Homeಮುಖಪುಟಶಾಸ್ತ್ರೀಯ 1: ಪರಂಪರೆಯ ವಸಾಹತೀಕರಣ ಮತ್ತು ಚರಿತ್ರೆಯ ಮರುಕಟ್ಟುವಿಕೆಯ ಅಗತ್ಯ

ಶಾಸ್ತ್ರೀಯ 1: ಪರಂಪರೆಯ ವಸಾಹತೀಕರಣ ಮತ್ತು ಚರಿತ್ರೆಯ ಮರುಕಟ್ಟುವಿಕೆಯ ಅಗತ್ಯ

ಲಿಖಿತ ಆಕರಗಳ ಒಡಲಲ್ಲಿ ಸುಪ್ತವಾಗಿರುವ ಇಂಜನಿಯರಿಂಗ್, ಕುಂಬಾರಿಕೆ, ಕಂಬಾರಿಕೆ, ಚಮ್ಮಾರಿಕೆ, ಬಡಿಗತನ, ಅಕ್ಕಸಾಲಿ ಇತ್ಯಾದಿ ಉದ್ಯಮಗಳನ್ನು ಮತ್ತು ಅವರ ಭೌದ್ದಿಕತೆಯನ್ನು ಯಾವ ಪೇಟೆಂಟ್ ಇಲ್ಲದೇ ಹೈಜಾಕ್ ಮಾಡಿದ ಕಾಲಘಟ್ಟದ ಸತ್ಯವನ್ನು ಈಗ ಪುನರುಜ್ಜೀವನಗೊಳಿಸಬೇಕಿದೆ.

- Advertisement -
- Advertisement -

ಭಾರತದಲ್ಲಿ ಆಧುನಿಕ ಕಾಲಘಟ್ಟದಲ್ಲಿ ಚರಿತ್ರೆ ರಚನೆಯಾಗಲು ಬಹುಮುಖ್ಯವಾದ ಆಕರಗಳೆಂದರೆ ಶಾಸನಗಳು. ಕರ್ನಾಟಕ ಚರಿತ್ರೆ ಮತ್ತು ಸಾಂಸ್ಕೃತಿಕ ಇತಿಹಾಸದ ನುಡಿ ನಿರೂಪಣೆಯೂ ವಸಾಹತೀಕರಣದ ಫಲ. ಬಿ.ಎಲ್.ರೈಸ್, ಇ.ಪಿ.ರೈಸ್, ಕರ್ನಲ್ ಮೆಕೆಂಝಿ ಮುಂತಾದ ಬ್ರಿಟಿಷ್ ಮಿಷನರಿಗಳಿಗೆ ಸೇರಿದ ಈ ವ್ಯಕ್ತಿಗಳಂತೆ ಹಲವರು ಸಂಗ್ರಹ ಮಾಡಿದ ಬಹುಸಂಖ್ಯೆಯ ಶಾಸನಗಳು ಮತ್ತು ಹಸ್ತಪ್ರತಿಗಳು ಕನ್ನಡ ನಾಡಿನ ಗತಕಾಲದ ಚಾರಿತ್ರಿಕ ಚಹರೆಯ ಮುಖ್ಯವಾದ ಸಾಮಗ್ರಿಗಳು.

ಬ್ರಿಟಿಷ್ ವಸಾಹತುಶಾಹಿ ರಚನೆಗಳು ಪರಂಪರೆಯೊಂದಿಗೆ ಶಾಸನ ಮತ್ತು ಹಸ್ತಪ್ರತಿಗಳನ್ನು ಮುಖಾಮುಖಿ ಮಾಡಿದವು. ಆದರ ಮೊದಲ ಅಧ್ಯಯನದ ಈ ಘಟ್ಟದಲ್ಲಿ ಸಂಗ್ರಹ, ಸಂಪಾದನೆ, ವಿವರಣೆ ನೆಲೆಯಲ್ಲಿ ತನ್ನ ಚಹರೆಯನ್ನು ಗುರುತಿಸಿಕೊಂಡಿತು. ಈ ಚರಿತ್ರೆಕಾರರ ಮಾದರಿಯಲ್ಲಿ ನಮ್ಮ ದೇಸಿ ವಿದ್ವಾಂಸರು ಎರಡನೇ ಕಾಲಘಟ್ಟದಲ್ಲಿ ಆಕರಮುಖಿ ಅಧ್ಯಯನಕ್ಕೆ ತೆರೆದುಕೊಂಡರು. ಆದರೆ ಬ್ರಿಟಿಷ್ ಸಾಮ್ರಾಜ್ಯಶಾಹಿ ಭೌದ್ದಿಕ ಅಹಂಕಾರಿಗಳು ನಮ್ಮ ನೆಲದ ನಿಜ ಚರಿತ್ರೆಯನ್ನು ರಾಜಕೀಯ ಕಾರಣಗಳಿಗಾಗಿ ಬಳಸಿಕೊಂಡವು.

ಇದರ ಮುಂದುವರಿಕೆಯಾಗಿ ಕನ್ನಡದ ಅಕ್ಷರ ಕಲಿತುಕೊಂಡ ಇಂಗ್ಲೀಷ್ ಶಿಕ್ಷಣ ಪಡೆದ ದೇಸಿ ವಿದ್ವಾಂಸರ ಪಡೆಯು ಸಾಮ್ರಾಜ್ಯಶಾಹಿ ಬೌದ್ಧಿಕ ರಾಜಕಾರಣದ ಜೊತೆ ಒಳರಾಜಿ ಮಾಡಿಕೊಂಡಂತೆ ಮೇಲ್‌ಚಹರೆಯ ಚರಿತ್ರೆಯ ಬರೆಹಕ್ಕೆ, ಇಲ್ಲವೇ ಧರ್ಮಾಧಾರಿತ ಚರಿತ್ರೆಯ ರಚನೆಗೆ ಮುಂದಾದರು. ಇದೊಂದು ಬಗೆಯಲ್ಲಿ ಒಂದು ಕೋಮಿನ ಚರಿತ್ರೆ, ಒಂದು ವರ್ಗದ ಚರಿತ್ರೆ ಆಗಿದ್ದುಕೊಂಡು ಸಂಸ್ಕೃತಿಯ ರೂಪದಂತೆ ನಮ್ಮೆದುರಿಗೆ ಕಾಣುತ್ತಿದೆ ಅಷ್ಟೇ.

ಕರ್ನಾಟಕದ ಶಾಸನ, ಹಸ್ತಪ್ರತಿ, ನಾಣ್ಯ ಮತ್ತು ಸ್ಮಾರಕಗಳ ಸಂಶೋಧನೆ ಅಧ್ಯಯನಗಳು ವಿಭಿನ್ನ ಆಯಾಮಗಳಲ್ಲಿ ನಡೆದಿಲ್ಲ. ಬಹುತೇಕ ಕೆಳ ಚಲನೆಯ ಸತ್ಯಗಳು ಗೈರುಹಾಜರಿಯಲ್ಲಿವೆ. ಶಾಸನದಂತಹ ರಾಜಶಾಹಿ ಕಾನೂನು ಬರಹದ ಒಳಗಡೆ ಸಂಸ್ಕೃತಿ ರೂಪಿಸುವ ಜನ ಸಮುದಾಯದ ಇತಿಹಾಸ ಇದೆಯೆಂಬುದು ಮುಖ್ಯ. ಸಬಾಲ್ಟ್ರನ್ ನೆಲೆಯಲ್ಲಿ ಅದು ಕೇವಲ ಸಾಹಿತ್ಯದ ಅಧ್ಯಯನವಾಗಿದೆಯೇ ಹೊರತು ಚರಿತ್ರೆಯ ಅಧ್ಯಯನವು ಈಗತಾನೆ ಆರಂಭವಾಗಿದೆ ಅಷ್ಟೇ. ಆದರೆ ಇದು ತೋರುಂಬ ಲಾಭ. ತಳಸಮುದಾಯ ಮತ್ತು ಹಿಂದುಳಿದ ವರ್ಗಗಳ ಲೋಕದಿಂದ ಬಂದ ಬೌದ್ಧಿಕ ಜಗತ್ತು ಶಾಸನ, ನಾಣ್ಯ, ಹಸ್ತಪ್ರತಿಗಳ ಸಬಾಲ್ಟ್ರನ್ ಮಾದರಿಯ ಫಲಿತಗಳನ್ನು ನಿರೂಪಿಸಬೇಕಾದ ತುರ್ತು ಇದೆ. ಶಾಸನದಂತಹ ಶಾಸ್ತ್ರೀಯ ಭೌತಿಕ ಆಕರಗಳಿಗೆ ಅಂತರ್‌ಶಿಸ್ತೀಯ ನೆಲೆಯಿಂದ, ಅವುಗಳ ಆಂತರಿಕ ಸಾಂಸ್ಕೃತಿಕ ರಾಜಕಾರಣದ ಸ್ವರೂಪವನ್ನು ಕಟ್ಟಿಕೊಡಬೇಕು.

ವೀರಗಲ್ಲು, ಮಾಸ್ತಿಗಲ್ಲು, ನಿಸಧಿಗಲ್ಲುಗಳನ್ನು ನಮ್ಮ ಪರಂಪರೆಯ ಚರಿತ್ರೆಯ ಹೆಮ್ಮೆ ಎಂದು ಕಳೆದ ಶತಮಾನದುದ್ದಕ್ಕೂ ಚರಿತ್ರೆ ಬರೆದವರು ಆಖ್ಯಾನ ಮಾಡಿದ್ದಾರೆ. ವೀರ ಮರಣವಾದವರು ಯಾವ ಸಾಮುದಾಯಿಕ ಹಿನ್ನಲೆಯಿಂದ ಬಂದವರು? ಅವರ ನೆಲೆ- ಹಿನ್ನಲೆಗಳೇನು? ಪ್ರಭುತ್ವದ ರಚನೆಗೆ ಅವರ ಕೊಡುಗೆ ಏನು? ಹಾಗೂ ಪ್ರಭುತ್ವದಲ್ಲಿ ಅವರಿಗಿದ್ದ ಸ್ಥಾನಮಾನಗಳೇನು? ಎಂಬ ಸತ್ಯಗಳು ಪರದೆಯ ಹಿಂದೆ ಉಳಿದಿವೆ. ಒಂದು ಪ್ರಭುತ್ವದ ರಚನೆಗೆ ಕಾರಣರಾದ ಈ ವೀರರ ಹೊಸ ಚರಿತ್ರೆಯನ್ನು ಕಟ್ಟಬೇಕಿದೆ. ನಾಡಿನ ತುಂಬ ಕಾಣುವ ಮಾಸ್ತಿಗಲ್ಲುಗಳು ಒಂದು ದೇಶದ ಹೆಮ್ಮೆ ಆಗಬಲ್ಲುವೇ?

ಅದೆಷ್ಟೋ ಮಹಿಳೆಯರ ಪ್ರಾಣಗಳು ಆಹುತಿಯಾದ ನೆಲೆಗಳನ್ನು ಮತ್ತೆ ಮತ್ತೆ ವರ್ತಮಾನದ ಸಂದರ್ಭದಲ್ಲಿಟ್ಟು “ರಿಚೆಕ್” ಮಾಡಬೇಕಿದೆ. ಧರ್ಮದ ಚೌಕಟ್ಟಿನೊಳಗಡೆ ನಿಸಧಿ ಮರಣ ಹೊಂದಿದ ಅಮಾಯಕ ಧರ್ಮ ಅನುಸರಣೆಕಾರರ ಹಿಂದಿರುವ ಪ್ರಲೋಭನೆಗಳನ್ನು ಈ ಕಾಲದಲ್ಲಿ ಅಧ್ಯಯನ ಮಾಡಬೇಕಿದೆ. ವಾಸ್ತವವಾಗಿ ಇಂತಹ ಸ್ಮಾರಕಗಳ ಆಂತರಿಕ ಕವಾಟದಲ್ಲಡಗಿದ ಶೋಷಣೆಯ ಸ್ವರೂಪವನ್ನು ಪ್ರತಿಪಾದಿಸಬೇಕಾಗಿದೆ. ಈ ನೆಲದಲ್ಲಿ ಶಾಸ್ತ್ರೀಯ (ಕ್ಲಾಸಿಕಲ್) ಆಗಿರಲು ಯಾವ ಆಕರಕ್ಕೆ ಸಾಧ್ಯವಿದೆ? ನಿಜವಾಗಿಯೂ ಅದು ಮೊದಲು ದೇಸಿ, ಜನಪದ, ಜನರೂಪಿತ. ಇಂತಹ ಸೈದ್ಧಾಂತಿಕ ಸಂಶ್ಲೇಷಣೆಯನ್ನು ನಮ್ಮ ಪಂಡಿತಮಾನ್ಯ ಚರಿತ್ರೆಕಾರರು ಗಮನಿಸಲೇ ಇಲ್ಲ. ಅಥವಾ ಮುಸುಕು ಹಾಕಿಟ್ಟಿರುವುದು ನಿಚ್ಚಳವಾಗಿದೆ.

ಶಾಸನ ಇತ್ಯಾದಿ ಚರಿತ್ರೆಯ ಆಕರಗಳು ಎಡೆಪಡೆಯುವ ಹಿಂದಣ ಹುನ್ನಾರಗಳನ್ನು ವಸಾಹತು ಮತ್ತು ವಸಾಹತೋತ್ತರ ಸಾಮಾಜಿಕ ಸಂದರ್ಭಗಳ ಜೊತೆ ಹಾಜರುಪಡಿಸಬೇಕಾಗುತ್ತದೆ. ಆಕರ ಸಾಮಗ್ರಿಗಳ ಆಂತರಿಕ ಆರ್ತನಾದದ ಕ್ಷೀಣ ಸ್ವರವನ್ನು ಎಲ್ಲರಿಗೂ ಕೇಳಿಸುವಂತೆ ಮಾಡಬೇಕಿದೆ. ಪ್ರಭುತ್ವಶಾಹಿ, ಪುರೋಹಿತಶಾಹಿಗಳ ಒಡಲಾಗಿವೆಯೆಂಬಂತೆ ತೋರುವ ಆಕರಗಳ ಒಳಗೆ ಈ ನೆಲದ ಮಕ್ಕಳ, ಶ್ರಮಜೀವಿಗಳ ಬಹುಧ್ವನಿಗಳು ಅಡಗಿವೆ. ಇಲ್ಲಿಯವರೆಗೂ ಚರಿತ್ರೆಯ ಅಧ್ಯಯನಗಳನ್ನು “ಯಜಮಾನ ಮಾದರಿ”ಯಲ್ಲಿ ತಂದಿಟ್ಟ ಪಳಯುಳಿಕೆಯನ್ನೆ ವಿಶ್ವವಿದ್ಯಾಲಯಗಳು ಸಂಶೊಧನೆಯ ವೈಧಾನಿಕತೆಯನ್ನಾಗಿ ಮಾಡಿಕೊಂಡ ದುರಂತವು ನಮ್ಮೆದುರಿಗಿದೆ. ವರ್ತಮಾನದ ಸಂದರ್ಭದಲ್ಲಿ ಪರ್ಯಾಯವಾಗಿ ಧರ್ಮ, ವರ್ಗ, ವರ್ಣ, ಲಿಂಗ ನಿಯಂತ್ರಣದಲ್ಲಿರುವ ಮೀಡಿಯಾ ಕಂಟ್ರೋಲ್‌ನ್ನು ಕಳಚಿಕೊಂಡು ಹೊಸರೂಪ ಧರಿಸಬೇಕಿದೆ.

ವಿಕಾಸ ನಾಗರಿಕತೆ ಸಂಸ್ಕೃತಿಯನ್ನು ಈ ನೆಲದಲ್ಲಿ ಕಟ್ಟಿದ ಸಮುದಾಯಗಳ ಪ್ರಾತಿನಿಧಿಕ ಆಕರ ಸಾಮಗ್ರಿಗಳು ಕರ್ನಾಟಕದ ಬೆಟ್ಟ-ಗುಡ್ಡಗಳಲ್ಲಿ ಹೇರಳವಾಗಿವೆ. ಇವು ಅಡವಿ ಮಕ್ಕಳ ಚರಿತ್ರೆಗಳಲ್ಲವೇ? ಜೊತೆಗೆ ಈ ಸಮುದಾಯಗಳು ರೂಪಿಸಿಕೊಂಡ ಭಾಷಿಕ ಸಂಕಥನವು ರೋಚಕವಾಗಿದೆ. ಭಾಷೆಯು ಕ್ಲಾಸಿಕಲ್ ಎಂದು ಶಾಸನಗಳ ಮುಖೇನ ಹೇಳುವಾಗಲೂ ಜನ ಭಾಷೆಯ ಸ್ವರೂಪವನ್ನು ಮುಖ್ಯವಾಗಿ ಗಮನಿಸಬೇಕು. ಶಾಸನೋಕ್ತ ವೃತ್ತಿಗಳ ಸಮಗ್ರ ಅಧ್ಯಯನ ಮಾಡುವುದಿರಲೀ ಪ್ರಾಸ್ತಾವಿಕ ಬರಹಗಳೂ ಧರ್ಮ ನಿಯಂತ್ರಣವಾದಿ ಚೌಕಟ್ಟಿನಲ್ಲಿ ಬಂಧಿಸಲ್ಪಟ್ಟಿವೆ. ಭಾಷೆಯನ್ನು ಕಾಪಿಟ್ಟುಕೊಂಡು ಬಂದ ಅಕ್ಷರೋದ್ಯಮದ ಸಂವಹನಗಳಾದ ಹಸ್ತಪ್ರತಿ, ನಾಣ್ಯ, ಶಾಸನಗಳ ಹಿಂದಿನ ಜನರ ಶ್ರಮದ ನೆಲೆಯನ್ನು ಬಿಡಿಸಬೇಕು.

ಹಾಗೆಯೇ ದೇವಾಲಯ ಮತ್ತು ರಥಗಳ ಮಹತ್ತರ ನಿರ್ಮಾಣ, ಕರಕುಶಲಗಾರಿಕೆ ಅಜ್ಞಾತ ಇಂಜಿನಿಯರಿಂಗ್ ಕುರಿತ ಯಾವ ಪಾಠಗಳನ್ನು ನಾವು ಕಲಿತಿದ್ದೇವೆ? ಹಾಗೆಯೇ ಕನ್ನಡ ರಾಜಮನೆತನಗಳ ಚರಿತ್ರೆಯಲ್ಲಿಯೂ ಕುಲದ ಕಾರಣಕ್ಕಾಗಿ ಪ್ರಸಿದ್ಧ ದೊರೆಗಳು ಅವರ ಲೋಕೋಪಯೋಗಿ ಕೆಲಸಗಳು ಪಠ್ಯಗಳಲ್ಲಿ ಗೈರುಹಾಜರಾದ ಕೆಲ ಪ್ರಸಂಗಗಳಿವೆ. ಇವೆಲ್ಲಾ ದೊಡ್ಡ ಪ್ರಶ್ನೆಗಳು.

ಭೂತ ಮತ್ತು ವರ್ತಮಾನದ ಸಂಬಂಧಗಳನ್ನು ಬೆಸೆಯುವ ತಳಸಮುದಾಯಗಳ ವೃತ್ತಿಪರತೆಯನ್ನು ಕಟ್ಟಿಕೊಡುವ ಕೆಲಸ ಸಾಕಷ್ಟಿದೆ. ನಮ್ಮ ಗತಕಾಲದ ಕೇಳು ಮತ್ತು ಹೇಳು ಪರಂಪರೆಯು ಶಾಸ್ತ್ರೀಯವಾದದ್ದು ಯಾವ ಸಂದರ್ಭದಲ್ಲಿ? ಎಂಬುದನ್ನು ಹುಡುಕಬೇಕು. ಲಿಖಿತ ಆಕರಗಳ ಒಡಲಲ್ಲಿ ಸುಪ್ತವಾಗಿರುವ ಇಂಜನಿಯರಿಂಗ್, ಕುಂಬಾರಿಕೆ, ಕಂಬಾರಿಕೆ, ಚಮ್ಮಾರಿಕೆ, ಬಡಿಗತನ, ಅಕ್ಕಸಾಲಿ ಇತ್ಯಾದಿ ಉದ್ಯಮಗಳನ್ನು ಮತ್ತು ಅವರ ಭೌದ್ದಿಕತೆಯನ್ನು ಯಾವ ಪೇಟೆಂಟ್ ಇಲ್ಲದೇ ಹೈಜಾಕ್ ಮಾಡಿದ ಕಾಲಘಟ್ಟದ ಸತ್ಯವನ್ನು ಈಗ ಪುನರುಜ್ಜೀವನಗೊಳಿಸಬೇಕಿದೆ. ಇಂತಹ ಕೆಲವು ಸಂಗತಿಗಳ ಕೆಲವು ಟಿಪ್ಪಣಿಗಳನ್ನು ಈ ಅಂಕಣದಲ್ಲಿ ಮಂಡಿಸುವ ಪ್ರಯತ್ನ ಮುಂದಿನ ಕಂತುಗಳಲ್ಲಿ ಮಾಡಲಾಗುತ್ತದೆ.

ಡಾ. ಜಾಜಿ ದೇವೇಂದ್ರಪ್ಪ, ಸಂಯೋಜಕರು, ಕನ್ನಡ ಸ್ನಾತಕೋತ್ತರ ಅಧ್ಯಯನ ವಿಭಾಗ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಗಂಗಾವತಿ


ಇದನ್ನೂ ಓದಿ: 35,000 ಕ್ಕೂ ಹೆಚ್ಚು ಖಾಸಗಿ ಶಾಲಾ ಶಿಕ್ಷಕರು ವಜಾ: 8 ಅತಿಥಿ ಉಪನ್ಯಾಸಕರ ಆತ್ಮಹತ್ಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಚರಿತ್ರೆಯ ಮರು ಅವಲೋಕನ ಮಾಡುವ ವಿಧಾನ ಮತ್ತು ಸಬಾಲ್ಟ್ರನ್ ಅಧ್ಯಯನ ಇಂದಿನ ಅಗತ್ಯ… ಗತಕಾಲದ ಹೇಳು ಮತ್ತು ಕೇಳು ಸಂಪ್ರದಾಯ ಗಳು ಶಾಸ್ತ್ರೀಯ ಆದದ್ದು ಎಂದು ಎಂಬುದರ ಅವಲೋಕನ ಮತ್ತು ರೀಚೆಕ್… ಹೀಗೆ ಅನೇಕ ವಿಚಾರಗಳನ್ನು ಶಾಸನ ಚರಿತ್ರೆಯ ಕುರಿತ ಡಾ. ಜಾಜಿ ದೇವೇಂದ್ರಪ್ಪ ಅವರ ಬರಹ ಅರ್ಥಪೂರ್ಣ….

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...