Homeಮುಖಪುಟ'ದ್ವೇಷಪೂರಿತ' ವೀಡಿಯೋ ಹಂಚಿಕೆ: 9 ಜನರ ಮೇಲೆ ಕೇಸ್ ದಾಖಲಿಸಿದ ಜಮ್ಮು-ಕಾಶ್ಮೀರ ಪೊಲೀಸ್!

‘ದ್ವೇಷಪೂರಿತ’ ವೀಡಿಯೋ ಹಂಚಿಕೆ: 9 ಜನರ ಮೇಲೆ ಕೇಸ್ ದಾಖಲಿಸಿದ ಜಮ್ಮು-ಕಾಶ್ಮೀರ ಪೊಲೀಸ್!

- Advertisement -
- Advertisement -

ಕಾಶ್ಮೀರ ಕಣಿವೆಯ ಗಂದರ್ಬಾಲ್, ಬುದ್ಗಾಮ್, ಬಾರಾಮುಲ್ಲಾ ಮತ್ತು ಅನಂತ್‌ನಾಗ್ ಜಿಲ್ಲೆಗಳಲ್ಲಿ ಸಾಮಾಜಿಕ ಮಾಧ್ಯಮಗಳ ಮೂಲಕ ದ್ವೇಷ ಹರಡುವ ವೀಡಿಯೊಗಳನ್ನು ಹಂಚಿಕೊಂಡಿದ್ದಕ್ಕಾಗಿ ಒಂಬತ್ತು ಜನರ ವಿರುದ್ಧ ದಾಖಲಿಸಿದ ಜಮ್ಮು-ಕಾಶ್ಮೀರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವದಂತಿಗಳನ್ನು ಹರಡಲು ಸಾಮಾಜಿಕ ಮಾಧ್ಯಮ ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ಬುದ್ಗಾಮ್‌ನಲ್ಲಿ ಇಬ್ಬರ ವಿರುದ್ಧ, ಅನಂತನಾಗ್‌ನಲ್ಲಿ ಮೂವರ ವಿರುದ್ಧ ಜಾಲತಾಣದಗಳಲ್ಲಿ ಪ್ರಚೋದನೆ-ವದಂತಿ ಹಬ್ಬಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ದ್ವೇಷಪೂರಿತ ವೀಡಿಯೊಗಳನ್ನು ಅಪ್ಲೋಡ್ ಮಾಡಿದ್ದಕ್ಕಾಗಿ ಬಾರಾಮುಲ್ಲಾದಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಈ ವಿಡಿಯೋದಲ್ಲಿ ಪ್ರಚೋದನಕಾರಿ ಮತ್ತು ದೇಶದ್ರೋಹದ ಹೇಳಿಕೆಗಳಿವೆ. ಜೊತೆಗೆ, ಗಂದರ್ಬಾಲ್‌ನಲ್ಲಿ ದ್ವೇಷಪೂರಿತ ವಿಷಯವನ್ನು ಅಪ್ಲೋಡ್ ಮತ್ತು ಹಂಚಿಕೊಂಡಿದ್ದಕ್ಕಾಗಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ,
ದ್ವೇಷಪೂರಿತ ಮತ್ತು ದೇಶದ್ರೋಹದ ಹೇಳಿಕೆಗಳನ್ನು ನೀಡಿದ ದ್ವೇಷಪೂರಿತ ವೀಡಿಯೋಗಳನ್ನು ಅಪ್ಲೋಡ್ ಮಾಡಿದ್ದಕ್ಕಾಗಿ ಸಲ್ಮಾನ್ ಮುಷ್ತಾಕ್ ಕುಟ್ಟೇ, ರಮೀಜ್ ಅಶ್ರಫ್ ಹಾದಿ ಮತ್ತು ಉಮರ್ ಫಾರೂಕ್ ಗನಿ ಎಂಬ ಮೂವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಅನಂತನಾಗ್ ಪೊಲೀಸರು ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನಕಾರಿ ವಿಷಯವನ್ನು ಅಪ್ಲೋಡ್ ಮಾಡಿದ್ದಕ್ಕಾಗಿ ಅವಂತಿಪೋರಾದಲ್ಲಿಯೂ ವ್ಯಕ್ತಿಯೋರ್ವನನ್ನು ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ‘144 ಕ್ರಿಮಿನಲ್ ಪ್ರೊಸೀಜರ್ ಕೋಡ್ ಅಡಿಯಲ್ಲಿ ನಾವು ಇಂತಹ ಚಟುವಟಿಕೆಗಳ ಮೇಳೆ ಕಣ್ಣಿಟ್ಟಿದ್ದೇವೆ. ಕೋಮು ಸೂಕ್ಷ್ಮತೆಗೆ ಹಾನಿಯುಂಟುಮಾಡುವ ಅಥವಾ ಯಾರಿಗಾದರೂ ಬೆದರಿಕೆ ಹಾಕುವ ಪ್ರಚೋದನಾಕಾರಿ ಸಂದೇಶ, ವಿಡಿಯೋ, ಫೋಟೋ, ಆಡಿಯೋ ಹಂಚಿಕೊಳ್ಳುವುದು ಅಪರಾಧವಾಗುತ್ತದೆ. ಯಾರೂ ಕೂಡಾ ಅಂತಹ ವಿಷಯಗಳನ್ನು ಫಾರ್ವರ್ಡ್ ಮಾಡಲು ಸಾಧ್ಯವಿಲ್ಲ’ ಎಂದು ಜಮ್ಮು-ಕಾಶ್ಮೀರ ಡಿಜಿಪಿ ಹೇಳಿದ್ದಾರೆ.

‘ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷಪೂರಿತ ವಿಷಯವನ್ನು ಹರಡುವ ವ್ಯಕ್ತಿಗಳ ಕುರಿತು ಜಾಗರೂಕರಾಗಿರಬೇಕು ಎಂದು ನಾವು ಸಾರ್ವಜನಿಕರನ್ನು ಒತ್ತಾಯಿಸುತ್ತೇವೆ. ಅಂತಹ ಚಟುವಟಿಕೆಗಳಲ್ಲಿ ತೊಡಗಿರುವ ಯಾರಾದರೂ ಕಂಡುಬಂದರೆ ಕಾನೂನಿನ ಪ್ರಕಾರ ಕಟ್ಟುನಿಟ್ಟಾಗಿ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

ಕೋಮು ಉನ್ಮಾದವನ್ನು ಪ್ರಚೋದಿಸುವ, ಶಾಂತಿ ಕದಡುವ, ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದವನ್ನು ಉತ್ತೇಜಿಸುವಂತಹ ವೀಡಿಯೊಗಳನ್ನು ಹಂಚಿಕೊಳ್ಳುವುದು, ಸಾಮಾಜಿಕ ಮಾಧ್ಯಮಗಳಲ್ಲಿ ಪಠ್ಯಗಳು ಮತ್ತು ಸಂದೇಶಗಳನ್ನು ಪೋಸ್ಟ್ ಮಾಡುವ ಜನರ ವಿರುದ್ಧ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಪ್ರಕರಣ ದಾಖಲಿಸಲು ಸರ್ಕಾರ ನಿರ್ಧರಿಸಿದೆ.

ಇದನ್ನೂ ಓದಿ; ರಜಪೂತ ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆ ಪ್ರಕರಣ: ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....