Homeಮುಖಪುಟಈ ಬಜೆಟ್ ಶ್ರೀಮಂತರು ಮತ್ತು ಕಾರ್ಪೋರೇಟ್‌‌ಗಳಿಗೆ ಮಾತ್ರ: ನೆಟ್ಟಿಗರ ಆಕ್ರೋಶ

ಈ ಬಜೆಟ್ ಶ್ರೀಮಂತರು ಮತ್ತು ಕಾರ್ಪೋರೇಟ್‌‌ಗಳಿಗೆ ಮಾತ್ರ: ನೆಟ್ಟಿಗರ ಆಕ್ರೋಶ

- Advertisement -
- Advertisement -

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ (ಇಂದು) 2021–22ನೇ ಸಾಲಿನ ಕೇಂದ್ರ ಬಜೆಟ್‌ ಮಂಡಿಸಿದ್ದಾರೆ. ಕೊರೊನಾ ಹಿನ್ನಲೆಯಲ್ಲಿ ಎಂದಿನ ಸಂಪ್ರದಾಯವನ್ನು ಮುರಿದು ಈ ಬಾರಿ ಕಾಗದ ರಹಿತ ಬಜೆಟ್ ಮಂಡನೆ ಮಾಡಲಾಗಿದೆ. ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರದ ಎರಡನೇ ಅವಧಿಯ ಮೂರನೆ ಬಜೆಟ್ ಇದಾಗಿದೆ. ಅಲ್ಲದೆ, ಹಣಕಾಸು ಸಚಿವೆಯಾಗಿ ಇದು ನಿರ್ಮಲಾ ಸೀತಾರಾಮ್ ಮಂಡಿಸುವ ಮೂರನೆ ಬಜೆಟ್ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ನಾಯಕರು, ಸಾಮಾಜಿಕ ಕಾರ್ಯಕರ್ತರು ಸೇರಿದಂತೆ ಹಲವಾರು ಜನರು ಪ್ರತಿಕ್ರಿಯೆ ನೀಡಿದ್ದಾರೆ. ಬಜೆಟ್ ಮಂಡಿಸುತ್ತಿದ್ದಂತೆ ಶೇರು ಸೂಚ್ಯಾಂಕ 5% ಹೆಚ್ಚಳವಾಗಿದೆ. ಈ ಹಿನ್ನಲೆಯಲ್ಲಿ ಈ ಬಜೆಟ್ ಯಾರಿಗೆ ಎಂದು ಸ್ಪಷ್ಟವಾಗುತ್ತಿದೆ, ಇದು ಬಂಡವಾಳಶಾಹಿಗಳಿಗೆ ಮತ್ತು ಶ್ರೀಮಂತರ ಪರವಿರುವ ಬಜೆಟ್ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತದ ಸಂಪತ್ತನ್ನು ಮೋದಿ ತನ್ನ ಕ್ರೋನಿ ಕ್ಯಾಪಿಟಲಿಸ್ಟ್‌ ಗೆಳೆಯರಿಗೆ ಧಾರೆಯೆರೆಯುತ್ತಿದ್ದಾರೆ: ರಾಹುಲ್ ಗಾಂಧಿ

ಕಾಂಗ್ರೆಸ್ ಸಂಸದ ಶಶಿ ತರೂರ್‌, “ಬಿಜೆಪಿ ಸರ್ಕಾರವು ಕೆಲಸ ಮಾಡಲು ಗೊತ್ತಿಲ್ಲದ ಗ್ಯಾರೇಜ್ ಮೆಕ್ಯಾನಿಕ್‌ನನ್ನು ನೆನಪಿಸುತ್ತದೆ. ಅವನು ತನ್ನ ಗ್ರಾಹಕರಿಗೆ ’ನನಗೆ ನಿಮ್ಮ ಬ್ರೇಕ್‌ಗಳನ್ನು ಸರಿಪಡಿಸಲು ಸಾಧ್ಯವಾಗಲಿಲ್ಲ, ಆದ್ದರಿಂದ ನಾನು ನಿಮ್ಮ ಹಾರ್ನ್ ಸದ್ದನ್ನು ಜೋರಾಗಿ ಮಾಡಿದೆ’ ಎಂದು ಹೇಳಿದ್ದನ್ನು ನೆನಪಿಸುತ್ತದೆ” ಎಂದು ವ್ಯಂಗ್ಯವಾಡಿದ್ದಾರೆ.

ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ, “ಬಜೆಟ್ ದಿನದಂದು ಮೋದಿ ಸರ್ಕಾರವು ಭಾರತವನ್ನು ಬೆರಳೆಣಿಕೆಯಷ್ಟು ಕಾರ್ಪೊರೇಟ್‌ಗಳಿಗೆ ಮಾರಾಟ ಮಾಡಲು ನಿರ್ಧರಿಸಿದೆ. ಅಲ್ಲದೆ ಹಲವಾರು ರೈತ ಪರ, ಬಡವರ ಪರ, ಜಾತಿ ವಿರೋಧಿ ಧ್ವನಿಗಳನ್ನು ಟ್ವಿಟರ್‌ನಲ್ಲಿ ತಡೆಹಿಡಿದಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತ ಹೋರಾಟಕ್ಕೆ ಬೆಂಬಲ ನೀಡುವ ಹಲವಾರು ಸಮಾಜಿಕ ಕಾರ್ಯಕರ್ತರ ಹಾಗೂ ಪತ್ರಿಕೆಗಳ ಟ್ವಿಟ್ಟರ್‌ ಅಕೌಂಟುಗಳಿಗೆ ಟ್ವಿಟ್ಟರ್‌ ಈಗಷ್ಟೇ ತಡೆ ಮಾಡಿದೆ.

ಇದನ್ನೂ ಓದಿ: ರಾಕೇಶ್ ಟಿಕಾಯತ್ (2013-21)ರನ್ನು ಅರ್ಥ ಮಾಡಿಕೊಳ್ಳುವುದು ಹೇಗೆ? ‘ಹರ್ ಹರ್ ಮಹಾದೇವ್, ಅಲ್ಲಾಹು ಅಕ್ಬರ್’…

ಬಿಹಾರ ವಿಧಾನ ಸಭೆಯ ವಿಪಕ್ಷ ನಾಯಕ ತೇಜಸ್ವಿ ಯಾದವ್‌, “ಇದು ದೇಶವನ್ನು ಮಾರಾಟ ಮಾಡುವ ಬಜೆಟ್. ಇದು ಸರ್ಕಾರಿ ಸಂಸ್ಥೆಗಳು ಮತ್ತು ಆಸ್ತಿಗಳನ್ನು ಮಾರಾಟ ಮಾಡುವ ಸೇಲ್ ಆಗಿದ್ದು, ಇದು ಬಜೆಟ್ ಅಲ್ಲ. ರೈಲು, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣ, ಕೆಂಪು ಕೋಟೆ, ಬಿಎಸ್ಎನ್ಎಲ್, ಎಲ್ಐಸಿ ಮಾರಾಟ ಮಾಡಿದ ನಂತರ, ಬಿಜೆಪಿ ಈಗ ಬ್ಯಾಂಕುಗಳು, ಬಂದರುಗಳು, ವಿದ್ಯುತ್ ಮಾರ್ಗಗಳು , ರಾಷ್ಟ್ರೀಯ ರಸ್ತೆಗಳು, ಕ್ರೀಡಾಂಗಣ, ತೈಲ ಪೈಪ್‌ಲೈನ್‌ನಿಂದ ಗೋದಾಮಿನವರೆಗೆ ಬಿಜೆಪಿ ಮಾರಾಟ ಮಾಡಲು ನಿರ್ಧರಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ವರಾಜ್ ಇಂಡಿಯಾ ಮುಖ್ಯಸ್ಥ ಯೋಗೇಂದ್ರ ಯಾದವ್, “2020-21 ರಲ್ಲಿ ಪಿಎಂ ಕಿಸಾನ್‌‌ ಯೋಜನೆಯು 75 ಸಾವಿರದಿಂದ 2021-22ರಲ್ಲಿ 65 ಸಾವಿರಕ್ಕೆ ಇಳಿದಿದೆ. ಮಾರುಕಟ್ಟೆ ಹಸ್ತಕ್ಷೇಪ ಯೋಜನೆ ಮತ್ತು ಬೆಲೆ ಬೆಂಬಲ ಯೋಜನೆಗೆ (ಎಂಐಎಸ್-ಪಿಎಸ್ಎಸ್) ಬಜೆಟ್‌ನಲ್ಲಿ 2000 ಕೋಟಿಯಿಂದ 1501 ಕೋಟಿಗೆ ಇಳಿಸಲಾಗಿದೆ. ಇದು ಬಜೆಟ್ ಭಾಷಣವನ್ನು ಮೀರಿದ ನಿಜವಾದ ಬಜೆಟ್ ಸುದ್ದಿ!” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಿಸಾನ್‌ ಏಕ್ತಾ ಮೋರ್ಚಾ ಸೇರಿ ಹಲವರ ಟ್ವಿಟರ್‌ ಖಾತೆ ತಾತ್ಕಾಲಿಕ ಅಮಾನತು! ಭುಗಿಲೆದ್ದ ಆಕ್ರೋಶ

ಸಿಪಿಐಎಂ ಪಕ್ಷವು, “ಆತ್ಮನಿರ್ಭರ್ ಹೆಸರಿನಲ್ಲಿ, ಸರ್ಕಾರವು ಖಾಸಗೀಕರಣಕ್ಕೆ ಮುಂದಾಗಿದೆ. ವಿಮೆಯಲ್ಲಿ ಎಫ್‌ಡಿಐ, ರೈಲ್ವೆಯಲ್ಲಿ ಪಿಪಿಪಿ ಮಾದರಿ. ಈ ಬಜೆಟ್ ಕಾರ್ಪೋರೇಟ್‌ಗಳಿಗೆ ಮಾತ್ರ” ಎಂದು ಹೇಳಿದೆ.

ಆವಿ ಎಂಬ ಟ್ವಿಟ್ಟರ್‌ ಅಕೌಂಟ್, “ಶೇರುಪೇಟೆ ಶೂಚ್ಯಂಕ 5% ಹೆಚ್ಚಾಗಿದೆ. ಈ ಬಜೆಟ್‌‌ನಿಂದ ಯಾರಿಗೆ ಖುಷಿಯಾಗಿದೆ ಎಂದು ತಿಳಿಯುತ್ತದೆ. ಶ್ರೀಮಂತರು ಮತ್ತು ಬಂಡವಾಳಶಾಹಿಗಳು ಮಾತ್ರ ಎಂದು ಹೇಳಿದೆ.

ಇದನ್ನೂ ಓದಿ: ಕೇಂದ್ರ ಮಿನಿ ಬಜೆಟ್‌ 2021: ಇಲ್ಲಿವೆ ಪ್ರಮುಖಾಂಶಗಳು

 

ಇದನ್ನೂ ಓದಿ: ವಿದೇಶಿ ಕಂಪನಿಗಳು ಈ ನೆಲದ ಕಾನೂನನ್ನು ಗೌರವಿಸಲಿ: ಟೊಯೊಟಾ ಕಾರ್ಮಿಕರ ಹೊರಾಟದಲ್ಲಿ ಸಿದ್ದರಾಮಯ್ಯ

ವಿಧಾನಸಭಾ ಅಧಿವೇಶನದ ಲೈವ್‌ ವಿಡಿಯೋ►►

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...