Homeಅಂತರಾಷ್ಟ್ರೀಯವಾಷಿಂಗ್ಟನ್ ಪೋಸ್ಟ್‌ನಲ್ಲಿ ಉದ್ಯೋಗ ಕಡಿತ : ಕೆಲಸ ಕಳೆದುಕೊಂಡ ಶಶಿ ತರೂರ್ ಮಗ

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಉದ್ಯೋಗ ಕಡಿತ : ಕೆಲಸ ಕಳೆದುಕೊಂಡ ಶಶಿ ತರೂರ್ ಮಗ

- Advertisement -
- Advertisement -

ಪ್ರಮುಖ ಮಾಧ್ಯಮ ಸಂಸ್ಥೆ ವಾಷಿಂಗ್ಟನ್‌ ಪೋಸ್ಟ್‌ನಲ್ಲಿ ಭಾರೀ ಉದ್ಯೋಗ ಕಡಿತ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಕೆಲಸ ಕಳೆದುಕೊಂಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಸಂಸದ ಶಶಿ ತರೂರ್ ಅವರ ಮಗ ಇಶಾನ್ ತರೂರ್‌ ಮಾಹಿತಿ ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಭಾವುಕವಾಗಿ ಬರೆದುಕೊಂಡಿರುವ ಇಶಾನ್ ತರೂರ್, ಪತ್ರಿಕೆಯ ಅಂತರಾಷ್ಟ್ರೀಯ ವಿಭಾಗದ ಬಹುತೇಕ ಸಿಬ್ಬಂದಿ ಹಾಗೂ ಅನೇಕ ಪ್ರತಿಭಾವಂತ ಸಹೋದ್ಯೋಗಿಗಳ ಜೊತೆಗೆ ತಾವೂ ಕೆಲಸ ಕಳೆದುಕೊಂಡಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಸುಮಾರು 12 ವರ್ಷಗಳ ಕಾಲ ತಮ್ಮೊಂದಿಗೆ ಕೆಲಸ ಮಾಡಿದ ಅಪ್ರತಿಮ ಪತ್ರಕರ್ತರು ಮತ್ತು ಸಂಪಾದಕರಿಂದ ದೂರವಾಗುತ್ತಿರುವುದು ಮನಸ್ಸಿಗೆ ನೋವುಂಟು ಮಾಡಿದೆ ಎಂದು ಅವರು ಹೇಳಿದ್ದಾರೆ. ವಿಶ್ವ ರಾಜಕಾರಣ ಮತ್ತು ಅಮೆರಿಕದ ಜಾಗತಿಕ ಪಾತ್ರವನ್ನು ಓದುಗರಿಗೆ ವಿವರಿಸುವ ಉದ್ದೇಶದಿಂದ ಅವರು 2017ರಲ್ಲಿ ‘ವರ್ಲ್ಡ್ ವೀವ್‌’ ಎಂಬ ಅಂಕಣವನ್ನು ಆರಂಭಿಸಿದ್ದರು. ಈ ಅಂಕಣಕ್ಕೆ ಸುಮಾರು ಐದು ಲಕ್ಷಕ್ಕೂ ಹೆಚ್ಚು ಚಂದಾದಾರರಿದ್ದು, ಇಷ್ಟು ವರ್ಷಗಳ ಕಾಲ ಬೆಂಬಲ ನೀಡಿದ ಓದುಗರಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ, ಖಾಲಿ ಸುದ್ದಿ ಮನೆಯ ಫೋಟೋ ಹಂಚಿಕೊಂಡಿರುವ ಇಶಾನ್ ತರೂರ್, “ಕೆಟ್ಟ ದಿನ” ಎಂದು ಹೇಳಿದ್ದಾರೆ.

ವಾಷಿಂಗ್ಟನ್ ಪೋಸ್ಟ್ ತನ್ನ ಒಟ್ಟು ಸಿಬ್ಬಂದಿಯಲ್ಲಿ ಸುಮಾರು ಮೂರನೇ ಒಂದು ಭಾಗದಷ್ಟು ಜನರನ್ನು (ಸುಮಾರು 300ಕ್ಕೂ ಹೆಚ್ಚು ಉದ್ಯೋಗಿಗಳು) ಕೆಲಸದಿಂದ ತೆಗೆದುಹಾಕಿದೆ. ಕ್ರೀಡಾ ವಿಭಾಗವನ್ನು ಸ್ಥಗಿತಗೊಳಿಸಿದೆ, ಹಲವಾರು ವಿದೇಶಿ ಬ್ಯೂರೋಗಳನ್ನು ಮುಚ್ಚಿದೆ ಮತ್ತು ಪುಸ್ತಕಗಳ ವರದಿಯನ್ನು ಕೊನೆಗೊಳಿಸಿದೆ ಎಂದು ವರದಿಯಾಗಿದೆ.

ಪತ್ರಿಕೆಯ ನವ ದೆಹಲಿಯ ಬ್ಯೂರೋ ಮುಖ್ಯಸ್ಥರು ಮತ್ತು ಮಧ್ಯಪ್ರಾಚ್ಯದ ಸಂಪೂರ್ಣ ವರದಿಗಾರರ ತಂಡ ಸೇರಿದಂತೆ ಹಲವರು ಈ ಉದ್ಯೋಗ ಕಡಿತದಿಂದ ಸಂಕಷ್ಟಕ್ಕೀಡಾಗಿದ್ದಾರೆ. ಕಂಪನಿಯು ಅತ್ಯಂತ ವೇಗವಾಗಿ ಮತ್ತು ದೊಡ್ಡ ಮಟ್ಟದಲ್ಲಿ ಸಿಬ್ಬಂದಿಗಳನ್ನು ವಜಾಗೊಳಿಸಿರುವುದು ಅಲ್ಲಿನ ಉದ್ಯೋಗಿಗಳಲ್ಲಿ ಆಘಾತ ಮೂಡಿಸಿದೆ. ಇಡೀ ಕಂಪನಿಯ ಸಭೆಯ ನಂತರ, ಇಮೇಲ್ ಮೂಲಕ ಈ ನಿರ್ಧಾರದ ಬಗ್ಗೆ ಉದ್ಯೋಗಿಗಳಿಗೆ ಮಾಹಿತಿ ನೀಡಲಾಗಿದೆ. ಈ ಪ್ರಕ್ರಿಯೆಯು ನಡೆದ ರೀತಿ ಮತ್ತು ಅದರ ವೇಗವು ಸಿಬ್ಬಂದಿಗಳನ್ನು ದಿಗ್ಭ್ರಮೆಗೊಳಿಸಿದೆ ಎಂದು ವರದಿಗಳು ಹೇಳಿವೆ.

ಬದಲಾಗುತ್ತಿರುವ ತಂತ್ರಜ್ಞಾನ ಮತ್ತು ಓದುಗರ ಹವ್ಯಾಸಗಳಿಗೆ ಅನುಗುಣವಾಗಿ ಸಂಸ್ಥೆಯನ್ನು ಮರುರೂಪಿಸಲು ಈ ಉದ್ಯೋಗ ಕಡಿತ ಅನಿವಾರ್ಯ ಎಂದು ದಿ ವಾಷಿಂಗ್ಟನ್ ಪೋಸ್ಟ್ ತಿಳಿಸಿದೆ.

ಈ ಪ್ರಮುಖ ಪುನರ್‌ರಚನೆಯ ಭಾಗವಾಗಿ ಪತ್ರಿಕೆಯ ಕ್ರೀಡಾ ವಿಭಾಗವನ್ನು ಸಂಪೂರ್ಣವಾಗಿ ಕೈಬಿಡಲಾಗುತ್ತಿದೆ. ಇದರೊಂದಿಗೆ, ವಿದೇಶಿ ಬ್ಯೂರೋಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಲಾಗುತ್ತಿದೆ ಮತ್ತು ಪುಸ್ತಕ ವಿಮರ್ಶೆ ಹಾಗೂ ಸಾಹಿತ್ಯಕ್ಕೆ ಸಂಬಂಧಿಸಿದ ವಿಭಾಗವನ್ನು ಮುಚ್ಚಲಾಗುತ್ತಿದೆ. ಒಟ್ಟಾರೆಯಾಗಿ, ಡಿಜಿಟಲ್ ಯುಗದ ಸವಾಲುಗಳನ್ನು ಎದುರಿಸಲು ಸಂಸ್ಥೆಯು ತನ್ನ ಕಾರ್ಯವೈಖರಿಯಲ್ಲಿ ಭಾರಿ ಬದಲಾವಣೆಗಳನ್ನು ಮಾಡಿಕೊಳ್ಳುತ್ತಿದೆ ಎಂದಿದೆ.

ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾದ ಮ್ಯಾಟ್ ಮುರ್ರೆ ಈ ನಿರ್ಧಾರವನ್ನು ಅತ್ಯಂತ ನೋವಿನಿಂದ ಕೂಡಿದರೂ ಅನಿವಾರ್ಯವಾದದ್ದು ಎಂದು ಹೇಳಿದ್ದಾರೆ. ಪ್ರಸ್ತುತ ಬದಲಾಗುತ್ತಿರುವ ಮಾಧ್ಯಮ ಕ್ಷೇತ್ರದಲ್ಲಿ ಸಂಸ್ಥೆಯು ಎಲ್ಲರಿಗೂ ಎಲ್ಲವನ್ನೂ ನೀಡಲು ಸಾಧ್ಯವಿಲ್ಲ, ಆದ್ದರಿಂದ ಈ ಬದಲಾವಣೆ ಅವಶ್ಯಕ ಎಂದು ಅವರು ಸಿಬ್ಬಂದಿಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...