Homeಮುಖಪುಟಕಾಂಗ್ರೆಸ್ ಸಂಸದ ಶಶಿ ತರೂರ್ ನೇತೃತ್ವದ ಐಟಿ ಸಂಸದೀಯ ಸಮಿತಿ ಮುಂದೆ ಪೆಗಾಸಸ್ ಪ್ರಕರಣ

ಕಾಂಗ್ರೆಸ್ ಸಂಸದ ಶಶಿ ತರೂರ್ ನೇತೃತ್ವದ ಐಟಿ ಸಂಸದೀಯ ಸಮಿತಿ ಮುಂದೆ ಪೆಗಾಸಸ್ ಪ್ರಕರಣ

- Advertisement -
- Advertisement -

ಭಾರತದಲ್ಲಿ 300 ಕ್ಕೂ ಹೆಚ್ಚು ಜನರ ಮೊಬೈಲ್ ಸಂಖ್ಯೆಗಳು ಪೆಗಾಸಸ್ ಸ್ಪೈವೇರ್ ಬಳಸಿ ಗೂಢಚರ್ಯೆ ಮಾಡಲಾಗಿದೆ ಎಂಬ ಆರೋಪಗಳ ಬಗ್ಗೆ ಜುಲೈ 28 ರಂದು ಕಾಂಗ್ರೆಸ್ ಸಂಸದ ಶಶಿ ತರೂರ್ ನೇತೃತ್ವದ ಐಟಿ ಸಂಸದೀಯ ಸಮಿತಿಯು ಪ್ರಕರಣವನ್ನು ಕೈಗೆತ್ತಿಕೊಳ್ಳಲಿದೆ.

ಸ್ಥಾಯಿ ಸಮಿತಿಯು “ನಾಗರಿಕರ ದತ್ತಾಂಶ ಸುರಕ್ಷತೆ ಮತ್ತು ಗೌಪ್ಯತೆ” ಕುರಿತು ಚರ್ಚಿಸಲಿದೆ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ, ಗೃಹ ಸಚಿವಾಲಯ ಮತ್ತು ಸಂವಹನ ಸಚಿವಾಲಯದ ಪ್ರತಿನಿಧಿಗಳನ್ನು ಕರೆದು ಈ ವಿಷಯದ ಬಗ್ಗೆ ಮಾಹಿತಿ ಪಡೆಯಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇಸ್ರೇಲಿ ನಿರ್ಮಿತ ಪೆಗಾಸಸ್ ಸ್ಪೈವೇರ್ ಸರ್ಕಾರಗಳಿಗೆ ಮಾತ್ರ ಮಾರಾಟ ಮಾಡಲಾಗುತ್ತದೆ. ಈ ಸ್ಪೈವೇರ್‌ ಬಳಸಿ ದೇಶದಲ್ಲಿ ಪತ್ರಕರ್ತರು, ಸಾಮಾಜಿಕ ಹೋರಾಟಗಾರರು, ಮತ್ತು ರಾಜಕಾರಣಿಗಳು ಸೇರಿ ಸುಮಾರು 300ಕ್ಕೂ ಅಧಿಕ ಜನರ ಮೇಲೆ ಕನ್ಗಾವಲು ಮಾಡಲಾಗಿದೆ. ಈ ವಿಷಯವು ಮಾಧ್ಯಮಗಳಲ್ಲಿ ಬಹಿರಂಗವಾದ ಬಳಿಕ, ಕಳೆದೆರಡು ದಿನಗಳಿಂದ ಮಾನ್ಸೂನ್ ಅಧಿವೇಶನದಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ.

ಪೆಗಾಸಸ್ ಪ್ರಾಜೆಕ್ಟ್ ಕುರಿತು ಮಾಧ್ಯಮಗಳ ವರದಿ ಅತ್ಯಂತ ಕಳವಳಕಿರಿಯಾಗಿದ್ದು, ಈ ಬೇಹುಗರಿಕೆ ವಿಚಾರ ಗಂಭೀರ ರಾಷ್ಟ್ರೀಯ ಭದ್ರತಾ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್  ಹೇಳಿದ್ದಾರೆ.

ಇದನ್ನೂ ಓದಿ: ಪೆಗಾಸಸ್ ಪ್ರಾಜೆಕ್ಟ್: ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಕಾಂಗ್ರೆಸ್ ಒತ್ತಾಯ

ಇಸ್ರೇಲಿ ಕಂಪನಿ ಎನ್‌ಎಸ್‌ಒ ಗ್ರೂಪ್‌ನ ಪೆಗಾಸಸ್ ಗೂಢಚರ್ಯೆ ತಂತ್ರಾಂಶ ಬಳಸಿಕೊಂಡು ಪ್ರಸ್ತುತ ಸಂಪುಟದಲ್ಲಿರುವ ಇಬ್ಬರು ಮಂತ್ರಿಗಳು, 40 ಕ್ಕೂ ಹೆಚ್ಚು ಪತ್ರಕರ್ತರು, ಮೂವರು ವಿರೋಧ ಪಕ್ಷದ ನಾಯಕರು ಮತ್ತು ಒಬ್ಬ ನ್ಯಾಯಾಧೀಶರು, ಹಲವಾರು ಉದ್ಯಮಿಗಳು ಮತ್ತು  ಹೋರಾಟಗಾರರು ಸೇರಿದಂತೆ 300 ಕ್ಕೂ ಹೆಚ್ಚು ಜನರ ಮೊಬೈಲ್ ಫೋನ್ ಸಂಖ್ಯೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಪ್ಯಾರಿಸ್ ಮೂಲದ ಫಾರ್ಬಿಡನ್ ಸ್ಟೋರೀಸ್‌ ಸಂಸ್ಥೆ ನಡೆಸಿದ ತನಿಖೆಯಿಂದ ಬಹಿರಂಗಗೊಂಡಿದೆ. ಆದರೆ, ಸೋರಿಕೆಯಾದ ಡೇಟಾಬೇಸ್‌ನಲ್ಲಿ ಕಂಡುಬರುವ ಎಲ್ಲಾ ಸಂಖ್ಯೆಗಳನ್ನು ಹ್ಯಾಕ್ ಮಾಡಲಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ.

ಗೂಢಚರ್ಯೆ ನಡೆಸುವಲ್ಲಿ ಒಕ್ಕೂಟ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಸರ್ಕಾರ ತಿಳಿಸಿದೆ. ತಾವೇ ಗೂಢಚರ್ಯೆಗೆ ಒಳಗಾಗಿದ್ದೇನೆ ಎಂದು ತಿಳಿಯುವ ಮೊದಲು ನೂತನ ಐಟಿ ಸಚಿವ ಅಶ್ವಿನಿ ವೈಷ್ಣವ್  ಬೇಹುಗಾರಿಕೆ ವರದಿಗಳಲ್ಲಿ ಯಾವುದೇ ಅಂಶವಿಲ್ಲ. ದೇಶದಲ್ಲಿ ಅನಧಿಕೃತ ಕಣ್ಗಾವಲು ಸಂಭವಿಸುವುದಿಲ್ಲ ಎಂದು ತಿಳಿಸಿದ್ದರು.

ಕರ್ನಾಟಕದ 2019 ರ ಸಮ್ಮಿಶ್ರ ಸರ್ಕಾರ ಉರುಳಲು ಈ ಪೆಗಾಸಸ್ ಗೂಢಚರ್ಯೆ ಕಾರಣವಾಗಿದೆಯೇ ಎಂಬ ಅನುಮಾನಗಳಿಗೆ ಕಾರಣವಾಗಿದೆ. ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರ ಮೇಲೆ ಪೆಗಾಸಸ್ ಕಣ್ಗಾವಲು ಇದ್ದದ್ದು ಈಗ ಬಹಿರಂಗವಾಗಿದೆ. ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರ ವೈಯಕ್ತಿಕ ಕಾರ್ಯದರ್ಶಿಗಳ ಮೊಬೈಲ್ ಫೋನ್ ಸಂಖ್ಯೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಪ್ಯಾರಿಸ್ ಮೂಲದ ಫಾರ್ಬಿಡನ್ ಸ್ಟೋರೀಸ್‌ ಸಂಸ್ಥೆ ನಡೆಸಿದ ತನಿಖೆಯಿಂದ ಬಹಿರಂಗಗೊಂಡಿದೆ.


ಇದನ್ನೂ ಓದಿ: Explainer: ಏನಿದು ಪೆಗಾಸಸ್? ಹೇಗೆ ಫೋನ್ ಹ್ಯಾಕ್ ಮಾಡುತ್ತದೆ? ಅಪಾಯಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...