Homeಮುಖಪುಟಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋದ ಶಾರ್ಜೀಲ್ ಇಮಾಮ್

ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋದ ಶಾರ್ಜೀಲ್ ಇಮಾಮ್

- Advertisement -
- Advertisement -

ದೆಹಲಿ ಗಲಭೆಗೆ ಸಂಬಂಧಿಸಿದ “ದೊಡ್ಡ ಮಟ್ಟದ ಪಿತೂರಿ”ಯಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಲಾಗಿರುವ ಪ್ರಕರಣದಲ್ಲಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಹೋರಾಟಗಾರ ಶಾರ್ಜೀಲ್ ಇಮಾಮ್ ಶನಿವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಸೆಪ್ಟೆಂಬರ್ 2ರಂದು, ನ್ಯಾಯಮೂರ್ತಿಗಳಾದ ನವೀನ್ ಚಾವ್ಲಾ ಮತ್ತು ಶಾಲಿಂದರ್ ಕೌರ್ ಅವರ ದೆಹಲಿ ಹೈಕೋರ್ಟ್ ಪೀಠವು ಶಾರ್ಜೀಲ್ ಇಮಾಮ್, ಉಮರ್ ಖಾಲಿದ್, ಮೊಹಮ್ಮದ್ ಸಲೀಮ್ ಖಾನ್, ಶಿಫಾ ಉರ್ ರೆಹಮಾನ್, ಅಥರ್ ಖಾನ್, ಮೀರನ್ ಹೈದರ್, ಅಬ್ದುಲ್ ಖಾಲಿದ್ ಸೈಫಿ ಮತ್ತು ಗುಲ್ಫಿಶಾ ಫಾತಿಮಾ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

ನ್ಯಾಯಮೂರ್ತಿಗಳಾದ ಸುಬ್ರಹ್ಮಣ್ಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್ ಶಂಕರ್ ಅವರ ಮತ್ತೊಂದು ವಿಭಾಗೀಯ ಪೀಠವು ಮತ್ತೊಬ್ಬ ಆರೋಪಿ ತಸ್ಲೀಮ್ ಅಹ್ಮದ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.

ಹತ್ತು ಆರೋಪಿಗಳು ಅಪರಾಧ ರುಜುವಾತಾಗದೆ ಕಳೆದ ಐದು ವರ್ಷಗಳಿಗೂ ಹೆಚ್ಚು ಸಮಯದಿಂದ ಜೈಲಿನಲ್ಲಿದ್ದಾರೆ.

2020ರಲ್ಲಿ ನಡೆದ ದೆಹಲಿ ಹಿಂಸಾಚಾರದಲ್ಲಿ 53 ಜನರು ಸಾವನ್ನಪ್ಪಿದ್ದರು ಮತ್ತು ನೂರಾರು ಜನರು ಗಾಯಗೊಂಡಿದ್ದರು. ಕೊಲ್ಲಲ್ಪಟ್ಟವರಲ್ಲಿ ಹೆಚ್ಚಿನವರು ಮುಸ್ಲಿಮರು.

ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಕೆಡವಲು ರೂಪಿಸಿದ್ದ ದೊಡ್ಡ ಪಿತೂರಿಯ ಭಾಗವಾಗಿ ಈ ಹಿಂಸಾಚಾರ ನಡೆದಿದೆ. ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆಗಳನ್ನು ಆಯೋಜಿಸಿದ್ದವರೇ ಇದನ್ನು ಯೋಜಿಸಿದ್ದರು ಎಂದು ದೆಹಲಿ ಪೊಲೀಸರು ಆರೋಪಿಸಿದ್ದಾರೆ.

ಸೆಪ್ಟೆಂಬರ್ 2 ರಂದು, ನ್ಯಾಯಮೂರ್ತಿಗಳಾದ ಚಾವ್ಲಾ ಮತ್ತು ಕೌರ್ ಅವರನ್ನೊಳಗೊಂಡ ಪೀಠವು ಜಾಮೀನು ಅರ್ಜಿಗಳನ್ನು ವಜಾಗೊಳಿಸುವ ವೇಳೆ, ಪ್ರಾಥಮಿಕವಾಗಿ ಆಪಾದಿತ ಪಿತೂರಿಯಲ್ಲಿ ಇಮಾಮ್ ಮತ್ತು ಖಾಲಿದ್ ಅವರ ಪಾತ್ರದ ಕುರಿತು ಮಾಡಿರುವ ಆರೋಪಗಳು ‘ಗಂಭೀರವಾಗಿವೆ’ ಮತ್ತು ಅವರು ಕೋಮು ಆಧಾರದ ಮೇಲೆ ಪ್ರಚೋದನಕಾರಿ ಭಾಷಣಗಳನ್ನು ಮಾಡಿದ್ದಾರೆ ಎಂದು ಹೇಳಿದೆ.

ಪ್ರಾಸಿಕ್ಯೂಷನ್ ‘ವಿವರವಾದ ತನಿಖೆ’ ನಡೆಸಿದೆ ಎಂದು ನ್ಯಾಯಾಲಯ ಹೇಳಿದೆ. ಇದರ ಪರಿಣಾಮವಾಗಿ ನಾಲ್ಕು ಪೂರಕ ಆರೋಪಪಟ್ಟಿಗಳನ್ನು ಸಲ್ಲಿಸಲಾಗಿದೆ. ಇದಲ್ಲದೆ, 58 ಸಾಕ್ಷಿಗಳ ಹೇಳಿಕೆಗಳನ್ನು ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.

ವಿಚಾರಣೆ ವಿಳಂಬವಾಗಿದೆ ಎಂಬ ಕಾರಣ ಮುಂದಿಟ್ಟು ಇಮಾಮ್ ಮತ್ತು ಇತರ ಆರೋಪಿಗಳು ಜಾಮೀನು ಕೋರಿದ್ದರು. ಪ್ರಕರಣದ ಇತರ ಸಹ-ಆರೋಪಿಗಳಾದ ವಿದ್ಯಾರ್ಥಿ ಹೋರಾಟಗಾರರಾದ ಆಸಿಫ್ ಇಕ್ಬಾಲ್ ತನ್ಹಾ, ದೇವಾಂಗನಾ ಕಲಿತಾ ಮತ್ತು ನತಾಶಾ ನರ್ವಾಲ್ ಅವರಿಗೆ ಜಾಮೀನು ನೀಡಿದಂರೆ ತಮಗೂ ಜಾಮೀನು ನೀಡುವಂತೆ ಮನವಿ ಮಾಡಿದ್ದರು. ಜೂನ್ 2021ರಲ್ಲಿ ಈ ಮೂವರಿಗೆ ಜಾಮೀನು ದೊರೆತಿದೆ.

ಮುಸ್ಲಿಮರ ಮೇಲೆ ದೋಷಾರೋಪಣೆಗೆ ಯತ್ನ: ಗಣೇಶ ಚತುರ್ಥಿ ವೇಳೆ ಹುಸಿ ಬೆದರಿಕೆ ಹಾಕಿದ ಹಿಂದೂ ವ್ಯಾಪಾರಿ ಸೆರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...