Homeಮುಖಪುಟತೈಲ ದರ ಹೆಚ್ಚಳ: ಆಟೋ ಎಳೆದ ಶಶಿ ತರೂರ್, ಸೈಕಲ್ ಸವಾರರಾದ ತೇಜಸ್ವಿ ಯಾದವ್

ತೈಲ ದರ ಹೆಚ್ಚಳ: ಆಟೋ ಎಳೆದ ಶಶಿ ತರೂರ್, ಸೈಕಲ್ ಸವಾರರಾದ ತೇಜಸ್ವಿ ಯಾದವ್

ಒಂದು ಹೆಜ್ಜೆ ಮುಂದಕ್ಕೆ ಹೋಗಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಎಲೆಕ್ಟ್ರಿಕ್ ಸ್ಕೋಟರ್‌ ಓಡಿಸುವ ಮೂಲಕ ಇಂಧನ ಬೆಲೆ ಹೆಚ್ಚಳದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

- Advertisement -
- Advertisement -

ತೈಲ ಬೆಲೆ ಹೆಚ್ಚಳ ಹಿನ್ನೆಲೆ ದೇಶಾದ್ಯಂತ ಪ್ರತಿಭಟನೆ ವ್ಯಕ್ತವಾಗುತ್ತಿದೆ. ವಿರೋಧ ಪಕ್ಷಗಳು ಆಡಳಿತ ಪಕ್ಷದ ವಿರುದ್ಧ ಬೀದಿಗಿಳಿದಿವೆ. ವಿಭಿನ್ನ ರೀತಿಯ ಪ್ರತಿಭಟನೆಗೆ ತೈಲ ದರ ಹೆಚ್ಚಳ ಕಾರಣವಾಗುತ್ತಿದ್ದು. ಶುಕ್ರವಾರ ಕೇರಳದಲ್ಲಿ ಸಂಸದ ಶಶಿ ತರೂರ್ ಆಟೋ ಎಳೆದರೆ, ಇತ್ತ ಬಿಹಾರದಲ್ಲಿ ತೇಜಸ್ವಿ ಯಾದವ್ ಸೈಕಲ್ ಸವಾರಿ ಮೂಲಕ ಪ್ರತಿಭಟನೆ ನಡೆಸಿದ್ದಾರೆ.

ಇಂಧನ ಬೆಲೆ ಏರಿಕೆ ವಿರುದ್ಧ ಕೇರಳದಲ್ಲಿ ಪ್ರತಿಭಟನೆ ನಡೆಯುತ್ತಲೇ ಇದೆ. ಯುವ ಜನತೆ ವಿಭಿನ್ನ ರೀತಿಯಲ್ಲಿ ಸರ್ಕಾರದ ಗಮನ ಸೆಳೆಯುತ್ತಿದ್ದಾರೆ. ಕೇರಳ ಸಚಿವಾಲಯದ ಹೊರಗೆ ತಿರುವನಂತಪುರಂ ಕಾಂಗ್ರೆಸ್ ಸಂಸದ ಶಶಿ ತರೂರ್ ಮತ್ತು ಇತರ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ತೈಲ ದರ ಹೆಚ್ಚಾದ ಹಿನ್ನೆಲೆ ಆಟೋ ಚಾಲಕರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ಜೊತೆಗೆ ಆಟೋಗಳಿಗೆ ಹಗ್ಗ ಹಾಕಿ ಎಳೆದುಕೊಂಡು ಹೋಗುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬೆಲೆ ಏರಿಕೆ: ಮದುಮಕ್ಕಳಿಗೆ ಪೆಟ್ರೋಲ್, ಗ್ಯಾಸ್ ಸಿಲಿಂಡರ್, ಈರುಳ್ಳಿ ಉಡುಗೊರೆ!

ಬಿಹಾರ ವಿಧಾನಸಭೆ ಬಜೆಟ್ ಅಧಿವೇಶನದ 6 ನೇ ದಿನವಾದ ಶುಕ್ರವಾರ, ವಿರೋಧ ಪಕ್ಷದ ನಾಯಕ, ಆರ್‌ಜೆಡಿ ಮುಖಂಡ ತೇಜಶ್ವಿ ಯಾದವ್ ಅಧಿವೇಶನದಲ್ಲಿ ಭಾಗವಹಿಸಲು ಸೈಕಲ್ ಮೂಲಕ ವಿಧಾನಸಭೆಯನ್ನು ತಲುಪಿದರು. ಸೋಮವಾರ ಕೂಡ ತೇಜಸ್ವಿ ಅಸೆಂಬ್ಲಿಗೆ ಟ್ಯ್ರಾಕ್ಟರ್‌ನಲ್ಲಿ ಬಂದಿದ್ದರು. ಇಂಧನ ಬೆಲೆ ಹೆಚ್ಚಳದ ವಿರುದ್ಧ ತೇಜಸ್ವಿ ಯಾದವ್ ಪ್ರತಿಭಟನೆ ನಡೆಸುತ್ತಿರುವ ಪರಿ ಇದಾಗಿದೆ.

ನಂತರ ಟ್ವೀಟ್ ಮಾಡಿರುವ ತೇಜಶ್ವಿ ಯಾದವ್, “ಹೆಚ್ಚುತ್ತಿರುವ ತೈಲ ಬೆಲೆಗಳನ್ನು ವಿರೋಧಿಸಿ, ಅಸೆಂಬ್ಲಿಗೆ ಇಂದು ಸೈಕ್ಲಿಂಗ್ ಮೂಲಕ ತಲುಪಿದೆ. ಬಡವರ ರಕ್ತ ಹೀರಿಕೊಂಡ ಶ್ರೀಮಂತರ ಪ್ರೀತಿಯ ಸರ್ಕಾರ ಪೆಟ್ರೋಲ್, ಡೀಸೆಲ್, ಅನಿಲದ ಬೆಲೆಯನ್ನು ಹೆಚ್ಚಿಸಿ, ಸಾಮಾನ್ಯ ಜನರನ್ನು ಸಾಯುವಂತೆ ಮಾಡಿದೆ. ಡಬಲ್ ಎಂಜಿನ್ ಸರ್ಕಾರ ಬಡವರನ್ನು ಲೂಟಿ ಮಾಡುತ್ತಿದೆ’ ಎಂದಿದ್ದಾರೆ.

ಇದನ್ನೂ ಓದಿ: ದೆಹಲಿ: ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಯೂತ್ ಕಾಂಗ್ರೆಸ್ ಪ್ರತಿಭಟನೆ

ಇನ್ನು ಒಂದು ಹೆಜ್ಜೆ ಮುಂದಕ್ಕೆ ಹೋಗಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಎಲೆಕ್ಟ್ರಿಕ್ ಸ್ಕೋಟರ್‌ ಓಡಿಸುವ ಮೂಲಕ ಇಂಧನ ಬೆಲೆ ಹೆಚ್ಚಳದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಕೊಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ಎಲೆಕ್ಟ್ರಿಕ್ ಸ್ಕೂಟರ್ ಓಡಿಸಿಕೊಂಡು ತಮ್ಮ ಕಚೇರಿಗೆ ಹೋಗಿದ್ದಾರೆ. ಇಂಧನ ಬೆಲೆ ಏರಿಕೆ ವಿರುದ್ಧ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೂ ಅವರು ಎಲೆಕ್ಟ್ರಿಕ್ ಸ್ಕೂಟರ್‌ ಬಳಸಿ ಹೋಗಿದ್ದರು.

ಇದನ್ನೂ ಓದಿ: ಲೀ ಪೆಟ್ರೋಲ್ ದರ ರೂ. 06!, ರಾಮದೇವ್ ಯೋಗ ಭಂಗಿಯಲ್ಲಿ ನೋಡಿದರೆ: ತರೂರ್ ವ್ಯಂಗ್ಯ

PC: ANI

ಈ ಬಾರಿಯ ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರದ ವಿರುದ್ಧ ಸಿಗುವ ಯಾವುದೇ ಅವಕಾಶವನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಟ್ಟು ಕೊಡುತ್ತಿಲ್ಲ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ, ರೈತರಿಗೆ ಬೆಂಬಲ ನೀಡಿದ್ದಾರೆ. ಈಗ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆ ಏರಿಕೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಏರಿಕೆ: ಕತ್ತೆ, ಕುದುರೆ ಮೊರೆ ಹೋದ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....