲಿಯೂ ವ್ಯಕ್ತಿಯೋರ್ವನನ್ನು ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ‘144 ಕ್ರಿಮಿನಲ್ ಪ್ರೊಸೀಜರ್ ಕೋಡ್ ಅಡಿಯಲ್ಲಿ ನಾವು ಇಂತಹ ಚಟುವಟಿಕೆಗಳ ಮೇಳೆ ಕಣ್ಣಿಟ್ಟಿದ್ದೇವೆ. ಕೋಮು ಸೂಕ್ಷ್ಮತೆಗೆ ಹಾನಿಯುಂಟುಮಾಡುವ ಅಥವಾ ಯಾರಿಗಾದರೂ ಬೆದರಿಕೆ ಹಾಕುವ ಪ್ರಚೋದನಾಕಾರಿ ಸಂದೇಶ, ವಿಡಿಯೋ, ಫೋಟೋ, ಆಡಿಯೋ ಹಂಚಿಕೊಳ್ಳುವುದು ಅಪರಾಧವಾಗುತ್ತದೆ. ಯಾರೂ ಕೂಡಾ ಅಂತಹ ವಿಷಯಗಳನ್ನು ಫಾರ್ವರ್ಡ್ ಮಾಡಲು ಸಾಧ್ಯವಿಲ್ಲ’ ಎಂದು ಜಮ್ಮು-ಕಾಶ್ಮೀರ ಡಿಜಿಪಿ ಹೇಳಿದ್ದಾರೆ.

‘ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷಪೂರಿತ ವಿಷಯವನ್ನು ಹರಡುವ ವ್ಯಕ್ತಿಗಳ ಕುರಿತು ಜಾಗರೂಕರಾಗಿರಬೇಕು ಎಂದು ನಾವು ಸಾರ್ವಜನಿಕರನ್ನು ಒತ್ತಾಯಿಸುತ್ತೇವೆ. ಅಂತಹ ಚಟುವಟಿಕೆಗಳಲ್ಲಿ ತೊಡಗಿರುವ ಯಾರಾದರೂ ಕಂಡುಬಂದರೆ ಕಾನೂನಿನ ಪ್ರಕಾರ ಕಟ್ಟುನಿಟ್ಟಾಗಿ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

ಕೋಮು ಉನ್ಮಾದವನ್ನು ಪ್ರಚೋದಿಸುವ, ಶಾಂತಿ ಕದಡುವ, ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದವನ್ನು ಉತ್ತೇಜಿಸುವಂತಹ ವೀಡಿಯೊಗಳನ್ನು ಹಂಚಿಕೊಳ್ಳುವುದು, ಸಾಮಾಜಿಕ ಮಾಧ್ಯಮಗಳಲ್ಲಿ ಪಠ್ಯಗಳು ಮತ್ತು ಸಂದೇಶಗಳನ್ನು ಪೋಸ್ಟ್ ಮಾಡುವ ಜನರ ವಿರುದ್ಧ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಪ್ರಕರಣ ದಾಖಲಿಸಲು ಸರ್ಕಾರ ನಿರ್ಧರಿಸಿದೆ.

ಇದನ್ನೂ ಓದಿ; ರಜಪೂತ ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆ ಪ್ರಕರಣ: ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...