Homeಮುಖಪುಟಆರ್‌ಎಸ್‌ಎಸ್‌-ಬಿಜೆಪಿ ಸಂಘಟನಾ ಶಕ್ತಿ ಶ್ಲಾಘಿಸಿದ ದಿಗ್ವಿಜಯ ಸಿಂಗ್‌ಗೆ ಶಶಿ ತರೂರ್‌ ಬೆಂಬಲ : ಪವನ್‌ ಖೇರಾ...

ಆರ್‌ಎಸ್‌ಎಸ್‌-ಬಿಜೆಪಿ ಸಂಘಟನಾ ಶಕ್ತಿ ಶ್ಲಾಘಿಸಿದ ದಿಗ್ವಿಜಯ ಸಿಂಗ್‌ಗೆ ಶಶಿ ತರೂರ್‌ ಬೆಂಬಲ : ಪವನ್‌ ಖೇರಾ ತಿರುಗೇಟು

- Advertisement -
- Advertisement -

ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಆರ್‌ಎಸ್‌ಎಸ್‌ನ ಸಂಘಟನಾ ಶಕ್ತಿಯನ್ನು ಶ್ಲಾಘಿಸಿ ಹೇಳಿಕೆ ನೀಡಿರುವುದು ಪಕ್ಷದೊಳಗೆ ಮುಜುಗರ, ಅಸಮಾಧಾನ ಮತ್ತು ಅಪಸ್ವರಕ್ಕೆ ಕಾರಣವಾಗಿದೆ ಎಂಬ ಚರ್ಚೆಗಳು ನಡೆಯುತ್ತಿವೆ. ಆದರೆ, ಸಿಂಗ್ ಹೇಳಿಕೆಯನ್ನು ಕಾಂಗ್ರೆಸ್‌ ಹಿರಿಯ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಭಾನುವಾರ (ಡಿ.28) ಬೆಂಬಲಿಸಿದ್ದಾರೆ. ಕಾಂಗ್ರೆಸ್‌ನೊಳಗೆ ಶಿಸ್ತು ಮತ್ತು ಆಂತರಿಕ ಸುಧಾರಣೆಗಳ ಅಗತ್ಯವಿದೆ ಎಂದಿದ್ದಾರೆ.

ಯಾವುದೇ ರಾಜಕೀಯ ಪಕ್ಷಕ್ಕೆ ಶಿಸ್ತು ಅತ್ಯಗತ್ಯ. ದೀರ್ಘ ಇತಿಹಾಸ ಹೊಂದಿರುವ ಕಾಂಗ್ರೆಸ್ ತನ್ನದೇ ಆದ ಈ ಹಿಂದಿನ ಅನುಭವದಿಂದ ಕಲಿಯಬೇಕಾದದ್ದು ಬಹಳಷ್ಟಿದೆ ಎಂದು ತರೂರ್ ಹೇಳಿದ್ದಾರೆ.

“ನಮಗೆ 140 ವರ್ಷಗಳ ಇತಿಹಾಸವಿದೆ, ನಾವು ಅದರಿಂದ ಬಹಳಷ್ಟು ಕಲಿಯಬಹುದು. ನಾವು ನಮ್ಮಿಂದಲೂ ಕಲಿಯಬಹುದು. ಯಾವುದೇ ಪಕ್ಷದಲ್ಲಿ ಶಿಸ್ತು ಬಹಳ ಮುಖ್ಯ. ನಮ್ಮ ಸಂಘಟನೆ ಬಲಗೊಳ್ಳಬೇಕೆಂದು ನಾನು ಬಯಸುತ್ತೇನೆ. ನಮ್ಮ ಸಂಘಟನೆಯಲ್ಲಿ ಶಿಸ್ತು ಇರಬೇಕು. ದಿಗ್ವಿಜಯ ಸಿಂಗ್ ಸ್ವತಃ ಮಾತನಾಡಬಲ್ಲರು” ಎಂದು ಶಶಿ ತರೂರ್ ಹೇಳಿಕೆ ನೀಡಿದ್ದಾರೆ.

“ರಾಜಕೀಯ ಸವಾಲುಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಎದುರಿಸಲು ಕಾಂಗ್ರೆಸ್ ಆಂತರಿಕ ಶಿಸ್ತು ಮತ್ತು ಸಂಘಟನಾತ್ಮಕ ಬಲವನ್ನು ಸುಧಾರಿಸುವತ್ತ ಗಮನಹರಿಸಬೇಕು” ಎಂದು ತಿಳಿಸಿದ್ದಾರೆ.

ಹೇಳಿಕೆ ವಿವಾದ ಸ್ವರೂಪ ಪಡೆದ ಬಳಿಕ ದಿಗ್ವಿಜಯ ಸಿಂಗ್ ಜೊತೆ ಮಾತನಾಡಿದ್ದೀರಾ? ಎಂದು ಕೇಳಿದ್ದಕ್ಕೆ, “ನಮ್ಮ ನಡುವಿನ ಮಾತುಕತೆಗಳು ಸ್ವಾಭಾವಿಕ. ನಾವು ಸ್ನೇಹಿತರು, ಪರಸ್ಪರ ಮಾತುಕತೆ ನಡೆಸುವುದು ಸಹಜ. ಸಂಘಟನೆಯನ್ನು ಬಲಪಡಿಸಬೇಕು, ಅದರ ಬಗ್ಗೆ ಯಾವುದೇ ಸಂದೇಹವಿಲ್ಲ” ಎಂದು ಹೇಳಿದ್ದಾರೆ.

ದಿಗ್ವಿಜಯ ಸಿಂಗ್ ಅವರು “1995ರಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಬಳಿ ನೆಲದ ಮೇಲೆ ಕುಳಿತಿದ್ದ ಫೋಟೋವನ್ನು ಶನಿವಾರ ಹಂಚಿಕೊಂಡಿದ್ದರು. ಆರ್‌ಎಸ್‌ಎಸ್ ಮತ್ತು ಬಿಜೆಪಿಯಲ್ಲಿನ ತಳಮಟ್ಟದ ಕಾರ್ಯಕರ್ತರು ಉನ್ನತ ಸ್ಥಾನಗಳಿಗೆ ಹೇಗೆ ಏರಬಹುದು ಎಂಬುದನ್ನು ಈ ಫೋಟೋ ಪ್ರತಿಬಿಂಬಿಸುತ್ತದೆ ಎಂದು ಸಿಂಗ್ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದರು. ಇದನ್ನು ‘ಸಂಘಟನೆಯ ಶಕ್ತಿ’ ಎಂದು ಬಣ್ಣಿಸಿದ್ದರು. ಸಿಂಗ್ ಅವರ ಈ ಪೋಸ್ಟ್‌ ಕಾಂಗ್ರೆಸ್‌ಗೆ ಮುಜುಗರ ಉಂಟು ಮಾಡಿದೆ. ಪಕ್ಷದೊಳಗೆ ಅಸಮಾಧನಕ್ಕೆ ಕಾರಣವಾಗಿದೆ.

ತರೂರ್‌ ಹೇಳಿಕೆಗೆ ತಿರುಗೇಟು ಕೊಟ್ಟಿರುವ ಕಾಂಗ್ರೆಸ್ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಅಧ್ಯಕ್ಷ ಪವನ್ ಖೇರಾ ಸಿಂಗ್, ಆರ್‌ಎಸ್‌ಎಸ್‌ನಿಂದ ಕಲಿಯಲು ಏನೂ ಇಲ್ಲ ಎಂದಿದ್ದಾರೆ. ಖೇರಾ ಅವರು ಗಾಂಧಿ ಹಂತಹ ನಾತೂರಾಮ್ ಗೋಡ್ಸೆ ಮತ್ತು ಆರ್‌ಎಸ್‌ಸ್‌ ನಡುವಿನ ಸಂಬಂಧವನ್ನು ಉಲ್ಲೇಖಿಸಿದ್ದಾರೆ.

“ಆರ್‌ಎಸ್‌ಎಸ್‌ನಿಂದ ಕಲಿಯಲು ಏನೂ ಇಲ್ಲ. ಗೋಡ್ಸೆಗೆ ಹೆಸರುವಾಸಿಯಾದ ಸಂಘಟನೆಯು ಗಾಂಧಿ ಸ್ಥಾಪಿಸಿದ ಸಂಘಟನೆಗೆ ಏನು ಕಲಿಸಲು ಸಾಧ್ಯ?” ಎಂದು ಖೇರಾ ಪ್ರಶ್ನಿಸಿದ್ದಾರೆ.

ದಿಗ್ವಿಜಯ್ ಸಿಂಗ್ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್, ವಿರೋಧ ಪಕ್ಷವು ಒಗ್ಗಟ್ಟಾಗಿದೆ. ಆದರೆ, ಪ್ರತಿಯೊಬ್ಬರಿಗೂ ತಮ್ಮದೇ ಆದ ಅಭಿಪ್ರಾಯವನ್ನು ಹೊಂದುವ, ವ್ಯಕ್ತಪಡಿಸುವ ಹಕ್ಕಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....