Homeಮುಖಪುಟತೈಲ ದರ ಹೆಚ್ಚಳ: ಆಟೋ ಎಳೆದ ಶಶಿ ತರೂರ್, ಸೈಕಲ್ ಸವಾರರಾದ ತೇಜಸ್ವಿ ಯಾದವ್

ತೈಲ ದರ ಹೆಚ್ಚಳ: ಆಟೋ ಎಳೆದ ಶಶಿ ತರೂರ್, ಸೈಕಲ್ ಸವಾರರಾದ ತೇಜಸ್ವಿ ಯಾದವ್

ಒಂದು ಹೆಜ್ಜೆ ಮುಂದಕ್ಕೆ ಹೋಗಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಎಲೆಕ್ಟ್ರಿಕ್ ಸ್ಕೋಟರ್‌ ಓಡಿಸುವ ಮೂಲಕ ಇಂಧನ ಬೆಲೆ ಹೆಚ್ಚಳದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

- Advertisement -
- Advertisement -

ತೈಲ ಬೆಲೆ ಹೆಚ್ಚಳ ಹಿನ್ನೆಲೆ ದೇಶಾದ್ಯಂತ ಪ್ರತಿಭಟನೆ ವ್ಯಕ್ತವಾಗುತ್ತಿದೆ. ವಿರೋಧ ಪಕ್ಷಗಳು ಆಡಳಿತ ಪಕ್ಷದ ವಿರುದ್ಧ ಬೀದಿಗಿಳಿದಿವೆ. ವಿಭಿನ್ನ ರೀತಿಯ ಪ್ರತಿಭಟನೆಗೆ ತೈಲ ದರ ಹೆಚ್ಚಳ ಕಾರಣವಾಗುತ್ತಿದ್ದು. ಶುಕ್ರವಾರ ಕೇರಳದಲ್ಲಿ ಸಂಸದ ಶಶಿ ತರೂರ್ ಆಟೋ ಎಳೆದರೆ, ಇತ್ತ ಬಿಹಾರದಲ್ಲಿ ತೇಜಸ್ವಿ ಯಾದವ್ ಸೈಕಲ್ ಸವಾರಿ ಮೂಲಕ ಪ್ರತಿಭಟನೆ ನಡೆಸಿದ್ದಾರೆ.

ಇಂಧನ ಬೆಲೆ ಏರಿಕೆ ವಿರುದ್ಧ ಕೇರಳದಲ್ಲಿ ಪ್ರತಿಭಟನೆ ನಡೆಯುತ್ತಲೇ ಇದೆ. ಯುವ ಜನತೆ ವಿಭಿನ್ನ ರೀತಿಯಲ್ಲಿ ಸರ್ಕಾರದ ಗಮನ ಸೆಳೆಯುತ್ತಿದ್ದಾರೆ. ಕೇರಳ ಸಚಿವಾಲಯದ ಹೊರಗೆ ತಿರುವನಂತಪುರಂ ಕಾಂಗ್ರೆಸ್ ಸಂಸದ ಶಶಿ ತರೂರ್ ಮತ್ತು ಇತರ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ತೈಲ ದರ ಹೆಚ್ಚಾದ ಹಿನ್ನೆಲೆ ಆಟೋ ಚಾಲಕರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ಜೊತೆಗೆ ಆಟೋಗಳಿಗೆ ಹಗ್ಗ ಹಾಕಿ ಎಳೆದುಕೊಂಡು ಹೋಗುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬೆಲೆ ಏರಿಕೆ: ಮದುಮಕ್ಕಳಿಗೆ ಪೆಟ್ರೋಲ್, ಗ್ಯಾಸ್ ಸಿಲಿಂಡರ್, ಈರುಳ್ಳಿ ಉಡುಗೊರೆ!

ಬಿಹಾರ ವಿಧಾನಸಭೆ ಬಜೆಟ್ ಅಧಿವೇಶನದ 6 ನೇ ದಿನವಾದ ಶುಕ್ರವಾರ, ವಿರೋಧ ಪಕ್ಷದ ನಾಯಕ, ಆರ್‌ಜೆಡಿ ಮುಖಂಡ ತೇಜಶ್ವಿ ಯಾದವ್ ಅಧಿವೇಶನದಲ್ಲಿ ಭಾಗವಹಿಸಲು ಸೈಕಲ್ ಮೂಲಕ ವಿಧಾನಸಭೆಯನ್ನು ತಲುಪಿದರು. ಸೋಮವಾರ ಕೂಡ ತೇಜಸ್ವಿ ಅಸೆಂಬ್ಲಿಗೆ ಟ್ಯ್ರಾಕ್ಟರ್‌ನಲ್ಲಿ ಬಂದಿದ್ದರು. ಇಂಧನ ಬೆಲೆ ಹೆಚ್ಚಳದ ವಿರುದ್ಧ ತೇಜಸ್ವಿ ಯಾದವ್ ಪ್ರತಿಭಟನೆ ನಡೆಸುತ್ತಿರುವ ಪರಿ ಇದಾಗಿದೆ.

ನಂತರ ಟ್ವೀಟ್ ಮಾಡಿರುವ ತೇಜಶ್ವಿ ಯಾದವ್, “ಹೆಚ್ಚುತ್ತಿರುವ ತೈಲ ಬೆಲೆಗಳನ್ನು ವಿರೋಧಿಸಿ, ಅಸೆಂಬ್ಲಿಗೆ ಇಂದು ಸೈಕ್ಲಿಂಗ್ ಮೂಲಕ ತಲುಪಿದೆ. ಬಡವರ ರಕ್ತ ಹೀರಿಕೊಂಡ ಶ್ರೀಮಂತರ ಪ್ರೀತಿಯ ಸರ್ಕಾರ ಪೆಟ್ರೋಲ್, ಡೀಸೆಲ್, ಅನಿಲದ ಬೆಲೆಯನ್ನು ಹೆಚ್ಚಿಸಿ, ಸಾಮಾನ್ಯ ಜನರನ್ನು ಸಾಯುವಂತೆ ಮಾಡಿದೆ. ಡಬಲ್ ಎಂಜಿನ್ ಸರ್ಕಾರ ಬಡವರನ್ನು ಲೂಟಿ ಮಾಡುತ್ತಿದೆ’ ಎಂದಿದ್ದಾರೆ.

ಇದನ್ನೂ ಓದಿ: ದೆಹಲಿ: ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಯೂತ್ ಕಾಂಗ್ರೆಸ್ ಪ್ರತಿಭಟನೆ

ಇನ್ನು ಒಂದು ಹೆಜ್ಜೆ ಮುಂದಕ್ಕೆ ಹೋಗಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಎಲೆಕ್ಟ್ರಿಕ್ ಸ್ಕೋಟರ್‌ ಓಡಿಸುವ ಮೂಲಕ ಇಂಧನ ಬೆಲೆ ಹೆಚ್ಚಳದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಕೊಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ಎಲೆಕ್ಟ್ರಿಕ್ ಸ್ಕೂಟರ್ ಓಡಿಸಿಕೊಂಡು ತಮ್ಮ ಕಚೇರಿಗೆ ಹೋಗಿದ್ದಾರೆ. ಇಂಧನ ಬೆಲೆ ಏರಿಕೆ ವಿರುದ್ಧ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೂ ಅವರು ಎಲೆಕ್ಟ್ರಿಕ್ ಸ್ಕೂಟರ್‌ ಬಳಸಿ ಹೋಗಿದ್ದರು.

ಇದನ್ನೂ ಓದಿ: ಲೀ ಪೆಟ್ರೋಲ್ ದರ ರೂ. 06!, ರಾಮದೇವ್ ಯೋಗ ಭಂಗಿಯಲ್ಲಿ ನೋಡಿದರೆ: ತರೂರ್ ವ್ಯಂಗ್ಯ

PC: ANI

ಈ ಬಾರಿಯ ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರದ ವಿರುದ್ಧ ಸಿಗುವ ಯಾವುದೇ ಅವಕಾಶವನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಟ್ಟು ಕೊಡುತ್ತಿಲ್ಲ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ, ರೈತರಿಗೆ ಬೆಂಬಲ ನೀಡಿದ್ದಾರೆ. ಈಗ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆ ಏರಿಕೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಏರಿಕೆ: ಕತ್ತೆ, ಕುದುರೆ ಮೊರೆ ಹೋದ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...