Homeಮುಖಪುಟಮಗನ ಡ್ರಗ್ಸ್‌ ಪ್ರಕರಣದ ವಿಚಾರದಲ್ಲಿ ಶಾರುಖ್ ಮೇಲಿನ ದಾಳಿ ಅಸಹ್ಯವಾಗಿದೆ: ಶಶಿ ತರೂರ್‌

ಮಗನ ಡ್ರಗ್ಸ್‌ ಪ್ರಕರಣದ ವಿಚಾರದಲ್ಲಿ ಶಾರುಖ್ ಮೇಲಿನ ದಾಳಿ ಅಸಹ್ಯವಾಗಿದೆ: ಶಶಿ ತರೂರ್‌

- Advertisement -
- Advertisement -

ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್‌ ನಟ ಶಾರುಖ್‌ ಖಾನ್ ಅವರ ಮಗ ಆರ್ಯನ್ ಖಾನ್ ಬಂಧನಕ್ಕೆ ಒಳಗಾಗಿದ್ದಾರೆ. ಈ ಹಿನ್ನಲೆಯಲ್ಲಿ ಬಲಪಂಥೀಯ ಗುಂಪು ಮತ್ತು ಬಿಜೆಪಿ ಪರ ವಾಹಿನಿಗಳು ಶಾರುಖ್ ಖಾನ್ ಅವರನ್ನು ಗುರಿಯಾಗಿಸಿಕೊಂಡಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಸಂಸದ ಶಶಿ ತರೂರು ಅವರು, ಈ ದಾಳಿ ಅಸಹ್ಯವಾಗಿದೆ ಎಂದು ಹೇಳಿದ್ದಾರೆ.

ಮುಂಬೈನ ಕಡಲ ತೀರದಲ್ಲಿ ಐಷಾರಾಮಿ ಕ್ರೂಸ್‌ ಹಡಗಿನಲ್ಲಿ ನಡೆದಿದ್ದ ಡ್ರಗ್ಸ್ ಪಾರ್ಟಿ ಪ್ರಕರಣದಲ್ಲಿ, ಆರ್ಯನ್ ಖಾನ್‌ರನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಅಧಿಕಾರಿಗಳು ಶನಿವಾರ ವಶಕ್ಕೆ ಪಡೆದಿದ್ದರು. ಅವರ ಜೊತೆಗೆ ಇತರ 8 ಮಂದಿಯನ್ನು ಕೂಡಾ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದರು. ಪ್ರಕರಣದಲ್ಲಿ ಇದುವರೆಗೂ ಒಟ್ಟು 12 ಜನರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಡ್ರಗ್ಸ್ ಪಾರ್ಟಿ: ಬಾಲಿವುಡ್ ನಟ ಶಾರುಖ್ ಖಾನ್ ಮಗ ಆರ್ಯನ್‌ ಎನ್‌ಸಿಬಿ ವಶಕ್ಕೆ

ಪ್ರಕರಣದ ಕುರಿತು ಸೋಮವಾರ ಟ್ವೀಟ್ ಮಾಡಿರುವ ಶಶಿ ತರೂರ್‌, ‘‘ನಾನು ಡ್ರಗ್ಸ್‌ ಪ್ರಿಯನಲ್ಲ ಮತ್ತು ಎಂದಿಗೂ ಅದನ್ನು ಬಳಸಿಲ್ಲ. ಆದರೆ, ಡ್ರಗ್ಸ್‌ ಪ್ರಕರಣದಲ್ಲಿ ಆರ್ಯನ್‌ ಖಾನ್‌ ಬಂಧನವಾದ ವಿಚಾರವನ್ನು ಇಟ್ಟುಕೊಂಡು ಶಾರುಖ್‌ ಖಾನ್‌ ಅವರ ಮೇಲೆ ದಾಳಿ ಮಾಡುತ್ತಿರುವುದನ್ನು ಕಂಡು ಅಸಹ್ಯವಾಗಿದೆ. ಅವರ ವಿಚಾರದಲ್ಲಿ ಸ್ವಲ್ಪ ಸಹಾನುಭೂತಿ ಇರಬೇಕು ಜನರೇ. ಇಷ್ಟೊಂದು ತುಚ್ಚೀಕರಣ ಸರಿಯಲ್ಲ. 23 ವರ್ಷದ ಹುಡುಗನ ಮೇಲೆ ಇಷ್ಟು ಸಂತೋಷದಿಂದ ದಾಳಿ ಮಾಡುವುದು ಬೇಕಿಲ್ಲ” ಎಂದು ಬರೆದಿದ್ದಾರೆ.

ಮಂಗಳವಾರದಂದು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್‌ ನ್ಯಾಯಾಲಯವು ಬಂಧನಕ್ಕೆ ಒಳಪಟ್ಟ ಅಬ್ದುಲ್ ಖಾದಿರ್ ಶೇಖ್ (30), ಶ್ರೇಯಸ್ ನಾಯರ್ (23), ಮನೀಶ್ ರಾಜಗರಿಯಾ (26) ಮತ್ತು ಅವಿನ್ ಸಾಹು (30) ಅವರನ್ನು ಅಕ್ಟೋಬರ್ 11 ರವರೆಗೆ ಎನ್‌ಸಿಬಿ ವಶಕ್ಕೆ ನೀಡಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಯೋ ಜಾಹಿರಾತಿನಿಂದ ಶಾರುಖ್ ಖಾನ್‌ನನ್ನು ಮುಖೇಶ್ ಅಂಬಾನಿ ಕಿತ್ತೆಸೆದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...