Homeಮುಖಪುಟ49 ಸೆಲೆಬ್ರಿಟಿಗಳ ಪತ್ರ ಪ್ರಧಾನಿಯವರನ್ನು ವಿಚಲಿತರನ್ನಾಗಿಸಿದೆ: ಶಶಿ ತರೂರ್

49 ಸೆಲೆಬ್ರಿಟಿಗಳ ಪತ್ರ ಪ್ರಧಾನಿಯವರನ್ನು ವಿಚಲಿತರನ್ನಾಗಿಸಿದೆ: ಶಶಿ ತರೂರ್

- Advertisement -
- Advertisement -

ಸಾಮೂಹಿಕ ಹಲ್ಲೆಯಂಥ ಪ್ರಕರಣಗಳನ್ನು ವಿರೋಧಿಸಿ, ಕ್ರಮಕ್ಕೆ ಆಗ್ರಹಿಸಿ ಪ್ರಧಾನಿ ಮೋದಿಗೆ ಬಹಿರಂಗ ಪತ್ರ ಬರೆದಿದ್ದ ಸೆಲೆಬ್ರಿಟಿಗಳ ವಿರುದ್ಧ ಎಫ್‍ಐಆರ್ ದಾಖಲಿಸಿರುವುದನ್ನು ಕಾಂಗ್ರೆಸ್ ನಾಯಕ ಶಶಿ ತರೂರ್ ಖಂಡಿಸಿದ್ದಾರೆ. ತರೂರ್‌ ಕೂಡ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದು ಇದೇ ರೀತಿಯ ಪತ್ರವನ್ನು ಪ್ರಜಾಪ್ರಭುತ್ವ ಉಳಿಯಲು ಬಯಸುವವರೆಲ್ಲಾ ಬರೆಯಬೇಕೆಂದು ಕರೆ ನೀಡಿದ್ದಾರೆ.

ಟ್ವಿಟ್ಟರ್‌ನಲ್ಲಿ ಎರಡು ಪುಟಗಳ ಮನವಿ ಪತ್ರವೊಂದನ್ನು ಟ್ವೀಟ್ ಮಾಡಿರುವ ತರೂರ್‌, 49 ಸೆಲೆಬ್ರಿಟಿಗಳ ಪತ್ರ ಪ್ರಧಾನಿಯವರನ್ನು ವಿಚಲಿತರನ್ನಾಗಿಸಿದೆ ಎಂದು ವ್ಯಂಗ್ಯವಾಡಿದ್ದಾರೆ. ಪ್ರಧಾನಮಂತ್ರಿಯವರು ಸಂವಿಧಾನದಲ್ಲಿರುವ ಆರ್ಟಿಕಲ್ 19 ಅಭಿವ್ಯಕ್ತಿ ಸ್ವಾತಂತ್ರ್ಯ ಇರುವುದನ್ನು ದೃಢೀಕರಿಸಬೇಕು. ಪಿಎಂ ಮೋದಿ 2016ರಲ್ಲಿ ಅಮೆರಿಕದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ವೇಳೆ, ಸಂವಿಧಾನ ಪವಿತ್ರ ಗ್ರಂಥ ಎಂದು ಹೇಳಿದ್ದರು. ಈ ಪವಿತ್ರ ಗ್ರಂಥದಲ್ಲಿ ಸ್ವಾತಂತ್ರ್ಯ, ಅಭಿವ್ಯಕ್ತಿ ಸ್ವಾತಂತ್ರ್ಯ ಮೂಲಭೂತ ಹಕ್ಕುಗಳೆಂದು ಪ್ರತಿಪಾದಿಸಲಾಗಿದೆ. ಎಲ್ಲಾ ನಾಗರಿಕರ ಸಮಾನತೆಯನ್ನು ಇದು ಸಾರುತ್ತದೆ ಇದನ್ನು ಮೋದಿಯವರು ಮರೆಯಬಾರದು ಎಂದಿದ್ದಾರೆ.

ಭಾರತದ ಪ್ರಜೆಗಳು, ರಾಷ್ಟ್ರದ ಸಮಸ್ಯೆಗಳನ್ನು ನಿರ್ಭಯವಾಗಿ ತಮ್ಮ ಗಮನಕ್ಕೆ ತರಬಹುದು. ಅಷ್ಟೇ ಅಲ್ಲ, ಆ ಸಮಸ್ಯೆಗಳನ್ನು ನೀವು ಪರಿಹರಿಸಬಹುದು. ಪ್ರತಿಯೊಬ್ಬ ನಾಗರಿಕನ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀವು ಕಸಿಯುವುದಿಲ್ಲ ಎಂದು ನಾವು ನಂಬಿದ್ದೇವೆ. ಮನ್ ಕೀ ಬಾತ್ ಮುಂದೆ ಮೌನ ಕೀ ಬಾತ್ ಆಗದಿರಲಿ ಎಂದು ವ್ಯಂಗ್ಯವಾಡಿದ್ದಾರೆ.

ಇನ್ನು ದೇಶದೊಳಗೆ ನಡೆಯುತ್ತಿರುವ ಸಾಮೂಹಿಕ ಹಲ್ಲೆ, ಜೈಶ್ರೀರಾಮ್ ಘೋಷಣೆ ಹೇಳುವಂತೆ ಒತ್ತಡ ಹೇರುವುದನ್ನು ಖಂಡಿಸಿ, ಇತಿಹಾಸ ತಜ್ಞ ರಾಮಚಂದ್ರ ಗುಹಾ, ನಿರ್ದೇಶಕ ಮಣಿರತ್ನ, ಅಪರ್ಣಾ ಸೇನ್ ಸೇರಿದಂತೆ ಹಲವರು ಪ್ರಧಾನಿ ಮೋದಿಗೆ ಬಹಿರಂಗ ಪತ್ರ ಬರೆದಿದ್ದರು. ಇವರ ವಿರುದ್ಧ ಈಗ ಎಫ್‍ಐಆರ್ ದಾಖಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂದಿನ ಆಡಳಿತಾರೂಢರ ಪ್ರಕಾರ ಪತ್ರ ಬರೆಯುವುದೂ ಸಹ ಅಪರಾಧ. ಹಾಗಾದರೆ ನಾವೇನು ಮಾಡಬೇಕು. ಸುಖವಾಗಿ ಬದುಕಬೇಕು ಎಂಬ ಆಸೆ ಇರುವವರು, ಪಂಚೇಂದ್ರಿಯಗಳನ್ನು ಕಳೆದುಕೊಂಡವರಂತೆ ಸುಮ್ಮನೆ ಇರಬೇಕು, ಅಷ್ಟೇ. ಇದು ಈ ದೇಶದ ಇಂದಿನ ದುಸ್ಥಿತಿ.

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...