Homeಮುಖಪುಟಈ ಬಜೆಟ್ ಶ್ರೀಮಂತರು ಮತ್ತು ಕಾರ್ಪೋರೇಟ್‌‌ಗಳಿಗೆ ಮಾತ್ರ: ನೆಟ್ಟಿಗರ ಆಕ್ರೋಶ

ಈ ಬಜೆಟ್ ಶ್ರೀಮಂತರು ಮತ್ತು ಕಾರ್ಪೋರೇಟ್‌‌ಗಳಿಗೆ ಮಾತ್ರ: ನೆಟ್ಟಿಗರ ಆಕ್ರೋಶ

- Advertisement -
- Advertisement -

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ (ಇಂದು) 2021–22ನೇ ಸಾಲಿನ ಕೇಂದ್ರ ಬಜೆಟ್‌ ಮಂಡಿಸಿದ್ದಾರೆ. ಕೊರೊನಾ ಹಿನ್ನಲೆಯಲ್ಲಿ ಎಂದಿನ ಸಂಪ್ರದಾಯವನ್ನು ಮುರಿದು ಈ ಬಾರಿ ಕಾಗದ ರಹಿತ ಬಜೆಟ್ ಮಂಡನೆ ಮಾಡಲಾಗಿದೆ. ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರದ ಎರಡನೇ ಅವಧಿಯ ಮೂರನೆ ಬಜೆಟ್ ಇದಾಗಿದೆ. ಅಲ್ಲದೆ, ಹಣಕಾಸು ಸಚಿವೆಯಾಗಿ ಇದು ನಿರ್ಮಲಾ ಸೀತಾರಾಮ್ ಮಂಡಿಸುವ ಮೂರನೆ ಬಜೆಟ್ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ನಾಯಕರು, ಸಾಮಾಜಿಕ ಕಾರ್ಯಕರ್ತರು ಸೇರಿದಂತೆ ಹಲವಾರು ಜನರು ಪ್ರತಿಕ್ರಿಯೆ ನೀಡಿದ್ದಾರೆ. ಬಜೆಟ್ ಮಂಡಿಸುತ್ತಿದ್ದಂತೆ ಶೇರು ಸೂಚ್ಯಾಂಕ 5% ಹೆಚ್ಚಳವಾಗಿದೆ. ಈ ಹಿನ್ನಲೆಯಲ್ಲಿ ಈ ಬಜೆಟ್ ಯಾರಿಗೆ ಎಂದು ಸ್ಪಷ್ಟವಾಗುತ್ತಿದೆ, ಇದು ಬಂಡವಾಳಶಾಹಿಗಳಿಗೆ ಮತ್ತು ಶ್ರೀಮಂತರ ಪರವಿರುವ ಬಜೆಟ್ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತದ ಸಂಪತ್ತನ್ನು ಮೋದಿ ತನ್ನ ಕ್ರೋನಿ ಕ್ಯಾಪಿಟಲಿಸ್ಟ್‌ ಗೆಳೆಯರಿಗೆ ಧಾರೆಯೆರೆಯುತ್ತಿದ್ದಾರೆ: ರಾಹುಲ್ ಗಾಂಧಿ

ಕಾಂಗ್ರೆಸ್ ಸಂಸದ ಶಶಿ ತರೂರ್‌, “ಬಿಜೆಪಿ ಸರ್ಕಾರವು ಕೆಲಸ ಮಾಡಲು ಗೊತ್ತಿಲ್ಲದ ಗ್ಯಾರೇಜ್ ಮೆಕ್ಯಾನಿಕ್‌ನನ್ನು ನೆನಪಿಸುತ್ತದೆ. ಅವನು ತನ್ನ ಗ್ರಾಹಕರಿಗೆ ’ನನಗೆ ನಿಮ್ಮ ಬ್ರೇಕ್‌ಗಳನ್ನು ಸರಿಪಡಿಸಲು ಸಾಧ್ಯವಾಗಲಿಲ್ಲ, ಆದ್ದರಿಂದ ನಾನು ನಿಮ್ಮ ಹಾರ್ನ್ ಸದ್ದನ್ನು ಜೋರಾಗಿ ಮಾಡಿದೆ’ ಎಂದು ಹೇಳಿದ್ದನ್ನು ನೆನಪಿಸುತ್ತದೆ” ಎಂದು ವ್ಯಂಗ್ಯವಾಡಿದ್ದಾರೆ.

ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ, “ಬಜೆಟ್ ದಿನದಂದು ಮೋದಿ ಸರ್ಕಾರವು ಭಾರತವನ್ನು ಬೆರಳೆಣಿಕೆಯಷ್ಟು ಕಾರ್ಪೊರೇಟ್‌ಗಳಿಗೆ ಮಾರಾಟ ಮಾಡಲು ನಿರ್ಧರಿಸಿದೆ. ಅಲ್ಲದೆ ಹಲವಾರು ರೈತ ಪರ, ಬಡವರ ಪರ, ಜಾತಿ ವಿರೋಧಿ ಧ್ವನಿಗಳನ್ನು ಟ್ವಿಟರ್‌ನಲ್ಲಿ ತಡೆಹಿಡಿದಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತ ಹೋರಾಟಕ್ಕೆ ಬೆಂಬಲ ನೀಡುವ ಹಲವಾರು ಸಮಾಜಿಕ ಕಾರ್ಯಕರ್ತರ ಹಾಗೂ ಪತ್ರಿಕೆಗಳ ಟ್ವಿಟ್ಟರ್‌ ಅಕೌಂಟುಗಳಿಗೆ ಟ್ವಿಟ್ಟರ್‌ ಈಗಷ್ಟೇ ತಡೆ ಮಾಡಿದೆ.

ಇದನ್ನೂ ಓದಿ: ರಾಕೇಶ್ ಟಿಕಾಯತ್ (2013-21)ರನ್ನು ಅರ್ಥ ಮಾಡಿಕೊಳ್ಳುವುದು ಹೇಗೆ? ‘ಹರ್ ಹರ್ ಮಹಾದೇವ್, ಅಲ್ಲಾಹು ಅಕ್ಬರ್’…

ಬಿಹಾರ ವಿಧಾನ ಸಭೆಯ ವಿಪಕ್ಷ ನಾಯಕ ತೇಜಸ್ವಿ ಯಾದವ್‌, “ಇದು ದೇಶವನ್ನು ಮಾರಾಟ ಮಾಡುವ ಬಜೆಟ್. ಇದು ಸರ್ಕಾರಿ ಸಂಸ್ಥೆಗಳು ಮತ್ತು ಆಸ್ತಿಗಳನ್ನು ಮಾರಾಟ ಮಾಡುವ ಸೇಲ್ ಆಗಿದ್ದು, ಇದು ಬಜೆಟ್ ಅಲ್ಲ. ರೈಲು, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣ, ಕೆಂಪು ಕೋಟೆ, ಬಿಎಸ್ಎನ್ಎಲ್, ಎಲ್ಐಸಿ ಮಾರಾಟ ಮಾಡಿದ ನಂತರ, ಬಿಜೆಪಿ ಈಗ ಬ್ಯಾಂಕುಗಳು, ಬಂದರುಗಳು, ವಿದ್ಯುತ್ ಮಾರ್ಗಗಳು , ರಾಷ್ಟ್ರೀಯ ರಸ್ತೆಗಳು, ಕ್ರೀಡಾಂಗಣ, ತೈಲ ಪೈಪ್‌ಲೈನ್‌ನಿಂದ ಗೋದಾಮಿನವರೆಗೆ ಬಿಜೆಪಿ ಮಾರಾಟ ಮಾಡಲು ನಿರ್ಧರಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ವರಾಜ್ ಇಂಡಿಯಾ ಮುಖ್ಯಸ್ಥ ಯೋಗೇಂದ್ರ ಯಾದವ್, “2020-21 ರಲ್ಲಿ ಪಿಎಂ ಕಿಸಾನ್‌‌ ಯೋಜನೆಯು 75 ಸಾವಿರದಿಂದ 2021-22ರಲ್ಲಿ 65 ಸಾವಿರಕ್ಕೆ ಇಳಿದಿದೆ. ಮಾರುಕಟ್ಟೆ ಹಸ್ತಕ್ಷೇಪ ಯೋಜನೆ ಮತ್ತು ಬೆಲೆ ಬೆಂಬಲ ಯೋಜನೆಗೆ (ಎಂಐಎಸ್-ಪಿಎಸ್ಎಸ್) ಬಜೆಟ್‌ನಲ್ಲಿ 2000 ಕೋಟಿಯಿಂದ 1501 ಕೋಟಿಗೆ ಇಳಿಸಲಾಗಿದೆ. ಇದು ಬಜೆಟ್ ಭಾಷಣವನ್ನು ಮೀರಿದ ನಿಜವಾದ ಬಜೆಟ್ ಸುದ್ದಿ!” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಿಸಾನ್‌ ಏಕ್ತಾ ಮೋರ್ಚಾ ಸೇರಿ ಹಲವರ ಟ್ವಿಟರ್‌ ಖಾತೆ ತಾತ್ಕಾಲಿಕ ಅಮಾನತು! ಭುಗಿಲೆದ್ದ ಆಕ್ರೋಶ

ಸಿಪಿಐಎಂ ಪಕ್ಷವು, “ಆತ್ಮನಿರ್ಭರ್ ಹೆಸರಿನಲ್ಲಿ, ಸರ್ಕಾರವು ಖಾಸಗೀಕರಣಕ್ಕೆ ಮುಂದಾಗಿದೆ. ವಿಮೆಯಲ್ಲಿ ಎಫ್‌ಡಿಐ, ರೈಲ್ವೆಯಲ್ಲಿ ಪಿಪಿಪಿ ಮಾದರಿ. ಈ ಬಜೆಟ್ ಕಾರ್ಪೋರೇಟ್‌ಗಳಿಗೆ ಮಾತ್ರ” ಎಂದು ಹೇಳಿದೆ.

ಆವಿ ಎಂಬ ಟ್ವಿಟ್ಟರ್‌ ಅಕೌಂಟ್, “ಶೇರುಪೇಟೆ ಶೂಚ್ಯಂಕ 5% ಹೆಚ್ಚಾಗಿದೆ. ಈ ಬಜೆಟ್‌‌ನಿಂದ ಯಾರಿಗೆ ಖುಷಿಯಾಗಿದೆ ಎಂದು ತಿಳಿಯುತ್ತದೆ. ಶ್ರೀಮಂತರು ಮತ್ತು ಬಂಡವಾಳಶಾಹಿಗಳು ಮಾತ್ರ ಎಂದು ಹೇಳಿದೆ.

ಇದನ್ನೂ ಓದಿ: ಕೇಂದ್ರ ಮಿನಿ ಬಜೆಟ್‌ 2021: ಇಲ್ಲಿವೆ ಪ್ರಮುಖಾಂಶಗಳು

 

ಇದನ್ನೂ ಓದಿ: ವಿದೇಶಿ ಕಂಪನಿಗಳು ಈ ನೆಲದ ಕಾನೂನನ್ನು ಗೌರವಿಸಲಿ: ಟೊಯೊಟಾ ಕಾರ್ಮಿಕರ ಹೊರಾಟದಲ್ಲಿ ಸಿದ್ದರಾಮಯ್ಯ

ವಿಧಾನಸಭಾ ಅಧಿವೇಶನದ ಲೈವ್‌ ವಿಡಿಯೋ►►

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...