Homeಕರೋನಾ ತಲ್ಲಣಕೇಂದ್ರದ ಲಸಿಕಾ ನೀತಿಯ ವಿರುದ್ಧ ಶಶಿ ತರೂರ್‌ ಅಸಮಾಧಾನ. ಭಾರತೀಯರೆಲ್ಲರಿಗೂ ಉಚಿತ ಲಸಿಕೆ ನೀಡಲು ಆಗ್ರಹ

ಕೇಂದ್ರದ ಲಸಿಕಾ ನೀತಿಯ ವಿರುದ್ಧ ಶಶಿ ತರೂರ್‌ ಅಸಮಾಧಾನ. ಭಾರತೀಯರೆಲ್ಲರಿಗೂ ಉಚಿತ ಲಸಿಕೆ ನೀಡಲು ಆಗ್ರಹ

- Advertisement -
- Advertisement -

ಕೋರೋನಾ ಸಾಂಕ್ರಾಮಿಕಕ್ಕೆ ತುತ್ತಾಗಿರುವ ಸಂಸದ ಮತ್ತು ಕಾಂಗ್ರೆಸ್‌ ನಾಯಕ ಶಶಿ ತರೂರ್‌ ಆಸ್ಪತ್ರೆಯ ಬೆಡ್‌ ನಿಂದಲೇ ಕೇಂದ್ರ ಸರ್ಕಾರದ ಅಸಮರ್ಪಕ ವ್ಯಾಕ್ಸೀನ್‌ ನೀತಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಜೊತೆಗೆ ದೇಶದ ಎಲ್ಲರಿಗೂ ಕೇಂದ್ರ ಸರ್ಕಾರ ಉಚಿತ ವ್ಯಾಕ್ಸೀನ್‌ ನೀಡಲು ಮುಂದಾಗಬೇಕೆಂದು ಆಗ್ರಹಿಸಿದ್ದಾರೆ.

ಶಶಿ ತರೂರ್‌ ಈ ಸಂಬಂಧ ಆಸ್ಪತ್ರೆಯ ಬೆಡ್‌ ನಿಂದಲೇ ವಿಡಿಯೋ ಒಂದನ್ನು ಮಾಡಿದ್ದು ಆ ವಿಡಿಯೋದಲ್ಲಿ “ಕೇಂದ್ರ ಸರ್ಕಾರದ ವ್ಯಾಕ್ಸೀನ್‌ ನೀತಿ ಅಸಮರ್ಪಕವಾಗಿದೆ. ಕೇಂದ್ರ ಸರ್ಕಾರ ತನ್ನ ಭರವಸೆಯಂತೆ 2021 ರ ಡಿಸೆಂಬರ್‌ ಅಂತ್ಯದ ವೇಳೆಗೆ ಪ್ರತಿಯೊಬ್ಬರಿಗೂ ವ್ಯಾಕ್ಸೀನ್‌ ನೀಡಲು ಮುಂದಾಗಬೇಕು. ದೇಶದ ಪ್ರತಿಯೊಬ್ಬರಿಗೂ ಉಚಿತವಾಗಿ ವ್ಯಾಕ್ಸೀನ್‌ ಸಿಗುವಂತಾಗಬೇಕು. ಈ ಸಂಬಂಧ ಸೇವ್‌ ಇಂಡಿಯಾ ಕ್ಯಾಂಪೇನ್‌ ಮಾಡುತ್ತಿದ್ದು ಆಂದೋಲನದಲ್ಲಿ ಈ ಮೂಲಕ ತಾವು ಭಾಗಿಯಾಗುವುದಾಗಿ” ಹೇಳಿದ್ದಾರೆ.

ಈಗ ದೇಶದಲ್ಲಿ ಉತ್ಪಾದನೆಯಾಗುತ್ತಿರುವ ವ್ಯಾಕ್ಸೀನ್‌ ಪ್ರಮಾಣದಿಂದ ಡಿಸೆಂಬರ್‌ ವೇಳೆಗೆ ಪ್ರತಿಯೊಬ್ಬರಿಗೂ ವ್ಯಾಕ್ಸೀನ್‌ ಸೌಲಭ್ಯವನ್ನು ನೀಡಲು ಸಾಧ್ಯವಿಲ್ಲ. ನರೇಂದ್ರ ಮೋದಿಯವರ ಸರ್ಕಾರ 2021 ರ ಜನವರಿಯಲ್ಲಿ ತನ್ನ ವ್ಯಾಕ್ಸಿನೇಶನ್‌ ಅಭಿಯಾನವನ್ನು ಆರಂಭಿಸುವಾಗ ಎಲ್ಲರಿಗೂ ಕೇಂದ್ರವೇ ವ್ಯಾಕ್ಸೀನ್‌ ನೀಡುವುದಾಗಿ ಭರವಸೆ ನೀಡಿತ್ತು. ಈಗ ಅರ್ಧದಷ್ಟು ವ್ಯಾಕ್ಸಿನ್‌ ಉತ್ಪಾದನೆಯನ್ನು ಸಬ್ಸಿಡಿ ಬೆಲೆಯಲ್ಲಿ ತಾನು ಖರೀದಿಸಿ ಉಳಿದದ್ದನ್ನು ರಾಜ್ಯಗಳಿಗೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಬಿಟ್ಟುಕೊಟ್ಟಿದೆ. ಮುಕ್ತ ಮಾರುಕಟ್ಟೆಯಲ್ಲಿ ರಾಜ್ಯ ಸರ್ಕಾರಗಳು ಮತ್ತು ಖಾಸಗಿ ಸಂಸ್ಥೆಗಳು ವ್ಯಾಕ್ಸೀನ್‌ ಗಾಗಿ ಪೈಪೋಟಿ ನಡೆಸುವಂತಾಗಿದೆ. ಇದರಿಂದ ದೇಶದೆಲ್ಲೆಡೆ ವ್ಯಾಕ್ಸೀನ್‌ ಗೆ ಕತಕ ಅಭಾವ ಸೃಷ್ಟಿಯಾಗಿದ್ದು ಖಾಸಗಿ ವಲಯವು ದೇಶದ ಉತ್ಪಾದನೆಯ ಬಹುಪಾಲು ವ್ಯಾಕ್ಸೀನ್‌ ಗಳನ್ನು ಖರೀದಿಸಿ ದುಬಾರಿ ಬೆಲೆಗೆ ಮಾರಿಕೊಳ್ಳಲು ಕೇಂದ್ರವೇ ಅವಕಾಶ ಮಾಡಿಕೊಟ್ಟಿದೆ ಎಂದು ಶಶಿ ತರೂರ್‌ ಕೇಂದ್ರ ಸರ್ಕಾರದ ವ್ಯಾಕ್ಸೀನ್‌ ನೀತಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರವು ತನ್ನ ಈ ಅಸಮರ್ಪಕ ವ್ಯಾಕ್ಸೀನ್‌ ನೀತಿಯನ್ನು ಹಿಂಪಡೆದು ದೇಶದ ಎಲ್ಲರಿಗೂ ವ್ಯಾಕ್ಸೀನ್‌ ನೀಡುವ ತನ್ನ ಭರವಸೆಗೆ ಬದ್ಧವಾಗಬೇಕು ಎಂದು ಶಶಿ ತರೂರ್‌ ಆಗ್ರಹಿಸಿದ್ದಾರೆ.

ಕಳೆದ ಕೆಲದಿನಗಳಿಂದ ಕೋವಿಡ್‌ ಸೋಂಕಿನಿಂದಾಗಿ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗಿರುವ ಶಶಿ ತರೂರ್‌ ಸದ್ಯ ಆಸ್ಪತ್ರೆಯಲ್ಲಿ ಗುಣಮುಖರಾಗುತ್ತಿದ್ದಾರೆ. ತಾವು ಕೊರೋನಾ ಸೋಂಕಿನಿಂದ ಗಂಭೀರ ಆರೋಗ್ಯ ಸಮಸ್ಯೆಗೆ ತುತ್ತಾಗಿದ್ದು ದೇಶದ ಜನರು ತಾವು ಅನುಭವಿಸಿದ ಆರೋಗ್ಯ ಸಮಸ್ಯೆಯನ್ನು ಎದುರಿಸದಂತಾಗಬೇಕು ಎಂದು ಶಶಿ ತರೂರ್‌ ಹೇಳಿದ್ದಾರೆ.


ಇದನ್ನೂ ಓದಿ: ಬ್ರಿಟನ್‌ನಲ್ಲಿ ಕೊರೋನಾ ಇಳಿಮುಖ: ಜೂನ್ 1 ರಂದು ಶೂನ್ಯ ಸಾವಿನ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...