Homeಮುಖಪುಟಶಾಸ್ತ್ರೀಯ 1: ಪರಂಪರೆಯ ವಸಾಹತೀಕರಣ ಮತ್ತು ಚರಿತ್ರೆಯ ಮರುಕಟ್ಟುವಿಕೆಯ ಅಗತ್ಯ

ಶಾಸ್ತ್ರೀಯ 1: ಪರಂಪರೆಯ ವಸಾಹತೀಕರಣ ಮತ್ತು ಚರಿತ್ರೆಯ ಮರುಕಟ್ಟುವಿಕೆಯ ಅಗತ್ಯ

ಲಿಖಿತ ಆಕರಗಳ ಒಡಲಲ್ಲಿ ಸುಪ್ತವಾಗಿರುವ ಇಂಜನಿಯರಿಂಗ್, ಕುಂಬಾರಿಕೆ, ಕಂಬಾರಿಕೆ, ಚಮ್ಮಾರಿಕೆ, ಬಡಿಗತನ, ಅಕ್ಕಸಾಲಿ ಇತ್ಯಾದಿ ಉದ್ಯಮಗಳನ್ನು ಮತ್ತು ಅವರ ಭೌದ್ದಿಕತೆಯನ್ನು ಯಾವ ಪೇಟೆಂಟ್ ಇಲ್ಲದೇ ಹೈಜಾಕ್ ಮಾಡಿದ ಕಾಲಘಟ್ಟದ ಸತ್ಯವನ್ನು ಈಗ ಪುನರುಜ್ಜೀವನಗೊಳಿಸಬೇಕಿದೆ.

- Advertisement -
- Advertisement -

ಭಾರತದಲ್ಲಿ ಆಧುನಿಕ ಕಾಲಘಟ್ಟದಲ್ಲಿ ಚರಿತ್ರೆ ರಚನೆಯಾಗಲು ಬಹುಮುಖ್ಯವಾದ ಆಕರಗಳೆಂದರೆ ಶಾಸನಗಳು. ಕರ್ನಾಟಕ ಚರಿತ್ರೆ ಮತ್ತು ಸಾಂಸ್ಕೃತಿಕ ಇತಿಹಾಸದ ನುಡಿ ನಿರೂಪಣೆಯೂ ವಸಾಹತೀಕರಣದ ಫಲ. ಬಿ.ಎಲ್.ರೈಸ್, ಇ.ಪಿ.ರೈಸ್, ಕರ್ನಲ್ ಮೆಕೆಂಝಿ ಮುಂತಾದ ಬ್ರಿಟಿಷ್ ಮಿಷನರಿಗಳಿಗೆ ಸೇರಿದ ಈ ವ್ಯಕ್ತಿಗಳಂತೆ ಹಲವರು ಸಂಗ್ರಹ ಮಾಡಿದ ಬಹುಸಂಖ್ಯೆಯ ಶಾಸನಗಳು ಮತ್ತು ಹಸ್ತಪ್ರತಿಗಳು ಕನ್ನಡ ನಾಡಿನ ಗತಕಾಲದ ಚಾರಿತ್ರಿಕ ಚಹರೆಯ ಮುಖ್ಯವಾದ ಸಾಮಗ್ರಿಗಳು.

ಬ್ರಿಟಿಷ್ ವಸಾಹತುಶಾಹಿ ರಚನೆಗಳು ಪರಂಪರೆಯೊಂದಿಗೆ ಶಾಸನ ಮತ್ತು ಹಸ್ತಪ್ರತಿಗಳನ್ನು ಮುಖಾಮುಖಿ ಮಾಡಿದವು. ಆದರ ಮೊದಲ ಅಧ್ಯಯನದ ಈ ಘಟ್ಟದಲ್ಲಿ ಸಂಗ್ರಹ, ಸಂಪಾದನೆ, ವಿವರಣೆ ನೆಲೆಯಲ್ಲಿ ತನ್ನ ಚಹರೆಯನ್ನು ಗುರುತಿಸಿಕೊಂಡಿತು. ಈ ಚರಿತ್ರೆಕಾರರ ಮಾದರಿಯಲ್ಲಿ ನಮ್ಮ ದೇಸಿ ವಿದ್ವಾಂಸರು ಎರಡನೇ ಕಾಲಘಟ್ಟದಲ್ಲಿ ಆಕರಮುಖಿ ಅಧ್ಯಯನಕ್ಕೆ ತೆರೆದುಕೊಂಡರು. ಆದರೆ ಬ್ರಿಟಿಷ್ ಸಾಮ್ರಾಜ್ಯಶಾಹಿ ಭೌದ್ದಿಕ ಅಹಂಕಾರಿಗಳು ನಮ್ಮ ನೆಲದ ನಿಜ ಚರಿತ್ರೆಯನ್ನು ರಾಜಕೀಯ ಕಾರಣಗಳಿಗಾಗಿ ಬಳಸಿಕೊಂಡವು.

ಇದರ ಮುಂದುವರಿಕೆಯಾಗಿ ಕನ್ನಡದ ಅಕ್ಷರ ಕಲಿತುಕೊಂಡ ಇಂಗ್ಲೀಷ್ ಶಿಕ್ಷಣ ಪಡೆದ ದೇಸಿ ವಿದ್ವಾಂಸರ ಪಡೆಯು ಸಾಮ್ರಾಜ್ಯಶಾಹಿ ಬೌದ್ಧಿಕ ರಾಜಕಾರಣದ ಜೊತೆ ಒಳರಾಜಿ ಮಾಡಿಕೊಂಡಂತೆ ಮೇಲ್‌ಚಹರೆಯ ಚರಿತ್ರೆಯ ಬರೆಹಕ್ಕೆ, ಇಲ್ಲವೇ ಧರ್ಮಾಧಾರಿತ ಚರಿತ್ರೆಯ ರಚನೆಗೆ ಮುಂದಾದರು. ಇದೊಂದು ಬಗೆಯಲ್ಲಿ ಒಂದು ಕೋಮಿನ ಚರಿತ್ರೆ, ಒಂದು ವರ್ಗದ ಚರಿತ್ರೆ ಆಗಿದ್ದುಕೊಂಡು ಸಂಸ್ಕೃತಿಯ ರೂಪದಂತೆ ನಮ್ಮೆದುರಿಗೆ ಕಾಣುತ್ತಿದೆ ಅಷ್ಟೇ.

ಕರ್ನಾಟಕದ ಶಾಸನ, ಹಸ್ತಪ್ರತಿ, ನಾಣ್ಯ ಮತ್ತು ಸ್ಮಾರಕಗಳ ಸಂಶೋಧನೆ ಅಧ್ಯಯನಗಳು ವಿಭಿನ್ನ ಆಯಾಮಗಳಲ್ಲಿ ನಡೆದಿಲ್ಲ. ಬಹುತೇಕ ಕೆಳ ಚಲನೆಯ ಸತ್ಯಗಳು ಗೈರುಹಾಜರಿಯಲ್ಲಿವೆ. ಶಾಸನದಂತಹ ರಾಜಶಾಹಿ ಕಾನೂನು ಬರಹದ ಒಳಗಡೆ ಸಂಸ್ಕೃತಿ ರೂಪಿಸುವ ಜನ ಸಮುದಾಯದ ಇತಿಹಾಸ ಇದೆಯೆಂಬುದು ಮುಖ್ಯ. ಸಬಾಲ್ಟ್ರನ್ ನೆಲೆಯಲ್ಲಿ ಅದು ಕೇವಲ ಸಾಹಿತ್ಯದ ಅಧ್ಯಯನವಾಗಿದೆಯೇ ಹೊರತು ಚರಿತ್ರೆಯ ಅಧ್ಯಯನವು ಈಗತಾನೆ ಆರಂಭವಾಗಿದೆ ಅಷ್ಟೇ. ಆದರೆ ಇದು ತೋರುಂಬ ಲಾಭ. ತಳಸಮುದಾಯ ಮತ್ತು ಹಿಂದುಳಿದ ವರ್ಗಗಳ ಲೋಕದಿಂದ ಬಂದ ಬೌದ್ಧಿಕ ಜಗತ್ತು ಶಾಸನ, ನಾಣ್ಯ, ಹಸ್ತಪ್ರತಿಗಳ ಸಬಾಲ್ಟ್ರನ್ ಮಾದರಿಯ ಫಲಿತಗಳನ್ನು ನಿರೂಪಿಸಬೇಕಾದ ತುರ್ತು ಇದೆ. ಶಾಸನದಂತಹ ಶಾಸ್ತ್ರೀಯ ಭೌತಿಕ ಆಕರಗಳಿಗೆ ಅಂತರ್‌ಶಿಸ್ತೀಯ ನೆಲೆಯಿಂದ, ಅವುಗಳ ಆಂತರಿಕ ಸಾಂಸ್ಕೃತಿಕ ರಾಜಕಾರಣದ ಸ್ವರೂಪವನ್ನು ಕಟ್ಟಿಕೊಡಬೇಕು.

ವೀರಗಲ್ಲು, ಮಾಸ್ತಿಗಲ್ಲು, ನಿಸಧಿಗಲ್ಲುಗಳನ್ನು ನಮ್ಮ ಪರಂಪರೆಯ ಚರಿತ್ರೆಯ ಹೆಮ್ಮೆ ಎಂದು ಕಳೆದ ಶತಮಾನದುದ್ದಕ್ಕೂ ಚರಿತ್ರೆ ಬರೆದವರು ಆಖ್ಯಾನ ಮಾಡಿದ್ದಾರೆ. ವೀರ ಮರಣವಾದವರು ಯಾವ ಸಾಮುದಾಯಿಕ ಹಿನ್ನಲೆಯಿಂದ ಬಂದವರು? ಅವರ ನೆಲೆ- ಹಿನ್ನಲೆಗಳೇನು? ಪ್ರಭುತ್ವದ ರಚನೆಗೆ ಅವರ ಕೊಡುಗೆ ಏನು? ಹಾಗೂ ಪ್ರಭುತ್ವದಲ್ಲಿ ಅವರಿಗಿದ್ದ ಸ್ಥಾನಮಾನಗಳೇನು? ಎಂಬ ಸತ್ಯಗಳು ಪರದೆಯ ಹಿಂದೆ ಉಳಿದಿವೆ. ಒಂದು ಪ್ರಭುತ್ವದ ರಚನೆಗೆ ಕಾರಣರಾದ ಈ ವೀರರ ಹೊಸ ಚರಿತ್ರೆಯನ್ನು ಕಟ್ಟಬೇಕಿದೆ. ನಾಡಿನ ತುಂಬ ಕಾಣುವ ಮಾಸ್ತಿಗಲ್ಲುಗಳು ಒಂದು ದೇಶದ ಹೆಮ್ಮೆ ಆಗಬಲ್ಲುವೇ?

ಅದೆಷ್ಟೋ ಮಹಿಳೆಯರ ಪ್ರಾಣಗಳು ಆಹುತಿಯಾದ ನೆಲೆಗಳನ್ನು ಮತ್ತೆ ಮತ್ತೆ ವರ್ತಮಾನದ ಸಂದರ್ಭದಲ್ಲಿಟ್ಟು “ರಿಚೆಕ್” ಮಾಡಬೇಕಿದೆ. ಧರ್ಮದ ಚೌಕಟ್ಟಿನೊಳಗಡೆ ನಿಸಧಿ ಮರಣ ಹೊಂದಿದ ಅಮಾಯಕ ಧರ್ಮ ಅನುಸರಣೆಕಾರರ ಹಿಂದಿರುವ ಪ್ರಲೋಭನೆಗಳನ್ನು ಈ ಕಾಲದಲ್ಲಿ ಅಧ್ಯಯನ ಮಾಡಬೇಕಿದೆ. ವಾಸ್ತವವಾಗಿ ಇಂತಹ ಸ್ಮಾರಕಗಳ ಆಂತರಿಕ ಕವಾಟದಲ್ಲಡಗಿದ ಶೋಷಣೆಯ ಸ್ವರೂಪವನ್ನು ಪ್ರತಿಪಾದಿಸಬೇಕಾಗಿದೆ. ಈ ನೆಲದಲ್ಲಿ ಶಾಸ್ತ್ರೀಯ (ಕ್ಲಾಸಿಕಲ್) ಆಗಿರಲು ಯಾವ ಆಕರಕ್ಕೆ ಸಾಧ್ಯವಿದೆ? ನಿಜವಾಗಿಯೂ ಅದು ಮೊದಲು ದೇಸಿ, ಜನಪದ, ಜನರೂಪಿತ. ಇಂತಹ ಸೈದ್ಧಾಂತಿಕ ಸಂಶ್ಲೇಷಣೆಯನ್ನು ನಮ್ಮ ಪಂಡಿತಮಾನ್ಯ ಚರಿತ್ರೆಕಾರರು ಗಮನಿಸಲೇ ಇಲ್ಲ. ಅಥವಾ ಮುಸುಕು ಹಾಕಿಟ್ಟಿರುವುದು ನಿಚ್ಚಳವಾಗಿದೆ.

ಶಾಸನ ಇತ್ಯಾದಿ ಚರಿತ್ರೆಯ ಆಕರಗಳು ಎಡೆಪಡೆಯುವ ಹಿಂದಣ ಹುನ್ನಾರಗಳನ್ನು ವಸಾಹತು ಮತ್ತು ವಸಾಹತೋತ್ತರ ಸಾಮಾಜಿಕ ಸಂದರ್ಭಗಳ ಜೊತೆ ಹಾಜರುಪಡಿಸಬೇಕಾಗುತ್ತದೆ. ಆಕರ ಸಾಮಗ್ರಿಗಳ ಆಂತರಿಕ ಆರ್ತನಾದದ ಕ್ಷೀಣ ಸ್ವರವನ್ನು ಎಲ್ಲರಿಗೂ ಕೇಳಿಸುವಂತೆ ಮಾಡಬೇಕಿದೆ. ಪ್ರಭುತ್ವಶಾಹಿ, ಪುರೋಹಿತಶಾಹಿಗಳ ಒಡಲಾಗಿವೆಯೆಂಬಂತೆ ತೋರುವ ಆಕರಗಳ ಒಳಗೆ ಈ ನೆಲದ ಮಕ್ಕಳ, ಶ್ರಮಜೀವಿಗಳ ಬಹುಧ್ವನಿಗಳು ಅಡಗಿವೆ. ಇಲ್ಲಿಯವರೆಗೂ ಚರಿತ್ರೆಯ ಅಧ್ಯಯನಗಳನ್ನು “ಯಜಮಾನ ಮಾದರಿ”ಯಲ್ಲಿ ತಂದಿಟ್ಟ ಪಳಯುಳಿಕೆಯನ್ನೆ ವಿಶ್ವವಿದ್ಯಾಲಯಗಳು ಸಂಶೊಧನೆಯ ವೈಧಾನಿಕತೆಯನ್ನಾಗಿ ಮಾಡಿಕೊಂಡ ದುರಂತವು ನಮ್ಮೆದುರಿಗಿದೆ. ವರ್ತಮಾನದ ಸಂದರ್ಭದಲ್ಲಿ ಪರ್ಯಾಯವಾಗಿ ಧರ್ಮ, ವರ್ಗ, ವರ್ಣ, ಲಿಂಗ ನಿಯಂತ್ರಣದಲ್ಲಿರುವ ಮೀಡಿಯಾ ಕಂಟ್ರೋಲ್‌ನ್ನು ಕಳಚಿಕೊಂಡು ಹೊಸರೂಪ ಧರಿಸಬೇಕಿದೆ.

ವಿಕಾಸ ನಾಗರಿಕತೆ ಸಂಸ್ಕೃತಿಯನ್ನು ಈ ನೆಲದಲ್ಲಿ ಕಟ್ಟಿದ ಸಮುದಾಯಗಳ ಪ್ರಾತಿನಿಧಿಕ ಆಕರ ಸಾಮಗ್ರಿಗಳು ಕರ್ನಾಟಕದ ಬೆಟ್ಟ-ಗುಡ್ಡಗಳಲ್ಲಿ ಹೇರಳವಾಗಿವೆ. ಇವು ಅಡವಿ ಮಕ್ಕಳ ಚರಿತ್ರೆಗಳಲ್ಲವೇ? ಜೊತೆಗೆ ಈ ಸಮುದಾಯಗಳು ರೂಪಿಸಿಕೊಂಡ ಭಾಷಿಕ ಸಂಕಥನವು ರೋಚಕವಾಗಿದೆ. ಭಾಷೆಯು ಕ್ಲಾಸಿಕಲ್ ಎಂದು ಶಾಸನಗಳ ಮುಖೇನ ಹೇಳುವಾಗಲೂ ಜನ ಭಾಷೆಯ ಸ್ವರೂಪವನ್ನು ಮುಖ್ಯವಾಗಿ ಗಮನಿಸಬೇಕು. ಶಾಸನೋಕ್ತ ವೃತ್ತಿಗಳ ಸಮಗ್ರ ಅಧ್ಯಯನ ಮಾಡುವುದಿರಲೀ ಪ್ರಾಸ್ತಾವಿಕ ಬರಹಗಳೂ ಧರ್ಮ ನಿಯಂತ್ರಣವಾದಿ ಚೌಕಟ್ಟಿನಲ್ಲಿ ಬಂಧಿಸಲ್ಪಟ್ಟಿವೆ. ಭಾಷೆಯನ್ನು ಕಾಪಿಟ್ಟುಕೊಂಡು ಬಂದ ಅಕ್ಷರೋದ್ಯಮದ ಸಂವಹನಗಳಾದ ಹಸ್ತಪ್ರತಿ, ನಾಣ್ಯ, ಶಾಸನಗಳ ಹಿಂದಿನ ಜನರ ಶ್ರಮದ ನೆಲೆಯನ್ನು ಬಿಡಿಸಬೇಕು.

ಹಾಗೆಯೇ ದೇವಾಲಯ ಮತ್ತು ರಥಗಳ ಮಹತ್ತರ ನಿರ್ಮಾಣ, ಕರಕುಶಲಗಾರಿಕೆ ಅಜ್ಞಾತ ಇಂಜಿನಿಯರಿಂಗ್ ಕುರಿತ ಯಾವ ಪಾಠಗಳನ್ನು ನಾವು ಕಲಿತಿದ್ದೇವೆ? ಹಾಗೆಯೇ ಕನ್ನಡ ರಾಜಮನೆತನಗಳ ಚರಿತ್ರೆಯಲ್ಲಿಯೂ ಕುಲದ ಕಾರಣಕ್ಕಾಗಿ ಪ್ರಸಿದ್ಧ ದೊರೆಗಳು ಅವರ ಲೋಕೋಪಯೋಗಿ ಕೆಲಸಗಳು ಪಠ್ಯಗಳಲ್ಲಿ ಗೈರುಹಾಜರಾದ ಕೆಲ ಪ್ರಸಂಗಗಳಿವೆ. ಇವೆಲ್ಲಾ ದೊಡ್ಡ ಪ್ರಶ್ನೆಗಳು.

ಭೂತ ಮತ್ತು ವರ್ತಮಾನದ ಸಂಬಂಧಗಳನ್ನು ಬೆಸೆಯುವ ತಳಸಮುದಾಯಗಳ ವೃತ್ತಿಪರತೆಯನ್ನು ಕಟ್ಟಿಕೊಡುವ ಕೆಲಸ ಸಾಕಷ್ಟಿದೆ. ನಮ್ಮ ಗತಕಾಲದ ಕೇಳು ಮತ್ತು ಹೇಳು ಪರಂಪರೆಯು ಶಾಸ್ತ್ರೀಯವಾದದ್ದು ಯಾವ ಸಂದರ್ಭದಲ್ಲಿ? ಎಂಬುದನ್ನು ಹುಡುಕಬೇಕು. ಲಿಖಿತ ಆಕರಗಳ ಒಡಲಲ್ಲಿ ಸುಪ್ತವಾಗಿರುವ ಇಂಜನಿಯರಿಂಗ್, ಕುಂಬಾರಿಕೆ, ಕಂಬಾರಿಕೆ, ಚಮ್ಮಾರಿಕೆ, ಬಡಿಗತನ, ಅಕ್ಕಸಾಲಿ ಇತ್ಯಾದಿ ಉದ್ಯಮಗಳನ್ನು ಮತ್ತು ಅವರ ಭೌದ್ದಿಕತೆಯನ್ನು ಯಾವ ಪೇಟೆಂಟ್ ಇಲ್ಲದೇ ಹೈಜಾಕ್ ಮಾಡಿದ ಕಾಲಘಟ್ಟದ ಸತ್ಯವನ್ನು ಈಗ ಪುನರುಜ್ಜೀವನಗೊಳಿಸಬೇಕಿದೆ. ಇಂತಹ ಕೆಲವು ಸಂಗತಿಗಳ ಕೆಲವು ಟಿಪ್ಪಣಿಗಳನ್ನು ಈ ಅಂಕಣದಲ್ಲಿ ಮಂಡಿಸುವ ಪ್ರಯತ್ನ ಮುಂದಿನ ಕಂತುಗಳಲ್ಲಿ ಮಾಡಲಾಗುತ್ತದೆ.

ಡಾ. ಜಾಜಿ ದೇವೇಂದ್ರಪ್ಪ, ಸಂಯೋಜಕರು, ಕನ್ನಡ ಸ್ನಾತಕೋತ್ತರ ಅಧ್ಯಯನ ವಿಭಾಗ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಗಂಗಾವತಿ


ಇದನ್ನೂ ಓದಿ: 35,000 ಕ್ಕೂ ಹೆಚ್ಚು ಖಾಸಗಿ ಶಾಲಾ ಶಿಕ್ಷಕರು ವಜಾ: 8 ಅತಿಥಿ ಉಪನ್ಯಾಸಕರ ಆತ್ಮಹತ್ಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಚರಿತ್ರೆಯ ಮರು ಅವಲೋಕನ ಮಾಡುವ ವಿಧಾನ ಮತ್ತು ಸಬಾಲ್ಟ್ರನ್ ಅಧ್ಯಯನ ಇಂದಿನ ಅಗತ್ಯ… ಗತಕಾಲದ ಹೇಳು ಮತ್ತು ಕೇಳು ಸಂಪ್ರದಾಯ ಗಳು ಶಾಸ್ತ್ರೀಯ ಆದದ್ದು ಎಂದು ಎಂಬುದರ ಅವಲೋಕನ ಮತ್ತು ರೀಚೆಕ್… ಹೀಗೆ ಅನೇಕ ವಿಚಾರಗಳನ್ನು ಶಾಸನ ಚರಿತ್ರೆಯ ಕುರಿತ ಡಾ. ಜಾಜಿ ದೇವೇಂದ್ರಪ್ಪ ಅವರ ಬರಹ ಅರ್ಥಪೂರ್ಣ….

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...