Homeಮುಖಪುಟಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋದ ಶಾರ್ಜೀಲ್ ಇಮಾಮ್

ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋದ ಶಾರ್ಜೀಲ್ ಇಮಾಮ್

- Advertisement -
- Advertisement -

ದೆಹಲಿ ಗಲಭೆಗೆ ಸಂಬಂಧಿಸಿದ “ದೊಡ್ಡ ಮಟ್ಟದ ಪಿತೂರಿ”ಯಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಲಾಗಿರುವ ಪ್ರಕರಣದಲ್ಲಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಹೋರಾಟಗಾರ ಶಾರ್ಜೀಲ್ ಇಮಾಮ್ ಶನಿವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಸೆಪ್ಟೆಂಬರ್ 2ರಂದು, ನ್ಯಾಯಮೂರ್ತಿಗಳಾದ ನವೀನ್ ಚಾವ್ಲಾ ಮತ್ತು ಶಾಲಿಂದರ್ ಕೌರ್ ಅವರ ದೆಹಲಿ ಹೈಕೋರ್ಟ್ ಪೀಠವು ಶಾರ್ಜೀಲ್ ಇಮಾಮ್, ಉಮರ್ ಖಾಲಿದ್, ಮೊಹಮ್ಮದ್ ಸಲೀಮ್ ಖಾನ್, ಶಿಫಾ ಉರ್ ರೆಹಮಾನ್, ಅಥರ್ ಖಾನ್, ಮೀರನ್ ಹೈದರ್, ಅಬ್ದುಲ್ ಖಾಲಿದ್ ಸೈಫಿ ಮತ್ತು ಗುಲ್ಫಿಶಾ ಫಾತಿಮಾ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

ನ್ಯಾಯಮೂರ್ತಿಗಳಾದ ಸುಬ್ರಹ್ಮಣ್ಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್ ಶಂಕರ್ ಅವರ ಮತ್ತೊಂದು ವಿಭಾಗೀಯ ಪೀಠವು ಮತ್ತೊಬ್ಬ ಆರೋಪಿ ತಸ್ಲೀಮ್ ಅಹ್ಮದ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.

ಹತ್ತು ಆರೋಪಿಗಳು ಅಪರಾಧ ರುಜುವಾತಾಗದೆ ಕಳೆದ ಐದು ವರ್ಷಗಳಿಗೂ ಹೆಚ್ಚು ಸಮಯದಿಂದ ಜೈಲಿನಲ್ಲಿದ್ದಾರೆ.

2020ರಲ್ಲಿ ನಡೆದ ದೆಹಲಿ ಹಿಂಸಾಚಾರದಲ್ಲಿ 53 ಜನರು ಸಾವನ್ನಪ್ಪಿದ್ದರು ಮತ್ತು ನೂರಾರು ಜನರು ಗಾಯಗೊಂಡಿದ್ದರು. ಕೊಲ್ಲಲ್ಪಟ್ಟವರಲ್ಲಿ ಹೆಚ್ಚಿನವರು ಮುಸ್ಲಿಮರು.

ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಕೆಡವಲು ರೂಪಿಸಿದ್ದ ದೊಡ್ಡ ಪಿತೂರಿಯ ಭಾಗವಾಗಿ ಈ ಹಿಂಸಾಚಾರ ನಡೆದಿದೆ. ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆಗಳನ್ನು ಆಯೋಜಿಸಿದ್ದವರೇ ಇದನ್ನು ಯೋಜಿಸಿದ್ದರು ಎಂದು ದೆಹಲಿ ಪೊಲೀಸರು ಆರೋಪಿಸಿದ್ದಾರೆ.

ಸೆಪ್ಟೆಂಬರ್ 2 ರಂದು, ನ್ಯಾಯಮೂರ್ತಿಗಳಾದ ಚಾವ್ಲಾ ಮತ್ತು ಕೌರ್ ಅವರನ್ನೊಳಗೊಂಡ ಪೀಠವು ಜಾಮೀನು ಅರ್ಜಿಗಳನ್ನು ವಜಾಗೊಳಿಸುವ ವೇಳೆ, ಪ್ರಾಥಮಿಕವಾಗಿ ಆಪಾದಿತ ಪಿತೂರಿಯಲ್ಲಿ ಇಮಾಮ್ ಮತ್ತು ಖಾಲಿದ್ ಅವರ ಪಾತ್ರದ ಕುರಿತು ಮಾಡಿರುವ ಆರೋಪಗಳು ‘ಗಂಭೀರವಾಗಿವೆ’ ಮತ್ತು ಅವರು ಕೋಮು ಆಧಾರದ ಮೇಲೆ ಪ್ರಚೋದನಕಾರಿ ಭಾಷಣಗಳನ್ನು ಮಾಡಿದ್ದಾರೆ ಎಂದು ಹೇಳಿದೆ.

ಪ್ರಾಸಿಕ್ಯೂಷನ್ ‘ವಿವರವಾದ ತನಿಖೆ’ ನಡೆಸಿದೆ ಎಂದು ನ್ಯಾಯಾಲಯ ಹೇಳಿದೆ. ಇದರ ಪರಿಣಾಮವಾಗಿ ನಾಲ್ಕು ಪೂರಕ ಆರೋಪಪಟ್ಟಿಗಳನ್ನು ಸಲ್ಲಿಸಲಾಗಿದೆ. ಇದಲ್ಲದೆ, 58 ಸಾಕ್ಷಿಗಳ ಹೇಳಿಕೆಗಳನ್ನು ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.

ವಿಚಾರಣೆ ವಿಳಂಬವಾಗಿದೆ ಎಂಬ ಕಾರಣ ಮುಂದಿಟ್ಟು ಇಮಾಮ್ ಮತ್ತು ಇತರ ಆರೋಪಿಗಳು ಜಾಮೀನು ಕೋರಿದ್ದರು. ಪ್ರಕರಣದ ಇತರ ಸಹ-ಆರೋಪಿಗಳಾದ ವಿದ್ಯಾರ್ಥಿ ಹೋರಾಟಗಾರರಾದ ಆಸಿಫ್ ಇಕ್ಬಾಲ್ ತನ್ಹಾ, ದೇವಾಂಗನಾ ಕಲಿತಾ ಮತ್ತು ನತಾಶಾ ನರ್ವಾಲ್ ಅವರಿಗೆ ಜಾಮೀನು ನೀಡಿದಂರೆ ತಮಗೂ ಜಾಮೀನು ನೀಡುವಂತೆ ಮನವಿ ಮಾಡಿದ್ದರು. ಜೂನ್ 2021ರಲ್ಲಿ ಈ ಮೂವರಿಗೆ ಜಾಮೀನು ದೊರೆತಿದೆ.

ಮುಸ್ಲಿಮರ ಮೇಲೆ ದೋಷಾರೋಪಣೆಗೆ ಯತ್ನ: ಗಣೇಶ ಚತುರ್ಥಿ ವೇಳೆ ಹುಸಿ ಬೆದರಿಕೆ ಹಾಕಿದ ಹಿಂದೂ ವ್ಯಾಪಾರಿ ಸೆರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....