Homeಮುಖಪುಟಆರ್‌ಎಸ್‌ಎಸ್‌-ಬಿಜೆಪಿ ಸಂಘಟನಾ ಶಕ್ತಿ ಶ್ಲಾಘಿಸಿದ ದಿಗ್ವಿಜಯ ಸಿಂಗ್‌ಗೆ ಶಶಿ ತರೂರ್‌ ಬೆಂಬಲ : ಪವನ್‌ ಖೇರಾ...

ಆರ್‌ಎಸ್‌ಎಸ್‌-ಬಿಜೆಪಿ ಸಂಘಟನಾ ಶಕ್ತಿ ಶ್ಲಾಘಿಸಿದ ದಿಗ್ವಿಜಯ ಸಿಂಗ್‌ಗೆ ಶಶಿ ತರೂರ್‌ ಬೆಂಬಲ : ಪವನ್‌ ಖೇರಾ ತಿರುಗೇಟು

- Advertisement -
- Advertisement -

ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಆರ್‌ಎಸ್‌ಎಸ್‌ನ ಸಂಘಟನಾ ಶಕ್ತಿಯನ್ನು ಶ್ಲಾಘಿಸಿ ಹೇಳಿಕೆ ನೀಡಿರುವುದು ಪಕ್ಷದೊಳಗೆ ಮುಜುಗರ, ಅಸಮಾಧಾನ ಮತ್ತು ಅಪಸ್ವರಕ್ಕೆ ಕಾರಣವಾಗಿದೆ ಎಂಬ ಚರ್ಚೆಗಳು ನಡೆಯುತ್ತಿವೆ. ಆದರೆ, ಸಿಂಗ್ ಹೇಳಿಕೆಯನ್ನು ಕಾಂಗ್ರೆಸ್‌ ಹಿರಿಯ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಭಾನುವಾರ (ಡಿ.28) ಬೆಂಬಲಿಸಿದ್ದಾರೆ. ಕಾಂಗ್ರೆಸ್‌ನೊಳಗೆ ಶಿಸ್ತು ಮತ್ತು ಆಂತರಿಕ ಸುಧಾರಣೆಗಳ ಅಗತ್ಯವಿದೆ ಎಂದಿದ್ದಾರೆ.

ಯಾವುದೇ ರಾಜಕೀಯ ಪಕ್ಷಕ್ಕೆ ಶಿಸ್ತು ಅತ್ಯಗತ್ಯ. ದೀರ್ಘ ಇತಿಹಾಸ ಹೊಂದಿರುವ ಕಾಂಗ್ರೆಸ್ ತನ್ನದೇ ಆದ ಈ ಹಿಂದಿನ ಅನುಭವದಿಂದ ಕಲಿಯಬೇಕಾದದ್ದು ಬಹಳಷ್ಟಿದೆ ಎಂದು ತರೂರ್ ಹೇಳಿದ್ದಾರೆ.

“ನಮಗೆ 140 ವರ್ಷಗಳ ಇತಿಹಾಸವಿದೆ, ನಾವು ಅದರಿಂದ ಬಹಳಷ್ಟು ಕಲಿಯಬಹುದು. ನಾವು ನಮ್ಮಿಂದಲೂ ಕಲಿಯಬಹುದು. ಯಾವುದೇ ಪಕ್ಷದಲ್ಲಿ ಶಿಸ್ತು ಬಹಳ ಮುಖ್ಯ. ನಮ್ಮ ಸಂಘಟನೆ ಬಲಗೊಳ್ಳಬೇಕೆಂದು ನಾನು ಬಯಸುತ್ತೇನೆ. ನಮ್ಮ ಸಂಘಟನೆಯಲ್ಲಿ ಶಿಸ್ತು ಇರಬೇಕು. ದಿಗ್ವಿಜಯ ಸಿಂಗ್ ಸ್ವತಃ ಮಾತನಾಡಬಲ್ಲರು” ಎಂದು ಶಶಿ ತರೂರ್ ಹೇಳಿಕೆ ನೀಡಿದ್ದಾರೆ.

“ರಾಜಕೀಯ ಸವಾಲುಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಎದುರಿಸಲು ಕಾಂಗ್ರೆಸ್ ಆಂತರಿಕ ಶಿಸ್ತು ಮತ್ತು ಸಂಘಟನಾತ್ಮಕ ಬಲವನ್ನು ಸುಧಾರಿಸುವತ್ತ ಗಮನಹರಿಸಬೇಕು” ಎಂದು ತಿಳಿಸಿದ್ದಾರೆ.

ಹೇಳಿಕೆ ವಿವಾದ ಸ್ವರೂಪ ಪಡೆದ ಬಳಿಕ ದಿಗ್ವಿಜಯ ಸಿಂಗ್ ಜೊತೆ ಮಾತನಾಡಿದ್ದೀರಾ? ಎಂದು ಕೇಳಿದ್ದಕ್ಕೆ, “ನಮ್ಮ ನಡುವಿನ ಮಾತುಕತೆಗಳು ಸ್ವಾಭಾವಿಕ. ನಾವು ಸ್ನೇಹಿತರು, ಪರಸ್ಪರ ಮಾತುಕತೆ ನಡೆಸುವುದು ಸಹಜ. ಸಂಘಟನೆಯನ್ನು ಬಲಪಡಿಸಬೇಕು, ಅದರ ಬಗ್ಗೆ ಯಾವುದೇ ಸಂದೇಹವಿಲ್ಲ” ಎಂದು ಹೇಳಿದ್ದಾರೆ.

ದಿಗ್ವಿಜಯ ಸಿಂಗ್ ಅವರು “1995ರಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಬಳಿ ನೆಲದ ಮೇಲೆ ಕುಳಿತಿದ್ದ ಫೋಟೋವನ್ನು ಶನಿವಾರ ಹಂಚಿಕೊಂಡಿದ್ದರು. ಆರ್‌ಎಸ್‌ಎಸ್ ಮತ್ತು ಬಿಜೆಪಿಯಲ್ಲಿನ ತಳಮಟ್ಟದ ಕಾರ್ಯಕರ್ತರು ಉನ್ನತ ಸ್ಥಾನಗಳಿಗೆ ಹೇಗೆ ಏರಬಹುದು ಎಂಬುದನ್ನು ಈ ಫೋಟೋ ಪ್ರತಿಬಿಂಬಿಸುತ್ತದೆ ಎಂದು ಸಿಂಗ್ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದರು. ಇದನ್ನು ‘ಸಂಘಟನೆಯ ಶಕ್ತಿ’ ಎಂದು ಬಣ್ಣಿಸಿದ್ದರು. ಸಿಂಗ್ ಅವರ ಈ ಪೋಸ್ಟ್‌ ಕಾಂಗ್ರೆಸ್‌ಗೆ ಮುಜುಗರ ಉಂಟು ಮಾಡಿದೆ. ಪಕ್ಷದೊಳಗೆ ಅಸಮಾಧನಕ್ಕೆ ಕಾರಣವಾಗಿದೆ.

ತರೂರ್‌ ಹೇಳಿಕೆಗೆ ತಿರುಗೇಟು ಕೊಟ್ಟಿರುವ ಕಾಂಗ್ರೆಸ್ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಅಧ್ಯಕ್ಷ ಪವನ್ ಖೇರಾ ಸಿಂಗ್, ಆರ್‌ಎಸ್‌ಎಸ್‌ನಿಂದ ಕಲಿಯಲು ಏನೂ ಇಲ್ಲ ಎಂದಿದ್ದಾರೆ. ಖೇರಾ ಅವರು ಗಾಂಧಿ ಹಂತಹ ನಾತೂರಾಮ್ ಗೋಡ್ಸೆ ಮತ್ತು ಆರ್‌ಎಸ್‌ಸ್‌ ನಡುವಿನ ಸಂಬಂಧವನ್ನು ಉಲ್ಲೇಖಿಸಿದ್ದಾರೆ.

“ಆರ್‌ಎಸ್‌ಎಸ್‌ನಿಂದ ಕಲಿಯಲು ಏನೂ ಇಲ್ಲ. ಗೋಡ್ಸೆಗೆ ಹೆಸರುವಾಸಿಯಾದ ಸಂಘಟನೆಯು ಗಾಂಧಿ ಸ್ಥಾಪಿಸಿದ ಸಂಘಟನೆಗೆ ಏನು ಕಲಿಸಲು ಸಾಧ್ಯ?” ಎಂದು ಖೇರಾ ಪ್ರಶ್ನಿಸಿದ್ದಾರೆ.

ದಿಗ್ವಿಜಯ್ ಸಿಂಗ್ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್, ವಿರೋಧ ಪಕ್ಷವು ಒಗ್ಗಟ್ಟಾಗಿದೆ. ಆದರೆ, ಪ್ರತಿಯೊಬ್ಬರಿಗೂ ತಮ್ಮದೇ ಆದ ಅಭಿಪ್ರಾಯವನ್ನು ಹೊಂದುವ, ವ್ಯಕ್ತಪಡಿಸುವ ಹಕ್ಕಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...