Homeಮುಖಪುಟಆರ್‌ಎಸ್‌ಎಸ್‌-ಬಿಜೆಪಿ ಸಂಘಟನಾ ಶಕ್ತಿ ಶ್ಲಾಘಿಸಿದ ದಿಗ್ವಿಜಯ ಸಿಂಗ್‌ಗೆ ಶಶಿ ತರೂರ್‌ ಬೆಂಬಲ : ಪವನ್‌ ಖೇರಾ...

ಆರ್‌ಎಸ್‌ಎಸ್‌-ಬಿಜೆಪಿ ಸಂಘಟನಾ ಶಕ್ತಿ ಶ್ಲಾಘಿಸಿದ ದಿಗ್ವಿಜಯ ಸಿಂಗ್‌ಗೆ ಶಶಿ ತರೂರ್‌ ಬೆಂಬಲ : ಪವನ್‌ ಖೇರಾ ತಿರುಗೇಟು

- Advertisement -
- Advertisement -

ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಆರ್‌ಎಸ್‌ಎಸ್‌ನ ಸಂಘಟನಾ ಶಕ್ತಿಯನ್ನು ಶ್ಲಾಘಿಸಿ ಹೇಳಿಕೆ ನೀಡಿರುವುದು ಪಕ್ಷದೊಳಗೆ ಮುಜುಗರ, ಅಸಮಾಧಾನ ಮತ್ತು ಅಪಸ್ವರಕ್ಕೆ ಕಾರಣವಾಗಿದೆ ಎಂಬ ಚರ್ಚೆಗಳು ನಡೆಯುತ್ತಿವೆ. ಆದರೆ, ಸಿಂಗ್ ಹೇಳಿಕೆಯನ್ನು ಕಾಂಗ್ರೆಸ್‌ ಹಿರಿಯ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಭಾನುವಾರ (ಡಿ.28) ಬೆಂಬಲಿಸಿದ್ದಾರೆ. ಕಾಂಗ್ರೆಸ್‌ನೊಳಗೆ ಶಿಸ್ತು ಮತ್ತು ಆಂತರಿಕ ಸುಧಾರಣೆಗಳ ಅಗತ್ಯವಿದೆ ಎಂದಿದ್ದಾರೆ.

ಯಾವುದೇ ರಾಜಕೀಯ ಪಕ್ಷಕ್ಕೆ ಶಿಸ್ತು ಅತ್ಯಗತ್ಯ. ದೀರ್ಘ ಇತಿಹಾಸ ಹೊಂದಿರುವ ಕಾಂಗ್ರೆಸ್ ತನ್ನದೇ ಆದ ಈ ಹಿಂದಿನ ಅನುಭವದಿಂದ ಕಲಿಯಬೇಕಾದದ್ದು ಬಹಳಷ್ಟಿದೆ ಎಂದು ತರೂರ್ ಹೇಳಿದ್ದಾರೆ.

“ನಮಗೆ 140 ವರ್ಷಗಳ ಇತಿಹಾಸವಿದೆ, ನಾವು ಅದರಿಂದ ಬಹಳಷ್ಟು ಕಲಿಯಬಹುದು. ನಾವು ನಮ್ಮಿಂದಲೂ ಕಲಿಯಬಹುದು. ಯಾವುದೇ ಪಕ್ಷದಲ್ಲಿ ಶಿಸ್ತು ಬಹಳ ಮುಖ್ಯ. ನಮ್ಮ ಸಂಘಟನೆ ಬಲಗೊಳ್ಳಬೇಕೆಂದು ನಾನು ಬಯಸುತ್ತೇನೆ. ನಮ್ಮ ಸಂಘಟನೆಯಲ್ಲಿ ಶಿಸ್ತು ಇರಬೇಕು. ದಿಗ್ವಿಜಯ ಸಿಂಗ್ ಸ್ವತಃ ಮಾತನಾಡಬಲ್ಲರು” ಎಂದು ಶಶಿ ತರೂರ್ ಹೇಳಿಕೆ ನೀಡಿದ್ದಾರೆ.

“ರಾಜಕೀಯ ಸವಾಲುಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಎದುರಿಸಲು ಕಾಂಗ್ರೆಸ್ ಆಂತರಿಕ ಶಿಸ್ತು ಮತ್ತು ಸಂಘಟನಾತ್ಮಕ ಬಲವನ್ನು ಸುಧಾರಿಸುವತ್ತ ಗಮನಹರಿಸಬೇಕು” ಎಂದು ತಿಳಿಸಿದ್ದಾರೆ.

ಹೇಳಿಕೆ ವಿವಾದ ಸ್ವರೂಪ ಪಡೆದ ಬಳಿಕ ದಿಗ್ವಿಜಯ ಸಿಂಗ್ ಜೊತೆ ಮಾತನಾಡಿದ್ದೀರಾ? ಎಂದು ಕೇಳಿದ್ದಕ್ಕೆ, “ನಮ್ಮ ನಡುವಿನ ಮಾತುಕತೆಗಳು ಸ್ವಾಭಾವಿಕ. ನಾವು ಸ್ನೇಹಿತರು, ಪರಸ್ಪರ ಮಾತುಕತೆ ನಡೆಸುವುದು ಸಹಜ. ಸಂಘಟನೆಯನ್ನು ಬಲಪಡಿಸಬೇಕು, ಅದರ ಬಗ್ಗೆ ಯಾವುದೇ ಸಂದೇಹವಿಲ್ಲ” ಎಂದು ಹೇಳಿದ್ದಾರೆ.

ದಿಗ್ವಿಜಯ ಸಿಂಗ್ ಅವರು “1995ರಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಬಳಿ ನೆಲದ ಮೇಲೆ ಕುಳಿತಿದ್ದ ಫೋಟೋವನ್ನು ಶನಿವಾರ ಹಂಚಿಕೊಂಡಿದ್ದರು. ಆರ್‌ಎಸ್‌ಎಸ್ ಮತ್ತು ಬಿಜೆಪಿಯಲ್ಲಿನ ತಳಮಟ್ಟದ ಕಾರ್ಯಕರ್ತರು ಉನ್ನತ ಸ್ಥಾನಗಳಿಗೆ ಹೇಗೆ ಏರಬಹುದು ಎಂಬುದನ್ನು ಈ ಫೋಟೋ ಪ್ರತಿಬಿಂಬಿಸುತ್ತದೆ ಎಂದು ಸಿಂಗ್ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದರು. ಇದನ್ನು ‘ಸಂಘಟನೆಯ ಶಕ್ತಿ’ ಎಂದು ಬಣ್ಣಿಸಿದ್ದರು. ಸಿಂಗ್ ಅವರ ಈ ಪೋಸ್ಟ್‌ ಕಾಂಗ್ರೆಸ್‌ಗೆ ಮುಜುಗರ ಉಂಟು ಮಾಡಿದೆ. ಪಕ್ಷದೊಳಗೆ ಅಸಮಾಧನಕ್ಕೆ ಕಾರಣವಾಗಿದೆ.

ತರೂರ್‌ ಹೇಳಿಕೆಗೆ ತಿರುಗೇಟು ಕೊಟ್ಟಿರುವ ಕಾಂಗ್ರೆಸ್ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಅಧ್ಯಕ್ಷ ಪವನ್ ಖೇರಾ ಸಿಂಗ್, ಆರ್‌ಎಸ್‌ಎಸ್‌ನಿಂದ ಕಲಿಯಲು ಏನೂ ಇಲ್ಲ ಎಂದಿದ್ದಾರೆ. ಖೇರಾ ಅವರು ಗಾಂಧಿ ಹಂತಹ ನಾತೂರಾಮ್ ಗೋಡ್ಸೆ ಮತ್ತು ಆರ್‌ಎಸ್‌ಸ್‌ ನಡುವಿನ ಸಂಬಂಧವನ್ನು ಉಲ್ಲೇಖಿಸಿದ್ದಾರೆ.

“ಆರ್‌ಎಸ್‌ಎಸ್‌ನಿಂದ ಕಲಿಯಲು ಏನೂ ಇಲ್ಲ. ಗೋಡ್ಸೆಗೆ ಹೆಸರುವಾಸಿಯಾದ ಸಂಘಟನೆಯು ಗಾಂಧಿ ಸ್ಥಾಪಿಸಿದ ಸಂಘಟನೆಗೆ ಏನು ಕಲಿಸಲು ಸಾಧ್ಯ?” ಎಂದು ಖೇರಾ ಪ್ರಶ್ನಿಸಿದ್ದಾರೆ.

ದಿಗ್ವಿಜಯ್ ಸಿಂಗ್ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್, ವಿರೋಧ ಪಕ್ಷವು ಒಗ್ಗಟ್ಟಾಗಿದೆ. ಆದರೆ, ಪ್ರತಿಯೊಬ್ಬರಿಗೂ ತಮ್ಮದೇ ಆದ ಅಭಿಪ್ರಾಯವನ್ನು ಹೊಂದುವ, ವ್ಯಕ್ತಪಡಿಸುವ ಹಕ್ಕಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...