Homeಮುಖಪುಟಆಂಧ್ರಪ್ರದೇಶ ಕಾಂಗ್ರೆಸ್‌ಗೆ ವೈ.ಎಸ್. ಶರ್ಮಿಳಾ ನೇತೃತ್ವ; ಸಹೋದರನ ವಿರುದ್ಧ ಸೆಣಸಲು ತಯಾರಿ!

ಆಂಧ್ರಪ್ರದೇಶ ಕಾಂಗ್ರೆಸ್‌ಗೆ ವೈ.ಎಸ್. ಶರ್ಮಿಳಾ ನೇತೃತ್ವ; ಸಹೋದರನ ವಿರುದ್ಧ ಸೆಣಸಲು ತಯಾರಿ!

- Advertisement -
- Advertisement -

ಅವಿಭಜಿತ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ರಾಜಶೇಖರ ರೆಡ್ಡಿ ಪುತ್ರಿ, ವೈಎಸ್ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕ ಅಧ್ಯಕ್ಷೆ ವೈ.ಎಸ್. ಶರ್ಮಿಳಾ ಈ ವಾರ ಕಾಂಗ್ರೆಸ್ ಸೇರಲಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳಿಂದ ತಿಳಿದುಬಂದಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಆಂಧ್ರಪ್ರದೇಶದ ಕಾಂಗ್ರೆಸ್ ನೇತೃತ್ವವನ್ನು ಶರ್ಮಿಳಾ ಅವರಿಗೆ ನೀಡಲು ಕಾಂಗ್ರೆಸ್ ಹೈಕಾಂಡ್ ಮುಂದಾಗಿದೆ ಎನ್ನಲಾಗಿದ್ದು, ತಮ್ಮ ಸಹೋದರ, ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ವಿರುದ್ಧ ಸೆಣಸಲು ಶರ್ಮಿಳಾ ತಯಾರಾಗಿದ್ದಾರೆ ಎನ್ನಲಾಗಿದೆ.

ಕಳೆದ ತಿಂಗಳು ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ್ದು, ರಾಜ್ಯದಲ್ಲಿ ಭಾರತ್ ರಾಷ್ಟ್ರ ಸಮಿತಿ ಪ್ರಾಬಲ್ಯವನ್ನು ಕೊನೆಗೊಳಿಸಿದೆ. ಮುಂದಿನ ಏಪ್ರಿಲ್‌ ಹೊತ್ತಿಗೆ ಆಂಧ್ರಪ್ರದೇಶದಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆ ಒಟ್ಟಿಗೆ ನಡೆಯಲಿದ್ದು, ವೈಎಸ್ಆರ್ ಕಾಂಗ್ರೆಸ್ ಮತ್ತು ತೆಲುಗು ದೇಶಂ ಪಕ್ಷವನ್ನು (ಟಿಡಿಪಿ) ಸೋಲಿಸಲು ಕಾಂಗ್ರೆಸ್ ಪಣ ತೊಟ್ಟಿದೆ.

ಮೂಲಗಳ ಪ್ರಕಾರ, ಚುನಾವಣೆಗೂ ಮುನ್ನ ಆಂಧ್ರಪ್ರದೇಶದ ಕಾಂಗ್ರೆಸ್ ನಾಯಕತ್ವವನ್ನು ಶರ್ಮಿಳಾ ಅವರಿಗೆ ವಹಿಸುವುದಕ್ಕೆ ವರಿಷ್ಠರು ನಿರ್ಧರಿಸಿದ್ದಾರೆ. ರಾಜ್ಯ ವಿಭಜನೆಯ ನಂತರ ಕಾಂಗ್ರೆಸ್ ಎರಡೂ ರಾಜ್ಯಗಳಲ್ಲಿ ಹೀನಾಯವಾಗಿ ಸೋಲು ಕಂಡಿತ್ತು. ತೆಲಂಗಾಣದಲ್ಲಿ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್, ಶರ್ಮಿಳಾ ನಾಯಕತ್ವದ ಮೂಲಕ ಆಂಧ್ರಪ್ರದೇಶದಲ್ಲಿ ಪಕ್ಷವನ್ನು ಪುನಶ್ಚೇತನಗೊಳಿಸುವ ಗುರಿಯನ್ನು ಹೊಂದಿದೆ ಎಂದು ತಿಳಿದುಬಂದಿದೆ. ಪ್ರಮುಖ ವಿರೋಧ ಪಕ್ಷ ತೆಲುಗು ದೇಶಂ ಪಕ್ಷ (ಟಿಡಿಪಿ) ತನ್ನ ಪ್ರಭಾವವನ್ನು ಹಿಡಿದಿಟ್ಟುಕೊಳ್ಳಲು ಹೆಣಗಾಡುತ್ತಿರುವ ಸಮಯದಲ್ಲಿ ವೈಎಸ್ಆರ್‌ಸಿಪಿಯನ್ನು ತೊರೆಯಲು ಸಿದ್ಧರಿರುವವರು ಈಗ ಕಾಂಗ್ರೆಸ್ಸಿಗೆ ಸೇರಬಹುದು ಎಂದು ಪಕ್ಷ ನಿರೀಕ್ಷೆಯಲ್ಲಿದೆ.

ಹೊಸ ರಾಜ್ಯ ರಚನೆಯ ಆಂದೋಲನದ ಹಿನ್ನಲೆಯಲ್ಲಿ ಶರ್ಮಿಳಾ ಸಹೋದರ ಜಗನ್ ಮೋಹನ್ ರೆಡ್ಡಿ ಕಾಂಗ್ರೆಸ್‌ನಿಂದ ಬೇರ್ಪಟ್ಟು ವೈಎಸ್ಆರ್‌ಪಿ ಸ್ಥಾಪಿಸಿದರು. ಅವರೊಂದಿಗೆ 18 ಶಾಸಕರು ಸೇರಿಕೊಂಡರು ಮತ್ತು ಕಾಂಗ್ರೆಸ್ ಸಂಸದರೊಬ್ಬರು ರಾಜೀನಾಮೆ ನೀಡಿದರು. ಇದು ಹಲವು ಉಪಚುನಾವಣೆಗಳಿಗೆ ನಾಂದಿ ಹಾಡಿತು. ಭ್ರಷ್ಟಾಚಾರದ ಆರೋಪದ ಮೇಲೆ ಬಂಧಿತರಾಗಿ ರೆಡ್ಡಿ ಜೈಲಿನಲ್ಲಿದ್ದಾಗ ಅವರ ತಾಯಿ ವೈಎಸ್ ವಿಜಯಮ್ಮ ಮತ್ತು ಸಹೋದರಿ ವೈಎಸ್ ಶರ್ಮಿಳಾ ಪ್ರಚಾರದ ನೇತೃತ್ವ ವಹಿಸಿದ್ದರು. ಚುನಾವಣೆಯಲ್ಲಿ ವೈಎಸ್‌ಆರ್‌ಸಿಪಿ ಮುನ್ನಡೆ ಸಾಧಿಸಿತು.

ಒಂಬತ್ತು ವರ್ಷಗಳ ನಂತರ, 2021 ರಲ್ಲಿ ಶರ್ಮಿಳಾ ಅವರು ತಮ್ಮ ಸಹೋದರನೊಂದಿಗೆ ಇರುವ ರಾಜಕೀಯ ಭಿನ್ನಾಭಿಪ್ರಾಯಗಳ ಬಗ್ಗೆ ಬಹಿರಂಗವಾಗಿ ಮಾತನಾಡಿದರು. ತೆಲಂಗಾಣದಲ್ಲಿ ವೈಎಸ್ಆರ್‌ಸಿಪಿಗೆ ಯಾವುದೇ ಅಸ್ತಿತ್ವವಿಲ್ಲ ಎಂದು ಅವರು ಒತ್ತಿ ಹೇಳಿದರು. ಅದೇ ವರ್ಷ ಜುಲೈನಲ್ಲಿ, ಅವರು ವೈಎಸ್ಆರ್ ತೆಲಂಗಾಣ ಪಕ್ಷವನ್ನು ಘೋಷಿಸಿ, ಕೆ ಚಂದ್ರಶೇಖರ ರಾವ್ ನೇತೃತ್ವದ ಸರ್ಕಾರದ ವಿರುದ್ಧ ಪ್ರಚಾರ ಪ್ರಾರಂಭಿಸಿದರು.

ಚುನಾವಣೆ ಸಮೀಪಿಸುತ್ತಿದ್ದಂತೆಯೇ ಶರ್ಮಿಳಾ ಅವರು ತೆಲಂಗಾಣ ಚುನಾವಣೆಯಲ್ಲಿ ನಮ್ಮ ಪಕ್ಷ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿ, ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ಸುಸಜ್ಜಿತವಾಗಿದ್ದು, ಅದನ್ನು ಹಾಳು ಮಾಡಲು ನಾನು ಬಯಸುವುದಿಲ್ಲ ಎಂದು ಅವರು ಹೇಳಿದ್ದರು.

ಕಾಂಗ್ರೆಸ್ ಮೂಲಗಳ ಪ್ರಕಾರ, ಆಂಧ್ರದಲ್ಲಿ ಪಕ್ಷದ ಮತಗಳಿಕೆಯು ಕಳೆದ 10 ವರ್ಷಗಳಲ್ಲಿ ಹೀನಾಯವಾಗಿ ಕುಸಿದಿದೆ. ಕೇವಲ ಶೇ.1 ಪ್ರತಿಶತದಷ್ಟು ಮತಬ್ಯಾಂಕ್ ಇದ್ದು, ಶರ್ಮಿಳಾ ಅವರು ತಮ್ಮ ಸಹೋದರನೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದಾರೆ ಮತ್ತು ಅವರ ಪಕ್ಷದ ಚಟುವಟಿಕೆಗಳನ್ನು ಮುಂದುವರಿಸಲು ಹಣಕಾಸಿನ ಕೊರತೆಯನ್ನು ಎದುರಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ; ಜಾರ್ಖಂಡ್: ಜೆಎಂಎಂ ಶಾಸಕ ದಿಢೀರ್ ರಾಜೀನಾಮೆ; ಸೊರೇನ್ ಪತ್ನಿಗೆ ಸಿಎಂ ಪಟ್ಟ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...