Homeಅಂತರಾಷ್ಟ್ರೀಯವಾಷಿಂಗ್ಟನ್ ಪೋಸ್ಟ್‌ನಲ್ಲಿ ಉದ್ಯೋಗ ಕಡಿತ : ಕೆಲಸ ಕಳೆದುಕೊಂಡ ಶಶಿ ತರೂರ್ ಮಗ

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಉದ್ಯೋಗ ಕಡಿತ : ಕೆಲಸ ಕಳೆದುಕೊಂಡ ಶಶಿ ತರೂರ್ ಮಗ

- Advertisement -
- Advertisement -

ಪ್ರಮುಖ ಮಾಧ್ಯಮ ಸಂಸ್ಥೆ ವಾಷಿಂಗ್ಟನ್‌ ಪೋಸ್ಟ್‌ನಲ್ಲಿ ಭಾರೀ ಉದ್ಯೋಗ ಕಡಿತ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಕೆಲಸ ಕಳೆದುಕೊಂಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಸಂಸದ ಶಶಿ ತರೂರ್ ಅವರ ಮಗ ಇಶಾನ್ ತರೂರ್‌ ಮಾಹಿತಿ ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಭಾವುಕವಾಗಿ ಬರೆದುಕೊಂಡಿರುವ ಇಶಾನ್ ತರೂರ್, ಪತ್ರಿಕೆಯ ಅಂತರಾಷ್ಟ್ರೀಯ ವಿಭಾಗದ ಬಹುತೇಕ ಸಿಬ್ಬಂದಿ ಹಾಗೂ ಅನೇಕ ಪ್ರತಿಭಾವಂತ ಸಹೋದ್ಯೋಗಿಗಳ ಜೊತೆಗೆ ತಾವೂ ಕೆಲಸ ಕಳೆದುಕೊಂಡಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಸುಮಾರು 12 ವರ್ಷಗಳ ಕಾಲ ತಮ್ಮೊಂದಿಗೆ ಕೆಲಸ ಮಾಡಿದ ಅಪ್ರತಿಮ ಪತ್ರಕರ್ತರು ಮತ್ತು ಸಂಪಾದಕರಿಂದ ದೂರವಾಗುತ್ತಿರುವುದು ಮನಸ್ಸಿಗೆ ನೋವುಂಟು ಮಾಡಿದೆ ಎಂದು ಅವರು ಹೇಳಿದ್ದಾರೆ. ವಿಶ್ವ ರಾಜಕಾರಣ ಮತ್ತು ಅಮೆರಿಕದ ಜಾಗತಿಕ ಪಾತ್ರವನ್ನು ಓದುಗರಿಗೆ ವಿವರಿಸುವ ಉದ್ದೇಶದಿಂದ ಅವರು 2017ರಲ್ಲಿ ‘ವರ್ಲ್ಡ್ ವೀವ್‌’ ಎಂಬ ಅಂಕಣವನ್ನು ಆರಂಭಿಸಿದ್ದರು. ಈ ಅಂಕಣಕ್ಕೆ ಸುಮಾರು ಐದು ಲಕ್ಷಕ್ಕೂ ಹೆಚ್ಚು ಚಂದಾದಾರರಿದ್ದು, ಇಷ್ಟು ವರ್ಷಗಳ ಕಾಲ ಬೆಂಬಲ ನೀಡಿದ ಓದುಗರಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ, ಖಾಲಿ ಸುದ್ದಿ ಮನೆಯ ಫೋಟೋ ಹಂಚಿಕೊಂಡಿರುವ ಇಶಾನ್ ತರೂರ್, “ಕೆಟ್ಟ ದಿನ” ಎಂದು ಹೇಳಿದ್ದಾರೆ.

ವಾಷಿಂಗ್ಟನ್ ಪೋಸ್ಟ್ ತನ್ನ ಒಟ್ಟು ಸಿಬ್ಬಂದಿಯಲ್ಲಿ ಸುಮಾರು ಮೂರನೇ ಒಂದು ಭಾಗದಷ್ಟು ಜನರನ್ನು (ಸುಮಾರು 300ಕ್ಕೂ ಹೆಚ್ಚು ಉದ್ಯೋಗಿಗಳು) ಕೆಲಸದಿಂದ ತೆಗೆದುಹಾಕಿದೆ. ಕ್ರೀಡಾ ವಿಭಾಗವನ್ನು ಸ್ಥಗಿತಗೊಳಿಸಿದೆ, ಹಲವಾರು ವಿದೇಶಿ ಬ್ಯೂರೋಗಳನ್ನು ಮುಚ್ಚಿದೆ ಮತ್ತು ಪುಸ್ತಕಗಳ ವರದಿಯನ್ನು ಕೊನೆಗೊಳಿಸಿದೆ ಎಂದು ವರದಿಯಾಗಿದೆ.

ಪತ್ರಿಕೆಯ ನವ ದೆಹಲಿಯ ಬ್ಯೂರೋ ಮುಖ್ಯಸ್ಥರು ಮತ್ತು ಮಧ್ಯಪ್ರಾಚ್ಯದ ಸಂಪೂರ್ಣ ವರದಿಗಾರರ ತಂಡ ಸೇರಿದಂತೆ ಹಲವರು ಈ ಉದ್ಯೋಗ ಕಡಿತದಿಂದ ಸಂಕಷ್ಟಕ್ಕೀಡಾಗಿದ್ದಾರೆ. ಕಂಪನಿಯು ಅತ್ಯಂತ ವೇಗವಾಗಿ ಮತ್ತು ದೊಡ್ಡ ಮಟ್ಟದಲ್ಲಿ ಸಿಬ್ಬಂದಿಗಳನ್ನು ವಜಾಗೊಳಿಸಿರುವುದು ಅಲ್ಲಿನ ಉದ್ಯೋಗಿಗಳಲ್ಲಿ ಆಘಾತ ಮೂಡಿಸಿದೆ. ಇಡೀ ಕಂಪನಿಯ ಸಭೆಯ ನಂತರ, ಇಮೇಲ್ ಮೂಲಕ ಈ ನಿರ್ಧಾರದ ಬಗ್ಗೆ ಉದ್ಯೋಗಿಗಳಿಗೆ ಮಾಹಿತಿ ನೀಡಲಾಗಿದೆ. ಈ ಪ್ರಕ್ರಿಯೆಯು ನಡೆದ ರೀತಿ ಮತ್ತು ಅದರ ವೇಗವು ಸಿಬ್ಬಂದಿಗಳನ್ನು ದಿಗ್ಭ್ರಮೆಗೊಳಿಸಿದೆ ಎಂದು ವರದಿಗಳು ಹೇಳಿವೆ.

ಬದಲಾಗುತ್ತಿರುವ ತಂತ್ರಜ್ಞಾನ ಮತ್ತು ಓದುಗರ ಹವ್ಯಾಸಗಳಿಗೆ ಅನುಗುಣವಾಗಿ ಸಂಸ್ಥೆಯನ್ನು ಮರುರೂಪಿಸಲು ಈ ಉದ್ಯೋಗ ಕಡಿತ ಅನಿವಾರ್ಯ ಎಂದು ದಿ ವಾಷಿಂಗ್ಟನ್ ಪೋಸ್ಟ್ ತಿಳಿಸಿದೆ.

ಈ ಪ್ರಮುಖ ಪುನರ್‌ರಚನೆಯ ಭಾಗವಾಗಿ ಪತ್ರಿಕೆಯ ಕ್ರೀಡಾ ವಿಭಾಗವನ್ನು ಸಂಪೂರ್ಣವಾಗಿ ಕೈಬಿಡಲಾಗುತ್ತಿದೆ. ಇದರೊಂದಿಗೆ, ವಿದೇಶಿ ಬ್ಯೂರೋಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಲಾಗುತ್ತಿದೆ ಮತ್ತು ಪುಸ್ತಕ ವಿಮರ್ಶೆ ಹಾಗೂ ಸಾಹಿತ್ಯಕ್ಕೆ ಸಂಬಂಧಿಸಿದ ವಿಭಾಗವನ್ನು ಮುಚ್ಚಲಾಗುತ್ತಿದೆ. ಒಟ್ಟಾರೆಯಾಗಿ, ಡಿಜಿಟಲ್ ಯುಗದ ಸವಾಲುಗಳನ್ನು ಎದುರಿಸಲು ಸಂಸ್ಥೆಯು ತನ್ನ ಕಾರ್ಯವೈಖರಿಯಲ್ಲಿ ಭಾರಿ ಬದಲಾವಣೆಗಳನ್ನು ಮಾಡಿಕೊಳ್ಳುತ್ತಿದೆ ಎಂದಿದೆ.

ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾದ ಮ್ಯಾಟ್ ಮುರ್ರೆ ಈ ನಿರ್ಧಾರವನ್ನು ಅತ್ಯಂತ ನೋವಿನಿಂದ ಕೂಡಿದರೂ ಅನಿವಾರ್ಯವಾದದ್ದು ಎಂದು ಹೇಳಿದ್ದಾರೆ. ಪ್ರಸ್ತುತ ಬದಲಾಗುತ್ತಿರುವ ಮಾಧ್ಯಮ ಕ್ಷೇತ್ರದಲ್ಲಿ ಸಂಸ್ಥೆಯು ಎಲ್ಲರಿಗೂ ಎಲ್ಲವನ್ನೂ ನೀಡಲು ಸಾಧ್ಯವಿಲ್ಲ, ಆದ್ದರಿಂದ ಈ ಬದಲಾವಣೆ ಅವಶ್ಯಕ ಎಂದು ಅವರು ಸಿಬ್ಬಂದಿಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...

ಕೇರಳ: 2026 ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ; ಹಾಲಿ ಸಂಸದರು, ಲೈಂಗಿಕ ಪ್ರಕರಣದ ಆರೋಪಿಗಳಿಗಿಲ್ಲ ಸ್ಥಾನ

ತಿರುವನಂತಪುರಂ: ಬಹಳ ದಿನಗಳ ನಂತರ, ಏಪ್ರಿಲ್ 9 ರಂದು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಕೇರಳದ ಉಳಿದ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.  ಕಣ್ಣೂರು ಕಾರ್ಪೊರೇಷನ್‌ನ ಮಾಜಿ ಮೇಯರ್ ಟಿ.ಒ. ಮೋಹನನ್ ಅವರನ್ನು ಕಣ್ಣೂರಿನಲ್ಲಿ...

‘ನೀವು ಶಂಕಿತ’ : ಮುಹಮ್ಮದ್ ದೀಪಕ್‌ಗೆ ಉತ್ತರಾಖಂಡ ಹೈಕೋರ್ಟ್ ತರಾಟೆ!

ಇತ್ತೀಚೆಗೆ ಹಿಂದುತ್ವವಾದಿಗಳ ದಾಳಿಯಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿ ಶ್ಲಾಘನೆಗೆ ಪಾತ್ರರಾದ ಮುಹಮ್ಮದ್ ದೀಪಕ್ (ದೀಪಕ್ ಕುಮಾರ್) ಅವರನ್ನು ಉತ್ತರಾಖಂಡ ಹೈಕೋರ್ಟ್ ಗುರುವಾರ (ಮಾ.19) ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು barandbench.com ವರದಿ...

ಎಂಟು ವರ್ಷ ಜೈಲಿನಲ್ಲಿ ಕಳೆದ ಬಳಿಕ ಯುಎಪಿಎ ಅಡಿ ಬಂಧಿತ ಇಬ್ಬರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದ ನಂತರ, ದೆಹಲಿ ನ್ಯಾಯಾಲಯವು ಗುರುವಾರ (ಮಾರ್ಚ್ 19, 2026) ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲ್ಪಟ್ಟ ಇಬ್ಬರು ವ್ಯಕ್ತಿಗಳನ್ನು ಖುಲಾಸೆಗೊಳಿಸಿದೆ...