Homeಮುಖಪುಟ'ದ್ವೇಷಪೂರಿತ' ವೀಡಿಯೋ ಹಂಚಿಕೆ: 9 ಜನರ ಮೇಲೆ ಕೇಸ್ ದಾಖಲಿಸಿದ ಜಮ್ಮು-ಕಾಶ್ಮೀರ ಪೊಲೀಸ್!

‘ದ್ವೇಷಪೂರಿತ’ ವೀಡಿಯೋ ಹಂಚಿಕೆ: 9 ಜನರ ಮೇಲೆ ಕೇಸ್ ದಾಖಲಿಸಿದ ಜಮ್ಮು-ಕಾಶ್ಮೀರ ಪೊಲೀಸ್!

- Advertisement -
- Advertisement -

ಕಾಶ್ಮೀರ ಕಣಿವೆಯ ಗಂದರ್ಬಾಲ್, ಬುದ್ಗಾಮ್, ಬಾರಾಮುಲ್ಲಾ ಮತ್ತು ಅನಂತ್‌ನಾಗ್ ಜಿಲ್ಲೆಗಳಲ್ಲಿ ಸಾಮಾಜಿಕ ಮಾಧ್ಯಮಗಳ ಮೂಲಕ ದ್ವೇಷ ಹರಡುವ ವೀಡಿಯೊಗಳನ್ನು ಹಂಚಿಕೊಂಡಿದ್ದಕ್ಕಾಗಿ ಒಂಬತ್ತು ಜನರ ವಿರುದ್ಧ ದಾಖಲಿಸಿದ ಜಮ್ಮು-ಕಾಶ್ಮೀರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವದಂತಿಗಳನ್ನು ಹರಡಲು ಸಾಮಾಜಿಕ ಮಾಧ್ಯಮ ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ಬುದ್ಗಾಮ್‌ನಲ್ಲಿ ಇಬ್ಬರ ವಿರುದ್ಧ, ಅನಂತನಾಗ್‌ನಲ್ಲಿ ಮೂವರ ವಿರುದ್ಧ ಜಾಲತಾಣದಗಳಲ್ಲಿ ಪ್ರಚೋದನೆ-ವದಂತಿ ಹಬ್ಬಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ದ್ವೇಷಪೂರಿತ ವೀಡಿಯೊಗಳನ್ನು ಅಪ್ಲೋಡ್ ಮಾಡಿದ್ದಕ್ಕಾಗಿ ಬಾರಾಮುಲ್ಲಾದಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಈ ವಿಡಿಯೋದಲ್ಲಿ ಪ್ರಚೋದನಕಾರಿ ಮತ್ತು ದೇಶದ್ರೋಹದ ಹೇಳಿಕೆಗಳಿವೆ. ಜೊತೆಗೆ, ಗಂದರ್ಬಾಲ್‌ನಲ್ಲಿ ದ್ವೇಷಪೂರಿತ ವಿಷಯವನ್ನು ಅಪ್ಲೋಡ್ ಮತ್ತು ಹಂಚಿಕೊಂಡಿದ್ದಕ್ಕಾಗಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ,
ದ್ವೇಷಪೂರಿತ ಮತ್ತು ದೇಶದ್ರೋಹದ ಹೇಳಿಕೆಗಳನ್ನು ನೀಡಿದ ದ್ವೇಷಪೂರಿತ ವೀಡಿಯೋಗಳನ್ನು ಅಪ್ಲೋಡ್ ಮಾಡಿದ್ದಕ್ಕಾಗಿ ಸಲ್ಮಾನ್ ಮುಷ್ತಾಕ್ ಕುಟ್ಟೇ, ರಮೀಜ್ ಅಶ್ರಫ್ ಹಾದಿ ಮತ್ತು ಉಮರ್ ಫಾರೂಕ್ ಗನಿ ಎಂಬ ಮೂವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಅನಂತನಾಗ್ ಪೊಲೀಸರು ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನಕಾರಿ ವಿಷಯವನ್ನು ಅಪ್ಲೋಡ್ ಮಾಡಿದ್ದಕ್ಕಾಗಿ ಅವಂತಿಪೋರಾದಲ್ಲಿಯೂ ವ್ಯಕ್ತಿಯೋರ್ವನನ್ನು ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ‘144 ಕ್ರಿಮಿನಲ್ ಪ್ರೊಸೀಜರ್ ಕೋಡ್ ಅಡಿಯಲ್ಲಿ ನಾವು ಇಂತಹ ಚಟುವಟಿಕೆಗಳ ಮೇಳೆ ಕಣ್ಣಿಟ್ಟಿದ್ದೇವೆ. ಕೋಮು ಸೂಕ್ಷ್ಮತೆಗೆ ಹಾನಿಯುಂಟುಮಾಡುವ ಅಥವಾ ಯಾರಿಗಾದರೂ ಬೆದರಿಕೆ ಹಾಕುವ ಪ್ರಚೋದನಾಕಾರಿ ಸಂದೇಶ, ವಿಡಿಯೋ, ಫೋಟೋ, ಆಡಿಯೋ ಹಂಚಿಕೊಳ್ಳುವುದು ಅಪರಾಧವಾಗುತ್ತದೆ. ಯಾರೂ ಕೂಡಾ ಅಂತಹ ವಿಷಯಗಳನ್ನು ಫಾರ್ವರ್ಡ್ ಮಾಡಲು ಸಾಧ್ಯವಿಲ್ಲ’ ಎಂದು ಜಮ್ಮು-ಕಾಶ್ಮೀರ ಡಿಜಿಪಿ ಹೇಳಿದ್ದಾರೆ.

‘ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷಪೂರಿತ ವಿಷಯವನ್ನು ಹರಡುವ ವ್ಯಕ್ತಿಗಳ ಕುರಿತು ಜಾಗರೂಕರಾಗಿರಬೇಕು ಎಂದು ನಾವು ಸಾರ್ವಜನಿಕರನ್ನು ಒತ್ತಾಯಿಸುತ್ತೇವೆ. ಅಂತಹ ಚಟುವಟಿಕೆಗಳಲ್ಲಿ ತೊಡಗಿರುವ ಯಾರಾದರೂ ಕಂಡುಬಂದರೆ ಕಾನೂನಿನ ಪ್ರಕಾರ ಕಟ್ಟುನಿಟ್ಟಾಗಿ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

ಕೋಮು ಉನ್ಮಾದವನ್ನು ಪ್ರಚೋದಿಸುವ, ಶಾಂತಿ ಕದಡುವ, ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದವನ್ನು ಉತ್ತೇಜಿಸುವಂತಹ ವೀಡಿಯೊಗಳನ್ನು ಹಂಚಿಕೊಳ್ಳುವುದು, ಸಾಮಾಜಿಕ ಮಾಧ್ಯಮಗಳಲ್ಲಿ ಪಠ್ಯಗಳು ಮತ್ತು ಸಂದೇಶಗಳನ್ನು ಪೋಸ್ಟ್ ಮಾಡುವ ಜನರ ವಿರುದ್ಧ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಪ್ರಕರಣ ದಾಖಲಿಸಲು ಸರ್ಕಾರ ನಿರ್ಧರಿಸಿದೆ.

ಇದನ್ನೂ ಓದಿ; ರಜಪೂತ ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆ ಪ್ರಕರಣ: ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...