Homeಮುಖಪುಟಆಂಧ್ರಪ್ರದೇಶ ಕಾಂಗ್ರೆಸ್‌ಗೆ ವೈ.ಎಸ್. ಶರ್ಮಿಳಾ ನೇತೃತ್ವ; ಸಹೋದರನ ವಿರುದ್ಧ ಸೆಣಸಲು ತಯಾರಿ!

ಆಂಧ್ರಪ್ರದೇಶ ಕಾಂಗ್ರೆಸ್‌ಗೆ ವೈ.ಎಸ್. ಶರ್ಮಿಳಾ ನೇತೃತ್ವ; ಸಹೋದರನ ವಿರುದ್ಧ ಸೆಣಸಲು ತಯಾರಿ!

- Advertisement -
- Advertisement -

ಅವಿಭಜಿತ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ರಾಜಶೇಖರ ರೆಡ್ಡಿ ಪುತ್ರಿ, ವೈಎಸ್ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕ ಅಧ್ಯಕ್ಷೆ ವೈ.ಎಸ್. ಶರ್ಮಿಳಾ ಈ ವಾರ ಕಾಂಗ್ರೆಸ್ ಸೇರಲಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳಿಂದ ತಿಳಿದುಬಂದಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಆಂಧ್ರಪ್ರದೇಶದ ಕಾಂಗ್ರೆಸ್ ನೇತೃತ್ವವನ್ನು ಶರ್ಮಿಳಾ ಅವರಿಗೆ ನೀಡಲು ಕಾಂಗ್ರೆಸ್ ಹೈಕಾಂಡ್ ಮುಂದಾಗಿದೆ ಎನ್ನಲಾಗಿದ್ದು, ತಮ್ಮ ಸಹೋದರ, ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ವಿರುದ್ಧ ಸೆಣಸಲು ಶರ್ಮಿಳಾ ತಯಾರಾಗಿದ್ದಾರೆ ಎನ್ನಲಾಗಿದೆ.

ಕಳೆದ ತಿಂಗಳು ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ್ದು, ರಾಜ್ಯದಲ್ಲಿ ಭಾರತ್ ರಾಷ್ಟ್ರ ಸಮಿತಿ ಪ್ರಾಬಲ್ಯವನ್ನು ಕೊನೆಗೊಳಿಸಿದೆ. ಮುಂದಿನ ಏಪ್ರಿಲ್‌ ಹೊತ್ತಿಗೆ ಆಂಧ್ರಪ್ರದೇಶದಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆ ಒಟ್ಟಿಗೆ ನಡೆಯಲಿದ್ದು, ವೈಎಸ್ಆರ್ ಕಾಂಗ್ರೆಸ್ ಮತ್ತು ತೆಲುಗು ದೇಶಂ ಪಕ್ಷವನ್ನು (ಟಿಡಿಪಿ) ಸೋಲಿಸಲು ಕಾಂಗ್ರೆಸ್ ಪಣ ತೊಟ್ಟಿದೆ.

ಮೂಲಗಳ ಪ್ರಕಾರ, ಚುನಾವಣೆಗೂ ಮುನ್ನ ಆಂಧ್ರಪ್ರದೇಶದ ಕಾಂಗ್ರೆಸ್ ನಾಯಕತ್ವವನ್ನು ಶರ್ಮಿಳಾ ಅವರಿಗೆ ವಹಿಸುವುದಕ್ಕೆ ವರಿಷ್ಠರು ನಿರ್ಧರಿಸಿದ್ದಾರೆ. ರಾಜ್ಯ ವಿಭಜನೆಯ ನಂತರ ಕಾಂಗ್ರೆಸ್ ಎರಡೂ ರಾಜ್ಯಗಳಲ್ಲಿ ಹೀನಾಯವಾಗಿ ಸೋಲು ಕಂಡಿತ್ತು. ತೆಲಂಗಾಣದಲ್ಲಿ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್, ಶರ್ಮಿಳಾ ನಾಯಕತ್ವದ ಮೂಲಕ ಆಂಧ್ರಪ್ರದೇಶದಲ್ಲಿ ಪಕ್ಷವನ್ನು ಪುನಶ್ಚೇತನಗೊಳಿಸುವ ಗುರಿಯನ್ನು ಹೊಂದಿದೆ ಎಂದು ತಿಳಿದುಬಂದಿದೆ. ಪ್ರಮುಖ ವಿರೋಧ ಪಕ್ಷ ತೆಲುಗು ದೇಶಂ ಪಕ್ಷ (ಟಿಡಿಪಿ) ತನ್ನ ಪ್ರಭಾವವನ್ನು ಹಿಡಿದಿಟ್ಟುಕೊಳ್ಳಲು ಹೆಣಗಾಡುತ್ತಿರುವ ಸಮಯದಲ್ಲಿ ವೈಎಸ್ಆರ್‌ಸಿಪಿಯನ್ನು ತೊರೆಯಲು ಸಿದ್ಧರಿರುವವರು ಈಗ ಕಾಂಗ್ರೆಸ್ಸಿಗೆ ಸೇರಬಹುದು ಎಂದು ಪಕ್ಷ ನಿರೀಕ್ಷೆಯಲ್ಲಿದೆ.

ಹೊಸ ರಾಜ್ಯ ರಚನೆಯ ಆಂದೋಲನದ ಹಿನ್ನಲೆಯಲ್ಲಿ ಶರ್ಮಿಳಾ ಸಹೋದರ ಜಗನ್ ಮೋಹನ್ ರೆಡ್ಡಿ ಕಾಂಗ್ರೆಸ್‌ನಿಂದ ಬೇರ್ಪಟ್ಟು ವೈಎಸ್ಆರ್‌ಪಿ ಸ್ಥಾಪಿಸಿದರು. ಅವರೊಂದಿಗೆ 18 ಶಾಸಕರು ಸೇರಿಕೊಂಡರು ಮತ್ತು ಕಾಂಗ್ರೆಸ್ ಸಂಸದರೊಬ್ಬರು ರಾಜೀನಾಮೆ ನೀಡಿದರು. ಇದು ಹಲವು ಉಪಚುನಾವಣೆಗಳಿಗೆ ನಾಂದಿ ಹಾಡಿತು. ಭ್ರಷ್ಟಾಚಾರದ ಆರೋಪದ ಮೇಲೆ ಬಂಧಿತರಾಗಿ ರೆಡ್ಡಿ ಜೈಲಿನಲ್ಲಿದ್ದಾಗ ಅವರ ತಾಯಿ ವೈಎಸ್ ವಿಜಯಮ್ಮ ಮತ್ತು ಸಹೋದರಿ ವೈಎಸ್ ಶರ್ಮಿಳಾ ಪ್ರಚಾರದ ನೇತೃತ್ವ ವಹಿಸಿದ್ದರು. ಚುನಾವಣೆಯಲ್ಲಿ ವೈಎಸ್‌ಆರ್‌ಸಿಪಿ ಮುನ್ನಡೆ ಸಾಧಿಸಿತು.

ಒಂಬತ್ತು ವರ್ಷಗಳ ನಂತರ, 2021 ರಲ್ಲಿ ಶರ್ಮಿಳಾ ಅವರು ತಮ್ಮ ಸಹೋದರನೊಂದಿಗೆ ಇರುವ ರಾಜಕೀಯ ಭಿನ್ನಾಭಿಪ್ರಾಯಗಳ ಬಗ್ಗೆ ಬಹಿರಂಗವಾಗಿ ಮಾತನಾಡಿದರು. ತೆಲಂಗಾಣದಲ್ಲಿ ವೈಎಸ್ಆರ್‌ಸಿಪಿಗೆ ಯಾವುದೇ ಅಸ್ತಿತ್ವವಿಲ್ಲ ಎಂದು ಅವರು ಒತ್ತಿ ಹೇಳಿದರು. ಅದೇ ವರ್ಷ ಜುಲೈನಲ್ಲಿ, ಅವರು ವೈಎಸ್ಆರ್ ತೆಲಂಗಾಣ ಪಕ್ಷವನ್ನು ಘೋಷಿಸಿ, ಕೆ ಚಂದ್ರಶೇಖರ ರಾವ್ ನೇತೃತ್ವದ ಸರ್ಕಾರದ ವಿರುದ್ಧ ಪ್ರಚಾರ ಪ್ರಾರಂಭಿಸಿದರು.

ಚುನಾವಣೆ ಸಮೀಪಿಸುತ್ತಿದ್ದಂತೆಯೇ ಶರ್ಮಿಳಾ ಅವರು ತೆಲಂಗಾಣ ಚುನಾವಣೆಯಲ್ಲಿ ನಮ್ಮ ಪಕ್ಷ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿ, ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ಸುಸಜ್ಜಿತವಾಗಿದ್ದು, ಅದನ್ನು ಹಾಳು ಮಾಡಲು ನಾನು ಬಯಸುವುದಿಲ್ಲ ಎಂದು ಅವರು ಹೇಳಿದ್ದರು.

ಕಾಂಗ್ರೆಸ್ ಮೂಲಗಳ ಪ್ರಕಾರ, ಆಂಧ್ರದಲ್ಲಿ ಪಕ್ಷದ ಮತಗಳಿಕೆಯು ಕಳೆದ 10 ವರ್ಷಗಳಲ್ಲಿ ಹೀನಾಯವಾಗಿ ಕುಸಿದಿದೆ. ಕೇವಲ ಶೇ.1 ಪ್ರತಿಶತದಷ್ಟು ಮತಬ್ಯಾಂಕ್ ಇದ್ದು, ಶರ್ಮಿಳಾ ಅವರು ತಮ್ಮ ಸಹೋದರನೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದಾರೆ ಮತ್ತು ಅವರ ಪಕ್ಷದ ಚಟುವಟಿಕೆಗಳನ್ನು ಮುಂದುವರಿಸಲು ಹಣಕಾಸಿನ ಕೊರತೆಯನ್ನು ಎದುರಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ; ಜಾರ್ಖಂಡ್: ಜೆಎಂಎಂ ಶಾಸಕ ದಿಢೀರ್ ರಾಜೀನಾಮೆ; ಸೊರೇನ್ ಪತ್ನಿಗೆ ಸಿಎಂ ಪಟ್ಟ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...