Homeಮುಖಪುಟಕಾಂಗ್ರೆಸ್ ಸಂಸದ ಶಶಿ ತರೂರ್ ನೇತೃತ್ವದ ಐಟಿ ಸಂಸದೀಯ ಸಮಿತಿ ಮುಂದೆ ಪೆಗಾಸಸ್ ಪ್ರಕರಣ

ಕಾಂಗ್ರೆಸ್ ಸಂಸದ ಶಶಿ ತರೂರ್ ನೇತೃತ್ವದ ಐಟಿ ಸಂಸದೀಯ ಸಮಿತಿ ಮುಂದೆ ಪೆಗಾಸಸ್ ಪ್ರಕರಣ

- Advertisement -
- Advertisement -

ಭಾರತದಲ್ಲಿ 300 ಕ್ಕೂ ಹೆಚ್ಚು ಜನರ ಮೊಬೈಲ್ ಸಂಖ್ಯೆಗಳು ಪೆಗಾಸಸ್ ಸ್ಪೈವೇರ್ ಬಳಸಿ ಗೂಢಚರ್ಯೆ ಮಾಡಲಾಗಿದೆ ಎಂಬ ಆರೋಪಗಳ ಬಗ್ಗೆ ಜುಲೈ 28 ರಂದು ಕಾಂಗ್ರೆಸ್ ಸಂಸದ ಶಶಿ ತರೂರ್ ನೇತೃತ್ವದ ಐಟಿ ಸಂಸದೀಯ ಸಮಿತಿಯು ಪ್ರಕರಣವನ್ನು ಕೈಗೆತ್ತಿಕೊಳ್ಳಲಿದೆ.

ಸ್ಥಾಯಿ ಸಮಿತಿಯು “ನಾಗರಿಕರ ದತ್ತಾಂಶ ಸುರಕ್ಷತೆ ಮತ್ತು ಗೌಪ್ಯತೆ” ಕುರಿತು ಚರ್ಚಿಸಲಿದೆ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ, ಗೃಹ ಸಚಿವಾಲಯ ಮತ್ತು ಸಂವಹನ ಸಚಿವಾಲಯದ ಪ್ರತಿನಿಧಿಗಳನ್ನು ಕರೆದು ಈ ವಿಷಯದ ಬಗ್ಗೆ ಮಾಹಿತಿ ಪಡೆಯಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇಸ್ರೇಲಿ ನಿರ್ಮಿತ ಪೆಗಾಸಸ್ ಸ್ಪೈವೇರ್ ಸರ್ಕಾರಗಳಿಗೆ ಮಾತ್ರ ಮಾರಾಟ ಮಾಡಲಾಗುತ್ತದೆ. ಈ ಸ್ಪೈವೇರ್‌ ಬಳಸಿ ದೇಶದಲ್ಲಿ ಪತ್ರಕರ್ತರು, ಸಾಮಾಜಿಕ ಹೋರಾಟಗಾರರು, ಮತ್ತು ರಾಜಕಾರಣಿಗಳು ಸೇರಿ ಸುಮಾರು 300ಕ್ಕೂ ಅಧಿಕ ಜನರ ಮೇಲೆ ಕನ್ಗಾವಲು ಮಾಡಲಾಗಿದೆ. ಈ ವಿಷಯವು ಮಾಧ್ಯಮಗಳಲ್ಲಿ ಬಹಿರಂಗವಾದ ಬಳಿಕ, ಕಳೆದೆರಡು ದಿನಗಳಿಂದ ಮಾನ್ಸೂನ್ ಅಧಿವೇಶನದಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ.

ಪೆಗಾಸಸ್ ಪ್ರಾಜೆಕ್ಟ್ ಕುರಿತು ಮಾಧ್ಯಮಗಳ ವರದಿ ಅತ್ಯಂತ ಕಳವಳಕಿರಿಯಾಗಿದ್ದು, ಈ ಬೇಹುಗರಿಕೆ ವಿಚಾರ ಗಂಭೀರ ರಾಷ್ಟ್ರೀಯ ಭದ್ರತಾ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್  ಹೇಳಿದ್ದಾರೆ.

ಇದನ್ನೂ ಓದಿ: ಪೆಗಾಸಸ್ ಪ್ರಾಜೆಕ್ಟ್: ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಕಾಂಗ್ರೆಸ್ ಒತ್ತಾಯ

ಇಸ್ರೇಲಿ ಕಂಪನಿ ಎನ್‌ಎಸ್‌ಒ ಗ್ರೂಪ್‌ನ ಪೆಗಾಸಸ್ ಗೂಢಚರ್ಯೆ ತಂತ್ರಾಂಶ ಬಳಸಿಕೊಂಡು ಪ್ರಸ್ತುತ ಸಂಪುಟದಲ್ಲಿರುವ ಇಬ್ಬರು ಮಂತ್ರಿಗಳು, 40 ಕ್ಕೂ ಹೆಚ್ಚು ಪತ್ರಕರ್ತರು, ಮೂವರು ವಿರೋಧ ಪಕ್ಷದ ನಾಯಕರು ಮತ್ತು ಒಬ್ಬ ನ್ಯಾಯಾಧೀಶರು, ಹಲವಾರು ಉದ್ಯಮಿಗಳು ಮತ್ತು  ಹೋರಾಟಗಾರರು ಸೇರಿದಂತೆ 300 ಕ್ಕೂ ಹೆಚ್ಚು ಜನರ ಮೊಬೈಲ್ ಫೋನ್ ಸಂಖ್ಯೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಪ್ಯಾರಿಸ್ ಮೂಲದ ಫಾರ್ಬಿಡನ್ ಸ್ಟೋರೀಸ್‌ ಸಂಸ್ಥೆ ನಡೆಸಿದ ತನಿಖೆಯಿಂದ ಬಹಿರಂಗಗೊಂಡಿದೆ. ಆದರೆ, ಸೋರಿಕೆಯಾದ ಡೇಟಾಬೇಸ್‌ನಲ್ಲಿ ಕಂಡುಬರುವ ಎಲ್ಲಾ ಸಂಖ್ಯೆಗಳನ್ನು ಹ್ಯಾಕ್ ಮಾಡಲಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ.

ಗೂಢಚರ್ಯೆ ನಡೆಸುವಲ್ಲಿ ಒಕ್ಕೂಟ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಸರ್ಕಾರ ತಿಳಿಸಿದೆ. ತಾವೇ ಗೂಢಚರ್ಯೆಗೆ ಒಳಗಾಗಿದ್ದೇನೆ ಎಂದು ತಿಳಿಯುವ ಮೊದಲು ನೂತನ ಐಟಿ ಸಚಿವ ಅಶ್ವಿನಿ ವೈಷ್ಣವ್  ಬೇಹುಗಾರಿಕೆ ವರದಿಗಳಲ್ಲಿ ಯಾವುದೇ ಅಂಶವಿಲ್ಲ. ದೇಶದಲ್ಲಿ ಅನಧಿಕೃತ ಕಣ್ಗಾವಲು ಸಂಭವಿಸುವುದಿಲ್ಲ ಎಂದು ತಿಳಿಸಿದ್ದರು.

ಕರ್ನಾಟಕದ 2019 ರ ಸಮ್ಮಿಶ್ರ ಸರ್ಕಾರ ಉರುಳಲು ಈ ಪೆಗಾಸಸ್ ಗೂಢಚರ್ಯೆ ಕಾರಣವಾಗಿದೆಯೇ ಎಂಬ ಅನುಮಾನಗಳಿಗೆ ಕಾರಣವಾಗಿದೆ. ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರ ಮೇಲೆ ಪೆಗಾಸಸ್ ಕಣ್ಗಾವಲು ಇದ್ದದ್ದು ಈಗ ಬಹಿರಂಗವಾಗಿದೆ. ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರ ವೈಯಕ್ತಿಕ ಕಾರ್ಯದರ್ಶಿಗಳ ಮೊಬೈಲ್ ಫೋನ್ ಸಂಖ್ಯೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಪ್ಯಾರಿಸ್ ಮೂಲದ ಫಾರ್ಬಿಡನ್ ಸ್ಟೋರೀಸ್‌ ಸಂಸ್ಥೆ ನಡೆಸಿದ ತನಿಖೆಯಿಂದ ಬಹಿರಂಗಗೊಂಡಿದೆ.


ಇದನ್ನೂ ಓದಿ: Explainer: ಏನಿದು ಪೆಗಾಸಸ್? ಹೇಗೆ ಫೋನ್ ಹ್ಯಾಕ್ ಮಾಡುತ್ತದೆ? ಅಪಾಯಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...