Homeಮುಖಪುಟಆಂಧ್ರಪ್ರದೇಶ ಕಾಂಗ್ರೆಸ್‌ಗೆ ವೈ.ಎಸ್. ಶರ್ಮಿಳಾ ನೇತೃತ್ವ; ಸಹೋದರನ ವಿರುದ್ಧ ಸೆಣಸಲು ತಯಾರಿ!

ಆಂಧ್ರಪ್ರದೇಶ ಕಾಂಗ್ರೆಸ್‌ಗೆ ವೈ.ಎಸ್. ಶರ್ಮಿಳಾ ನೇತೃತ್ವ; ಸಹೋದರನ ವಿರುದ್ಧ ಸೆಣಸಲು ತಯಾರಿ!

- Advertisement -
- Advertisement -

ಅವಿಭಜಿತ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ರಾಜಶೇಖರ ರೆಡ್ಡಿ ಪುತ್ರಿ, ವೈಎಸ್ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕ ಅಧ್ಯಕ್ಷೆ ವೈ.ಎಸ್. ಶರ್ಮಿಳಾ ಈ ವಾರ ಕಾಂಗ್ರೆಸ್ ಸೇರಲಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳಿಂದ ತಿಳಿದುಬಂದಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಆಂಧ್ರಪ್ರದೇಶದ ಕಾಂಗ್ರೆಸ್ ನೇತೃತ್ವವನ್ನು ಶರ್ಮಿಳಾ ಅವರಿಗೆ ನೀಡಲು ಕಾಂಗ್ರೆಸ್ ಹೈಕಾಂಡ್ ಮುಂದಾಗಿದೆ ಎನ್ನಲಾಗಿದ್ದು, ತಮ್ಮ ಸಹೋದರ, ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ವಿರುದ್ಧ ಸೆಣಸಲು ಶರ್ಮಿಳಾ ತಯಾರಾಗಿದ್ದಾರೆ ಎನ್ನಲಾಗಿದೆ.

ಕಳೆದ ತಿಂಗಳು ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ್ದು, ರಾಜ್ಯದಲ್ಲಿ ಭಾರತ್ ರಾಷ್ಟ್ರ ಸಮಿತಿ ಪ್ರಾಬಲ್ಯವನ್ನು ಕೊನೆಗೊಳಿಸಿದೆ. ಮುಂದಿನ ಏಪ್ರಿಲ್‌ ಹೊತ್ತಿಗೆ ಆಂಧ್ರಪ್ರದೇಶದಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆ ಒಟ್ಟಿಗೆ ನಡೆಯಲಿದ್ದು, ವೈಎಸ್ಆರ್ ಕಾಂಗ್ರೆಸ್ ಮತ್ತು ತೆಲುಗು ದೇಶಂ ಪಕ್ಷವನ್ನು (ಟಿಡಿಪಿ) ಸೋಲಿಸಲು ಕಾಂಗ್ರೆಸ್ ಪಣ ತೊಟ್ಟಿದೆ.

ಮೂಲಗಳ ಪ್ರಕಾರ, ಚುನಾವಣೆಗೂ ಮುನ್ನ ಆಂಧ್ರಪ್ರದೇಶದ ಕಾಂಗ್ರೆಸ್ ನಾಯಕತ್ವವನ್ನು ಶರ್ಮಿಳಾ ಅವರಿಗೆ ವಹಿಸುವುದಕ್ಕೆ ವರಿಷ್ಠರು ನಿರ್ಧರಿಸಿದ್ದಾರೆ. ರಾಜ್ಯ ವಿಭಜನೆಯ ನಂತರ ಕಾಂಗ್ರೆಸ್ ಎರಡೂ ರಾಜ್ಯಗಳಲ್ಲಿ ಹೀನಾಯವಾಗಿ ಸೋಲು ಕಂಡಿತ್ತು. ತೆಲಂಗಾಣದಲ್ಲಿ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್, ಶರ್ಮಿಳಾ ನಾಯಕತ್ವದ ಮೂಲಕ ಆಂಧ್ರಪ್ರದೇಶದಲ್ಲಿ ಪಕ್ಷವನ್ನು ಪುನಶ್ಚೇತನಗೊಳಿಸುವ ಗುರಿಯನ್ನು ಹೊಂದಿದೆ ಎಂದು ತಿಳಿದುಬಂದಿದೆ. ಪ್ರಮುಖ ವಿರೋಧ ಪಕ್ಷ ತೆಲುಗು ದೇಶಂ ಪಕ್ಷ (ಟಿಡಿಪಿ) ತನ್ನ ಪ್ರಭಾವವನ್ನು ಹಿಡಿದಿಟ್ಟುಕೊಳ್ಳಲು ಹೆಣಗಾಡುತ್ತಿರುವ ಸಮಯದಲ್ಲಿ ವೈಎಸ್ಆರ್‌ಸಿಪಿಯನ್ನು ತೊರೆಯಲು ಸಿದ್ಧರಿರುವವರು ಈಗ ಕಾಂಗ್ರೆಸ್ಸಿಗೆ ಸೇರಬಹುದು ಎಂದು ಪಕ್ಷ ನಿರೀಕ್ಷೆಯಲ್ಲಿದೆ.

ಹೊಸ ರಾಜ್ಯ ರಚನೆಯ ಆಂದೋಲನದ ಹಿನ್ನಲೆಯಲ್ಲಿ ಶರ್ಮಿಳಾ ಸಹೋದರ ಜಗನ್ ಮೋಹನ್ ರೆಡ್ಡಿ ಕಾಂಗ್ರೆಸ್‌ನಿಂದ ಬೇರ್ಪಟ್ಟು ವೈಎಸ್ಆರ್‌ಪಿ ಸ್ಥಾಪಿಸಿದರು. ಅವರೊಂದಿಗೆ 18 ಶಾಸಕರು ಸೇರಿಕೊಂಡರು ಮತ್ತು ಕಾಂಗ್ರೆಸ್ ಸಂಸದರೊಬ್ಬರು ರಾಜೀನಾಮೆ ನೀಡಿದರು. ಇದು ಹಲವು ಉಪಚುನಾವಣೆಗಳಿಗೆ ನಾಂದಿ ಹಾಡಿತು. ಭ್ರಷ್ಟಾಚಾರದ ಆರೋಪದ ಮೇಲೆ ಬಂಧಿತರಾಗಿ ರೆಡ್ಡಿ ಜೈಲಿನಲ್ಲಿದ್ದಾಗ ಅವರ ತಾಯಿ ವೈಎಸ್ ವಿಜಯಮ್ಮ ಮತ್ತು ಸಹೋದರಿ ವೈಎಸ್ ಶರ್ಮಿಳಾ ಪ್ರಚಾರದ ನೇತೃತ್ವ ವಹಿಸಿದ್ದರು. ಚುನಾವಣೆಯಲ್ಲಿ ವೈಎಸ್‌ಆರ್‌ಸಿಪಿ ಮುನ್ನಡೆ ಸಾಧಿಸಿತು.

ಒಂಬತ್ತು ವರ್ಷಗಳ ನಂತರ, 2021 ರಲ್ಲಿ ಶರ್ಮಿಳಾ ಅವರು ತಮ್ಮ ಸಹೋದರನೊಂದಿಗೆ ಇರುವ ರಾಜಕೀಯ ಭಿನ್ನಾಭಿಪ್ರಾಯಗಳ ಬಗ್ಗೆ ಬಹಿರಂಗವಾಗಿ ಮಾತನಾಡಿದರು. ತೆಲಂಗಾಣದಲ್ಲಿ ವೈಎಸ್ಆರ್‌ಸಿಪಿಗೆ ಯಾವುದೇ ಅಸ್ತಿತ್ವವಿಲ್ಲ ಎಂದು ಅವರು ಒತ್ತಿ ಹೇಳಿದರು. ಅದೇ ವರ್ಷ ಜುಲೈನಲ್ಲಿ, ಅವರು ವೈಎಸ್ಆರ್ ತೆಲಂಗಾಣ ಪಕ್ಷವನ್ನು ಘೋಷಿಸಿ, ಕೆ ಚಂದ್ರಶೇಖರ ರಾವ್ ನೇತೃತ್ವದ ಸರ್ಕಾರದ ವಿರುದ್ಧ ಪ್ರಚಾರ ಪ್ರಾರಂಭಿಸಿದರು.

ಚುನಾವಣೆ ಸಮೀಪಿಸುತ್ತಿದ್ದಂತೆಯೇ ಶರ್ಮಿಳಾ ಅವರು ತೆಲಂಗಾಣ ಚುನಾವಣೆಯಲ್ಲಿ ನಮ್ಮ ಪಕ್ಷ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿ, ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ಸುಸಜ್ಜಿತವಾಗಿದ್ದು, ಅದನ್ನು ಹಾಳು ಮಾಡಲು ನಾನು ಬಯಸುವುದಿಲ್ಲ ಎಂದು ಅವರು ಹೇಳಿದ್ದರು.

ಕಾಂಗ್ರೆಸ್ ಮೂಲಗಳ ಪ್ರಕಾರ, ಆಂಧ್ರದಲ್ಲಿ ಪಕ್ಷದ ಮತಗಳಿಕೆಯು ಕಳೆದ 10 ವರ್ಷಗಳಲ್ಲಿ ಹೀನಾಯವಾಗಿ ಕುಸಿದಿದೆ. ಕೇವಲ ಶೇ.1 ಪ್ರತಿಶತದಷ್ಟು ಮತಬ್ಯಾಂಕ್ ಇದ್ದು, ಶರ್ಮಿಳಾ ಅವರು ತಮ್ಮ ಸಹೋದರನೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದಾರೆ ಮತ್ತು ಅವರ ಪಕ್ಷದ ಚಟುವಟಿಕೆಗಳನ್ನು ಮುಂದುವರಿಸಲು ಹಣಕಾಸಿನ ಕೊರತೆಯನ್ನು ಎದುರಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ; ಜಾರ್ಖಂಡ್: ಜೆಎಂಎಂ ಶಾಸಕ ದಿಢೀರ್ ರಾಜೀನಾಮೆ; ಸೊರೇನ್ ಪತ್ನಿಗೆ ಸಿಎಂ ಪಟ್ಟ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...