Homeಮುಖಪುಟಈ ಬಜೆಟ್ ಶ್ರೀಮಂತರು ಮತ್ತು ಕಾರ್ಪೋರೇಟ್‌‌ಗಳಿಗೆ ಮಾತ್ರ: ನೆಟ್ಟಿಗರ ಆಕ್ರೋಶ

ಈ ಬಜೆಟ್ ಶ್ರೀಮಂತರು ಮತ್ತು ಕಾರ್ಪೋರೇಟ್‌‌ಗಳಿಗೆ ಮಾತ್ರ: ನೆಟ್ಟಿಗರ ಆಕ್ರೋಶ

- Advertisement -
- Advertisement -

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ (ಇಂದು) 2021–22ನೇ ಸಾಲಿನ ಕೇಂದ್ರ ಬಜೆಟ್‌ ಮಂಡಿಸಿದ್ದಾರೆ. ಕೊರೊನಾ ಹಿನ್ನಲೆಯಲ್ಲಿ ಎಂದಿನ ಸಂಪ್ರದಾಯವನ್ನು ಮುರಿದು ಈ ಬಾರಿ ಕಾಗದ ರಹಿತ ಬಜೆಟ್ ಮಂಡನೆ ಮಾಡಲಾಗಿದೆ. ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರದ ಎರಡನೇ ಅವಧಿಯ ಮೂರನೆ ಬಜೆಟ್ ಇದಾಗಿದೆ. ಅಲ್ಲದೆ, ಹಣಕಾಸು ಸಚಿವೆಯಾಗಿ ಇದು ನಿರ್ಮಲಾ ಸೀತಾರಾಮ್ ಮಂಡಿಸುವ ಮೂರನೆ ಬಜೆಟ್ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ನಾಯಕರು, ಸಾಮಾಜಿಕ ಕಾರ್ಯಕರ್ತರು ಸೇರಿದಂತೆ ಹಲವಾರು ಜನರು ಪ್ರತಿಕ್ರಿಯೆ ನೀಡಿದ್ದಾರೆ. ಬಜೆಟ್ ಮಂಡಿಸುತ್ತಿದ್ದಂತೆ ಶೇರು ಸೂಚ್ಯಾಂಕ 5% ಹೆಚ್ಚಳವಾಗಿದೆ. ಈ ಹಿನ್ನಲೆಯಲ್ಲಿ ಈ ಬಜೆಟ್ ಯಾರಿಗೆ ಎಂದು ಸ್ಪಷ್ಟವಾಗುತ್ತಿದೆ, ಇದು ಬಂಡವಾಳಶಾಹಿಗಳಿಗೆ ಮತ್ತು ಶ್ರೀಮಂತರ ಪರವಿರುವ ಬಜೆಟ್ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತದ ಸಂಪತ್ತನ್ನು ಮೋದಿ ತನ್ನ ಕ್ರೋನಿ ಕ್ಯಾಪಿಟಲಿಸ್ಟ್‌ ಗೆಳೆಯರಿಗೆ ಧಾರೆಯೆರೆಯುತ್ತಿದ್ದಾರೆ: ರಾಹುಲ್ ಗಾಂಧಿ

ಕಾಂಗ್ರೆಸ್ ಸಂಸದ ಶಶಿ ತರೂರ್‌, “ಬಿಜೆಪಿ ಸರ್ಕಾರವು ಕೆಲಸ ಮಾಡಲು ಗೊತ್ತಿಲ್ಲದ ಗ್ಯಾರೇಜ್ ಮೆಕ್ಯಾನಿಕ್‌ನನ್ನು ನೆನಪಿಸುತ್ತದೆ. ಅವನು ತನ್ನ ಗ್ರಾಹಕರಿಗೆ ’ನನಗೆ ನಿಮ್ಮ ಬ್ರೇಕ್‌ಗಳನ್ನು ಸರಿಪಡಿಸಲು ಸಾಧ್ಯವಾಗಲಿಲ್ಲ, ಆದ್ದರಿಂದ ನಾನು ನಿಮ್ಮ ಹಾರ್ನ್ ಸದ್ದನ್ನು ಜೋರಾಗಿ ಮಾಡಿದೆ’ ಎಂದು ಹೇಳಿದ್ದನ್ನು ನೆನಪಿಸುತ್ತದೆ” ಎಂದು ವ್ಯಂಗ್ಯವಾಡಿದ್ದಾರೆ.

ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ, “ಬಜೆಟ್ ದಿನದಂದು ಮೋದಿ ಸರ್ಕಾರವು ಭಾರತವನ್ನು ಬೆರಳೆಣಿಕೆಯಷ್ಟು ಕಾರ್ಪೊರೇಟ್‌ಗಳಿಗೆ ಮಾರಾಟ ಮಾಡಲು ನಿರ್ಧರಿಸಿದೆ. ಅಲ್ಲದೆ ಹಲವಾರು ರೈತ ಪರ, ಬಡವರ ಪರ, ಜಾತಿ ವಿರೋಧಿ ಧ್ವನಿಗಳನ್ನು ಟ್ವಿಟರ್‌ನಲ್ಲಿ ತಡೆಹಿಡಿದಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತ ಹೋರಾಟಕ್ಕೆ ಬೆಂಬಲ ನೀಡುವ ಹಲವಾರು ಸಮಾಜಿಕ ಕಾರ್ಯಕರ್ತರ ಹಾಗೂ ಪತ್ರಿಕೆಗಳ ಟ್ವಿಟ್ಟರ್‌ ಅಕೌಂಟುಗಳಿಗೆ ಟ್ವಿಟ್ಟರ್‌ ಈಗಷ್ಟೇ ತಡೆ ಮಾಡಿದೆ.

ಇದನ್ನೂ ಓದಿ: ರಾಕೇಶ್ ಟಿಕಾಯತ್ (2013-21)ರನ್ನು ಅರ್ಥ ಮಾಡಿಕೊಳ್ಳುವುದು ಹೇಗೆ? ‘ಹರ್ ಹರ್ ಮಹಾದೇವ್, ಅಲ್ಲಾಹು ಅಕ್ಬರ್’…

ಬಿಹಾರ ವಿಧಾನ ಸಭೆಯ ವಿಪಕ್ಷ ನಾಯಕ ತೇಜಸ್ವಿ ಯಾದವ್‌, “ಇದು ದೇಶವನ್ನು ಮಾರಾಟ ಮಾಡುವ ಬಜೆಟ್. ಇದು ಸರ್ಕಾರಿ ಸಂಸ್ಥೆಗಳು ಮತ್ತು ಆಸ್ತಿಗಳನ್ನು ಮಾರಾಟ ಮಾಡುವ ಸೇಲ್ ಆಗಿದ್ದು, ಇದು ಬಜೆಟ್ ಅಲ್ಲ. ರೈಲು, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣ, ಕೆಂಪು ಕೋಟೆ, ಬಿಎಸ್ಎನ್ಎಲ್, ಎಲ್ಐಸಿ ಮಾರಾಟ ಮಾಡಿದ ನಂತರ, ಬಿಜೆಪಿ ಈಗ ಬ್ಯಾಂಕುಗಳು, ಬಂದರುಗಳು, ವಿದ್ಯುತ್ ಮಾರ್ಗಗಳು , ರಾಷ್ಟ್ರೀಯ ರಸ್ತೆಗಳು, ಕ್ರೀಡಾಂಗಣ, ತೈಲ ಪೈಪ್‌ಲೈನ್‌ನಿಂದ ಗೋದಾಮಿನವರೆಗೆ ಬಿಜೆಪಿ ಮಾರಾಟ ಮಾಡಲು ನಿರ್ಧರಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ವರಾಜ್ ಇಂಡಿಯಾ ಮುಖ್ಯಸ್ಥ ಯೋಗೇಂದ್ರ ಯಾದವ್, “2020-21 ರಲ್ಲಿ ಪಿಎಂ ಕಿಸಾನ್‌‌ ಯೋಜನೆಯು 75 ಸಾವಿರದಿಂದ 2021-22ರಲ್ಲಿ 65 ಸಾವಿರಕ್ಕೆ ಇಳಿದಿದೆ. ಮಾರುಕಟ್ಟೆ ಹಸ್ತಕ್ಷೇಪ ಯೋಜನೆ ಮತ್ತು ಬೆಲೆ ಬೆಂಬಲ ಯೋಜನೆಗೆ (ಎಂಐಎಸ್-ಪಿಎಸ್ಎಸ್) ಬಜೆಟ್‌ನಲ್ಲಿ 2000 ಕೋಟಿಯಿಂದ 1501 ಕೋಟಿಗೆ ಇಳಿಸಲಾಗಿದೆ. ಇದು ಬಜೆಟ್ ಭಾಷಣವನ್ನು ಮೀರಿದ ನಿಜವಾದ ಬಜೆಟ್ ಸುದ್ದಿ!” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಿಸಾನ್‌ ಏಕ್ತಾ ಮೋರ್ಚಾ ಸೇರಿ ಹಲವರ ಟ್ವಿಟರ್‌ ಖಾತೆ ತಾತ್ಕಾಲಿಕ ಅಮಾನತು! ಭುಗಿಲೆದ್ದ ಆಕ್ರೋಶ

ಸಿಪಿಐಎಂ ಪಕ್ಷವು, “ಆತ್ಮನಿರ್ಭರ್ ಹೆಸರಿನಲ್ಲಿ, ಸರ್ಕಾರವು ಖಾಸಗೀಕರಣಕ್ಕೆ ಮುಂದಾಗಿದೆ. ವಿಮೆಯಲ್ಲಿ ಎಫ್‌ಡಿಐ, ರೈಲ್ವೆಯಲ್ಲಿ ಪಿಪಿಪಿ ಮಾದರಿ. ಈ ಬಜೆಟ್ ಕಾರ್ಪೋರೇಟ್‌ಗಳಿಗೆ ಮಾತ್ರ” ಎಂದು ಹೇಳಿದೆ.

ಆವಿ ಎಂಬ ಟ್ವಿಟ್ಟರ್‌ ಅಕೌಂಟ್, “ಶೇರುಪೇಟೆ ಶೂಚ್ಯಂಕ 5% ಹೆಚ್ಚಾಗಿದೆ. ಈ ಬಜೆಟ್‌‌ನಿಂದ ಯಾರಿಗೆ ಖುಷಿಯಾಗಿದೆ ಎಂದು ತಿಳಿಯುತ್ತದೆ. ಶ್ರೀಮಂತರು ಮತ್ತು ಬಂಡವಾಳಶಾಹಿಗಳು ಮಾತ್ರ ಎಂದು ಹೇಳಿದೆ.

ಇದನ್ನೂ ಓದಿ: ಕೇಂದ್ರ ಮಿನಿ ಬಜೆಟ್‌ 2021: ಇಲ್ಲಿವೆ ಪ್ರಮುಖಾಂಶಗಳು

 

ಇದನ್ನೂ ಓದಿ: ವಿದೇಶಿ ಕಂಪನಿಗಳು ಈ ನೆಲದ ಕಾನೂನನ್ನು ಗೌರವಿಸಲಿ: ಟೊಯೊಟಾ ಕಾರ್ಮಿಕರ ಹೊರಾಟದಲ್ಲಿ ಸಿದ್ದರಾಮಯ್ಯ

ವಿಧಾನಸಭಾ ಅಧಿವೇಶನದ ಲೈವ್‌ ವಿಡಿಯೋ►►

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...