Homeಮುಖಪುಟಆಂಧ್ರಪ್ರದೇಶ ಕಾಂಗ್ರೆಸ್‌ಗೆ ವೈ.ಎಸ್. ಶರ್ಮಿಳಾ ನೇತೃತ್ವ; ಸಹೋದರನ ವಿರುದ್ಧ ಸೆಣಸಲು ತಯಾರಿ!

ಆಂಧ್ರಪ್ರದೇಶ ಕಾಂಗ್ರೆಸ್‌ಗೆ ವೈ.ಎಸ್. ಶರ್ಮಿಳಾ ನೇತೃತ್ವ; ಸಹೋದರನ ವಿರುದ್ಧ ಸೆಣಸಲು ತಯಾರಿ!

- Advertisement -
- Advertisement -

ಅವಿಭಜಿತ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ರಾಜಶೇಖರ ರೆಡ್ಡಿ ಪುತ್ರಿ, ವೈಎಸ್ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕ ಅಧ್ಯಕ್ಷೆ ವೈ.ಎಸ್. ಶರ್ಮಿಳಾ ಈ ವಾರ ಕಾಂಗ್ರೆಸ್ ಸೇರಲಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳಿಂದ ತಿಳಿದುಬಂದಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಆಂಧ್ರಪ್ರದೇಶದ ಕಾಂಗ್ರೆಸ್ ನೇತೃತ್ವವನ್ನು ಶರ್ಮಿಳಾ ಅವರಿಗೆ ನೀಡಲು ಕಾಂಗ್ರೆಸ್ ಹೈಕಾಂಡ್ ಮುಂದಾಗಿದೆ ಎನ್ನಲಾಗಿದ್ದು, ತಮ್ಮ ಸಹೋದರ, ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ವಿರುದ್ಧ ಸೆಣಸಲು ಶರ್ಮಿಳಾ ತಯಾರಾಗಿದ್ದಾರೆ ಎನ್ನಲಾಗಿದೆ.

ಕಳೆದ ತಿಂಗಳು ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ್ದು, ರಾಜ್ಯದಲ್ಲಿ ಭಾರತ್ ರಾಷ್ಟ್ರ ಸಮಿತಿ ಪ್ರಾಬಲ್ಯವನ್ನು ಕೊನೆಗೊಳಿಸಿದೆ. ಮುಂದಿನ ಏಪ್ರಿಲ್‌ ಹೊತ್ತಿಗೆ ಆಂಧ್ರಪ್ರದೇಶದಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆ ಒಟ್ಟಿಗೆ ನಡೆಯಲಿದ್ದು, ವೈಎಸ್ಆರ್ ಕಾಂಗ್ರೆಸ್ ಮತ್ತು ತೆಲುಗು ದೇಶಂ ಪಕ್ಷವನ್ನು (ಟಿಡಿಪಿ) ಸೋಲಿಸಲು ಕಾಂಗ್ರೆಸ್ ಪಣ ತೊಟ್ಟಿದೆ.

ಮೂಲಗಳ ಪ್ರಕಾರ, ಚುನಾವಣೆಗೂ ಮುನ್ನ ಆಂಧ್ರಪ್ರದೇಶದ ಕಾಂಗ್ರೆಸ್ ನಾಯಕತ್ವವನ್ನು ಶರ್ಮಿಳಾ ಅವರಿಗೆ ವಹಿಸುವುದಕ್ಕೆ ವರಿಷ್ಠರು ನಿರ್ಧರಿಸಿದ್ದಾರೆ. ರಾಜ್ಯ ವಿಭಜನೆಯ ನಂತರ ಕಾಂಗ್ರೆಸ್ ಎರಡೂ ರಾಜ್ಯಗಳಲ್ಲಿ ಹೀನಾಯವಾಗಿ ಸೋಲು ಕಂಡಿತ್ತು. ತೆಲಂಗಾಣದಲ್ಲಿ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್, ಶರ್ಮಿಳಾ ನಾಯಕತ್ವದ ಮೂಲಕ ಆಂಧ್ರಪ್ರದೇಶದಲ್ಲಿ ಪಕ್ಷವನ್ನು ಪುನಶ್ಚೇತನಗೊಳಿಸುವ ಗುರಿಯನ್ನು ಹೊಂದಿದೆ ಎಂದು ತಿಳಿದುಬಂದಿದೆ. ಪ್ರಮುಖ ವಿರೋಧ ಪಕ್ಷ ತೆಲುಗು ದೇಶಂ ಪಕ್ಷ (ಟಿಡಿಪಿ) ತನ್ನ ಪ್ರಭಾವವನ್ನು ಹಿಡಿದಿಟ್ಟುಕೊಳ್ಳಲು ಹೆಣಗಾಡುತ್ತಿರುವ ಸಮಯದಲ್ಲಿ ವೈಎಸ್ಆರ್‌ಸಿಪಿಯನ್ನು ತೊರೆಯಲು ಸಿದ್ಧರಿರುವವರು ಈಗ ಕಾಂಗ್ರೆಸ್ಸಿಗೆ ಸೇರಬಹುದು ಎಂದು ಪಕ್ಷ ನಿರೀಕ್ಷೆಯಲ್ಲಿದೆ.

ಹೊಸ ರಾಜ್ಯ ರಚನೆಯ ಆಂದೋಲನದ ಹಿನ್ನಲೆಯಲ್ಲಿ ಶರ್ಮಿಳಾ ಸಹೋದರ ಜಗನ್ ಮೋಹನ್ ರೆಡ್ಡಿ ಕಾಂಗ್ರೆಸ್‌ನಿಂದ ಬೇರ್ಪಟ್ಟು ವೈಎಸ್ಆರ್‌ಪಿ ಸ್ಥಾಪಿಸಿದರು. ಅವರೊಂದಿಗೆ 18 ಶಾಸಕರು ಸೇರಿಕೊಂಡರು ಮತ್ತು ಕಾಂಗ್ರೆಸ್ ಸಂಸದರೊಬ್ಬರು ರಾಜೀನಾಮೆ ನೀಡಿದರು. ಇದು ಹಲವು ಉಪಚುನಾವಣೆಗಳಿಗೆ ನಾಂದಿ ಹಾಡಿತು. ಭ್ರಷ್ಟಾಚಾರದ ಆರೋಪದ ಮೇಲೆ ಬಂಧಿತರಾಗಿ ರೆಡ್ಡಿ ಜೈಲಿನಲ್ಲಿದ್ದಾಗ ಅವರ ತಾಯಿ ವೈಎಸ್ ವಿಜಯಮ್ಮ ಮತ್ತು ಸಹೋದರಿ ವೈಎಸ್ ಶರ್ಮಿಳಾ ಪ್ರಚಾರದ ನೇತೃತ್ವ ವಹಿಸಿದ್ದರು. ಚುನಾವಣೆಯಲ್ಲಿ ವೈಎಸ್‌ಆರ್‌ಸಿಪಿ ಮುನ್ನಡೆ ಸಾಧಿಸಿತು.

ಒಂಬತ್ತು ವರ್ಷಗಳ ನಂತರ, 2021 ರಲ್ಲಿ ಶರ್ಮಿಳಾ ಅವರು ತಮ್ಮ ಸಹೋದರನೊಂದಿಗೆ ಇರುವ ರಾಜಕೀಯ ಭಿನ್ನಾಭಿಪ್ರಾಯಗಳ ಬಗ್ಗೆ ಬಹಿರಂಗವಾಗಿ ಮಾತನಾಡಿದರು. ತೆಲಂಗಾಣದಲ್ಲಿ ವೈಎಸ್ಆರ್‌ಸಿಪಿಗೆ ಯಾವುದೇ ಅಸ್ತಿತ್ವವಿಲ್ಲ ಎಂದು ಅವರು ಒತ್ತಿ ಹೇಳಿದರು. ಅದೇ ವರ್ಷ ಜುಲೈನಲ್ಲಿ, ಅವರು ವೈಎಸ್ಆರ್ ತೆಲಂಗಾಣ ಪಕ್ಷವನ್ನು ಘೋಷಿಸಿ, ಕೆ ಚಂದ್ರಶೇಖರ ರಾವ್ ನೇತೃತ್ವದ ಸರ್ಕಾರದ ವಿರುದ್ಧ ಪ್ರಚಾರ ಪ್ರಾರಂಭಿಸಿದರು.

ಚುನಾವಣೆ ಸಮೀಪಿಸುತ್ತಿದ್ದಂತೆಯೇ ಶರ್ಮಿಳಾ ಅವರು ತೆಲಂಗಾಣ ಚುನಾವಣೆಯಲ್ಲಿ ನಮ್ಮ ಪಕ್ಷ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿ, ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ಸುಸಜ್ಜಿತವಾಗಿದ್ದು, ಅದನ್ನು ಹಾಳು ಮಾಡಲು ನಾನು ಬಯಸುವುದಿಲ್ಲ ಎಂದು ಅವರು ಹೇಳಿದ್ದರು.

ಕಾಂಗ್ರೆಸ್ ಮೂಲಗಳ ಪ್ರಕಾರ, ಆಂಧ್ರದಲ್ಲಿ ಪಕ್ಷದ ಮತಗಳಿಕೆಯು ಕಳೆದ 10 ವರ್ಷಗಳಲ್ಲಿ ಹೀನಾಯವಾಗಿ ಕುಸಿದಿದೆ. ಕೇವಲ ಶೇ.1 ಪ್ರತಿಶತದಷ್ಟು ಮತಬ್ಯಾಂಕ್ ಇದ್ದು, ಶರ್ಮಿಳಾ ಅವರು ತಮ್ಮ ಸಹೋದರನೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದಾರೆ ಮತ್ತು ಅವರ ಪಕ್ಷದ ಚಟುವಟಿಕೆಗಳನ್ನು ಮುಂದುವರಿಸಲು ಹಣಕಾಸಿನ ಕೊರತೆಯನ್ನು ಎದುರಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ; ಜಾರ್ಖಂಡ್: ಜೆಎಂಎಂ ಶಾಸಕ ದಿಢೀರ್ ರಾಜೀನಾಮೆ; ಸೊರೇನ್ ಪತ್ನಿಗೆ ಸಿಎಂ ಪಟ್ಟ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...